Homeಕರ್ನಾಟಕಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣ: ಹಂತಕರನ್ನು ಪತ್ತೆ ಮಾಡಿದ ಪುತ್ರಿ; ಕೋರ್ಟ್‌ನಲ್ಲಿ ಹೇಳಿಕೆ

- Advertisement -
- Advertisement -

2015ರ ಆಗಸ್ಟ್ 30ರಂದು ಧಾರಾವಾಡದ ತಮ್ಮ ಮನೆಯಲ್ಲಿ ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿಯವರು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಲ್ಬುರ್ಗಿಯವರ ಪುತ್ರಿ ಧಾರಾವಾಡ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದು, ಹಂತಕರನ್ನು ಗುರುತಿಸಿದ್ದಾರೆ. ಮಾರ್ಚ್ 17ರಂದು ಪ್ರಕರಣದ ವಿಚಾರಣೆ ನಡೆದಿದೆ.

“29 ವರ್ಷದ ಗಣೇಶ್ ಮಿಸ್ಕಿನ್ ಎಂಬ ವ್ಯಕ್ತಿಯು ನನ್ನ ತಂದೆಗೆ ಗುಂಡು ಹಾರಿಸಿದ” ಎಂದು ಗುರುತಿಸಿದ ನಂತರ ಕಲ್ಬುರ್ಗಿ ಅವರ ಪುತ್ರಿ ರೂಪದರ್ಶಿ ಕೆ. (49) ಕುಸಿದುಬಿದ್ದರು. ಮನೆಯ ಬಳಿ ಮೋಟಾರ್ ಸೈಕಲ್‌ನಲ್ಲಿ ಗಣೇಶ್‌ಗಾಗಿ ಕಾಯುತ್ತಿದ್ದ ವ್ಯಕ್ತಿ 29 ವರ್ಷದ ಪ್ರವೀಣ್ ಚತುರ್ ಎಂದು ಅವರು ತಿಳಿಸಿದ್ದಾರೆ.

ಸನಾತನ ಸಂಸ್ಥೆ ಮತ್ತು ಅದರ ಅಂಗಸಂಸ್ಥೆ ಹಿಂದೂ ಜನಜಾಗೃತಿ ಸಮಿತಿಯಂತಹ ಗುಂಪುಗಳ ತೀವ್ರಗಾಮಿ ಸದಸ್ಯರಿಂದ ರಚಿಸಲ್ಪಟ್ಟ ಬಲಪಂಥೀಯ ಉಗ್ರಗಾಮಿ ಹಿಂದುತ್ವ ಸಂಘಟನೆಯೊಂದಿಗೆ ಗಣೇಶ್ ಸಂಬಂಧ ಹೊಂದಿದ್ದಾನೆ. ಬೆಂಗಳೂರಿನಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಇವನ ಸಂಬಂಧ ಹೊಂದಿದ್ದಾನೆ. ಚತುರ್ ಕೂಡ ಬಲಪಂಥೀಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದಾರೆ. 2018 ರಲ್ಲಿ ಪದ್ಮಾವತ್ ಚಲನಚಿತ್ರದ ಪ್ರದರ್ಶನದ ಸಂದರ್ಭದಲ್ಲಿ ಹಿಂಸಾಚಾರದ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.

2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯ ಆರಂಭದಲ್ಲಿ ರಚಿಸಲಾಗಿದ್ದ ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಮಿಸ್ಕಿನ್ ಮತ್ತು ಚತುರ್ ಅವರನ್ನು ಬಂಧಿಸಿದೆ. ಕನ್ನಡದ ವಿದ್ವಾಂಸ ಎಂ.ಎಂ.ಕಲ್ಬುರ್ಗಿ, ಮಹಾರಾಷ್ಟ್ರದ ಪ್ರಗತಿಪರ ಚಿಂತಕರಾದ ನರೇಂದ್ರ ದಾಭೋಲ್ಕರ್, ಗೋವಿಂದ್ ಪನ್ಸಾರೆ ಅವರ ಹತ್ಯೆಯಲ್ಲೂ ಇವರು ಭಾಗಿಯಾಗಿದ್ದಾರೆಂದು ತಿಳಿದುಬಂದಿದೆ.

ಕಲ್ಬುರ್ಗಿಯವರ ಹತ್ಯೆಯ ಸಮಯದಲ್ಲಿ ರೂಪದರ್ಶಿಯವರು ತಂದೆಯ ಮನೆಯಲ್ಲಿದ್ದರು. ಬೆಳಿಗ್ಗೆ 8.45ರ ಸುಮಾರಿಗೆ ಕಲ್ಬುರ್ಗಿಯವರು ಫೋನ್‌ ಕರೆಯಲ್ಲಿದ್ದಾಗ ಬಾಗಿಲು ತಟ್ಟಲಾಗಿತ್ತು ಎಂದು ನ್ಯಾಯಾಲಯಕ್ಕೆ ರೂಪದರ್ಶಿ ತಿಳಿಸಿದ್ದಾರೆ.

ರೂಪದರ್ಶಿಯವರ ತಾಯಿ ಉಮಾದೇವಿ ಅವರು ಬಾಗಿಲ ಬಳಿ ಹೋದಾಗ ಆ ಅಪರಿಚಿತರು, “ಸರ್ ಅನ್ನು ಭೇಟಿಯಾಗಬೇಕು” ಎಂದು ಹೇಳಿದರು. ಕಲ್ಬುರ್ಗಿಯವರು ಬಾಗಿಲ ಬಳಿ ಹೋದಾಗ, ಗುಂಡಿನ ಸದ್ದು ಬಂತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. “ನನ್ನ ತಂದೆ ಕುಸಿದುಬಿದ್ದರು ಮತ್ತು ಹೊರಗೆ ಕಾಯುತ್ತಿದ್ದ ಸವಾರನೊಂದಿಗೆ ಒಬ್ಬ ವ್ಯಕ್ತಿ ಮೋಟರ್‌ನತ್ತ ಜಿಗಿಯುವುದನ್ನು ನೋಡಿದೆ” ಎಂದು ರೂಪದರ್ಶಿ ಹೇಳಿಕೆ ನೀಡಿದ್ದಾರೆ.

ಕುಟುಂಬದವರು ಕಲ್ಬುರ್ಗಿ ಅವರನ್ನು ಹತ್ತಿರದ ಆಸ್ಪತ್ರೆಗೆ, ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಕಲ್ಬುರ್ಗಿ ಅವರ ಮಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಪಿಯನ್ನು ಗುರುತಿಸಿದ ನಂತರ ಭಾವುಕರಾಗಿ ಅತ್ತಿದ್ದಾರೆ. ಇದನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯದ ಗಮನಕ್ಕೆ ತಂದರು ಎಂದು ವಿಚಾರಣಾ ನ್ಯಾಯಾಲಯವು ದಾಖಲು ಮಾಡಿದೆ. ಮುಂದಿನ ತಿಂಗಳು ಪಾಟೀ ಸವಾಲನ್ನು ರೂಪದರ್ಶಿ ಎದುರಿಸಲಿದ್ದಾರೆ.

ಕಲ್ಬುರ್ಗಿ ಅವರ ಪತ್ನಿ ಉಮಾದೇವಿಯವರು 2019ರ ಆರಂಭದಲ್ಲಿ, ಪ್ರಕರಣದ ಸಾಕ್ಷ್ಯದ ಭಾಗವಾಗಿರುವ ಅಧಿಕೃತ ಗುರುತಿನ ಪರೇಡ್‌ನಲ್ಲಿ ಕೊಲೆಗಾರರನ್ನು ಗುರುತಿಸಿದ್ದರು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...