Homeದಲಿತ್ ಫೈಲ್ಸ್ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ತಮಿಳುನಾಡು: ಬೆತ್ತಲೆ ಚಿತ್ರೀಕರಿಸಿ ಬ್ಲಾಕ್‌ಮೇಲ್‌; ದಲಿತ ಮಹಿಳೆಯ ಮೇಲೆ ನಿರಂತರ ಗ್ಯಾಂಗ್ ರೇಪ್‌

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ.

- Advertisement -
- Advertisement -

ಪೊಲ್ಲಾಚಿ ಅತ್ಯಾಚಾರ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, 22 ವರ್ಷದ ದಲಿತ ಮಹಿಳೆಯ ಮೇಲೆ ಏಳು ತಿಂಗಳ ಅವಧಿಯಲ್ಲಿ ಪದೇ ಪದೇ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.

ಆರೋಪಿಗಳು ಮಹಿಳೆಯ ಖಾಸಗೀ ಸಂಗತಿಗಳನ್ನು ವಿಡಿಯೊ ಮಾಡಿ ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ, ತಿಂಗಳುಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನಲ್ಲಿ ಹರಿಹರನ್ ಅಲಿಯಾಸ್ ಸರವಣನ್ (27) ಎಂಬಾತ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಇದಲ್ಲದೆ, ಹರಿಹರನ್ ಮತ್ತು ಮಹಿಳೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಇದನ್ನು ಸರವಣನ್‌ ಚಿತ್ರೀಕರಿಸಿಕೊಂಡಿದ್ದ.

“ಒಂದು ದಿನ ಹರಿಹರನ್ ತನ್ನ ಸ್ನೇಹಿತರೊಂದಿಗೆ ಇದ್ದಾಗ, ಅವರು ಈ ವೀಡಿಯೊವನ್ನು ನೋಡಿ, ಆತನಿಂದ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಮಹಿಳೆಯನ್ನು ಸಂಪರ್ಕಿಸಿ, ಈ ವೀಡಿಯೊವನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿ ಆಗಸ್ಟ್ 2021ರಿಂದ ಹಿಡಿದು ಮಾರ್ಚ್ 2022ರವರೆಗೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಡಿಎಂಕೆ ಪದಾಧಿಕಾರಿ ಮತ್ತು ಮೂವರು ಶಾಲಾ ವಿದ್ಯಾರ್ಥಿಗಳೂ ಇದ್ದಾರೆ.

ಸಂತ್ರಸ್ತೆಯು ಮಹಿಳಾ ಸಹಾಯವಾಣಿಯನ್ನು ಸಂಪರ್ಕಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. “ಸಂತ್ರಸ್ತಯು ಮಹಿಳಾ ಸಹಾಯವಾಣಿ ಸಂಖ್ಯೆ 181 ಅನ್ನು ಸಂಪರ್ಕಿಸಲು ನಿರ್ಧರಿಸಿದರು. ತನ್ನ ಮೇಲಾದ ಅತ್ಯಾಚಾರವನ್ನು ತಿಳಿಸಿದರು. ನಂತರ ಪ್ರಕರಣವನ್ನು ವಿರುದುನಗರ ಗ್ರಾಮಾಂತರ ಪೊಲೀಸರು ಕೈಗೆತ್ತಿಕೊಂಡರು” ಎಂದು ಪೊಲೀಸರು ತಿಳಿಸಿರುವುದಾಗಿ ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಮಹಿಳೆ ತನ್ನ ಮೇಲಾಗುತ್ತಿರುವ ದೌರ್ಜನ್ಯವನ್ನು ನೆರೆಹೊರೆಯವರಾದ ಮಾದಸ್ವಾಮಿ (37) ಎಂಬ ವ್ಯಕ್ತಿಯಲ್ಲಿ ಹೇಳಿಕೊಂಡು ಸಹಾಯ ಕೋರಿದ್ದರು. ಆದರೆ ಆತನೂ ಸಂತ್ರಸ್ತೆಗೆ ಬೆದರಿಕೆ ಹಾಕಿ ಲೈಂಗಿಕ ಕಿರುಕುಳ ನೀಡಲು ವೀಡಿಯೊವನ್ನು ಬಳಸಿಕೊಂಡನು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿರಿ: ಕೇರಳ: ಅತ್ಯಾಚಾರ ಆರೋಪದಲ್ಲಿ ಮಲಯಾಳಂ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

ಮಾರ್ಚ್ 20, ಭಾನುವಾರದಂದು ಮಹಿಳೆಯ ದೂರಿನ ಆಧಾರದ ಮೇಲೆ ಅದೇ ದಿನ ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್) (ಅತ್ಯಾಚಾರ), 354 (ಸಿ) (ವೋಯರಿಸಂ/ಇತರರು ಬೆತ್ತಲೆಯಾಗಿದ್ದಾಗ ಅಥವಾ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವಾಗ ಅವರನ್ನು ನೋಡುವುದರಿಂದ ಲೈಂಗಿಕ ಆನಂದವನ್ನು ಪಡೆಯುವ ಅಭ್ಯಾಸ), 354 (ಡಿ) (ಹಿಂಬಾಲಿಸುವಿಕೆ), ಮಾಹಿತಿ ತಂತ್ರಜ್ಞಾನ ಕಾಯಿದೆಯ 66(ಇ) (ಗೌಪ್ಯತೆಯ ಉಲ್ಲಂಘನೆ), 3(1)(ಡಬ್ಲ್ಯೂ)(1) (ಅಪರಾಧಗಳ ದೌರ್ಜನ್ಯಗಳಿಗೆ ಶಿಕ್ಷೆ), 3(2)(ವಿ) (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಹರಿಹರನ್, ಮಾದಸಾಮಿ (37), ಪ್ರವೀಣ್ (22), ಜುನೈತ್ ಅಹಮದ್ (27), 18 ವರ್ಷದ ಒಬ್ಬ ಯುವಕ, 17 ವರ್ಷದ ಇಬ್ಬರು ಯುವಕರು, 15 ವರ್ಷದ ಒಬ್ಬ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎಲ್ಲ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಜುನೈತ್ ಅಹ್ಮದ್ ಡಿಎಂಕೆ ಪಕ್ಷದ ಪದಾಧಿಕಾರಿಯಾಗಿದ್ದಾನೆ. ಈ ವ್ಯಕ್ತಿಗಳು ಬೇರೆ ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಪೊಲ್ಲಾಚಿ ಪ್ರಕರಣ ಪುನಾರಾವರ್ತನೆ

ಇದೇ ರೀತಿಯ ಪ್ರಕರಣ 2019ರಲ್ಲಿ ನಡೆದಿತ್ತು. ಅದು ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ ಎಂದೇ ಕುಖ್ಯಾತಿ ಪಡೆದಿದೆ. ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣವು ತಮಿಳುನಾಡಿನ ಕೊಯಮತ್ತೂರಿನ ಪೊಲ್ಲಾಚಿಯಲ್ಲಿ ಬೆಳಕಿಗೆ ಬಂದಿತ್ತು. ಗ್ಯಾಂಗ್‌ವೊಂದು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಅದನ್ನು ಚಿತ್ರೀಕರಿಸಿ ಬ್ಲಾಕ್ಮೇಲ್ ಮಾಡುತ್ತಿತ್ತು.

ಈ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರೊಂದಿಗೆ ಸ್ನೇಹ ಬೆಳೆಸಿದ ನಂತರ ಪ್ರತ್ಯೇಕ ಸ್ಥಳಗಳಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿ ಕೃತ್ಯವನ್ನು ಚಿತ್ರೀಕರಿಸುತ್ತಿತ್ತು. ನಂತರ ವೀಡಿಯೊಗಳನ್ನು ಲೈಂಗಿಕ ಅನುಕೂಲಕ್ಕಾಗಿ ಅಥವಾ ಹಣಕ್ಕಾಗಿ ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡಲು ಬಳಸುತ್ತಿತ್ತು. 19ರ ಹರೆಯದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ ಬಳಿಕ ಈ ಗ್ಯಾಂಗ್ ಬೆಳಕಿಗೆ ಬಂದಿತ್ತು.


ಇದನ್ನೂ ಓದಿರಿ: 11 ವರ್ಷದ ಬಾಲಕಿಯ ಮೇಲೆ ತಂದೆ, ಸಹೋದರ, ಅಜ್ಜ ಮತ್ತು ಚಿಕ್ಕಪ್ಪನಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...