Homeಅಂತರಾಷ್ಟ್ರೀಯ132 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಚೀನಾದ ಈಸ್ಟರ್ನ್‌ ಏರ್‌ಲೈನ್ಸ್‌ ಪತನ

132 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಚೀನಾದ ಈಸ್ಟರ್ನ್‌ ಏರ್‌ಲೈನ್ಸ್‌ ಪತನ

- Advertisement -
- Advertisement -

132 ಜನರನ್ನು ಹೊತ್ತೊಯ್ಯುತ್ತಿದ್ದ ‘ಚೀನಾ ಈಸ್ಟರ್ನ್ ಏರ್‌ಲೈನ್ಸ್’ ಪ್ರಯಾಣಿಕ ವಿಮಾನವು ದಕ್ಷಿಣ ಚೀನಾದಲ್ಲಿ ಪತನಗೊಂಡಿದೆ ಎಂದು ದೇಶದ ಸರ್ಕಾರಿ ಮಾಧ್ಯಮ ಸಿಸಿಟಿವಿ ವರದಿ ಮಾಡಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಅದು ವರದಿ ಮಾಡಿದೆ.

ಬೋಯಿಂಗ್‌ 737 ಎಂಬ ವಿಮಾನವು ಗುವಾಂಗ್ಕ್ಸಿ ಪ್ರದೇಶದ ವುಝೌ ನಗರದ ಬಳಿಯ ಗ್ರಾಮಾಂತರ ಪ್ರದೇಶದಲ್ಲಿ ಪತನಗೊಂಡಿದೆ. ಇದರಿಂದಾಗಿ ಭಾರಿ ಬೆಂಕಿ ಭುಗಿಲೆದ್ದಿದೆ ಎಂದು CCTV ವರದಿಯಲ್ಲಿ ಹೇಳಿದ್ದು, ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

ವಿಮಾನದ ಪತನದ ಕಾರಣದ ಬಗ್ಗೆ ಮಾಹಿತಿಯನ್ನು ಅದು ನೀಡಿಲ್ಲ. ಫ್ಲೈಟ್-ಟ್ರ್ಯಾಕಿಂಗ್ ವೆಬ್‌ಸೈಟ್ ಆಗಿರುವ ‘ಫ್ಲೈಟ್‌ರಾಡಾರ್24’ ಪತನಗೊಂಡ ವಿಮಾನವನ್ನು, ‘ಆರು ವರ್ಷದ 737-800 ವಿಮಾನ’ ಎಂದು ಗುರುತಿಸಿದೆ.

“MU5735 ವಿಮಾನವು ಕುನ್ಮಿಂಗ್ ನಗರದಿಂದ ಮಧ್ಯಾಹ್ನ 1 ಗಂಟೆಯ ನಂತರ (05:00 GMT) ಟೇಕ್ ಆಫ್ ಆಗಿದೆ. ಆದರೆ ಅದು ಇಳಿಯಬೇಕಾದ ಗುವಾಂಗ್‌ಝೌ ಪ್ರದೇಶವನ್ನು ತಲುಪಿಲ್ಲ” ಎಂದು ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ವಿಮಾನವು ತನ್ನ ಗುರಿಯನ್ನು ಮಧ್ಯಾಹ್ನ 3:05ಕ್ಕೆ (07:05 GMT) ತಲುಪಬೇಕಿತ್ತು.

“ಈ ದುರ್ಘಟನೆಯು ಇತ್ತೀಚೆಗಿನ ವರ್ಷಗಳಲ್ಲಿ ಚೀನಾದ ಅತಿದೊಡ್ಡ ಘಟನೆಯಾಗಿದೆ” ಎಂದು ಅಲ್‌ಜಝೀರಾ ತನ್ನ ವರದಿಗಾರ್ತಿ ಕತ್ರೀನಾ ಯು ಅವರನ್ನು ಉಲ್ಲೇಖಿಸಿ ವರದಿ ಮಾಡಿದೆ. ಈ ಬಗ್ಗೆ ಬೀಜಿಂಗ್‌ನಲ್ಲಿ ಮಾತನಾಡಿದ ಕತ್ರಿನಾ, “ಸಿಬ್ಬಂದಿ ಸೇರಿದಂತೆ 132 ಮಂದಿ ವಿಮಾನದಲ್ಲಿದ್ದರು ಎಂದು ಚೀನಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಹೇಳಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

“ವಿಮಾನವು ಕ್ವಾಂಗ್ಕ್ಸಿ ಮೇಲಿನಿಂದ ಹಾರುತ್ತಿರ ಬೇಕಾದರೆ ಕೆಳಗೆ ಬರುವುದರಿಂದ ಕಾಳ್ಗಿಚ್ಚು ಸಂಭವಿಸಿದೆ ಎಂದು ತೋರುತ್ತದೆ, ಮತ್ತು ಈ ಪ್ರದೇಶವು ಎಷ್ಟು ದೂರದಲ್ಲಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಅವರು ಮುಂದುವರಿಸಿದರು.

“ವಿಮಾನವು ಕ್ವಾಂಗ್ಕ್ಸಿಯಲ್ಲಿ ಕೆಳಗೆ ಬರುವುದರಿಂದ ಕಾಳ್ಗಿಚ್ಚು ಸಂಭವಿಸಿದೆ ಎಂದು ತೋರುತ್ತದೆ. ಈ ಭೂಪ್ರದೇಶಕ್ಕೆ ತಲುಪುವುದು ಕಷ್ಟಕರವಾಗಿದ್ದು, ಇದರಿಂದಾಗಿ ರಕ್ಷಣಾ ತಂಡಗಳನ್ನು ಅಲ್ಲಿಗೆ ತ್ವರಿತವಾಗಿ ತಲುಪಿಸುವುದು ಸುಲಭವಲ್ಲ” ಎಂದು ಅವರು ಹೇಳಿದ್ದಾರೆ.

ಚೀನಾ ಈಸ್ಟರ್ನ್‌ ಚೀನಾದ ಮೂರು ಪ್ರಮುಖ ವಿಮಾನ ಸಂಸ್ಥೆಗಳಲ್ಲಿ ಒಂದಾಗಿದೆ. 248 ಸ್ಥಳಗಳಿಗೆ ಸೇವೆ ಸಲ್ಲಿಸುವ ಇದು ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳನ್ನು ನಿರ್ವಹಿಸುತ್ತದೆ. ದೇಶದ ವಿಮಾನಯಾನ ಉದ್ಯಮದ ಸುರಕ್ಷತಾ ದಾಖಲೆಯು ಕಳೆದ ದಶಕದಲ್ಲಿ ವಿಶ್ವದಲ್ಲೇ ಅತ್ಯುತ್ತಮವಾಗಿದೆ ಎಂದು ಅಲ್‌ ಜಝೀರಾ ಉಲ್ಲೇಖಿಸಿದೆ.

ಇದನ್ನೂ ಓದಿ: NATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...