Homeಕರ್ನಾಟಕಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ ಅಂಗಡಿ-ಮುಂಗಟ್ಟುಗಳನ್ನು ನೀಡಲಾಗಿಲ್ಲ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ. ಆದರೆ ಇದಕ್ಕೆ ‘ಸಹಬಾಳ್ವೆ ಉಡುಪಿ’ ಸಂಘಟನೆಯು ವಿರೋಧ ವ್ಯಕ್ತಪಡಿಸಿದ್ದು, ಸಮಾಜ ಒಡೆಯುವಂತಹ ಇಂತಹ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದೆ.

ಕಾಪುವಿನ ‘ಹೊಸ ಮಾರಿಗುಡಿ ದೇವಸ್ಥಾನ’ದಲ್ಲಿ ಪ್ರತಿವರ್ಷ ‘ಸುಗ್ಗಿ ಮಾರಿ ಪೂಜೆ’ಯ ಜಾತ್ರೆ ನಡೆಯುತ್ತದೆ. ಇದುವರೆಗೂ ಈ ಜಾತ್ರೆಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಇಡಲು ಯಾವುದೇ ಸಮುದಾಯಕ್ಕೂ ನಿರ್ಬಂಧ ಇರುತ್ತಿರಲಿಲ್ಲ. ಆದರೆ ಈ ಬಾರಿ ಹಿಜಾಬ್ ವಿಚಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಮಾರ್ಚ್ 17ರಂದು ಕರಾವಳಿ ಮುಸ್ಲಿಮರು ತಮ್ಮ ಅಂಗಡಿ-ಮುಗ್ಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸಿದ್ದರು. ಇದನ್ನು ವಿರೋಧಿಸಿರುವ ಸಂಘಪರಿವಾರ ಜಾತ್ರೆಯಲ್ಲಿ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಒತ್ತಡ ಹೇರಿದ್ದರಿಂದ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು ಮುಸ್ಲಿಮರಿಗೆ ಅಂಗಡಿ/ಮುಂಗಟ್ಟುಗಳನ್ನು ನೀಡಲಿಲ್ಲ.

ಇದನ್ನೂ ಓದಿ:‘ನಾನು ಮತ್ತೆ ಗೆದ್ದರೆ ಮುಸ್ಲಿಮರು ತಿಲಕ ಧರಿಸುವರು’- ಯುಪಿ ಬಿಜೆಪಿ ಶಾಸಕನಿಂದ ಕೋಮು ಪ್ರಚೋದನೆ 

ಮಾರ್ಚ್ 22 ಮತ್ತು 23ರಂದು ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ‘ಸುಗ್ಗಿ ಮಾರಿ ಪೂಜೆ’ಗಾಗಿ ಮಾರ್ಚ್ 18ರಂದು ಹರಾಜು ನಡೆದಿತ್ತು.

“ಇತ್ತೀಚೆಗೆ ನಡೆದ ವ್ಯವಸ್ಥಾಪನ ಸಮಿತಿಯ ಸಭೆಯು, ಅಂಗಡಿ-ಮುಂಗಟ್ಟುಗಳ ಹರಾಜಿನಲ್ಲಿ ಹಿಂದೂಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕೆಂದು ನಿರ್ಣಯವನ್ನು ಅಂಗೀಕರಿಸಿದೆ” ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಹೀಗಾಗಿ, ಹೂವು, ತೆಂಗಿನಕಾಯಿ, ಕೋಳಿ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಹಿಂದೂಗಳಿಗೆ ಮಾತ್ರ ಹರಾಜು ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೇವಾಲಯದ ಆವರಣದಲ್ಲಿರುವ ತಮ್ಮ ಅಂಗಡಿಗಳನ್ನು ಯಾವುದೇ ಮುಸ್ಲಿಂ ವ್ಯಾಪಾರಿಗಳಿಗೆ ನೀಡಬಾರದು ಎಂದು ಹರಾಜಿನಲ್ಲಿ ಭಾಗವಹಿಸಿದವರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ತೀರ್ಪು ಮತ್ತು ದೇಶದ ಕಾನೂನನ್ನು ಗೌರವಿಸದ ಕಾರಣ ಸಂಘಪರಿವಾರದ ಸಂಘಟನೆಗಳು ಮುಸಲ್ಮಾನರಿಗೆ ಸ್ಟಾಲ್-ಅಂಗಡಿಗಳನ್ನು ಮಂಜೂರು ಮಾಡದಂತೆ ದೇವಸ್ಥಾನದ ಸಮಿತಿಗೆ ಮನವಿ ಮಾಡಿರುವುದಾಗಿ ರಮೇಶ್ ಹೆಗ್ಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

‘‘ಎರಡು ದಿನಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಉತ್ಸವಕ್ಕೆ ಭೇಟಿ ನೀಡುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗಬಾರದು. ಹಾಗಾಗಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಅವರು ಹೇಳಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಉಡುಪಿಯ ಕಾಪುವಿನಲ್ಲಿ ಹಳೇ ದೇವಸ್ಥಾನ ಮತ್ತು ಮೂರನೆ ದೇವಸ್ಥಾನ ಎಂಬ ಇನ್ನೂ ಎರಡು ಮಾರಿಗುಡಿ ದೇವಾಲಯಗಳಿವೆ. ಪ್ರಸ್ತುತ ನಡೆಯುತ್ತಿರುವ ವಾರ್ಷಿಕ ಜಾತ್ರೆಯು ಈ ಎರಡು ಮಾರಿಗುಡಿಗಳನ್ನೂ ಒಳಗೊಂಡಿದೆ. ಆದರೆ ಇನ್ನೆರಡು ಮಾರಿಗುಡಿಗಳು ಪ್ರತ್ಯೇಕ ನಿರ್ವಹಣಾ ಸಮಿತಿಗಳನ್ನು ಹೊಂದಿದ್ದು, ಜಾತ್ರೆಗೆ ಅಂಗಡಿ-ಮುಂಗಟ್ಟುಗಳನ್ನು ಹರಾಜು ಹಾಕುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಹೊಸ ಮಾರಿಗುಡಿ ದೇವಾಲಯವು ಸುಮಾರು 100 ಅಂಗಡಿಗಳನ್ನು ಹರಾಜು ಹಾಕಿದೆ.

ಜಾತ್ರೆಯಲ್ಲಿ ಮುಸ್ಲಿಂ ಸಮುದಯದ ವ್ಯಾಪಾರಿಗಳಿಗೆ ಅಂಗಡಿ ನೀಡದಂತೆ ಮನವಿ ಪತ್ರ ಬಂದಿದ್ದಾಗಿ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಅವರಿಗೆ ಪ್ರತಿಕ್ರಿಯಿಸಿದ್ದಾಗಿ ಅವರು ತಿಳಿಸಿದ್ದು, “ಪ್ರಕರಣವನ್ನು ಬಗ್ಗೆ ನಾವು ಪರಿಶೀಲಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ವಿವಾದದ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಹಬಾಳ್ವೆ ಉಡುಪಿ ಸಂಘಟನೆಯ ಸಂಚಾಲಕ ಅಮೃತ ಶೆಣೈ, “ಇದು ಬಹಳ ದುರದೃಷ್ಟಕರವಾದ ಬೆಳವಣಿಗೆಯಾಗಿದ್ದು, ಉಡುಪಿಯ ಸಮಾಜ ಯಾವತ್ತೂ ಇಷ್ಟೊಂದು ಧಾರ್ಮಿಕ ವಿಭಜನೆ ಆಗಿರಲಿಲ್ಲ. ಜಾತಿ-ಮತಗಳ ಭೇದಬಾವ ಇಲ್ಲದೆ ಹಲವಾರು ಉತ್ಸವಗಳು ಇಲ್ಲಿ ನಡೆದುಕೊಂಡು ಬರುತ್ತಿತ್ತು. ದಿವಂಗತ ಹಾಜಿ ಅಬ್ದುಲ್ಲಾ ಅವರು ಉಡುಪಿ ಕೃಷ್ಣ ಮಠಕ್ಕೆ ಸಹಾಯ ಮಾಡಿದ್ದು ಇತಿಹಾಸ ಇದೆ” ಎಂದರು.

“ಸಮಾಜ ಒಡೆಯುವ ಕೋಮುವಾದಿ ಶಕ್ತಿಗಳು ಸಮಸ್ತ ಹಿಂದೂ ಸಮಾಜವನ್ನು ಪ್ರತಿನಿಧಿಸುವುದಿಲ್ಲವಾದರೂ, ಈ ರೀತಿ ಒಡೆಯುವ ಭಾವನೆಯನ್ನು ಕೊಟ್ಟು, ಹಿಂದೂ-ಮುಸ್ಲಿಂ ಸಮುದಾಯದ ನಡುವೆ ದ್ವೇಷವನ್ನು ಬಿತ್ತುತ್ತಿದ್ದಾರೆ, ಇದನ್ನು ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಸುಗ್ಗಿ ಮಾರಿಪೂಜೆಯಲ್ಲಿ ಹಿಂದಿನಿಂದ ಹೇಗಿತ್ತೊ ಅದೇ ಸಂಪ್ರದಾಯವನ್ನು ಮುಂದುವರೆಸಬೇಕು” ಎಂದು ಅಮೃತ್‌ ಶೆಣೈ ಆಗ್ರಹಿಸಿದ್ದಾರೆ.

“ಈ ಬಗ್ಗೆ ಸಹಬಾಳ್ವೆ ತಂಡದಿಂದ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ. ಸಮಾಜವನ್ನು ವಿಭಜನೆ ಮಾಡುವಂತಹ ವಿಚಾರಗಳಿಗೆ ಸೊಪ್ಪು ಹಾಕಬಾರದು. ಇಂತಹ ಕೆಲಸ ಮಾಡುವವರಿಗೆ ಎಚ್ಚರಿಕೆ ಕೊಡಬೇಕು. ಯಾಕೆಂದರೆ ಎಲ್ಲಾ ಸಮುದಾಯದಲ್ಲೂ ಒಂದಿಷ್ಟು ಕೆಟ್ಟವರು ಮತ್ತು ಒಳ್ಳೆಯವರು ಇರುತ್ತಾರೆ. ಹಾಗಾಗಿ ಕೆಟ್ಟ ವಿಚಾರಗಳಿಗೆ ಒಂದು ಸಮುದಾಯವನ್ನು ನೇರವಾಗಿ ಉಲ್ಲೇಖ ಮಾಡುವುದು ತಪ್ಪು. ಇದು ಕೇವಲ ಸಮಾಜವನ್ನು ಒಡೆಯಲು ಮಾಡುವಂತಹ ಕೆಲಸ. ಇದಕ್ಕೆಲ್ಲಾ ಸಂವಿಧಾನ ಮೂಲಕ ಅಧಿಕಾರಕ್ಕೆ ಬಂದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬಾಯಿ ಮುಚ್ಚಿಕೊಳ್ಳುವಂಹದ್ದು ನಾಚಿಕೆಗೇಡು” ಎಂದು ಅಮೃತ ಶೆಣೈ ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು. ಈ ಹಿಂದೆ ಹರಾಜಿನಲ್ಲಿ ಮುಸ್ಲಿಮರು ಕೂಡ ಮಳಿಗೆಗಳನ್ನು ಪಡೆಯುತ್ತಿದ್ದರು.

ಇದನ್ನೂ ಓದಿ: ಸಂಕುಚಿತ ಕೋಮು ಹಿತಾಸಕ್ತಿಯ ಅಜೆಂಡಾ ಕೈಬಿಡಿ: ಕರ್ನಾಟಕದ ಮುಖ್ಯಮಂತ್ರಿ ಮತ್ತು ಶಾಸಕರಿಗೆ ಬಹಿರಂಗ ಪತ್ರ  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಹಿಜಾಬ್ ಗಾಗಿ ಧರ್ಮಾಂದತೆ ಮೆರೆದ ಸಮುದಾಯಕ್ಕೆ ದೇವಾಲಯಗಳ ಬಳಿ ವ್ಯಾಪಾರ ಮಾಡಲು ಯಾವ ನೈತಿಕತೆ ಇದೆ ,ದೇವಾಲಯ ಹಿಂದೂ ಧರ್ಮದ ಆಧಾರ ಸ್ತಂಭ ಅಲ್ಲಿ ಅನ್ಯರು ಹಿಂಧೂ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಕೆಲಸಕ್ಕೆ ಹಿಂದೂಗಳ ವಿರೋಧ ಇದೆ.

  2. ಕಾಪು ಮಾರಿಗುಡಿ ಸಮಿತಿಯವರು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ , ಇದೆ ರೀತಿ ದೇಶಾದ್ಯಂತ ಚಾಲನೆಗೆ ಬರಲಿ ಬೇಗ .

  3. ಭಾರತ ದೇಶ ಎಲ್ಲರಿಗೂ ಸೇರಿದ್ದು, ದುಡಿಯದೇ ದುಡ್ಡು ಮಾಡುವ ಬೇವರ್ಸಿಗಳದ್ದಲ್ಲ.

  4. ಬಾಳೋಣ, ಸಹಭಾಗಿ ಯಾಗಿ, ಮನುಷ್ಶರಾಗಿ, ದೇಶಕ್ಕಾಗಿ, ಸಮಾಜೋದ್ದಾರಕ್ಕಾಗಿ, ನಮ್ಮದೂ ಒಂದು ಸಣ್ಣ ಶ್ರಮ ವೆಂದು ಮಾನವ ಕುಲಕ್ಕಾಗಿ ಪ್ರೀತಿ ಸನ್ಹಿಹತೆಯಿಂದ, ಪ್ರೀತಿ ಗಳಿಸಲು ಬಾಳೋಣ. ಎಲ್ಲಾ ಧರ್ಮಗಳ ಮೂಲ ತತ್ವವೇ ಇದು.

  5. Since independent all community live unitedly now since about 20-30 years communal violence are creating by politicians its true country divided by communal harmony it should stop

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...