Homeಅಂತರಾಷ್ಟ್ರೀಯಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

- Advertisement -
- Advertisement -

ಭಾರತದ ನೆರೆಯ ದೇಶವಾದ ಶ್ರೀಲಂಕಾದಲ್ಲಿ ಸದ್ದಿಲ್ಲದಂತೆ ನಿರಾಶ್ರಿತರ ಬಿಕ್ಕಟ್ಟು ಸೃಷ್ಟಿಯಾಗುತ್ತಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ಜನರು ಪಲಾಯನ ಮಾಡಲು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ. ಮುಂಬರುವ ದಿನಗಳಲ್ಲಿ ಸಾಮೂಹಿಕ ವಲಸೆಯ ಸಂಕೇತವಾಗಿ, ಜಾಫ್ನಾ ಮತ್ತು ಮನ್ನಾರ್ ಪ್ರದೇಶಗಳಿಂದ ಹೊರಟ 16 ಶ್ರೀಲಂಕನ್‌‌ ಪ್ರಜೆಗಳ ಎರಡು ತಂಡಗಳು ಭಾರತದ ತಮಿಳುನಾಡಿನ ತೀರವನ್ನು ತಲುಪಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

3 ಮಕ್ಕಳು ಸೇರಿದಂತೆ 6 ನಿರಾಶ್ರಿತರ ಮೊದಲ ತಂಡ ರಾಮೇಶ್ವರಂ ಕರಾವಳಿಯ ಬಳಿ ಸಿಕ್ಕಿಬಿದ್ದ ನಂತರ ಹತ್ತು ಜನರಿರುವ ಎರಡನೆ ತಂಡ ತಡರಾತ್ರಿ ತಮಿಳುನಾಡು ತಲುಪಿದೆ. ಎರಡು ತಂಡ ಕೂಡಾ ಶ್ರೀಲಂಕನ್ ತಮಿಳು ಜನಾಂಗದವರಾಗಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದ್ದಾರೆ. ತಂಡವನ್ನು ಕೋಸ್ಟ್ ಗಾರ್ಡ್ ರಕ್ಷಿಸಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

ಶ್ರೀಲಂಕಾದಲ್ಲಿ ತೀವ್ರ ಆಹಾರದ ಕೊರತೆ, ನಿರುದ್ಯೋಗ, ಉದ್ಯೋಗದ ಕೊರತೆ ಮತ್ತು ಅಗತ್ಯ ವಸ್ತುಗಳ ಬೆಲೆ ಹೆಚ್ಚಳದ ಬಿಕ್ಕಟ್ಟು ಹೆಚ್ಚುತ್ತಿದೆ. ಶ್ರೀಲಂಕಾದ ಉತ್ತರದಲ್ಲಿ ತಮಿಳು ಪ್ರಾಬಲ್ಯದ ಪ್ರದೇಶಗಳಿಂದ ಹೆಚ್ಚಿನ ನಿರಾಶ್ರಿತರ ವಲಸೆ ಆರಂಭವಾಗಿದೆ ಎಂದು ವರದಿಯಾಗಿದೆ. ಮುಂದಿನ ದಿನಗಳಲ್ಲಿ ಕನಿಷ್ಠ 2000 ನಿರಾಶ್ರಿತರು ತಮಿಳುನಾಡಿನ ತೀರವನ್ನು ತಲುಪುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.

ಮೊದಲು ಬಂದ ಆರು ಮಂದಿ ವಲಸಿಗರು, ತಾವು ಹಲವು ವಾರಗಳಿಂದ ಆಹಾರಕ್ಕಾಗಿ ಪರದಾಡುತ್ತಿದ್ದೇವೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಭಾರತೀಯ ಜಲಪ್ರದೇಶವಾದ ಅರಿಚಲ್ ಮುನೈ ದ್ವೀಪದಲ್ಲಿ ಅವರನ್ನು ಇಳಿಸಲು ತಾವು ಮೀನುಗಾರರಿಗೆ ಸುಮಾರು 50,000 ರೂಪಾಯಿಗಳನ್ನು ಪಾವತಿಸಿದ್ದಾಗಿ ಅವರು ಹೇಳಿದ್ದಾರೆ.

ನಿರಾಶ್ರಿತರ ಮಾತುಗಳನ್ನು ಆಲಿಸಿದ ಅಧಿಕಾರಿಯೊಬ್ಬರ ಮಾತಿನ ಪ್ರಕಾರ, ಇನ್ನೂ ಹಲವು ಕುಟುಂಬಗಳು ಭಾರತಕ್ಕೆ ಪಲಾಯನ ಮಾಡುವ ದಾರಿಯನ್ನು ಹುಡುಕುತ್ತಿವೆ. ಭಾರತೀಯ ಜಲಪ್ರದೇಶದಿಂದ ಅವರನ್ನು ರಕ್ಷಿಸಿದ ಅಧಿಕಾರಿಗಳು ಅವರಿಗೆ ಆಹಾರ ನೀಡಿ ರಾಮೇಶ್ವರಂ ಬಳಿಯ ಮಂಟಪಂ ನಿರಾಶ್ರಿತರ ಶಿಬಿರಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ತಮಿಳನಾಡು ತಲುಪಿದ ಎರಡನೇ ಗುಂಪು ಫೈಬರ್ ಬೋಟ್‌ನಲ್ಲಿ ಬಂದಿದ್ದು, ತಮ್ಮ ಪ್ರಯಾಣಕ್ಕಾಗಿ 3 ಲಕ್ಷ ರೂ. ಪಾವತಿದ್ದಾಗಿ ಹೇಳಿದ್ದಾರೆ. ಪ್ರಯಾಣದ ಮಧ್ಯೆ ದೋಣಿಯಲ್ಲಿ ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಂಡದ್ದರಿಂದ, ಸುಮಾರು ಒಂದು ದಿನವನ್ನು ಸಮುದ್ರದ ಮಧ್ಯದಲ್ಲಿ ಕಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರು ರಾತ್ರಿ 9 ರ ಸುಮಾರಿಗೆ ರಾಮೇಶ್ವರಂನ ಪಂಬನ್ ಸೇತುವೆಯನ್ನು ತಲುಪಿದ್ದಾರೆ.

ತನಗೆ ತಿಳಿದಿರುವ ಅನೇಕರು ಶ್ರೀಲಂಕಾವನ್ನು ತೊರೆಯಲು ಯೋಜಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಸ್. ಶಿವಕರನ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ದೇಶದಲ್ಲಿ ಭಯ ಮತ್ತು ಆತಂಕವಿದ್ದು, ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗುತ್ತಿವೆ. ಉದಾಹರಣೆಗೆ ಇನ್ನೊಂದು ವಾರದಲ್ಲಿ ಅಕ್ಕಿ 500/ಕೆಜಿಗೆ ತಲುಪುತ್ತದೆ” ಎಂದು ಅವರು ತರ್ಕಿಸಿದ್ದಾರೆ. “ಅಲ್ಲಿ ಇಂದು ಕೆಜಿಗೆ 290 ರೂ.ಗೆ ಮಾರಾಟವಾಗುತ್ತಿದೆ ಮತ್ತು ಸಕ್ಕರೆಗೆ ಅದೇ ಬೆಲೆ ಇದೆ. 400 ಗ್ರಾಂ ಹಾಲಿನ ಪುಡಿ 790 ರೂ. ಇದೆ” ಎಂದು ಅವರು ಹೇಳಿದ್ದಾರೆ.

ಪೇಪರ್ ಕೊರತೆಯಿಂದಾಗಿ ಶ್ರೀಲಂಕಾ ಸರ್ಕಾರ ಶಾಲಾ ಪರೀಕ್ಷೆಗಳನ್ನು ಇತ್ತೀಚೆಗೆ ಮುಂದೂಡಿದೆ. ಈಳಂ ಪೀಪಲ್ಸ್ ರೆವಲ್ಯೂಷನರಿ ಲಿಬರೇಶನ್ ಫ್ರಂಟ್ (ಇಪಿಆರ್‌ಎಲ್‌ಎಫ್) ಸುರೇಶ್ ಪ್ರೇಮಚಂದ್ರನ್ ಪ್ರಕಾರ, “ಕಾರ್ಮಿಕ ವರ್ಗವು ತೀವ್ರ ಸಂಕಷ್ಟ ಎದುರಿಸುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...