Homeಕರ್ನಾಟಕದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕ, ನಂತರ ಪೆಟ್ರೋಲ್ ಸುರಿದು ಯುವತಿಯನ್ನು ಕೊಲೆ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟೆಯ ಉಪ ತಹಶೀಲ್ದಾರ್‌ ಅಶೋಕ್‌ ಶರ್ಮಾ ಅವರ ಮಗಳಾದ ದಾನೇಶ್ವರಿ (23) ಅವರನ್ನು, ಬಾದಾಮಿ ಮೂಲದ ಲಿಂಗಾಯತ ಜಾತಿಗೆ ಸೇರಿದ ಶಿವಕುಮಾರ್‌ ಹಿರೇಹಾಳ ಕೊಲೆ ಮಾಡಿದ್ದನು. ಪೆಟ್ರೋಲ್‌ ಸುರಿದು ಹತ್ಯೆಗೈದು ಪರಾರಿಯಾಗಿದ್ದನು. ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು. ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಪವನ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಪ್ರಮುಖ ಆರೋಪಿ ಶಿವಕುಮಾರ್‌ನನ್ನು ಎಲ್ಲ ಸೆಕ್ಷನ್‌ ಅಡಿಯಲ್ಲಿ ಬಂಧಿಸಲಾಗಿದೆ. ಕೊಲೆಯಲ್ಲಿ ಭಾಗಿಯಾಗಿರುವ ಈತನ ಸ್ನೇಹಿತರ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಸಾಕ್ಷ್ಯಾಧಾರಗಳು ಸಿಕ್ಕಲ್ಲಿ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಗುವುದು” ಎಂದು ತಿಳಿಸಿದ್ದಾರೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...