Homeಕರ್ನಾಟಕಹಿರೇಕೆರೂರು ಲಾಯರ್‌ ಮೇಲೆ ಪೊಲೀಸರ ಹಲ್ಲೆ; ನ್ಯಾಯವಾದಿಗಳ ಆಕ್ರೋಶ

ಹಿರೇಕೆರೂರು ಲಾಯರ್‌ ಮೇಲೆ ಪೊಲೀಸರ ಹಲ್ಲೆ; ನ್ಯಾಯವಾದಿಗಳ ಆಕ್ರೋಶ

ಪೊಲೀಸರು ನಡೆಸಿರುವ ಹಲ್ಲೆಯ ದೃಶ್ಯವು ದೇವಾಲಯದ ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -
- Advertisement -

ಶಿಕಾರಿಪುರ ತಾಲ್ಲೂಕಿನ ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಿರೇಕೆರೂರಿನ ವಕೀಲರಾದ ಜಯದೇವ ಬಿ.ಕೆರೂಡಿ ಅವರ ಮೇಲೆ ಶಿರಾಳಕೊಪ್ಪ ಠಾಣೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಹಿರೇಕೆರೂರು ನ್ಯಾಯವಾದಿಗಳ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ಮಾರ್ಚ್ 13ರಂದು ಮಲ್ಲಿಕಾರ್ಜುನ ದೇವರ ರಥೋತ್ಸವ ಪ್ರಯುಕ್ತ ದರ್ಶನಕ್ಕೆಂದು ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದ ವಕೀಲರಾದ ಜಯದೇವ ಬಿ. ಕೆರೂಡಿ ತೆರಳಿದ್ದರು. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಜನ ಸಂದಣಿ ಹೆಚ್ಚಾಗಿದ್ದು, ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ದೇವರ ದರ್ಶನಕ್ಕೆಂದು ಹರಸಾಹಸ ಪಡುತ್ತಿದ್ದರು. ನೂಕುನುಗ್ಗಲನ್ನು ತಡೆಯುವಂತೆ ಪೊಲೀಸರಿಗೆ ಜಯದೇವ ಅವರು ಕೋರಿದಾಗ ಪೊಲೀಸರು ದರ್ಪ ತೋರಿದ್ದಲ್ಲದೆ ಹಲ್ಲೆ ನಡೆಸಿದ್ದಾರೆ. ದೇವಾಲಯದ ಸಿಸಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿದೆ ಎಂದು ವಕೀಲರ ಸಂಘ ತಿಳಿಸಿದೆ.

ಸರತಿ ಸಾಲನ್ನು ಸರಿಪಡಿಸಲು ಕೋರಿದಾಗ ಅಲ್ಲಿದ್ದ ಸಿಪಿಐ ಗುರುರಾಜ ಮೈಲಾರಿ ಹಾಗೂ ಸಿಬ್ಬಂದಿ ಅವ್ಯಾಚ್ಯವಾಗಿ ನಿಂದಿಸಿದ್ದಾರೆ. ವಕೀಲಿ ವೃತ್ತಿಗೂ ಅವಹೇಳನ ಮಾಡಿದ್ದಾರೆ. ಈ ವೇಳೆ ಸಿಪಿಐ ಹಾಗೂ ಹೆಡ್‌ಕಾನ್‌ಸ್ಟೇಬಲ್‌ ಇಬ್ಬರೂ ವಕೀಲರಿಗೆ ಥಳಿಸಿದ್ದಾರೆ. ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಠಾಣೆಗೆ ಕರೆದೊಯ್ದು ಅಲ್ಲಿಯೂ ಮೃಗೀಯ ವರ್ತನೆ ತೋರಿಸಿದ್ದಾರೆ. ಜಯದೇವ ಅವರು ಮಹಿಳಾ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದಾರೆ. ಸದರಿ ವಕೀಲರಿಗೆ ಕಾನೂನು ಬಾಹಿರವಾಗಿ ಕೈಗೆ ಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ ಎಂದು ವಕೀಲರು ಆಕ್ರೋಶ ಹೊರಹಾಕಿದ್ದಾರೆ.

ತಮ್ಮ ಮೇಲಾದ ಹಲ್ಲೆಯ ಕುರಿತು ನ್ಯಾಯಾಧೀಶರ ಮುಂದೆ ಸದರಿ ವಕೀಲರು ತಿಳಿಸಿದ್ದಾರೆ. ದೇವಾಲಯದ ದೃಶ್ಯವು ಹಲ್ಲೆಯನ್ನು ದಾಖಲಿಸಿದೆ. ವಕೀಲರು ಯಾವುದೇ ದುವರ್ತನೆ ತೋರಿಲ್ಲ. ಆದರೆ ಸಾರ್ವಜನಿಕ ಮಟ್ಟದಲ್ಲಿ ಪೊಲೀಸರ ದರ್ಪ ಎಷ್ಟರ ಮಟ್ಟಿಗಿರುತ್ತದೆ ಎಂಬುದು ಸ್ಪಷ್ಟವಾಗಿದೆ ಎಂದು ಸಂಘ ಅಭಿಪ್ರಾಯಪಟ್ಟಿದೆ.

ಈ ಪ್ರಕರಣದಿಂದಾಗಿ ಪೊಲೀಸರು ಸಾಮಾನ್ಯ ಜನರ ಮೇಲೆ ಹೇಗೆ ದೌರ್ಜನ್ಯ ಎಸಗುತ್ತಾರೆಂಬುದು ಸ್ಪಷ್ಟವಾಗಿದೆ. ಹೀಗಾಗಿ ದರ್ಪ ತೋರಿದ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸದರಿ ಪೊಲೀಸರನ್ನು ಅಮಾನತು ಮಾಡಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ವಕೀಲರು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...