Homeಮುಖಪುಟಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ವಿದೇಶಿ ಭಾಷೆಯಿಂದಾಗಿ ಶಿಕ್ಷಣ ಗಣ್ಯರಿಗೆ ಸೀಮಿತಗೊಂಡಿದೆ. ಜ್ಞಾನದ ನಿಧಿಯಾದ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು ಎಂದು ಹೇಳಿದ್ದಾರೆ.

- Advertisement -
- Advertisement -

ಶಿಕ್ಷಣದ ಕೇಸರಿಕರಣದಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ಕೇಳಿದ್ದು, ದೇಶದ ಜನರು ತಮ್ಮ ‘ವಸಾಹತುಶಾಹಿ ಮನಸ್ಥಿತಿಯನ್ನು’ ತ್ಯಜಿಸಿ ಮತ್ತು ತಮ್ಮದೇ ಆದ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಯಬೇಕೆಂದು ಅವರು ಹೇಳಿದ್ದಾರೆ.

ಹರಿದ್ವಾರದ ದೇವ್ ಸಂಸ್ಕೃತಿ ವಿಶ್ವ ವಿದ್ಯಾಲಯದಲ್ಲಿ ಸೌತ್ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಪೀಸ್ ಮತ್ತು ರಿಕಾನ್ಸಿಲಿಯೇಶನ್ ಅನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ, ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

“ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕೃತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ರಾಷ್ಟ್ರವಾಗಿ ನಮ್ಮ ಬೆಳವಣಿಗೆಯನ್ನು ನಿಧಾನಗೊಳಿಸಿತು. ನಮ್ಮ ಶಿಕ್ಷಣ ಮಾಧ್ಯಮವಾಗಿ ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಇದು ಅಪಾರ ಜನರ  ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತಿದೆ” ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದ್ದಾರೆ.

“ನಾವು ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಮತ್ತು ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಮ್ಮ ಬೇರುಗಳಿಗೆ ಹಿಂತಿರುಗಿ, ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ತ್ಯಜಿಸಿ, ನಮ್ಮ ಮಕ್ಕಳಿಗೆ ಅವರ ಭಾರತೀಯ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಸಬೇಕು. ಅನೇಕ ಭಾರತೀಯ ಭಾಷೆಗಳನ್ನು ಕಲಿಯಬೇಕು. ಸಾಧ್ಯವಾದಷ್ಟು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು” ಎಂದು ಉಪರಾಷ್ಟ್ರಪತಿ ಹೇಳಿದ್ದಾರೆ.

ಮಾತೃಭಾಷೆಯನ್ನು ಪ್ರಚಾರ ಮಾಡಲು ಯುವಕರನ್ನು ಪ್ರೋತ್ಸಾಹಿಸಿದ ಅವರು, “ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ‘ಹೊಸ ಶಿಕ್ಷಣ ನೀತಿ’ಯ ಕೇಂದ್ರ ಬಿಂದುವಾಗಿದೆ. ಇದು ಮಾತೃ ಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ” ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ಕೇಸರೀಕರಣ ಮತ್ತು ಕೋಮುವಾದೀಕರಣ ನಿಲ್ಲಿಸಿ: ಎಸ್ಎಫ್ಐ ಆಕ್ರೋಶ

“ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ನಮ್ಮ ಮೇಲೆ ಆರೋಪವಿದೆ. ಆದರೆ ಕೇಸರಿಯಲ್ಲಿ ಏನು ತಪ್ಪಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ್ ಕುಟುಂಬಕಮ್ (ಜಗತ್ತೇ ಒಂದು ಕುಟುಂಬ) ನಮ್ಮ ಪುರಾತನ ಗ್ರಂಥಗಳಲ್ಲಿ ಒಳಗೊಂಡಿರುವ ತತ್ವಶಾಸ್ತ್ರಗಳು. ಇದು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ತತ್ವಗಳಾಗಿವೆ’’ ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದರು.

“ಭಾರತವು ಸಾಮಾನ್ಯ ಬೇರುಗಳನ್ನು ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಬಲವಾದ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿದೆ. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದಿರುವ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿಕೊಂಡ ಮಹಾನ್ ಯೋಧ ರಾಜ ಅಶೋಕನ ದೇಶ” ಎಂದು ಅವರು ಹೇಳಿದ್ದಾರೆ.

“ಪ್ರಾಚೀನ ಭಾರತೀಯ ವಿಶ್ವವಿದ್ಯಾಲಯಗಳಾದ ನಳಂದಾ ಮತ್ತು ತಕ್ಷಿಲಾದಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತದ ಜನರು ಬರುತ್ತಿದ್ದರು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಸಹ, ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿ ಉಪರಾಷ್ಟ್ರಪತಿಯವರು ಗಾಂಧೀಜಿಯವರ ಹೆಸರನ್ನ ಹೇಳದೇ ಆಶೋಕ ಸಾಮ್ರಾಟನ ಹೆಸರನ್ನ ಹೇಳಿದ್ದು ಸರೀನಾ…. ಗಾಂಧೀಜಿಯವರು ಅಹಿ೦ಸೆಯಿಂದಾನೆ ನಮಗೆ ಸ್ವಾತಂತ್ರ ತಂದು ಕೊಟ್ಟಿದುದನ್ನ ಇವರು ಮರೆತುಬಿಟ್ಟರಾ ಅಥವಾ ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೇಸ್ ಗೆ ಲಾಭವಾಗುತ್ತೋ ಅಂತಾ ಹೇಳಿರಲಿಕ್ಕಿಲ್ಲಾ….

  2. ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೆಸ್ಗೆ ಲಾಭ ಅನ್ನುವುದು ಅವರ ಭಾವನೆ.
    ಮೆಕಾಲೆ ಶಿಕ್ಷಣ ಬದಲಿ ಯಾವರೀತಿಯ ಶಿಕ್ಷಣ ತರುತ್ತಾರೆ ನಮ್ಮ ಹಿಂದಿನ ಧರ್ಮಗ್ರಂಥ ಬಹಳಷ್ಟು ಭಾರತೀಯ ಭಾಷೆಗಳಿಗೆ ತರ್ಜುಮೆ ಆಗಿವೆ.
    ಪ್ರಾಂತೀಯ ಭಾಷೆ ಉತ್ತೇಜಿಸುವುದು ಆದರೆ ಹಿಂದಿಯನ್ನು ರಾಜ್ಯಗಳ ಮೇಲೆ ಹೇರುತ್ತಿದ್ದಾರೆ ಯಾವುದು ಇನ್ನು ಸ್ಪಷ್ಟ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....