Homeಕರ್ನಾಟಕದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

ದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

- Advertisement -
- Advertisement -

ಯಾದಗಿರಿ ಜಿಲ್ಲೆಯ ದೋರನಹಳ್ಳಿ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾಗಿ 15 ಜನರು ತೀರಿಹೋಗಿದ್ದು ದೊಡ್ಡ ದುರ್ಘಟನೆ. ಈ ಘಟನೆಯಲ್ಲಿ 10 ಜನ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದೋರನಹಳ್ಳಿಯಲ್ಲಿ ನಡೆದ ಸಿಲಿಂಡರ್ ಸ್ಪೋಟದಲ್ಲಿ ಮೃತಪಟ್ಟ 15 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳಂತೆ ಒಟ್ಟು 75 ಲಕ್ಷ ರೂ.ಗಳ ಪರಿಹಾರವನ್ನು ವಿತರಿಸಿ ಅವರು ಮಾತನಾಡಿದರು.

ಬಡವರು ಶುಭಕಾರ್ಯ ಮಾಡಿ ಸಂಭ್ರಮಿಸುವ ಸಂದರ್ಭದಲ್ಲಿ 15 ಜನ ತೀರಿಹೋಗಿರುವುದು ದೊಡ್ಡ ಅನಾಹುತ. ಅವರ ಕಟುಂಬದವರಿಗೆ ಕೇವಲ ಹಣ ಮಾತ್ರವಲ್ಲದೆ, ಎಲ್ಲಾ ರೀತಿಯ ಸಹಾಯವನ್ನು ಸರ್ಕಾರದ ವತಿಯಿಂದ ಮಾಡಲಾಗುವುದು ಎಂದರು.

ಇದು ತಿಳಿದ ತಕ್ಷಣವೇ ಜಿಲ್ಲಾಡಳಿತ, ಶಾಸಕರು ಎಲ್ಲಾ ಅಗತ್ಯ ನೆರವನ್ನು ನೀಡಿದ್ದಾರೆ. ಸೋಲ್ಹಾಪುರಕ್ಕೆ ಹೋದ ಗಾಯಾಳು ಒಬ್ಬರಿಗೆ ಸುಮಾರು 4 ಲಕ್ಷ ರೂ.ಗಳ ಚಿಕಿತ್ಸಾ ವೆಚ್ಚವನ್ನು ಭರಿಸಬೇಕಿದ್ದು, ಬೆಂಗಳೂರಿಗೆ ಹಿಂತಿರುಗಿದ ತಕ್ಷಣ ಚೆಕ್‌ಗೆ ಸಹಿ ಮಾಡಿ ಮೊತ್ತವನ್ನು ಕಳುಹಿಸಲಾಗುವುದು ಎಂದು ಹೇಳಿದರು.

ವಿದ್ಯಾರ್ಹತೆಗೆ ತಕ್ಕ ಉದ್ಯೋಗಕ್ಕೆ ಕ್ರಮ: ಕೆಲವು ಕುಟುಂಬದವರಿಗೆ ಉದ್ಯೋಗವನ್ನು ನೀಡಬೇಕೆಂಬ ಬೇಡಿಕೆ ಇದ್ದು, ಅವರವರ ವಿದ್ಯಾಭ್ಯಾಸಕ್ಕೆ ತಕ್ಕಂತೆ ನೌಕರಿ ನೀಡಲು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡಲಾಗುವುದು. ಕೆಲವರಿಗೆ ಸ್ಥಳೀಯವಾಗಿ ನೌಕರಿ ಹಾಗೂ ಇಂಜಿನಿಯರಿಂಗ್ ಮಾಡಿದವರಿಗೆ ಊರ ಹೊರಗಡೆಯೂ ಕೆಲಸ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಐಒಸಿ ಸಹಾಯ ಒದಗಿಸಬೇಕು: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಕಂಪನಿ ಸಂತ್ರಸ್ಥರಿಗೆ ಸಹಾಯವನ್ನು ಮಾಡಬೇಕು. ತಾಂತ್ರಿಕ ಕಾರಣಗಳನ್ನು ಹೇಳುತ್ತಿದ್ದಾರೆ. ಅದ್ಯಾವುದನ್ನು ಹೇಳದೆ ಸಂತ್ರಸ್ತರಿಗೆ ಮಾನವೀಯತೆಯ ದೃಷ್ಟಿಯಿಂದ ದೊಡ್ಡ ಸಹಾಯವನ್ನು ಮಾಡಲೇಬೇಕು ಎಂದು ಬೆಂಗಳೂರಿನಲ್ಲಿರುವ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಹೆಚ್ಚಿನ ಪರಿಹಾರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬದವರಿಗೆ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ: ತುಮಕೂರಿನ ಪಾವಗಡದಲ್ಲಿ ನಡೆದ ಖಾಸಗಿ ಬಸ್ ಅಪಘಾತದಲ್ಲಿ 8 ಜನ ತೀರಿಹೋಗಿದ್ದು, 20 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಸಾರಿಗೆ ಸಚಿವ ಶ್ರೀರಾಮುಲು ಅವರನ್ನು ಕಳುಹಿಸಲಾಗಿದೆ. ದುರಂತ ಯಾಕೆ ಆಗಿದೆ ಎಂದು ತನಿಖೆ ನಡೆಯುತ್ತಿದೆ. ಖಾಸಗಿ ವಾಹನಗಳ ಫಿಟ್‍ನೆಸ್ ಪ್ರಮಾಣಪತ್ರ ಇವುಗಳ ಬಗ್ಗೆ ಪರಿಶೀಲಿಸಲು ತಿಳಿಸಲಾಗಿದೆ. ದುರಂತಗಳು ಸಂಭವಿಸದಂತೆ ಇನ್ನಷ್ಟು ಕ್ರಮವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ಪಾವಗಡ: ಬಸ್‌ ಮಗುಚಿ ಎಂಟು ಮಂದಿ ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...