HomeUncategorizedತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ ನಿಧನ

ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ ನಿಧನ

- Advertisement -
- Advertisement -

ತೆಲಂಗಾಣ ಸಶಸ್ತ್ರ ಹೋರಾಟದಲ್ಲಿ ಭಾಗವಹಿಸಿದ್ದ ಹಿರಿಯ ಕಮ್ಯುನಿಸ್ಟ್ ನಾಯಕಿ ಮಲ್ಲು ಸ್ವರಾಜ್ಯಂ ಅವರು ಮಾರ್ಚ್ 19ರ ಶನಿವಾರದಂದು ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿದೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ. ಆಂಧ್ರ ಪ್ರದೇಶ ವಿಧಾನಸಭೆಯ ಮಾಜಿ ಸದಸ್ಯೆಯೂ ಆಗಿರುವ ಅವರು ನ್ಯುಮೋನಿಯಾ ಚಿಕಿತ್ಸೆಗಾಗಿ ಮಾರ್ಚ್ 1 ರಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಮಲ್ಲು ಸ್ವರಾಜ್ಯಂ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿಯ ಸದಸ್ಯರಾಗಿದ್ದರು. ಕೊನೆಯವರೆಗೂ ಸಮಿತಿಯ ವಿಶೇಷ ಆಹ್ವಾನಿತರಾಗಿದ್ದರು. 1931ರಲ್ಲಿ ಅವಿಭಜಿತ ನಲ್ಗೊಂಡ ಜಿಲ್ಲೆಯ ತುಂಗತಾರ್ತಿಯ ಕರಿವಿರಾಲ ಕೊತಗುಡೆಂ ಗ್ರಾಮದಲ್ಲಿ ಭೂಮಾಲಿಕ ಕುಟುಂಬದಲ್ಲಿ ಜನಿಸಿದ್ದ ಅವರು ತನ್ನ ಹದಿಹರೆಯದಲ್ಲಿ ಕಮ್ಯುನಿಸ್ಟ್ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅವರ ಸಹೋದರ ಭೀಮರೆಡ್ಡಿ ನರಸಿಂಹ ರೆಡ್ಡಿಯವರಿಂದ ಪ್ರೇರಿತರಾಗಿ ಸ್ವರಾಜ್ಯಂ ಅವರು 1946 ರಿಂದ 1951 ರವರೆಗೆ ತೆಲಂಗಾಣ ಜನರ ಸಶಸ್ತ್ರ ಹೋರಾಟದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

ಅವರು ಕ್ರಾಂತಿಕಾರಿ ಗೀತೆಗಳನ್ನು ಹಾಡುವ ಮೂಲಕ ಜನರನ್ನು ಹೋರಾಟಕ್ಕೆ ಸಜ್ಜುಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿಸುತ್ತಿದ್ದರು. ಶಸ್ತ್ರಾಸ್ತ್ರಗಳನ್ನು ಎತ್ತಿದ್ದ ಅವರು ಹೋರಾಟಗಳಲ್ಲಿ ಕಮಾಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸಶಸ್ತ್ರ ಹೋರಾಟದಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಮತ್ತೊಬ್ಬ ಪ್ರಸಿದ್ಧ ಕಾಂಗ್ರೆಸ್ ನಾಯಕ ಮಲ್ಲು ವೆಂಕಟ ನರಸಿಂಹ ರೆಡ್ಡಿ ಅವರನ್ನು ಸ್ವರಾಜ್ಯ ವಿವಾಹವಾಗಿದ್ದರು. ಸಿಪಿಐ(ಎಂ) ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ತುಂಗತುರ್ಥಿ ವಿಧಾನಸಭಾ ಕ್ಷೇತ್ರದಿಂದ ಸಂಯುಕ್ತ ಆಂಧ್ರಪ್ರದೇಶದ ವಿಧಾನಸಭೆಗೆ ಎರಡು 1978 ಮತ್ತು 1983ರಲ್ಲಿ ಚುನಾಯಿತರಾಗಿದ್ದರು.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕೂಡ ಸ್ವರಾಜ್ಯಂ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಅವರು ಅಸಾಧಾರಣ ಕಮ್ಯುನಿಸ್ಟ್ ಕ್ರಾಂತಿಕಾರಿಯಾಗಿದ್ದಾರೆ. 1946 ರಿಂದ 1951 ರವರೆಗಿನ ತೆಲಂಗಾಣದ ಸಶಸ್ತ್ರ ಹೋರಾಟದಲ್ಲಿ ಹೈದರಾಬಾದಿನ ನಿಜಾಮನ ‘ರಜಾಕರ’, ನಿರ್ದಯ ಜಮೀನ್ದಾರರ ಕೂಲಿ ಸೈನಿಕರ ಖಾಸಗಿ ಸೈನ್ಯವನ್ನು ನಿರ್ಭಯವಾಗಿ ಎದುರಿಸಿ, ಅವರಿಗೆ ಸವಾಲು ಹಾಕುತ್ತಿದ್ದರು” ಅವರು ಹೇಳಿದ್ದಾರೆ.

ಸ್ವರಾಜ್ಯಂ ಅವರು ತಮ್ಮ ವೈಯಕ್ತಿಕ ಉದಾಹರಣೆ ಮತ್ತು ರೋಮಾಂಚನಕಾರಿ ಭಾಷಣಗಳ ಮೂಲಕ ಹೋರಾಟದಲ್ಲಿ ಭಾಗವಹಿಸಲು ಅನೇಕ ಮಹಿಳೆಯರಿಗೆ ಸ್ಫೂರ್ತಿ ನೀಡಿದರು. “ನಾವು ಸ್ಪೂರ್ತಿದಾಯಕ ಕ್ರಾಂತಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರು ಕ್ರಾಂತಿಕಾರಿ ಉದ್ದೇಶವನ್ನು ಮುನ್ನಡೆಸುತ್ತಾ ಜನರ ಸೇವೆಯಲ್ಲಿ 75 ವರ್ಷಗಳಿಗಿಂತ ಹೆಚ್ಚು ಕಾಲ ಕಳೆದರು” ಎಂದು ಯೆಚೂರಿ ಹೇಳಿದ್ದಾರೆ.

ಇದನ್ನೂ ಓದಿ: UDF ತೊರೆದು ಕಮ್ಯುನಿಷ್ಟ್ ಒಕ್ಕೂಟ ಸೇರಿದ ಕೇರಳ ಕಾಂಗ್ರೆಸ್ (ಎಂ)!

ಹೋರಾಟಗಾರ್ತಿಯ ಸಾವಿಗೆ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಸಂತಾಪ ಸೂಚಿಸಿದ್ದು, ಅವರು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ಎಂದು ಹೇಳಿದ್ದಾರೆ.

“ಸ್ವರಾಜ್ಯಂ ತನ್ನ ಜೀವನದುದ್ದಕ್ಕೂ ಜನರಿಗಾಗಿ ಅವಿಶ್ರಾಂತವಾಗಿ ದುಡಿದಿದ್ದು ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ. ಸ್ವರಾಜ್ಯಂನಂತಹ ಮಹಿಳಾ ನಾಯಕಿಯನ್ನು ಕಳೆದುಕೊಂಡಿರುವುದು ತೆಲಂಗಾಣಕ್ಕೆ ದೊಡ್ಡ ನಷ್ಟವಾಗಿದೆ” ಎಂದು ಹೇಳಿರುವ ಸಿಎಂ ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಸಚಿವ ಜಿ. ಕಿಶನ್ ರೆಡ್ಡಿ ಕೂಡ ಸಂತಾಪ ಸೂಚಿಸಿದ್ದಾರೆ. “ಇಂದು ಮಲ್ಲು ಸ್ವರಾಜ್ಯಂ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ‘ತೆಲಂಗಾಣದ ಉಕ್ಕಿನ ಮಹಿಳೆ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಅವರು, ರಜಾಕರ ವಿರುದ್ಧ ತೆಲಂಗಾಣದ ಜನರಿಗಾಗಿ ಅವರು ಮಾಡಿದ ಹೋರಾಟವು ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...