Homeದಲಿತ್ ಫೈಲ್ಸ್ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ.

- Advertisement -
- Advertisement -

ಪೊಲ್ಲಾಚಿ ಅತ್ಯಾಚಾರ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, 22 ವರ್ಷದ ದಲಿತ ಮಹಿಳೆಯ ಮೇಲೆ ಏಳು ತಿಂಗಳ ಅವಧಿಯಲ್ಲಿ ಪದೇ ಪದೇ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.

ಆರೋಪಿಗಳು ಮಹಿಳೆಯ ಖಾಸಗೀ ಸಂಗತಿಗಳನ್ನು ವಿಡಿಯೊ ಮಾಡಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ, ತಿಂಗಳುಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನಲ್ಲಿ ಹರಿಹರನ್ ಅಲಿಯಾಸ್ ಸರವಣನ್ (27) ಎಂಬಾತ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಇದಲ್ಲದೆ, ಹರಿಹರನ್ ಮತ್ತು ಮಹಿಳೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇದನ್ನು ಸರವಣನ್‌ ಚಿತ್ರೀಕರಿಸಿಕೊಂಡಿದ್ದ.

“ಒಂದು ದಿನ ಹರಿಹರನ್ ತನ್ನ ಸ್ನೇಹಿತರೊಂದಿಗೆ ಇದ್ದಾಗ, ಅವರು ಈ ವೀಡಿಯೊವನ್ನು ನೋಡಿ, ಆತನಿಂದ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಮಹಿಳೆಯನ್ನು ಸಂಪರ್ಕಿಸಿ, ಈ ವೀಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ ಆಗಸ್ಟ್ 2021ರಿಂದ ಹಿಡಿದು ಮಾರ್ಚ್ 2022ರವರೆಗೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಡಿಎಂಕೆ ಪದಾಧಿಕಾರಿ ಮತ್ತು ಮೂವರು ಶಾಲಾ ವಿದ್ಯಾರ್ಥಿಗಳೂ ಇದ್ದಾರೆ.

ಸಂತ್ರಸ್ತೆಯು ಮಹಿಳಾ ಸಹಾಯವಾಣಿಯನ್ನು ಸಂಪರ್ಕಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. “ಸಂತ್ರಸ್ತಯು ಮಹಿಳಾ ಸಹಾಯವಾಣಿ ಸಂಖ್ಯೆ 181 ಅನ್ನು ಸಂಪರ್ಕಿಸಲು ನಿರ್ಧರಿಸಿದರು. ತನ್ನ ಮೇಲಾದ ಅತ್ಯಾಚಾರವನ್ನು ತಿಳಿಸಿದರು. ನಂತರ ಪ್ರಕರಣವನ್ನು ವಿರುದುನಗರ ಗ್ರಾಮಾಂತರ ಪೊಲೀಸರು ಕೈಗೆತ್ತಿಕೊಂಡರು” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಮಹಿಳೆ ತನ್ನ ಮೇಲಾಗುತ್ತಿರುವ ದೌರ್ಜನ್ಯವನ್ನು ನೆರೆಹೊರೆಯವರಾದ ಮಾದಸ್ವಾಮಿ (37) ಎಂಬ ವ್ಯಕ್ತಿಯಲ್ಲಿ ಹೇಳಿಕೊಂಡು ಸಹಾಯ ಕೋರಿದ್ದರು. ಆದರೆ ಆತನೂ ಸಂತ್ರಸ್ತೆಗೆ ಬೆದರಿಕೆ ಹಾಕಿ ಲೈಂಗಿಕ ಕಿರುಕುಳ ನೀಡಲು ವೀಡಿಯೊವನ್ನು ಬಳಸಿಕೊಂಡನು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ಮಾರ್ಚ್ 20, ಭಾನುವಾರದಂದು ಮಹಿಳೆಯ ದೂರಿನ ಆಧಾರದ ಮೇಲೆ ಅದೇ ದಿನ ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್) (ಅತ್ಯಾಚಾರ), 354 (ಸಿ) (ವೋಯರಿಸಂ/ಇತರರು ಬೆತ್ತಲೆಯಾಗಿದ್ದಾಗ ಅಥವಾ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವಾಗ ಅವರನ್ನು ನೋಡುವುದರಿಂದ ಲೈಂಗಿಕ ಆನಂದವನ್ನು ಪಡೆಯುವ ಅಭ್ಯಾಸ), 354 (ಡಿ) (ಹಿಂಬಾಲಿಸುವಿಕೆ), ಮಾಹಿತಿ ತಂತ್ರಜ್ಞಾನ ಕಾಯಿದೆಯ 66(ಇ) (ಗೌಪ್ಯತೆಯ ಉಲ್ಲಂಘನೆ), 3(1)(ಡಬ್ಲ್ಯೂ)(1) (ಅಪರಾಧಗಳ ದೌರ್ಜನ್ಯಗಳಿಗೆ ಶಿಕ್ಷೆ), 3(2)(ವಿ) (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಹರಿಹರನ್, ಮಾದಸಾಮಿ (37), ಪ್ರವೀಣ್ (22), ಜುನೈತ್ ಅಹಮದ್ (27), 18 ವರ್ಷದ ಒಬ್ಬ ಯುವಕ, 17 ವರ್ಷದ ಇಬ್ಬರು ಯುವಕರು, 15 ವರ್ಷದ ಒಬ್ಬ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಲ್ಲ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಜುನೈತ್ ಅಹ್ಮದ್ ಡಿಎಂಕೆ ಪಕ್ಷದ ಪದಾಧಿಕಾರಿಯಾಗಿದ್ದಾನೆ. ಈ ವ್ಯಕ್ತಿಗಳು ಬೇರೆ ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಪೊಲ್ಲಾಚಿ ಪ್ರಕರಣ ಪುನಾರಾವರ್ತನೆ

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ. ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣವು ತಮಿಳುನಾಡಿನ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ಬೆಳಕಿಗೆ ಬಂದಿತ್ತು. ಗ್ಯಾಂಗ್‌ವೊಂದು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಅದನ್ನು ಚಿತ್ರೀಕರಿಸಿ ಬ್ಲಾಕ್ಮೇಲ್ ಮಾಡುತ್ತಿತ್ತು.

ಈ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿದ ನಂತರ ಪ್ರತ್ಯೇಕ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿ ಕೃತ್ಯವನ್ನು ಚಿತ್ರೀಕರಿಸುತ್ತಿತ್ತು. ನಂತರ ವೀಡಿಯೊಗಳನ್ನು ಲೈಂಗಿಕ ಅನುಕೂಲಕ್ಕಾಗಿ ಅಥವಾ ಹಣಕ್ಕಾಗಿ ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡಲು ಬಳಸುತ್ತಿತ್ತು. 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ ಬಳಿಕ ಈ ಗ್ಯಾಂಗ್ ಬೆಳಕಿಗೆ ಬಂದಿತ್ತು.


ಇದನ್ನೂ ಓದಿರಿ: 11 ವರ್ಷದ ಬಾಲಕಿಯ ಮೇಲೆ ತಂದೆ, ಸಹೋದರ, ಅಜ್ಜ ಮತ್ತು ಚಿಕ್ಕಪ್ಪನಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...