Homeಕರ್ನಾಟಕಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ಮೈಸೂರು: ಬೋಧಕೇತರ ನೌಕರರನ್ನೆಲ್ಲ ಕೆಲಸದಿಂದ ವಜಾ ಮಾಡಿದ ಸಂಗೀತ ವಿವಿ; 31ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

- Advertisement -
- Advertisement -

ಮೈಸೂರು: “ಆಡಳಿತ ವರ್ಗಕ್ಕೆ ಕಣ್ಣು ಕಿವಿ ಇಲ್ಲವೇ? ನಮ್ಮ ಸಮಸ್ಯೆ ನಮ್ಮ ಹೋರಾಟ ನಿಮಗೆ ಕಾಣಿಸುತ್ತಿಲ್ಲವೆ? ನಮ್ಮ ಸಮಸ್ಯೆಗೆ ಕಿವಿಗೊಟ್ಟು ಆಲಿಸಿ” ಎಂದು ವಜಾಗೊಂಡಿರುವ 21 ಮಂದಿ ಬೋಧಕೇತರ ನೌಕರರು ಆಗ್ರಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ 21 ಮಂದಿ ತಾತ್ಕಾಲಿಕ ಬೋಧಕೇತರ ನೌಕರರನ್ನು ವಜಾಗೊಳಿಸಿರುವುದನ್ನು ಖಂಡಿಸಿ ನಡೆಯುತ್ತಿರುವ ಮುಷ್ಕರವು 31ನೇ ದಿನಕ್ಕೆ ಮಂಗಳವಾರ ಕಾಲಿಟ್ಟಿದೆ.

ಇಷ್ಟು ದಿನಗಳ ಪ್ರತಿಭಟನೆ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸಮಸ್ಯೆಯನ್ನು ಆಡಳಿತವರ್ಗದವರು ಕೇಳದೇ ಇರುವುದು ನಮ್ಮನ್ನು ಘಾಸಿಗೊಳಿಸಿದೆ. ಜತೆಗೆ ವಿಶ್ವವಿದ್ಯಾನಿಲಯದ ಕುಲಪತಿಗಳು ನೀಡುತ್ತಿರುವ ತಪ್ಪು ಮಾಹಿತಿಗಳು ನಮಗೆ ನ್ಯಾಯ ದೊರಕುವಲ್ಲಿ ಅಡ್ಡಗಾಲಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಮೊದಲನೇದಾಗಿ ನಮ್ಮ ಮುಷ್ಕರ ಸರ್ಕಾರದ ವಿರುದ್ಧವಿಲ್ಲ. ಸರ್ಕಾರ ನಮ್ಮನ್ನು ಕಳೆದ ಎಂಟು – ಹತ್ತು ಹನ್ನೆರಡು ವರ್ಷಗಳಿಂದ ಕೈಹಿಡಿದು ನಡೆಸಿದೆ. ಬದುಕಿಗಾಗಿ , ಒಂದು ನೌಕರಿಯನ್ನೂ ನೀಡಿದೆ. ಈಗ ಅಧಿಕಾರದ ಸ್ಥಾನದಲ್ಲಿರುವ ವ್ಯಕ್ತಿಯೋರ್ವರ ದ್ವೇಷದ ಆಡಳಿತಕ್ಕೆ ಬಲಿಯಾಗಿ ನಾವು ಬೀದಿಗೆ ಬಿದ್ದಿದ್ದೂ, ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ಅನು ಶಾಸನಬದ್ಧವಾಗಿ ಮುಷ್ಕರದ ದಾರಿಯನ್ನು ಹಿಡಿದಿದ್ದೇವೆ ಎಂದು ತಿಳಿಸಿದ್ದಾರೆ.

ನಾವು ನಮಗೆ ಕಳೆದ ಹನ್ನೆರಡು ತಿಂಗಳಿಂದ ಸಿಗಬೇಕಾಗಿದ್ದ ಸಂಬಳಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಹೊರತು ನಮ್ಮ ನೌಕರಿಯನ್ನು ಖಾಯಂಗೊಳಿಸಿ ಎಂದು ಖಂಡಿತ ಕೇಳುತ್ತಿಲ್ಲ ಎಂದು ತಿಳಿಸಿದ್ದಾರೆ.

ಎರಡನೆಯದಾಗಿ ಬೋಧಕೇತರರ ವೇತನ ನೀಡುವ ಸಲುವಾಗಿಯೇ ಸರ್ಕಾರವು ಕಳೆದ ಮಾರ್ಚ್ ತಿಂಗಳಲ್ಲಿ ರೂ. 180.80 ಲಕ್ಷ ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ಆದರೆ ಕುಲಪತಿಗಳು ನಮಗೆ ಕೇವಲ 5 ತಿಂಗಳ ಸಂಬಳವನ್ನು ಮಾತ್ರ ನೀಡಿ ಕೈತೊಳೆದುಕೊಂಡಿದ್ದಾರೆ. ಜೊತೆಗೆ ವೇತನ ನೀಡಲು ಮಂಜೂರು ಆಗಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇಲ್ಲಿ ವಯೋಮಿತಿ ಮೀರಿದವರೇ ಹೆಚ್ಚಾಗಿದ್ದೇವೆ. ಬದಲಿ ಉದ್ಯೋಗ ಸಿಗುತ್ತದೆಯೇ? ಕೌಟುಂಬಿಕ ಸಮಸ್ಯೆಗಳಿಂದ ಮಾನಸಿಕವಾಗಿ ಈಗಾಗಲೇ ಕುಗ್ಗಿರುವ ಅಸ್ವಸ್ಥರಾಗಿ ಅನಾರೋಗ್ಯದಿಂದ ಅಸ್ಪತ್ರೆ ಸೇರುತ್ತಿದ್ದೇವೆ. ಮಾನವೀಯತೆಯಿಂದ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಬೋಧಕೇತರ ಸಿಬ್ಬಂದಿ ಹನುಮಂತಪ್ಪ, “ವಿವಿ ಸ್ಥಾಪನೆಯಾದಾಗಿನಿಂದ ದುಡಿದಿದ್ದೇವೆ. ಅನುದಾನ ಬಿಡುಗಡೆಯಾಗಿದ್ದರೂ ನಮ್ಮ ಸಂಬಳ ಪಾವತಿಸಿಲ್ಲ. ವಿವಿಯಲ್ಲಿ ಬೋಧಕೇತರ ಖಾಯಂ ಸಿಬ್ಬಂದಿಯ ನೇಮಕಾತಿ ನಡೆದಿಲ್ಲ. ಇಲ್ಲಿನವರೆಗೂ ತಾತ್ಕಾಲಿಕವಾಗಿ 21 ಬೋಧಕೇತರ ಸಿಬ್ಬಂದಿ ಕೆಲಸ ಮಾಡುತ್ತಿದ್ದೆವು. ಆದರೆ ಈಗ ಎಲ್ಲರನ್ನೂ ಕೆಲಸದಿಂದ ತೆಗೆದುಹಾಕಲಾಗಿದೆ. ಹೊಸ ನೇಮಕಾತಿ ಮಾಡಿಕೊಳ್ಳುವುದಾಗಿ ಹೇಳುತ್ತಿದ್ದಾರೆ. ಅನುಭವಿ ನೌಕರರನ್ನು ವಿವಿ ಹೊರಗಿಡುತ್ತಿರುವುದಕ್ಕೆ ಏತಕ್ಕೆ” ಎಂದು ಪ್ರಶ್ನಿಸಿದರು.

ವಿವಿ ಕುಲಪತಿ ಏನಂತಾರೆ?

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ವಿವಿ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ, “ಹುದ್ದೆಗಳ ಸೃಜನೆ ಇಲ್ಲದೆ ನೇಮಕಾತಿ ಮಾಡಿಕೊಂಡವರಿಗೆ ಸರ್ಕಾರದ ಹಣ ಕೊಡುವುದಿಲ್ಲ ಎಂಬ ಆದೇಶ ಬಂದಿದೆ. ಕೊರೊನಾ ಬಂದ ಮೇಲೆ ನಮ್ಮಲ್ಲಿ ಹಣದ ಕೊರತೆ ಇದೆ. ಅಭಿವೃದ್ಧಿ ಅನುದಾನವೂ ಇಲ್ಲ” ಎಂದರು.

“ಅಭಿವೃದ್ಧಿ ಅನುದಾನದಲ್ಲಿ ಸಂಬಳವನ್ನು ಕೊಡುವಂತಿಲ್ಲ. ಆದರೆ ಈ ಹಿಂದಿನ ಕುಲಪತಿಗಳು ಕೊಟ್ಟಿದ್ದರು. ಈಗ ಆರ್ಥಿಕ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ ಬಂದಿದೆ. ಹೆಚ್ಚುವರಿ ಅನುದಾನ ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಸಂಬಳ ಕೊಟ್ಟಿಲ್ಲವೆಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಕೋರ್ಟ್‌ನಲ್ಲಿ ಪ್ರಕರಣವಿದ್ದಾಗಲೂ ಹೋರಾಟ ಮಾಡುತ್ತಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದರು.

“ಕೋರ್ಟ್ ಆದೇಶದಂತೆ ಸರ್ಕಾರ ನಿರ್ಣಯ ಕೈಗೊಳ್ಳಲಿದೆ. ಕಾನೂನು ಬಾಹಿರವಾಗಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ನೇಮಕಾತಿಯ ಸೂಚನೆಯೇ ಇಲ್ಲ. ಈ ಹಿಂದೆ ಇದ್ದ ಕುಲಪತಿಗಳು ಬೋಧಕೇತರ ಸಿಬ್ಬಂದಿಗಳನ್ನಾಗಿ 21 ಜನರನ್ನು ನೇಮಿಸಿದ್ದಾರೆ. ಆದರೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ನಮ್ಮಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆ ಇದೆ. ಈ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಸೇರಿ 52 ಮಂದಿ ಮಾತ್ರ ಪ್ರವೇಶ ಪಡೆದಿದ್ದಾರೆ. 25 ಮಂದಿ ಬೋಧಕರಿದ್ದಾರೆ. ಸಣ್ಣಪುಟ್ಟ ಕೆಲಸಗಳಿದ್ದರೆ ಬೋಧಕರೇ ಮಾಡಿಕೊಳ್ಳುತ್ತಾರೆ” ಎಂದು ತಿಳಿಸಿದರು.


ಇದನ್ನೂ ಓದಿರಿ: ರೈಲ್ವೇ ನೇಮಕಾತಿ ಫಲಿತಾಂಶ ವಿರೋಧಿಸಿ ಶುಕ್ರವಾರ ‘ಬಿಹಾರ ಬಂದ್‌’ಗೆ ವಿದ್ಯಾರ್ಥಿ ಸಂಘಟನೆಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...