Homeಕರ್ನಾಟಕಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

ಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

- Advertisement -
- Advertisement -

ಶಿಕಾರಿಪುರ ತಾಲ್ಲೂಕಿನ ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಿರೇಕೆರೂರಿನ ವಕೀಲರಾದ ಜಯದೇವ ಬಿ.ಕೆರೂಡಿ ಅವರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್‌ ಅಧಿಕಾರಿ ಗುರುರಾಜ ಮೈಲಾರಿಯವರನ್ನು ಪೊಲೀಸ್‌ ಇಲಾಖೆ ಅಮಾನತು ಮಾಡಿದೆ.

ಪೊಲೀಸರು ಹಲ್ಲೆ ಮಾಡಿದ್ದಲ್ಲದೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಹಿರೇಕೆರೂರು ನ್ಯಾಯವಾದಿಗಳ ಸಂಘ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿತ್ತು.

ಮಾರ್ಚ್ 13ರಂದು ಮಲ್ಲಿಕಾರ್ಜುನ ದೇವರ ರಥೋತ್ಸವ ಪ್ರಯುಕ್ತ ದರ್ಶನಕ್ಕೆಂದು ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದ ವಕೀಲರಾದ ಜಯದೇವ ಬಿ. ಕೆರೂಡಿ ತೆರಳಿದ್ದರು. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಜನ ಸಂದಣಿ ಹೆಚ್ಚಾಗಿದ್ದು, ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ದೇವರ ದರ್ಶನಕ್ಕೆಂದು ಹರಸಾಹಸ ಪಡುತ್ತಿದ್ದರು. ನೂಕುನುಗ್ಗಲನ್ನು ತಡೆಯುವಂತೆ ಪೊಲೀಸರಿಗೆ ಜಯದೇವ ಅವರು ಕೋರಿದಾಗ ಪೊಲೀಸರು ದರ್ಪ ತೋರಿದ್ದಲ್ಲದೆ ಹಲ್ಲೆ ನಡೆಸಿದ್ದರು. ದೇವಾಲಯದ ಸಿಸಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿತ್ತು.

ಸರತಿ ಸಾಲನ್ನು ಸರಿಪಡಿಸಲು ಕೋರಿದಾಗ ಅಲ್ಲಿದ್ದ ಸಿಪಿಐ ಗುರುರಾಜ ಮೈಲಾರಿ ಹಾಗೂ ಸಿಬ್ಬಂದಿ ಅವ್ಯಾಚ್ಯವಾಗಿ ನಿಂದಿಸಿದ್ದು, ವಕೀಲಿ ವೃತ್ತಿಗೂ ಅವಹೇಳನ ಮಾಡಿದ್ದಾರೆ. ಈ ವೇಳೆ ಸಿಪಿಐ ಹಾಗೂ ಹೆಡ್‌ಕಾನ್‌ಸ್ಟೇಬಲ್‌ ಇಬ್ಬರೂ ವಕೀಲರಿಗೆ ಥಳಿಸಿದ್ದಾರೆ. ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಠಾಣೆಗೆ ಕರೆದೊಯ್ದು ಅಲ್ಲಿಯೂ ಮೃಗೀಯ ವರ್ತನೆ ತೋರಿಸಿದ್ದಾರೆ. ಜಯದೇವ ಅವರು ಮಹಿಳಾ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದಾರೆ. ಸದರಿ ವಕೀಲರಿಗೆ ಕಾನೂನು ಬಾಹಿರವಾಗಿ ಕೈಗೆ ಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ ಎಂದು ವಕೀಲರು ಆಕ್ರೋಶ ಹೊರಹಾಕಿದ್ದರು. ಘಟನೆ ಹಿನ್ನೆಲೆಯಲ್ಲಿ ಕ್ರಮ ಜರುಗಿಸಿರುವ ದಾವಣಗೆರೆ ಪೂರ್ವ ವಲಯದ ಪೊಲೀಸ್‌ ಮಹಾನಿರೀಕ್ಷಕರು, ಶಿಕಾರಿಪುರ ನಗರ ಸಿಪಿಐ ಗುರುರಾ‌ಜ್‌ ಎನ್‌.ಮೈಲಾರಿ ಅವರನ್ನು ಅಮಾನತು ಮಾಡಿದ್ದಾರೆ.

ಅಮಾನತು ಆದೇಶದಲ್ಲಿ ಏನಿದೆ?

“ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರನ್ನು ಬಿಡುವಂತೆ ಜೋರು ದನಿಯಲ್ಲಿ ವಕೀಲ ಜಯದೇವ ಅವರು ಇಲಾಖೆಯ ಬಂದೋಬಸ್ತ್‌ನಲ್ಲಿದ್ದ ಸಿಬ್ಬಂದಿಯೊಂದಿಗೆ ವಾಗ್ವಾದ ಮಾಡುತ್ತಿರುವಾಗ ಸ್ಥಳದಲ್ಲಿಯೇ ಇದ್ದ ನೀವು ಪರಿಸ್ಥಿತಿಯನ್ನು ತಿಳಿಗೊಳಿಸಿ ಜನಸಂದಣಿಯನ್ನು ನಿಭಾಯಿಸದೆ ತೀವ್ರವಾಗಿ ಉದ್ವೇಗಕ್ಕೊಳಗಾಗಿದ್ದೀರಿ. ದೇವಸ್ಥಾನಕ್ಕೆ ಆಗಮಿಸಿದ್ದ ಸಾರ್ವಜನಿಕರ ಮುಂದೆಯೇ ಲಾಯರ್‌ ಜೊತೆಯಲ್ಲಿ ವಾಗ್ವಾದಕ್ಕಿಳಿದು, ನೂಕಾಟ ನಡೆಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದೀರಿ. ಒಂದು ವೇಳೆ ಸದರಿಯವರು ಅನುಚಿತವಾಗಿ ವರ್ತಿಸಿದ್ದಕ್ಕೆ ಅವರ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಜರುಗಿಸಬಹುದಿತ್ತು…”

“ನೀವು ಬಂದೋಬಸ್ತ್‌ ಕರ್ತವ್ಯದಲ್ಲಿದ್ದ ಇತರೆ ಸಿಬ್ಬಂದಿಗಳ ಸಹಾಯದೊಂದಿಗೆ ಅವರನ್ನು ಪಕ್ಕಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ಮಾಡುವ ಮೂಲಕ, ಶಿಸ್ತಿನ ಇಲಾಖೆಯ ಸಿಪಿಐ ಹುದ್ದೆಯಂತಹ ಜವಾಬ್ದಾರಿ ಸ್ಥಾನದಲ್ಲಿದ್ದು, ಬೇಜವಾಬ್ದಾರಿತನದ ಮತ್ತು ಕರ್ತವ್ಯದಲ್ಲಿ ಘೋರ ನಿರ್ಲಕ್ಷ್ಯ ತೋರಿದ್ದಲ್ಲದೇ ಇಲಾಖೆಯ ಘನತೆಗೆ ಸಾರ್ವಜನಿಕವಾಗಿ ಮುಜುಗರವುಂಟಾಗುವಂತೆ ದುರ್ವರ್ತನೆ ತೋರಿದ್ದೀರಿ. ಇದು ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳಿಂದ ಮತ್ತು ಶಿವಮೊಗ್ಗ ಪೊಲೀಸ್‌ ಅಧೀಕ್ಷಕರ ಉಲ್ಲೇಖಿತ ವರದಿಯ ಪರಿಶೀಲನೆಯಿಂದ ಮನವರಿಕೆಯಾಗಿದೆ. ಹೀಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಮ್ಮನ್ನು ಸೇವೆಯಿಂದ ಅಮಾನತು ಮಾಡಲಾಗಿದೆ” ಎಂದು ಮಾರ್ಚ್ 20ರಂದು ಆದೇಶ ಹೊರಡಿಸಲಾಗಿದೆ.

“ಅಮಾನತಿನ ಅವಧಿಯಲ್ಲಿ ಮೊದಲನೇ ಆರು ತಿಂಗಳ ಅವಧಿಯಲ್ಲಿ ಕೆಸಿಎಸ್‌ಆರ್‌ 1958ರ ನಿಯಮ 96ರಂತೆ ಅರ್ಧ ಸಂಬಳ ನೀಡಲಾಗುತ್ತದೆ…. ಅಮಾನತಿ ಅವಧಿಯಲ್ಲಿ ಯಾವುದೇ ಇತರೆ ವ್ಯಾಪಾರದಲ್ಲಿ ತೊಡಗಿಸಿಕೊಂಡರೆ ಪ್ರತ್ಯೇಕವಾದ ಶಿಸ್ತಿನ ಕ್ರಮ ಜರುಗಿಸಲಾಗುವುದು…” ಎಂದು ಎಚ್ಚರಿಸಲಾಗಿದೆ.


ಇದನ್ನೂ ಓದಿರಿ: ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...