Homeಕರ್ನಾಟಕಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

- Advertisement -
- Advertisement -

ಮೈಸೂರು: “ಆಡಳಿತ ವರ್ಗಕ್ಕೆ ಕಣ್ಣು ಕಿವಿ ಇಲ್ಲವೇ? ನಮ್ಮ ಸಮಸ್ಯೆ ನಮ್ಮ ಹೋರಾಟ ನಿಮಗೆ ಕಾಣಿಸುತ್ತಿಲ್ಲವೆ? ನಮ್ಮ ಸಮಸ್ಯೆಗೆ ಕಿವಿಗೊಟ್ಟು ಆಲಿಸಿ” ಎಂದು ವಜಾಗೊಂಡಿರುವ 21 ಮಂದಿ ಬೋಧಕೇತರ ನೌಕರರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ 21 ಮಂದಿ ತಾತ್ಕಾಲಿಕ ಬೋಧಕೇತರ ನೌಕರರನ್ನು ವಜಾಗೊಳಿಸಿರುವುದನ್ನು ಖಂಡಿಸಿ ನಡೆಯುತ್ತಿರುವ ಮುಷ್ಕರವು 31ನೇ ದಿನಕ್ಕೆ ಮಂಗಳವಾರ ಕಾಲಿಟ್ಟಿದೆ.

ಇಷ್ಟು ದಿನಗಳ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಆಡಳಿತವರ್ಗದವರು ಕೇಳದೇ ಇರುವುದು ನಮ್ಮನ್ನು ಘಾಸಿಗೊಳಿಸಿದೆ. ಜತೆಗೆ ವಿಶ್ವವಿದ್ಯಾನಿಲಯದ ಕುಲಪತಿಗಳು ನೀಡುತ್ತಿರುವ ತಪ್ಪು ಮಾಹಿತಿಗಳು ನಮಗೆ ನ್ಯಾಯ ದೊರಕುವಲ್ಲಿ ಅಡ್ಡಗಾಲಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಮೊದಲನೇದಾಗಿ ನಮ್ಮ ಮುಷ್ಕರ ಸರ್ಕಾರದ ವಿರುದ್ಧವಿಲ್ಲ. ಸರ್ಕಾರ ನಮ್ಮನ್ನು ಕಳೆದ ಎಂಟು – ಹತ್ತು ಹನ್ನೆರಡು ವರ್ಷಗಳಿಂದ ಕೈಹಿಡಿದು ನಡೆಸಿದೆ. ಬದುಕಿಗಾಗಿ , ಒಂದು ನೌಕರಿಯನ್ನೂ ನೀಡಿದೆ. ಈಗ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯೋರ್ವರ ದ್ವೇಷದ ಆಡಳಿತಕ್ಕೆ ಬಲಿಯಾಗಿ ನಾವು ಬೀದಿಗೆ ಬಿದ್ದಿದ್ದೂ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಅನು ಶಾಸನಬದ್ಧವಾಗಿ ಮುಷ್ಕರದ ದಾರಿಯನ್ನು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.

ನಾವು ನಮಗೆ ಕಳೆದ ಹನ್ನೆರಡು ತಿಂಗಳಿಂದ ಸಿಗಬೇಕಾಗಿದ್ದ ಸಂಬಳಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಹೊರತು ನಮ್ಮ ನೌಕರಿಯನ್ನು ಖಾಯಂಗೊಳಿಸಿ ಎಂದು ಖಂಡಿತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಎರಡನೆಯದಾಗಿ ಬೋಧಕೇತರರ ವೇತನ ನೀಡುವ ಸಲುವಾಗಿಯೇ ಸರ್ಕಾರವು ಕಳೆದ ಮಾರ್ಚ್ ತಿಂಗಳಲ್ಲಿ ರೂ. 180.80 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕುಲಪತಿಗಳು ನಮಗೆ ಕೇವಲ 5 ತಿಂಗಳ ಸಂಬಳವನ್ನು ಮಾತ್ರ ನೀಡಿ ಕೈತೊಳೆದುಕೊಂಡಿದ್ದಾರೆ. ಜೊತೆಗೆ ವೇತನ ನೀಡಲು ಮಂಜೂರು ಆಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇಲ್ಲಿ ವಯೋಮಿತಿ ಮೀರಿದವರೇ ಹೆಚ್ಚಾಗಿದ್ದೇವೆ. ಬದಲಿ ಉದ್ಯೋಗ ಸಿಗುತ್ತದೆಯೇ? ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕವಾಗಿ ಈಗಾಗಲೇ ಕುಗ್ಗಿರುವ ಅಸ್ವಸ್ಥರಾಗಿ ಅನಾರೋಗ್ಯದಿಂದ ಅಸ್ಪತ್ರೆ ಸೇರುತ್ತಿದ್ದೇವೆ. ಮಾನವೀಯತೆಯಿಂದ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೋಧಕೇತರ ಸಿಬ್ಬಂದಿ ಹನುಮಂತಪ್ಪ, “ವಿವಿ ಸ್ಥಾಪನೆಯಾದಾಗಿನಿಂದ ದುಡಿದಿದ್ದೇವೆ. ಅನುದಾನ ಬಿಡುಗಡೆಯಾಗಿದ್ದರೂ ನಮ್ಮ ಸಂಬಳ ಪಾವತಿಸಿಲ್ಲ. ವಿವಿಯಲ್ಲಿ ಬೋಧಕೇತರ ಖಾಯಂ ಸಿಬ್ಬಂದಿಯ ನೇಮಕಾತಿ ನಡೆದಿಲ್ಲ. ಇಲ್ಲಿನವರೆಗೂ ತಾತ್ಕಾಲಿಕವಾಗಿ 21 ಬೋಧಕೇತರ ಸಿಬ್ಬಂದಿ ಕೆಲಸ ಮಾಡುತ್ತಿದ್ದೆವು. ಆದರೆ ಈಗ ಎಲ್ಲರನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ. ಹೊಸ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅನುಭವಿ ನೌಕರರನ್ನು ವಿವಿ ಹೊರಗಿಡುತ್ತಿರುವುದಕ್ಕೆ ಏತಕ್ಕೆ” ಎಂದು ಪ್ರಶ್ನಿಸಿದರು.

ವಿವಿ ಕುಲಪತಿ ಏನಂತಾರೆ?

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿವಿ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ, “ಹುದ್ದೆಗಳ ಸೃಜನೆ ಇಲ್ಲದೆ ನೇಮಕಾತಿ ಮಾಡಿಕೊಂಡವರಿಗೆ ಸರ್ಕಾರದ ಹಣ ಕೊಡುವುದಿಲ್ಲ ಎಂಬ ಆದೇಶ ಬಂದಿದೆ. ಕೊರೊನಾ ಬಂದ ಮೇಲೆ ನಮ್ಮಲ್ಲಿ ಹಣದ ಕೊರತೆ ಇದೆ. ಅಭಿವೃದ್ಧಿ ಅನುದಾನವೂ ಇಲ್ಲ” ಎಂದರು.

“ಅಭಿವೃದ್ಧಿ ಅನುದಾನದಲ್ಲಿ ಸಂಬಳವನ್ನು ಕೊಡುವಂತಿಲ್ಲ. ಆದರೆ ಈ ಹಿಂದಿನ ಕುಲಪತಿಗಳು ಕೊಟ್ಟಿದ್ದರು. ಈಗ ಆರ್ಥಿಕ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಹೆಚ್ಚುವರಿ ಅನುದಾನ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಸಂಬಳ ಕೊಟ್ಟಿಲ್ಲವೆಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್‌ನಲ್ಲಿ ಪ್ರಕರಣವಿದ್ದಾಗಲೂ ಹೋರಾಟ ಮಾಡುತ್ತಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು.

“ಕೋರ್ಟ್ ಆದೇಶದಂತೆ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ನೇಮಕಾತಿಯ ಸೂಚನೆಯೇ ಇಲ್ಲ. ಈ ಹಿಂದೆ ಇದ್ದ ಕುಲಪತಿಗಳು ಬೋಧಕೇತರ ಸಿಬ್ಬಂದಿಗಳನ್ನಾಗಿ 21 ಜನರನ್ನು ನೇಮಿಸಿದ್ದಾರೆ. ಆದರೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ನಮ್ಮಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆ ಇದೆ. ಈ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿ 52 ಮಂದಿ ಮಾತ್ರ ಪ್ರವೇಶ ಪಡೆದಿದ್ದಾರೆ. 25 ಮಂದಿ ಬೋಧಕರಿದ್ದಾರೆ. ಸಣ್ಣಪುಟ್ಟ ಕೆಲಸಗಳಿದ್ದರೆ ಬೋಧಕರೇ ಮಾಡಿಕೊಳ್ಳುತ್ತಾರೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...