Homeಕರ್ನಾಟಕಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ಹಿಜಾಬ್‌ ನಿಷೇಧ ಎತ್ತಿ ಹಿಡಿದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು, ಪೋಷಕರು ಎದುರಿಸುತ್ತಿರುವ ಆತಂಕವನ್ನು ‘ದಿ ನ್ಯೂಸ್‌ ಮಿನಿಟ್‌’ ಗ್ರೌಂಡ್ ರಿಪೋರ್ಟ್ ಮಾಡಿದೆ. ಉಡುಪಿ ಜಿಲ್ಲೆಯ ಶೈಕ್ಷಣಿಕ ಪರಿಸ್ಥಿತಿ ವಿಷಮಯವಾಗುತ್ತಿದೆ.

- Advertisement -
- Advertisement -

(ಹಿಜಾಬ್‌ ನಿಷೇಧ ಎತ್ತಿ ಹಿಡಿದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು, ಪೋಷಕರು ಎದುರಿಸುತ್ತಿರುವ ಆತಂಕವನ್ನು ‘ದಿ ನ್ಯೂಸ್‌ ಮಿನಿಟ್‌’ ಗ್ರೌಂಡ್ ರಿಪೋರ್ಟ್ ಮಾಡಿದೆ. ಉಡುಪಿ ಜಿಲ್ಲೆಯ ಶೈಕ್ಷಣಿಕ ಪರಿಸ್ಥಿತಿ ವಿಷಮಯವಾಗುತ್ತಿದೆ.)

ಮಧ್ಯಾಹ್ನ 12 ಗಂಟೆ. ತನ್ನ ಕಾಲೇಜು ಗೇಟ್‌ಗಳ ಮುಂದೆ ನಿಂತ ಅಫ್ಸಾನಾಳ ನೆತ್ತಿಯ ಮೇಲೆ ಉರಿ ಸೂರ್ಯನ ಜ್ವಾಲೆ. ಹೀಗಾಗಲೇ ತರಗತಿಯ ಮೂರನೇ ಅವಧಿ ಮುಗಿದಿದೆ. ಕಿಟಕಿಯ ಮೂಲಕ ಅಫ್ಸಾನಾ ತನ್ನ ಸಹಪಾಠಿಗಳ ಮುಖಗಳನ್ನು ನೋಡುತ್ತಾಳೆ. ಆದರೆ 20ರ ಹರೆಯದ ಅಫ್ಸಾನಾ ಪಿಯಾಜಿ ಮತ್ತು ಆಕೆಯ ನಾಲ್ವರು ಗೆಳತಿಯರು ಹೊರಗಿನಿಂದ ಮಾತ್ರ ತರಗತಿಯನ್ನು ನೋಡುವಂತಾಗಿದೆ. “ಹೊರಗೆ ಹೋಗಿ, ಕಾಲೇಜಿನಲ್ಲಿರುವ ಇತರರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ಎಂದು ಪ್ರಾಂಶುಪಾಲರು ಹೇಳಿದರು” ಎಂದು ಅಫ್ಸಾನಾ ಬೇಸರ ವ್ಯಕ್ತಪಡಿಸುತ್ತಾರೆ. ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ಕಾಲೇಜು ಅನುಮತಿಸದ ಕಾರಣ  ಅಪ್ಸಾನಾ ಒಂದು ತಿಂಗಳಿನಿಂದ ತನ್ನ ತರಗತಿಯಲ್ಲಿ ಕೂರಲು ಸಾಧ್ಯವಾಗುತ್ತಿಲ್ಲ.

ಕಳೆದ ವಾರ ಕರ್ನಾಟಕ ಹೈಕೋರ್ಟ್, ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದೆ. ಈ ನಿರ್ಧಾರದಿಂದ ಅಫ್ಸಾನಾ ಇಕ್ಕಟ್ಟಿಗೆ ಸಿಲುಕಿದ್ದಾರೆ. “ಯಾವುದಾದರೊಂದು ಪರಿಹಾರ ಇದ್ದೇ ಇರುತ್ತದೆ ಎಂದು ನಾನು ಕಾಲೇಜಿಗೆ ಬಂದಿದ್ದೇನೆ” ಎಂಬುದು ಅಫ್ಸಾನಾ ನುಡಿ. “ನಾವು ನಮ್ಮ ಸೆಮಿಸ್ಟರ್ ಪರೀಕ್ಷೆಯ ಶುಲ್ಕ (ರೂ 730) ಪಾವತಿಸಿದ್ದೇವೆ. ಈ ಶೈಕ್ಷಣಿಕ ವರ್ಷವನ್ನು ಪೂರೈಸಲು ಪ್ರಾಂಶುಪಾಲರು ನಮಗೆ ಸಹಾಯ ಮಾಡುತ್ತಾರೆ ಎಂದು ನಾನು ಭಾವಿಸಿದ್ದೇವೆ” ಎನ್ನುತ್ತಾರೆ ಅಫ್ಸಾನಾ.

ಮೂರು ವರ್ಷಗಳ ಹಿಂದೆ ಅಫ್ಸಾನಾ ಅವರು ಉಡುಪಿಯ ಸರ್ಕಾರಿ ಅನುದಾನಿತ ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಸೇರಿದರು. ಮನೋವಿಜ್ಞಾನ, ಪತ್ರಿಕೋದ್ಯಮ ಮತ್ತು ಗ್ರಾಮೀಣಾಭಿವೃದ್ಧಿ ವಿಷಯವನ್ನು ಆಯ್ಕೆ ಮಾಡಿಕೊಂಡರು. ಅಫ್ಸಾನಾ ಈಗ ತನ್ನ ಅಂತಿಮ ಸೆಮಿಸ್ಟರ್ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಮತ್ತು ತನ್ನ ಮುಂದಿನ ವೃತ್ತಿಜೀವನದ ನಡೆಯನ್ನು ಯೋಜಿಸಬೇಕು.

ಇದನ್ನೂ ಓದಿರಿ: ಹಿಜಾಬ್‌ ತೀರ್ಪು ನೀಡಿದ ನ್ಯಾಯಮೂರ್ತಿಗೆ ಕೊಲೆ ಬೆದರಿಕೆ ಆರೋಪ; ಪ್ರಕರಣ ದಾಖಲು

“ಪದವಿಯ ನಂತರ ನಾನು ಕೌಪ್‌ನ ಸರ್ಕಾರಿ ಕಾಲೇಜಿನಲ್ಲಿ ಸೋಷಿಯಲ್‌ ವರ್ಕ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಬಯಸುತ್ತೇನೆ” ಎನ್ನುವ ಅಫ್ಸಾನಾ, “ಆದರೆ ಈಗ ನನ್ನ ಕನಸು ನನಸಾಗುವ ನಂಬಿಕೆ ಇಲ್ಲ. ನಾನು ಹಿಜಾಬ್ ಅನ್ನು ಧರಿಸಲು ಬಯಸುತ್ತೇನೆ. ಏಕೆಂದರೆ ಅದು ನನ್ನ ನಂಬಿಕೆಯ ಭಾಗವಾಗಿದೆ. ಆದರೆ ನಾನು ಹಿಜಾಬ್ ಧರಿಸಿದರೆ ನನ್ನ ಅಂತಿಮ ಪರೀಕ್ಷೆಗಳನ್ನು ಬರೆಯಲು ಅವಕಾಶ ದೊರಕುವುದಿಲ್ಲ” ಎನ್ನುತ್ತಾರೆ.

ಹೈಕೋರ್ಟ್ ತೀರ್ಪಿನ ನಂತರ ತಮ್ಮ ಶೈಕ್ಷಣಿಕ ಭವಿಷ್ಯದ ಬಗ್ಗೆ ಯೋಚಿಸುತ್ತಿರುವ ಉಡುಪಿಯ 232 ಪದವಿ ವಿದ್ಯಾರ್ಥಿಗಳಲ್ಲಿ ಅಫ್ಸಾನಾ ಕೂಡ ಒಬ್ಬರು ಎಂದು ಶಿಕ್ಷಣ ಇಲಾಖೆಯ ಮಾಹಿತಿಯಿಂದ ತಿಳಿದುಬರುತ್ತದೆ. ಉಡುಪಿಯ ಮುಸ್ಲಿಂ ಸಂಘಟನೆಗಳ ಒಕ್ಕೂಟವಾದ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಪ್ರಕಾರ, ಕನಿಷ್ಠ 183 ಪದವಿ ಪೂರ್ವ ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗಿಲ್ಲ. ಉಡುಪಿಯ ಪ್ರಿ-ಯೂನಿವರ್ಸಿಟಿ ಕಾಲೇಜುಗಳಲ್ಲಿ ಒಟ್ಟು 12.5% ​​ (1446) ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ.

ಕೆಲವು ವಿದ್ಯಾರ್ಥಿಗಳು, ತಮ್ಮ ಕಾಲೇಜನ್ನು ತೊರೆಯುವ ಆತಂಕದಲ್ಲಿದ್ದಾರೆ. ನ್ಯಾಯಾಲಯವು ಹಿಜಾಬ್ ಮೇಲಿನ ನಿಷೇಧವನ್ನು ಎತ್ತಿಹಿಡಿದ ನಂತರ ಹಿಜಾಬ್ ಅನ್ನು ತೆಗೆದು ತಮ್ಮ ಪರೀಕ್ಷೆಗಳನ್ನು ಬರೆಯಲು ಕೆಲವರು ಯೋಚಿಸುತ್ತಿದ್ದಾರೆ. “ನಾನು ಮೂರನೇ ವರ್ಷದ ವಿದ್ಯಾರ್ಥಿ. ಹಿಜಾಬ್‌ ತೆಗೆಯದಿದ್ದರೆ ಮೂರು ವರ್ಷಗಳ ನನ್ನ ಕೋರ್ಸ್ ವ್ಯರ್ಥವಾಗಬಹುದು” ಎಂದು ಹೆಸರು ಹೇಳಲು ಇಚ್ಛಿಸದ ಜಿ ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಹೇಳುತ್ತಾರೆ. ಈ ವಿದ್ಯಾರ್ಥಿಯ ಪಕ್ಕದಲ್ಲಿದ್ದ ವಿದ್ಯಾರ್ಥಿನಿ, ಗೆಳತಿ 20 ವರ್ಷದ ಅಫ್ರಾ ಅಜ್ಮಲ್ ಅಸ್ಸಾದಿ ಕಾಲೇಜಿನಿಂದ ಹೊರಗುಳಿಯಲು ಮುಂದಾಗಿದ್ದಾರೆ. “ನಾವು ತರಗತಿಯಲ್ಲಿ ಒಂದೇ ಬೆಂಚ್ ಮೇಲೆ ಕುಳಿತು ನಮ್ಮ ಬಿಡುವಿನ ವೇಳೆಯನ್ನು ಒಟ್ಟಿಗೆ ಕಳೆಯುತ್ತಿದ್ದೆವು. ಆದರೆ ಹಿಜಾಬ್‌ ವಿಚಾರದಲ್ಲಿ ನಾನು ರಾಜಿಯಾಗಲಾರೆ. ನಾನು ಬದಲಿ ಕಾಲೇಜು ಅಥವಾ ಆನ್‌ಲೈನ್ ಕೋರ್ಸ್‌ಗಾಗಿ ಹುಡುಕಾಟ ನಡೆಸಿದ್ದೇನೆ” ಎನ್ನುತ್ತಾರೆ ಅಫ್ರಾ.

ಇದನ್ನೂ ಓದಿರಿ: ಹಿಜಾಬ್‌ ತೀರ್ಪಿನಲ್ಲಿ ಅಗತ್ಯ ಸಂಗತಿಗಳನ್ನು ಬದಿಗಿಟ್ಟ ಹೈಕೋರ್ಟ್: ವಿದ್ಯಾರ್ಥಿ ಸಂಘಟನೆಗಳ ಆಕ್ಷೇಪ

ಹಿಜಾಬ್ ನಿಷೇಧದಿಂದಾಗಿ ಉಡುಪಿಯ ಪೋಷಕರು ತಮ್ಮ ಮಕ್ಕಳನ್ನು ಬೇರೆ ಕಾಲೇಜುಗಳಿಗೆ ವರ್ಗಾವಣೆ ಮಾಡಿಸಲು ಮುಂದಾಗಿದ್ದಾರೆ. ಶಿಕ್ಷಣದ ಸಲುವಾಗಿ ಕುಟುಂಬಗಳು ಬೇರೆ ಊರಿಗೆ ವಲಸೆ ಹೋಗಲು ಯೋಜಿಸುತ್ತಿವೆ. ಉಡುಪಿಯ ಮಹಾತ್ಮಗಾಂಧಿ ಸ್ಮಾರಕ (ಎಂಜಿಎಂ) ಕಾಲೇಜಿನಲ್ಲಿ ಓದುತ್ತಿರುವ ಬಿಎಸ್‌ಸಿ ವಿದ್ಯಾರ್ಥಿಯ ಪೋಷಕರಾದ ಮೊಹಮ್ಮದ್ ಅಲಿ, “ಹಿಜಾಬ್‌ಗೆ ಅನುಮತಿ ಇರುವ ಕಾಲೇಜಿನಲ್ಲಿ ನಮ್ಮ ಮಗಳ ಅಧ್ಯಯನವನ್ನು ಮುಂದುವರಿಸಲು ಸಹಾಯ ಮಾಡಲು ನಾವು ಮಂಗಳೂರಿಗೆ ತೆರಳುವ ಬಗ್ಗೆ ಯೋಚಿಸುತ್ತಿದ್ದೇವೆ” ಎನ್ನುತ್ತಾರೆ.

“ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದ ದಿನದಂದು ನಾನು ಟಿವಿ ವೀಕ್ಷಿಸಲು ಹೆದರುತ್ತಿದ್ದೆ. ಆದರೆ ನಾನು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಅನುಸರಿಸುತ್ತಿದ್ದೆ. ಹಿಂದೆ ಯಾವುದೇ ಸಮಸ್ಯೆಯಿಲ್ಲದ ನಮ್ಮಂತಹ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಲಾಗುವುದು ಎಂದು ನಾವು ಆಶಿಸುತ್ತಿದ್ದೆವು” ಎಂದು ವಿದ್ಯಾರ್ಥಿನಿ ಹೇಳುತ್ತಾರೆ.

ಕಾಲೇಜಿನ 58 ವಿದ್ಯಾರ್ಥಿಗಳು ತಮ್ಮ ಕಾಲೇಜು ಪ್ರಾಂಶುಪಾಲರನ್ನು ಭೇಟಿ ಮಾಡಿ ಪರೀಕ್ಷೆಗಾಗಿ ಅನುಮತಿ ಕೋರಿದ್ದಾರೆ. ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ. “ನಮ್ಮನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದರೆ ಮತ್ತು ಮಹಿಳಾ ಶಿಕ್ಷಕಿಯನ್ನು ಇನ್ವಿಜಿಲೇಟರ್ ಆಗಿ ನೇಮಿಸಿದರೆ ನಾವು ಹಿಜಾಬ್ ತೆಗೆದುಹಾಕುವುದಾಗಿ ಹೇಳಿದೆವು. ಈ ವಿನಂತಿಯನ್ನೂ ನಿರಾಕರಿಸಲಾಗಿದೆ” ಎಂದು ಅವರು ಹೇಳುತ್ತಾರೆ.

“ಹಿಜಾಬ್ ಇಲ್ಲದೆ ತರಗತಿಗೆ ಹೋಗುವುದನ್ನು ನಾನು ಊಹಿಸಲು ಸಾಧ್ಯವಿಲ್ಲ” ಎನ್ನುವ ವಿದ್ಯಾರ್ಥಿನಿ ಕುರಾನ್‌ನ ಇಂಗ್ಲಿಷ್ ಅನುವಾದದಲ್ಲಿನ ಎರಡು ಪದ್ಯಗಳನ್ನು ತೋರಿಸುತ್ತಾಳೆ. “ಹಿಜಾಬ್ ಅನ್ನು ಕುರಾನ್‌ನಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ನಮ್ಮ ನಂಬಿಕೆಯ ಅಗತ್ಯ ಭಾಗವೆಂದು ನಾನು ಪರಿಗಣಿಸುತ್ತೇನೆ” ಎನ್ನುತ್ತಾಳೆ ವಿದ್ಯಾರ್ಥಿನಿ.

ಇದನ್ನೂ ಓದಿರಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ಆದರೆ ಹಿಜಾಬ್ ಅನ್ನು ಅನುಮತಿಸುವ ಖಾಸಗಿ ಸಂಸ್ಥೆಗಳಿಗೆ ಹೋಗುವುದು ಅಫ್ಸಾನಾ ಅವರಂತಹ ವಿದ್ಯಾರ್ಥಿಗಳಿಗೆ ಒಂದು ಆಯ್ಕೆ ಮಾತ್ರವಲ್ಲ; ಹಿಜಾಬ್ ನಿಷೇಧದ ಜಾರಿಯು ಅವರ ಶಿಕ್ಷಣದ ಅಂತ್ಯವನ್ನು ಸೂಚಿಸುತ್ತದೆ. ಅಫ್ಸಾನಾ ಪೋಷಕರು ದೂರವಾದ್ದರಿಂದ, ಆಕೆಯ ಶಿಕ್ಷಣಕ್ಕೆಂದು ಸರ್ಕಾರಿ ಅನುದಾನಿತ ಕಾಲೇಜಿಗೆ 3,000 ರೂ.ಗಳ ಸಾಧಾರಣ ಕಾಲೇಜು ಶುಲ್ಕವನ್ನು ಆಕೆಯ ಚಿಕ್ಕಪ್ಪ ಪಾವತಿಸಿದರು.

ಕುಂದಾಪುರ, ಬೈಂದೂರು ಸೇರಿದಂತೆ ಉಡುಪಿ ಜಿಲ್ಲೆಯಾದ್ಯಂತ ಕಾಲೇಜುಗಳಲ್ಲೂ ಇದೇ ಸ್ಥಿತಿ ಇದೆ. ಎರಡೂ ಪಟ್ಟಣಗಳಲ್ಲಿ ಕಳೆದ ವಾರ ಹಲವಾರು ಮುಸ್ಲಿಂ ಹುಡುಗಿಯರು ತಮ್ಮ ತರಗತಿಗಳು ಅಥವಾ ಪರೀಕ್ಷೆಗಳಿಂದ ದೂರ ಉಳಿದಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲರು ಹೇಳುತ್ತಾರೆ. ಉದಾಹರಣೆಗೆ ಕುಂದಾಪುರದ ಆರ್‌ಎನ್ ಶೆಟ್ಟಿ ಸಂಯುಕ್ತ ಪಿಯು ಕಾಲೇಜಿನಲ್ಲಿ ಕಳೆದ ವಾರ 56 ಮುಸ್ಲಿಂ ಬಾಲಕಿಯರ ಪೈಕಿ ಕೇವಲ ಒಬ್ಬ ವಿದ್ಯಾರ್ಥಿನಿ ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು. ಅದೇ ರೀತಿ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 16 ಮುಸ್ಲಿಂ ಬಾಲಕಿಯರಲ್ಲಿ ಒಬ್ಬರು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು.

2011ರ ಜನಗಣತಿಯ ಪ್ರಕಾರ 11.7 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ ಕೇವಲ 8.22% ಮುಸ್ಲಿಮರಿದ್ದಾರೆ. ನೆರೆಯ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ, ಮುಸ್ಲಿಂ ಜನಸಂಖ್ಯೆಯು ಉಡುಪಿಗಿಂತ ಸುಮಾರು ಎರಡು ಪಟ್ಟು ಹೆಚ್ಚು (24%). ಉಡುಪಿಗಿಂತ ಮುಸ್ಲಿಮರ ಜನಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲೂ ಇದೇ ಸಮಸ್ಯೆಗಳು ಎದುರಾಗುತ್ತಿವೆ ಎಂದು ಮುಸ್ಲಿಂ ಸಂಘಟನೆಗಳು ಹೇಳುತ್ತಿವೆ.

“ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಮುಸ್ಲಿಂ ವಿದ್ಯಾರ್ಥಿಗಳಿಂದ ಆನ್‌ಲೈನ್ ತರಗತಿಗಾಗಿ ಮನವಿಗಳು ಬಂದಿವೆ” ಎಂದು ಹಿಜಾಬ್ ನಿಷೇಧ ಜಾರಿಯಿಂದ ಪರಿಣಾಮ ಎದುರಿಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ದಾಖಲಿಸುತ್ತಿರುವ ಉಡುಪಿಯ ಮುಸ್ಲಿಂ ಒಕ್ಕೂಟ ಹೇಳಿದೆ. “ಉಡುಪಿ ಕೇಂದ್ರ ಬಿಂದುವಾಗಿದೆ. ಏಕೆಂದರೆ ಇಲ್ಲಿ ಸಮಸ್ಯೆ ಪ್ರಾರಂಭವಾಯಿತು. ಆದರೆ ಎಲ್ಲಾ ನೆರೆಯ ಜಿಲ್ಲೆಗಳು ಸೇರಿದಂತೆ ಇತರ ಹಲವು ಜಿಲ್ಲೆಗಳಿಂದ ಆನ್‌ಲೈನ್ ತರಗತಿಗಳಿಗಾಗಿ ನಾವು ಕೋರಿಕೆಗಳನ್ನು ಸ್ವೀಕರಿಸಿದ್ದೇವೆ ” ಎಂದು ಒಕೂಟದ ಸದಸ್ಯ ಹಸನ್ ಮಾವೇದ್ ಹೇಳುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಸರ್ಕಾರಿ ಪದವಿಪೂರ್ವ ಕಾಲೇಜೊಂದರಲ್ಲಿ 231 ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ಪೂರ್ವಸಿದ್ಧತಾ ಪರೀಕ್ಷೆಯಿಂದ ಹೊರಗುಳಿದ್ದಾರೆ. ಹೋರಾಟ ನಿರತ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮುಸ್ಲಿಂ ವಿದ್ಯಾರ್ಥಿಗಳು ಬೆಂಬಲ ಸೂಚಿಸಿದ್ದಾರೆ.

ತಮ್ಮ ಹೆಣ್ಣು ಮಕ್ಕಳ ಭವಿಷ್ಯದ ಬಗ್ಗೆ ಚಿಂತಿತರಾಗಿರುವ ನೂರಾರು ಕುಟುಂಬಗಳಿಗೆ ವಿಷಮಯ ಪರಿಸ್ಥಿತಿ ಎಂದು ಒಕ್ಕೂಟ ಹೇಳಿದೆ. “ತೀರ್ಪು ಪ್ರಕಟವಾದಾಗಿನಿಂದ, ನಾವು ಪ್ರೀ ಯೂನಿವರ್ಸಿಟಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ಏರ್ಪಡಿಸಿದ್ದೇವೆ. ಭವಿಷ್ಯದ ಬಗ್ಗೆ ಆತಂಕಿತರಾಗಿರುವ ಪೋಷಕರು ಕರೆಗಳನ್ನು ಮಾಡುತ್ತಲೇ ಇದ್ದಾರೆ” ಎನ್ನುತ್ತಾರೆ ಹಸನ್.

ವರದಿ ಕೃಪೆ: ದಿ ನ್ಯೂಸ್‌ ಮಿನಿಟ್‌ (ಪ್ರಜ್ವಲ್ ಭಟ್‌)


ಇದನ್ನೂ ಓದಿರಿ: ಹಿಜಾಬ್ ಕುರಿತ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡುವಂತೆ ಮಹಿಳಾ ಸಂಘಟನೆಗಳ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೊದಲು ನಿಮ್ಮಗಳ ಮನಸ್ಥಿತಿ ಬದಲಾಯಿಸಿ ಕೊಳ್ಳದಿದ್ದರೆ ನಿಮ್ಮ ನ್ಯೂಸ್ ಜೊತೆಗೆ ನಿಮ್ಮನ್ನು ಹೊರಹಾಕುವ ಸಮಯ ಬರಲಿದೆ ಸಾರ್ವಜನಿಕವಾಗಿ

  2. ಇದೊಂದು ದೇಶದ್ರೋಹಿ ಚಾನೆಲ್ ಅಂತ ಕಾಣುತ್ತಿದೆ ಇದನ್ನು ಮೊದಲು ಬ್ಯಾನ್ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...