Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಗೂ ಮೊದಲು ಇದ್ದ ಕಾಶ್ಮೀರದ ಪರಿಸ್ಥಿತಿಗೂ ಮತ್ತು ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ನಂತರ ಕಾಶ್ಮೀರದ ಪರಿಸ್ಥಿತಿಗೂ ಎಷ್ಟೊಂದು ವ್ಯತ್ಯಾಸ ಇದೆ ನೋಡಿ ಎಂಬ ಹೇಳಿಕೆಯೊಂದಿಗೆ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಸ್ವಾತಂತ್ಯ್ರ ಬಂದಾಗಿನಿಂದ ಕಾಶ್ಮೀರ ಕುರಿತು ಪ್ರಮುಖ ರಾಜಕೀಯ ಪಕ್ಷಗಳ ನಿಲುವುಗಳು ಮತ್ತು ಸಮಸ್ಯೆಗಳನ್ನು ನೋಡುವ ರೀತಿಯಿಂದಾಗಿ ಕಾಶ್ಮೀರ ಎಂಬ ಕಣಿವೆ ರಾಜ್ಯ ಇಂದಿಗೂ ಉರಿವ ಕೆಂಡದಂತೆ ಭಾಸವಾಗುತ್ತಿದೆ. ಇದರ ನಡುವೆ ಕಾಶ್ಮೀರದಲ್ಲಿ ಹಿಂದೂ ಪಂಡಿತರನ್ನು ಹಿಂಸಾತ್ಮಕವಾಗಿ ನಡೆಸಿಕೊಳ್ಳಲಾಗಿದೆ, ಹತ್ಯೆ ಮಾಡಲಾಗಿದೆ ಎಂದು ಕತೆಯನ್ನ ಹೇಳುವ ‘ದ ಕಾಶ್ಮೀರ್ ಫೈಲ್ಸ್‌’ ಎಂಬ ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಸಿನಿಮಾ ಬಿಡುಗಡೆ ಆಗಿದ್ದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನು ಓದಿರಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ 

ವೈರಲ್ ಪೋಸ್ಟ್‌ನಲ್ಲಿ ಇರುವ ವಿಡಿಯೊದಲ್ಲಿ ಸೇನೆಯ ವಾಹನಗಳಿಗೆ ತಡೆಯೊಡ್ಡಿ, ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಸೇನಾವಾಹನವನ್ನು ಹಿಮ್ಮೆಟ್ಟಿಸುವ ಕ್ಲಿಪ್‌ಗಳು ಮತ್ತೊಂದು ಕಡೆ ಸೇನಾ ವಾಹನದ ಮುಂಭಾಗಕ್ಕೆ ವ್ಯಕ್ತಿಯೊಬ್ಬನನ್ನು ಕಟ್ಟಿ ಮೆರವಣಿಗೆ ಮಾಡುತ್ತಿರುವ ದೃಶ್ಯಗಳನ್ನು ವೈರಲ್ ವೀಡಿಯೋದಲ್ಲಿ ಕಾಣಬಹುದು. ಹಾಗಿದ್ದರೆ ಈ ವೈರಲ್ ವಿಡಿಯೊದಲ್ಲಿ ಕಾಣುತ್ತಿರುವ  ಘಟನೆಗಳು ಯಾವ  ಸಂದರ್ಭಗಳಲ್ಲಿ ನಡೆದಿದೆ ಎಂದು ತಿಳಿದುಕೊಳ್ಳುವ ಮೂಲಕ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

 ಫ್ಯಾಕ್ಟ್‌ಚೆಕ್ 

ವೀಡಿಯೊದ ಸ್ಕ್ರೀನ್‌ಶಾಟ್‌ಗಳ ಸಹಾಯದಿಂದ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯ ಮೊದಲು ಎಂದು ಹೇಳಿಕೊಳ್ಳುವ ದೃಶ್ಯಗಳು ಸಹ  2019 ರಲ್ಲಿ ಸೆರೆಯಾದ ದೃಶ್ಯಗಳಾಗಿವೆ.

31 ಮೇ 2019 ರಂದು ಶ್ರೀನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಮುಸುಕುಧಾರಿಗಳು ಜಮ್ಮು ಕಾಶ್ಮೀರದ ಪೊಲೀಸ್ ವಾಹನಕ್ಕೆ ಕಲ್ಲು ತೂರಾಟ ಮಾಡಿ ವಾಹನವನ್ನು ತಡೆಯುತ್ತಿರುವ ದೃಶ್ಯಗಳು ಎಂಬ ಮಾಹಿತಿ ಲಭ್ಯವಾಗಿದೆ. ಈ ದೃಶ್ಯಗಳನ್ನು ಸೆರೆ ಹಿಡಿದ ವ್ಯಕ್ತಿಯು ಅಸೋಸಿಯೇಟೆಡ್ ಪ್ರೆಸ್‌ನಲ್ಲಿ ಕೆಲಸ ಮಾಡಿದ ದಾರ್ ಯಾಸಿನ್ ಎಂದು ತಿಳಿದು ಬಂದಿದೆ. ವಾಹನದ ಬಾನೆಟ್ ಮೇಲೆ ಹಾರಿದ ವ್ಯಕ್ತಿಯ ಚಿತ್ರವನ್ನು ಸರೆ ಹಿಡಿದ ಕಾರಣಕ್ಕೆ ವಿಶೇಷ ಫೋಟೋಗ್ರಫಿ ಎಂದು ಗುರುತಿಸಿ ಅವರಿಗೆ 2020 ರಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ನೀಡಲಾಗಿತ್ತು.

ಶ್ರೀನಗರದಲ್ಲಿ ಈ ಘಟನೆ ಸಂಭವಿಸುವ ಕೆಲವು ದಿನಗಳ ಮೊದಲು, ಬಿಜೆಪಿ ಸರ್ಕಾರವು ಪೂರ್ಣ ಬಹುಮತದೊಂದಿಗೆ ಎರಡನೆ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು. ಈ ಸಮಯದಲ್ಲಿ (2019) ಜಮ್ಮು ಕಾಶ್ಮೀರದಲ್ಲಿ  ರಾಷ್ಟ್ರಪತಿ ಆಳ್ವಿಕೆಯಲ್ಲಿತ್ತು ಎಂಬುದು ಗಮನಾರ್ಹವಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

ಮೇ 31, 2019 ರಂದು ಶ್ರೀನಗರದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮುಸುಕುಧಾರಿ ಕಾಶ್ಮೀರಿ ಪ್ರತಿಭಟನಾಕಾರನು ಭಾರತೀಯ ಪೋಲೀಸರ ಶಸ್ತ್ರಸಜ್ಜಿತ ವಾಹನದ ಮೇಲೆ ಕಲ್ಲುಗಳನ್ನು ಎಸೆಯುತ್ತಿದ್ದಾಗ ಅದರ ಮೇಲೆ ಹಾರಿದ್ದಾನೆ. ಈ ದೃಶ್ಯವನ್ನು ದಾರ್ ಯಾಸಿನ್ ಸೆರೆ ಹಿಡಿದಿದ್ದರು.

ವ್ಯಕ್ತಿಯೊಬ್ಬನನ್ನು ವಾಹನಕ್ಕೆ ಕಟ್ಟಿಹಾಕಿರುವ ದೃಶ್ಯವು 2017 ರದ್ದು. ಸುದ್ದಿ ವರದಿಗಳ ಪ್ರಕಾರ, ಜಮ್ಮು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಜೀಪಿನ ಮುಂಭಾಗಕ್ಕೆ ಕಾಶ್ಮೀರಿ ವ್ಯಕ್ತಿಯೊಬ್ಬನನ್ನು ಕಟ್ಟಲಾಗಿತ್ತು. ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಕಲ್ಲು ಎಸೆಯುವವರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವ್ಯಕ್ತಿಯನ್ನು ತಮ್ಮ ವಾಹನದ ಮುಂಭಾಗಕ್ಕೆ ಕಟ್ಟುವ ಮೂಲಕ ಕಲ್ಲು ತೂರಾಟ ಮಾಡುತ್ತಿದ್ದ ಪ್ರತಿಭಟನಕಾರರಿಂದ ರಕ್ಷಣೆ ಪಡೆಯುವ ಸಲುವಾಗಿ ‘ಮಾನವ ಗುರಾಣಿ’ಯಾಗಿ ಬಳಸಿಕೊಂಡಿದ್ದರು.

ಈ ಘಟನೆಯು  ಏಪ್ರಿಲ್ 2017 ರಲ್ಲಿ ನಡೆದು ವಿಡಿಯೊ ವೈರಲ್ ಆಗಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. 2017 ರ ಸಮಯದಲ್ಲಿ ನರೇಂದ್ರ ಮೋದಿ ಅವರು ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯವು  ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದ ಆಳ್ವಿಕೆಯಲ್ಲಿತ್ತು.

ಮಿಲಿಟರಿ ಸಮವಸ್ತ್ರದಲ್ಲಿರುವ ಸಿಬ್ಬಂದಿ ಮೂವರನ್ನು ವಿಚಾರಣೆ ನಡೆಸುತ್ತಿರುವ ದೃಶ್ಯಗಳನ್ನು ಕನಿಷ್ಠ 2017 ರಿಂದ ಇಂಟರ್ನೆಟ್‌ನಲ್ಲಿ ಹಂಚಿಕೊಳ್ಳಲಾಗಿದೆ (ಇಲ್ಲಿ ಮತ್ತು ಇಲ್ಲಿ ಅದನ್ನು ನೋಡಬಹುದು).

ಒಟ್ಟಾರೆಯಾಗಿ ಹೇಳುವುದಾದರೆ, ಈ ವಿಡಿಯೋದಲ್ಲಿರುವ ಘಟನೆಗಳು ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನಡೆದಿವೆ. ಹಾಗಾಗಿ ವೈರಲ್ ಪೋಸ್ಟ್‌ನಲ್ಲಿ ಮಾಡಲಾಗಿರುವ ಪ್ರತಿಪಾದನೆಯು ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...