Homeಕರ್ನಾಟಕEXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ:...

EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

- Advertisement -
- Advertisement -

ಕನ್ನಡಿಗರ ಪ್ರೀತಿಯ ‘ಅಪ್ಪು’, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ತೆರೆ ಕಂಡು ಇನ್ನೂ ಒಂದು ವಾರವಾಗಿಲ್ಲ, ಆದರೆ ‘ಕಾಣದ ಕೈಗಳು’ ಜೇಮ್ಸ್‌ ಸಿನಿಮಾ ಪ್ರದರ್ಶನವನ್ನು ಕಡಿತಗೊಳಿಸಿ, ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ ಹೇರುತ್ತಿರುವ ಸಂಗತಿ ಬಯಲಾಗಿದೆ.

‘ಜೇಮ್ಸ್‌’ ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರರೂ ಆಗಿರುವ ಕಿಶೋರ್ ಪತ್ತಿಕೊಂಡ ಅವರ ಮೇಲೆ ಒತ್ತಡ ತಂದು ಜೇಮ್ಸ್‌ ಸಿನಿಮಾ ಷೋಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಇದೇ ವೇಳೆ ಕಿಶೋರ್‌ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದಕ್ಕೂ ಸಂಬಂಧ ಕಲ್ಪಿಸಿ ಮಾಧ್ಯಮಗಳು ವರದಿ ಮಾಡುತ್ತಿವೆ.

ಈ ಸಂಬಂಧ ‘ನಾನುಗೌರಿ.ಕಾಂ’ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ಅವರನ್ನು ಸಂಪರ್ಕಿಸಿದ್ದು, ಜೇಮ್ಸ್‌ ಷೋ ಕಡಿತಗೊಳಿಸಲು ಒತ್ತಡಗಳು ಬರುತ್ತಿರುವುದನ್ನು ಉಲ್ಲೇಖಿಸಿದರು.

“ಬಹಳಷ್ಟು ಕಡೆ ಮಾರ್ನಿಂಗ್ ಷೋ, ಸೆಕೆಂಡ್ ಷೋ ತೆಗೆದು ಬೇರೆ ಸಿನಿಮಾ ಹಾಕಲು ಹೋದರು. ನಾನು ಅದನ್ನು ವಿರೋಧಿಸಿದೆ. ನಮ್ಮ ಸಿನಿಮಾ ಚೆನ್ನಾಗಿದೆ. ಪುನೀತ್ ಅವರ ಕೊನೆಯ ಸಿನಿಮಾವನ್ನು ಕನ್ನಡಿಗರು ನೋಡುತ್ತಿದ್ದಾರೆ ಎಂದೆ. ಅದಕ್ಕೆ ಚಿತ್ರಮಂದಿರದವರು- ‘ಇಲ್ಲ ಸರ್‌, ಅವರು ಹೇಳ್ತಾರೆ, ಇವರು ಹೇಳ್ತಾರೆ, ತೆರಿಗೆ ವಿನಾಯಿತಿ ನೀಡಿದ್ದೇವೆ ಹಾಕಿ ಅನ್ನುತ್ತಿದ್ದಾರೆ- ಅಂದರು. ನಾನು ಒಪ್ಪಲಿಲ್ಲ. ನಮ್ಮ ಸಿನಿಮಾದ ನಾಲ್ಕು ಷೋ ಆದ ಮೇಲೆ ಬೇರೆ ಸಿನಿಮಾ ಹಾಕಿಕೊಳ್ಳಲಿ. ಆದರೆ ಜೇಮ್ಸ್ ಸಿನಿಮಾ ಪ್ರದರ್ಶನಕ್ಕೆ ತೊಂದರೆ ಕೊಡಬೇಡಿ ಎಂದು ತಿಳಿಸಿದೆ. ಕಾಶ್ಮೀರ್‌ ಫೈಲ್‌ ಅನ್ನು ಬೆಳಿಗ್ಗೆ ಏಳು ಗಂಟೆಗೆ ಪ್ರದರ್ಶನ ಮಾಡಿಕೊಳ್ಳಲಿ. ಆದರೆ ಆದರೆ ಹತ್ತು ಗಂಟೆಯ ಷೋಗೆ ತೊಂದರೆ ಕೊಡಬೇಡಿ ಎಂದಿದ್ದೇನೆ” ಎಂದರು.

“ಪೂರ್ಣ ಪ್ರಮಾಣದಲ್ಲಿ ಅಲ್ಲವಾದರೂ ಒಂದೊಂದು ಪ್ರದರ್ಶನವನ್ನು ಕಡಿತಗೊಳಿಸಲು ಯತ್ನಿಸಿದರು. ಇನ್ನೂ ಒಂದು ವಾರ ಕಳೆದಿಲ್ಲ. ಆಗಲೇ ಸಿನಿಮಾ ತೆಗೆಯುವುದು ಸರಿಯಲ್ಲ ಎಂದೆ. ವಾರ ಕಳೆದ ಮೇಲೆ ಒಂದು ಊರಲ್ಲಿ ಎರಡು ಚಿತ್ರಮಂದಿರದಲ್ಲಿ ಜೇಮ್ಸ್‌ ಇದ್ದರೆ, ಒಂದು ಚಿತ್ರಮಂದಿರವನ್ನು ಬಿಟ್ಟುಕೊಡಲಾಗುವುದು. ಆದರೆ ಅಭಿಮಾನಿಗಳು ನೋಡುತ್ತಿರುವಾಗ ತೆರವು ಸರಿಯಲ್ಲ ಎಂಬುದಷ್ಟೇ ನಮ್ಮ ಆಕ್ಷೇಪ” ಎಂದು ಸ್ಪಷ್ಟಪಡಿಸಿದರು.

‘ಜೇಮ್ಸ್‌’ಗೆ ಸಿನಿಮಾ ಷೋ ಕಡಿತಗೊಳಿಸಿ, ಕಾಶ್ಮೀರ್‌ ಫೈಲ್ಸ್‌ಗೆ ತೋರಿಸುವಂತೆ ಬಿಜೆಪಿ ಶಾಸಕರು ಒತ್ತಡ ಹೇರುತ್ತಿರುವುದು ನಿಜವೇ ಎಂದು ಕೇಳಿದಾಗ, “ಒಂದು ಷೋಗೆ ಅವಕಾಶ ಕೋರಿದ್ದು ಚಿತ್ರಮಂದಿರದವರು. ಅವರಿಗೆ ಯಾರು ಒತ್ತಡ ಹಾಕುತ್ತಿದ್ದಾರೋ ಗೊತ್ತಿಲ್ಲ. ಶಾಸಕರು ಹೇಳಿದ್ದಾರೋ, ಮತ್ತ್ಯಾರೋ ಹೇಳುತ್ತಿದ್ದಾರೋ ಗೊತ್ತಿಲ್ಲ. ಅವರು ಸಿನಿಮಾ ಫ್ರೀ ತೋರಿಸ್ತಾರಂತೆ, ಅನೌನ್ಸ್‌ ಮಾಡಿದ್ದಾರಂತೆ  ಎಂದು ಚಿತ್ರಮಂದಿರದವರು ನನ್ನ ಬಳಿ ಹೇಳಿದರು. ಫ್ರೀ ತೋರಿಸೋ ಸಿನಿಮಾವನ್ನು ಬೆಳಿಗ್ಗೆ ಹಾಕಿದರೇನೂ ರಾತ್ರಿ ಹಾಕಿದರೇನು? ಜೇಮ್ಸ್‌ ಷೋಗೆ ತೊಂದರೆ ಕೊಡಬೇಡಿ ಎಂದು ತಿಳಿಸಿರುವೆ” ಎಂದು ಹೇಳಿದರು.

“ಅದು ಒಂದೂವರೆ ತಾಸು ಇರುವ ಸಿನಿಮಾ. ಬೆಳಿಗ್ಗೆ ಎಂಟು ಗಂಟೆಗೆ ಹಾಕಿಕೊಳ್ಳಲಿ. ಹತ್ತೂವರೆಗೆ ಜೇಮ್ಸ್ ಪ್ರದರ್ಶನವಾಗಲಿ. ಹಾಗೆಯೇ ‘ಆರ್‌ಆರ್‌ಆರ್‌‌’ ಬಂತು ಎಂದು ನಮ್ಮ ಸಿನಿಮಾ ತೆಗೆಯಬೇಡಿ ಎಂದೂ ಕೋರಿದ್ದೇನೆ. ಮಂಡ್ಯದಲ್ಲಿ ಐದು ಥೇಟರ್‌‌ ಇವೆ. ಹಾಗೆಂದು ಎಲ್ಲ ಥೇಟರ್‌‌ನಲ್ಲೂ ನಾವು ಸಿನಿಮಾ ಹಾಕಲ್ಲ. ಎರಡು ಉಳಿಸಿಕೊಳ್ಳುತ್ತೇವೆ ಅಷ್ಟೇ ಎಂದಿರುವೆ. ಕೆಲವರು ಸಹಕರಿಸುತ್ತಿದ್ದಾರೆ. ಮತ್ತೆ ಕೆಲವರು ಸಂಜೆ ವೇಳೆಗೆ ತಮ್ಮ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನಲ್ಲಿ ತೆಲುಗು ಏರಿಯಾಗಳಿವೆ. ಅಲ್ಲಿ ಒಂದು ವಾರ ನಮ್ಮ ಸಿನಿಮಾ ಹಾಕಿಕೊಟ್ಟಿದ್ದಾರೆ. ಆದರೆ ಕನ್ನಡಿಗರು ಹೆಚ್ಚಿರುವಲ್ಲಿ ನಮ್ಮ ಸಿನಿಮಾ ತೆಗೆಯಬೇಡಿ ಎಂದು ಹೇಳುತ್ತಿದ್ದೇನೆ. ಮಾಗಡಿ ರೋಡ್‌ನಲ್ಲಿ ವೀರೇಶ್‌, ಪ್ರಸನ್ನ ಚಿತ್ರಮಂದಿರದಲ್ಲಿ ಕನ್ನಡ ಸಿನಿಮಾಗಳನ್ನು ಹಾಕುತ್ತಾರೆ. ಅಂಜನ್‌ನಲ್ಲಿ ತೆಲುಗು ಹಾಕುತ್ತಾರೆ. ಆದರೆ ಪುನೀತ್ ಅವರ ಕೊನೆಯ ಸಿನಿಮಾವನ್ನು ಪ್ರದರ್ಶಿಸಬೇಕೆಂದು ಅಂಜನ್‌ನವರೇ ಮುಂದೆ ಬಂದು ಒಂದು ವಾರ ಜೇಮ್ಸ್ ಹಾಕಿದ್ದಾರೆ” ಎಂದು ಹೇಳಿದರು.

ಜೇಮ್ಸ್‌ ನಿರ್ಮಾಪಕರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದು ಏಕೆ?

ಚಿತ್ರಮಂದಿರಗಳಲ್ಲಿ ಜೇಮ್ಸ್ ಪ್ರದರ್ಶನ ಕಡಿತಗೊಳಿಸಲು ಮುಂದಾಗಿರುವುದರಿಂದಲೇ ಜೇಮ್ಸ್ ನಿರ್ಮಾಪಕರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು ಎಂದು ವರದಿಗಳಾಗಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕಿಶೋರ್ ಪತ್ತಿಕೊಂಡ ಅವರು ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದರು.

“ಜೇಮ್ಸ್‌ ಸಿನಿಮಾ ನೋಡಲು ಬರುವಂತೆ ಆಹ್ವಾನ ನೀಡುವುದಕ್ಕಾಗಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದೆ. ನಿಮಗಾಗಿ ಒಂದು ಷೋ ಅರೆಂಜ್‌ ಮಾಡುತ್ತೇವೆ ಎಂದು ಅವರಿಗೆ ತಿಳಿಸಿದೆ. ಇದಕ್ಕಾಗಿ ಅವರನ್ನು ಭೇಟಿಯಾಗಿದ್ದಷ್ಟೇ. ನಮ್ಮ ಕೋರಿಕೆಯನ್ನು ಸ್ವೀಕರಿಸಿದ ಸಿದ್ದರಾಮಯ್ಯನವರು, ನಿರಂತರವಾಗಿ ಕಾರ್ಯಕ್ರಮಗಳಿವೆ. ಎರಡು ಮೂರು ದಿನಗಳೊಳಗೆ ನಿಮಗೆ ಪ್ರತಿಕ್ರಿಯೆ ನೀಡುತ್ತೇನೆ. ಖಂಡಿತ ಸಿನಿಮಾ ನೋಡುತ್ತೇನೆ ಎಂದಿದ್ದಾರೆ” ಎಂದು ಕಿಶೋರ್‌ ಸ್ಪಷ್ಟಪಡಿಸಿದರು.


ಇದನ್ನೂ ಓದಿರಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....