Homeದಲಿತ್ ಫೈಲ್ಸ್ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ರಾಜಸ್ಥಾನದಲ್ಲಿ ಘಟನೆ ನಡೆದಿದ್ದು, ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

- Advertisement -
- Advertisement -

ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿದೆ. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಗುರುವಾರ ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದಾರೆ. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಪ್ರಕಾರ, ಜಿತೇಂದ್ರಪಾಲ್ ತನ್ನ ಸ್ನೇಹಿತ ಹರೀಶ್ ಕುಮಾರ್ ಜೊತೆ ಮಂಗಳವಾರ ಬಾಲಿಯಿಂದ ಬರ್ವಾಗೆ ಹೋಗುತ್ತಿದ್ದರು. ಜಿತೇಂದ್ರಪಾಲ್ ಮೋಟಾರ್ ಸೈಕಲ್ ನಲ್ಲಿ ಕುಮಾರ್ ಹಿಂದೆ ಕುಳಿತಿದ್ದರು.

ಬಾಲಿಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಬೈಕಿನಲ್ಲಿ ಬಂದ ಇಬ್ಬರು ಯುವಕರು ನಿಲ್ಲಿಸಲು ಹೇಳಿದರು. ಹರೀಶ್ ವೇಗ ಕಡಿಮೆ ಮಾಡಿದಾಗ ಒಬ್ಬಾತ ಜಿತೇಂದ್ರಪಾಲ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಅವರು ಕೆಳಗೆ ಬಿದ್ದಾಗ ಹೊಟ್ಟೆ ಮತ್ತು ಎದೆಗೆ ಮತ್ತೆ ನಾಲ್ಕು ಬಾರಿ ಇರಿದಿದ್ದಾರೆ. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ.

ದಲಿತ ವ್ಯಕ್ತಿ ಒಳ್ಳೆಯ ಉಡುಪು ಧರಿಸಿದ್ದಕ್ಕೂ, ಆತ ಮೀಸೆ ಬಿಟ್ಟಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜಸ್ಥಾನ ಪೊಲೀಸರು ಹೇಳುತ್ತಿದ್ದಾರೆ. “2020ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದ ಪರಸ್ಪರ ಪೈಪೋಟಿಯ ಪರಿಣಾಮ ಈ ಕೊಲೆಯಾಗಿದೆ” ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಿತೇಂದ್ರಪಾಲ್ ಹತ್ಯೆಯ ನಂತರ ಅವರ ಕುಟುಂಬ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರು ಹಾಗೂ ಆಡಳಿತ ವರ್ಗ ಮನವೊಲಿಸಿದ ನಂತರ ಶುಕ್ರವಾರ ಮರಣೋತ್ತರ ಪರೀಕ್ಷೆಗೆ ಒಪ್ಪಿದರು.

ಜೀತೆಂದ್ರಪಾಲ್‌ ಸಹೋದರನಿಗೆ ಸರ್ಕಾರಿ ನೌಕರಿ ಮತ್ತು ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಅಧಿಕಾರಿ ವರ್ಗ ಭರವಸೆ ನೀಡಿದೆ. ಬರ್ವಾ ಗ್ರಾಮದಲ್ಲಿ ಶಾಶ್ವತವಾದ ಪೊಲೀಸ್ ಚೌಕ್‌ ನಿರ್ಮಿಸಲು ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ.

ಬಾಲಿ ಶಾಸಕ ಪುಷ್ಪೇಂದ್ರ ಸಿಂಗ್ ರಾಣಾವತ್ ಮತ್ತು ಮಾರ್ವಾರ್ ಜಂಕ್ಷನ್ ಶಾಸಕ ಖುಶ್ವೀರ್ ಸಿಂಗ್ ಜೋಜಾವರ್ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ಹಾಗೂ ಸರ್ಕಾರಿ ಉದ್ಯೋಗ ಕಲ್ಪಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಕುರಿತು ಮಾತನಾಡಿದ್ದರು.

ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

“ಜಿತೇಂದ್ರಪಾಲ್ ಮೇಘವಾಲ್ ಅವರು ಮೀಸೆ ಬಿಟ್ಟ ಕಾರಣಕ್ಕೆ ಕೊಲೆಯಾಗಿದ್ದಾರೆ. ದಲಿತರ ಚೆನ್ನಾಗಿ ಕಾಣುವುದು ಸವರ್ಣಿಯ ಹಿಂದೂಗಳಿಗೆ ಯಾಕೆ ಚುಚ್ಚುತ್ತದೆ? ಈ ದೌರ್ಜನ್ಯ ನಿಲ್ಲುವುದು ಯಾವಾಗ?” ಎಂದು Ambedkarite India ಟ್ವಿಟರ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ಇದು 21ನೇ ಶತಮಾನದ ಭಾರತ. ರಾಜಸ್ಥಾನದ ಸರ್ಕಾರಿ ನೌಕರಿಯಲ್ಲಿದ್ದ ಜಿತೇಂದ್ರಪಾಲ್ ಮೇಘವಾಲ್ ಮೀಸೆಯನ್ನು ಬಿಟ್ಟಿದ್ದಕ್ಕಾಗಿ ಮತ್ತು ಉತ್ತಮ ಜೀವನಶೈಲಿಯನ್ನು ನಡೆಸಿದ್ದಕ್ಕಾಗಿ ಕೊಲೆಯಾಗಿದ್ದಾರೆ” ಎಂದು ಟ್ರೈಬಲ್ ಆರ್ಮಿ ಟ್ವಿಟರ್‌ ಖಾತೆ ಹೇಳಿದೆ.


ಇದನ್ನೂ ಓದಿರಿ: ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...