Homeಮುಖಪುಟಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ವಿದೇಶಿ ಭಾಷೆಯಿಂದಾಗಿ ಶಿಕ್ಷಣ ಗಣ್ಯರಿಗೆ ಸೀಮಿತಗೊಂಡಿದೆ. ಜ್ಞಾನದ ನಿಧಿಯಾದ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು ಎಂದು ಹೇಳಿದ್ದಾರೆ.

- Advertisement -
- Advertisement -

ಶಿಕ್ಷಣದ ಕೇಸರಿಕರಣದಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ಕೇಳಿದ್ದು, ದೇಶದ ಜನರು ತಮ್ಮ ‘ವಸಾಹತುಶಾಹಿ ಮನಸ್ಥಿತಿಯನ್ನು’ ತ್ಯಜಿಸಿ ಮತ್ತು ತಮ್ಮದೇ ಆದ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಯಬೇಕೆಂದು ಅವರು ಹೇಳಿದ್ದಾರೆ.

ಹರಿದ್ವಾರದ ದೇವ್ ಸಂಸ್ಕೃತಿ ವಿಶ್ವ ವಿದ್ಯಾಲಯದಲ್ಲಿ ಸೌತ್ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಪೀಸ್ ಮತ್ತು ರಿಕಾನ್ಸಿಲಿಯೇಶನ್ ಅನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ, ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

“ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕೃತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ರಾಷ್ಟ್ರವಾಗಿ ನಮ್ಮ ಬೆಳವಣಿಗೆಯನ್ನು ನಿಧಾನಗೊಳಿಸಿತು. ನಮ್ಮ ಶಿಕ್ಷಣ ಮಾಧ್ಯಮವಾಗಿ ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಇದು ಅಪಾರ ಜನರ  ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತಿದೆ” ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದ್ದಾರೆ.

“ನಾವು ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಮತ್ತು ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಮ್ಮ ಬೇರುಗಳಿಗೆ ಹಿಂತಿರುಗಿ, ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ತ್ಯಜಿಸಿ, ನಮ್ಮ ಮಕ್ಕಳಿಗೆ ಅವರ ಭಾರತೀಯ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಸಬೇಕು. ಅನೇಕ ಭಾರತೀಯ ಭಾಷೆಗಳನ್ನು ಕಲಿಯಬೇಕು. ಸಾಧ್ಯವಾದಷ್ಟು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು” ಎಂದು ಉಪರಾಷ್ಟ್ರಪತಿ ಹೇಳಿದ್ದಾರೆ.

ಮಾತೃಭಾಷೆಯನ್ನು ಪ್ರಚಾರ ಮಾಡಲು ಯುವಕರನ್ನು ಪ್ರೋತ್ಸಾಹಿಸಿದ ಅವರು, “ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ‘ಹೊಸ ಶಿಕ್ಷಣ ನೀತಿ’ಯ ಕೇಂದ್ರ ಬಿಂದುವಾಗಿದೆ. ಇದು ಮಾತೃ ಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ” ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ಕೇಸರೀಕರಣ ಮತ್ತು ಕೋಮುವಾದೀಕರಣ ನಿಲ್ಲಿಸಿ: ಎಸ್ಎಫ್ಐ ಆಕ್ರೋಶ

“ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ನಮ್ಮ ಮೇಲೆ ಆರೋಪವಿದೆ. ಆದರೆ ಕೇಸರಿಯಲ್ಲಿ ಏನು ತಪ್ಪಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ್ ಕುಟುಂಬಕಮ್ (ಜಗತ್ತೇ ಒಂದು ಕುಟುಂಬ) ನಮ್ಮ ಪುರಾತನ ಗ್ರಂಥಗಳಲ್ಲಿ ಒಳಗೊಂಡಿರುವ ತತ್ವಶಾಸ್ತ್ರಗಳು. ಇದು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ತತ್ವಗಳಾಗಿವೆ’’ ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದರು.

“ಭಾರತವು ಸಾಮಾನ್ಯ ಬೇರುಗಳನ್ನು ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಬಲವಾದ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿದೆ. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದಿರುವ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿಕೊಂಡ ಮಹಾನ್ ಯೋಧ ರಾಜ ಅಶೋಕನ ದೇಶ” ಎಂದು ಅವರು ಹೇಳಿದ್ದಾರೆ.

“ಪ್ರಾಚೀನ ಭಾರತೀಯ ವಿಶ್ವವಿದ್ಯಾಲಯಗಳಾದ ನಳಂದಾ ಮತ್ತು ತಕ್ಷಿಲಾದಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತದ ಜನರು ಬರುತ್ತಿದ್ದರು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಸಹ, ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿ ಉಪರಾಷ್ಟ್ರಪತಿಯವರು ಗಾಂಧೀಜಿಯವರ ಹೆಸರನ್ನ ಹೇಳದೇ ಆಶೋಕ ಸಾಮ್ರಾಟನ ಹೆಸರನ್ನ ಹೇಳಿದ್ದು ಸರೀನಾ…. ಗಾಂಧೀಜಿಯವರು ಅಹಿ೦ಸೆಯಿಂದಾನೆ ನಮಗೆ ಸ್ವಾತಂತ್ರ ತಂದು ಕೊಟ್ಟಿದುದನ್ನ ಇವರು ಮರೆತುಬಿಟ್ಟರಾ ಅಥವಾ ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೇಸ್ ಗೆ ಲಾಭವಾಗುತ್ತೋ ಅಂತಾ ಹೇಳಿರಲಿಕ್ಕಿಲ್ಲಾ….

  2. ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೆಸ್ಗೆ ಲಾಭ ಅನ್ನುವುದು ಅವರ ಭಾವನೆ.
    ಮೆಕಾಲೆ ಶಿಕ್ಷಣ ಬದಲಿ ಯಾವರೀತಿಯ ಶಿಕ್ಷಣ ತರುತ್ತಾರೆ ನಮ್ಮ ಹಿಂದಿನ ಧರ್ಮಗ್ರಂಥ ಬಹಳಷ್ಟು ಭಾರತೀಯ ಭಾಷೆಗಳಿಗೆ ತರ್ಜುಮೆ ಆಗಿವೆ.
    ಪ್ರಾಂತೀಯ ಭಾಷೆ ಉತ್ತೇಜಿಸುವುದು ಆದರೆ ಹಿಂದಿಯನ್ನು ರಾಜ್ಯಗಳ ಮೇಲೆ ಹೇರುತ್ತಿದ್ದಾರೆ ಯಾವುದು ಇನ್ನು ಸ್ಪಷ್ಟ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...