Homeಮುಖಪುಟಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

- Advertisement -
- Advertisement -

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಬಿರ್‌ಭೂಮ್‌ನಲ್ಲಿ ನಡೆದ ರಾಜಕೀಯ ಹಿಂಸಾಚಾರದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದಿರುವ ಕೇಂದ್ರ ಸರಕಾರ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ. ಕಳೆದ ವರ್ಷ ಮಮತಾ ಬ್ಯಾನರ್ಜಿ ಅವರ ದಿಗ್ವಿಜಯ ಸಾಧಿಸಿದ ನಂತರ ನಡೆದ ಅತಿದೊಡ್ಡ ಹಿಂಸಾಚಾರ ಎಂದಿರುವ ಬಿಜೆಪಿ, ತನಿಖೆ ಮಾಡಲು ಸತ್ಯಶೋಧನಾ ತಂಡವನ್ನು ಕಳುಹಿಸುತ್ತಿದೆ.

ಮಂಗಳವಾರ ಮುಂಜಾನೆ ರಾಮ್‌ಪುರಹತ್ ಪಟ್ಟಣದ ಹೊರವಲಯದಲ್ಲಿರುವ ಬೊಗ್ಟುಯಿ ಗ್ರಾಮದಲ್ಲಿ ಗುಂಪೊಂದು ಬಾಂಬ್‌ಗಳನ್ನು ಎಸೆದಿದೆ. ಇದರಲ್ಲಿ 10 ಮನೆ ಆಹುತಿಯಾಗಿವೆ. ತೃಣಮೂಲ ಕಾಂಗ್ರೆಸ್ ಪಂಚಾಯತ್ ನಾಯಕ ಭಾದು ಶೇಖ್ ಅವರ ಹತ್ಯೆಯ ಪ್ರತೀಕಾರಕ್ಕಾಗಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದ್ದು, ಭಾದು ಶೇಖ್‌ ಅವರ ಶವ ಸೋಮವಾರ ಪತ್ತೆಯಾಗಿದೆ.

ಮನೆಯೊಂದರಲ್ಲಿ ಸುಟ್ಟು ಕರಕಲಾದ ಏಳು ಜನರ ಶವಗಳಲ್ಲಿ ಇಬ್ಬರು ಮಕ್ಕಳೂ ಪತ್ತೆಯಾಗಿದ್ದಾರೆ. ಎಂಟನೇ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹನ್ನೊಂದು ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಬಂಗಾಳದ ಉನ್ನತ ಪೋಲೀಸ್ ಮನೋಜ್ ಮಾಳವಿಯಾ ಅವರು, “ಮನೆಗಳಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು, ನೆರೆಯ ಬರ್ಶಾಲ್ ಗ್ರಾಮದ ಪಂಚಾಯತ್ ಉಪ ಮುಖ್ಯಸ್ಥರ ಸಾವಿನಿಂದಾಗಿ ಘಟನೆ ಸಂಬಂಧಿಸಿದೆಯೇ ಎಂದು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯ ಸಚಿವ ಫಿರ್ಹಾದ್ ಹಕೀಮ್ ನೇತೃತ್ವದ ಇಬ್ಬರು ಸದಸ್ಯರ ತೃಣಮೂಲ ಕಾಂಗ್ರೆಸ್ ನಿಯೋಗವು ಸಮಸ್ಯೆಯನ್ನು ಪರಿಶೀಲಿಸಲು ರಾಮ್‌ಪುರಹಟ್‌ಗೆ ತೆರಳುತ್ತಿದೆ. ಸ್ಥಳೀಯ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು (ಉಪವಿಭಾಗದ ಪೊಲೀಸ್ ಅಧಿಕಾರಿ ಮತ್ತು ರಾಮ್‌ಪುರಹಟ್‌ನ ಸರ್ಕಲ್ ಇನ್‌ಸ್ಪೆಕ್ಟರ್) ಹೊರಗಿಡಲಾಗಿದೆ.

ಬಂಗಾಳದ ಬಿಜೆಪಿ ತಂಡ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರ ಮಧ್ಯಸ್ಥಿಕೆ ಕೋರಿದೆ. ನಿಯೋಗದ ನೇತೃತ್ವ ವಹಿಸಿದ್ದ ಪಕ್ಷದ ರಾಜ್ಯ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ರಚಿಸಿರುವ ಸತ್ಯಶೋಧನಾ ತಂಡದ ಭಾಗವಾಗಲಿದ್ದಾರೆ. ತಂಡದಲ್ಲಿ ನಾಲ್ವರು ಮಾಜಿ ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ.

ಹಿಂಸಾಚಾರದಲ್ಲಿ ತಾನು ಭಾಗಿಯಾಗಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಪಕ್ಷದ ವಕ್ತಾರ ಕುನಾಲ್ ಘೋಷ್, “ಆಕಸ್ಮಿಕ ಬೆಂಕಿಯಿಂದ ಸಂಭವಿಸಿದ ಸಾವುಗಳನ್ನು ನಾವು ಖಂಡಿಸುತ್ತೇವೆ. ನಿನ್ನೆ ರಾತ್ರಿ ನಮ್ಮ ಪಕ್ಷದ ಮುಖಂಡನನ್ನು ಕೊಲ್ಲಲಾಯಿತು” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮತ್ತು ರಾಜ್ಯಪಾಲ ಜಗದೀಪ್ ಧನಕರ್ ನಡುವೆ ಹಲವು ವರ್ಷಗಳಿಂದ ಭಿನ್ನಾಭಿಪ್ರಾಯವಿತ್ತು. ಧನಖರ್ ಅವರು ಈ ಘಟನೆಯನ್ನು ಖಂಡಿಸಿದ್ದು, “ಭಯಾನಕ ಹಿಂಸಾಚಾರ ಇದಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಟ್ಟಿದೆ” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ. ನಿಷ್ಪಕ್ಷಪಾತ ತನಿಖೆಗೆ ದಾರಿ ಮಾಡಿಕೊಡುವ ಬದಲು ಈ ಹೇಳಿಕೆ ನೀಡಿರುವುದು ಅಕ್ಷೇಪಣೀಯ. ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ರಾಜ್ಯಪಾಲರಲ್ಲಿ ಕೋರಿದ್ದಾರೆ.

ಈ ವಿಷಯವು ರಾಜ್ಯ ವಿಧಾನಸಭೆಯಲ್ಲಿಯೂ ಸದ್ದು ಮಾಡಿದೆ. ಬಿಜೆಪಿ ನಾಯಕರು ಮುಖ್ಯಮಂತ್ರಿಯವರ ಹೇಳಿಕೆಗೆ ಸದನದಲ್ಲಿ ಒತ್ತಾಯಿಸಿದ್ದಾರೆ. ಇಪ್ಪತ್ತೆರಡು ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು. ಪಕ್ಷದ ನಾಯಕ ಸುವೇಂದು ಅಧಿಕಾರಿ ಸರಣಿ ಟ್ವೀಟ್‌ ಮಾಡಿ, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಅವರು ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಜೀವಂತ ಸುಡುವ ಇಂತಹ ಭಯಾನಕ ಘಟನೆಗಳು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...