Homeಮುಖಪುಟಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

ಸೆನ್ಸೋಡೈನ್‌‌ನ ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿ 10 ಲಕ್ಷ ದಂಡವನ್ನು ವಿಧಿಸಿದ ಸರ್ಕಾರ

- Advertisement -
- Advertisement -

ಟೂತ್‌ಪೇಸ್ಟ್‌ ಬ್ರಾಂಡ್‌ ಆಗಿರುವ ಸೆನ್ಸೋಡೈನ್‌‌ ತನ್ನ ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಏಳು ದಿನಗಳಲ್ಲಿ ನಿಲ್ಲುಸುವಂತೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಆದೇಶಿಸಿದ್ದು, ಬ್ರಾಂಡ್‌ಗೆ 10 ಲಕ್ಷ ದಂಡ ವಿಧಿಸಿದೆ ಎಂದು ಒಕ್ಕೂಟ ಸರ್ಕಾರ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲ್ಪಟ್ಟಿದೆ’ ಮತ್ತು ‘ವಿಶ್ವದ ನಂ.1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳಿಕೊಳ್ಳುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತುಗಳನ್ನು ಏಳು ದಿನಗಳೊಳಗೆ ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದು ಮಂಗಳವಾರ ಅಧಿಕೃತ ಪ್ರಕಟಣೆ ತಿಳಿಸಿದೆ. ಜೊತೆಗೆ 10 ಲಕ್ಷ ರೂ. ದಂಡ ಪಾವತಿಸುವಂತೆಯೂ ಪ್ರಾಧಿಕಾರ ಸೂಚಿಸಿದೆ.

CCPA ಅಂಗೀಕರಿಸಿದ ಹಿಂದಿನ ಆದೇಶದ ಪ್ರಕಾರ ವಿದೇಶಿ ದಂತವೈದ್ಯರ ಅನುಮೋದನೆಗಳನ್ನು ತೋರಿಸುವ ಜಾಹೀರಾತುಗಳನ್ನು ನಿಲ್ಲಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಮಂಗಳಸೂತ್ರ ಜಾಹಿರಾತು ವಾಪಾಸು ಪಡೆಯುವಂತೆ BJPಯಿಂದ ಬೆದರಿಕೆ

CCPA ಮುಖ್ಯಸ್ಥೆ ನಿಧಿ ಖರೆ ಅವರು, “ಇತ್ತೀಚೆಗೆ ಸೆನ್ಸೋಡೈನ್ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಆದೇಶವನ್ನು ಜಾರಿಗೊಳಿಸಿದೆ. ಇದು ‘ವಿಶ್ವದಾದ್ಯಂತ ದಂತವೈದ್ಯರಿಂದ ಶಿಫಾರಸು ಮಾಡಲಾಗಿದೆ’ ಮತ್ತು ‘ವಿಶ್ವದ ನಂ 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಎಂದು ಹೇಳುತ್ತದೆ” ಎಂದು ಹೇಳಿದ್ದಾರೆ.

ವಿದೇಶಿ ದಂತವೈದ್ಯರ ಅನುಮೋದನೆಯನ್ನು ತೋರಿಸುವ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತನ್ನು ಸ್ಥಗಿತಗೊಳಿಸುವಂತೆ ನಿರ್ದೇಶಿಸುವ ಆದೇಶವನ್ನು CCPA ಫೆಬ್ರವರಿ 9ರಂದು ಅಂಗೀಕರಿಸಿತ್ತು.

ದೂರದರ್ಶನ, ಯೂಟ್ಯೂಬ್, ಫೇಸ್‌ಬುಕ್ ಮತ್ತು ಟ್ವಿಟರ್ ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಸೆನ್ಸೋಡೈನ್ ಉತ್ಪನ್ನಗಳ ಜಾಹೀರಾತಿನ ವಿರುದ್ಧ CCPA ಸ್ವಯಂ ಪ್ರೇರಿತ ಕ್ರಮವನ್ನು ಪ್ರಾರಂಭಿಸಿದೆ. ಭಾರತದ ಹೊರಗೆ (ಯುನೈಟೆಡ್ ಕಿಂಗ್‌ಡಮ್) ಕೆಲಸ ಮಾಡುತ್ತಿರುವ ದಂತವೈದ್ಯರು ಹಲ್ಲುಗಳ ಸೂಕ್ಷ್ಮತೆಯ ವಿರುದ್ಧ ರಕ್ಷಣೆಗಾಗಿ, ‘ಸೆನ್ಸೋಡೈನ್ ರಾಪಿಡ್ ರಿಲೀಫ್’ ಮತ್ತು ‘ಸೆನ್ಸೋಡೈನ್ ಫ್ರೆಶ್ ಜೆಲ್’ ಎಂಬ ಸೆನ್‌ಸೋಡೈನ್ ಉತ್ಪನ್ನಗಳ ಬಳಕೆಯನ್ನು ಅನುಮೋದಿಸುವುದನ್ನು ಜಾಹೀರಾತುಗಳು ತೋರಿಸುತ್ತವೆ.

ಈ ಜಾಹೀರಾತುಗಳು ಸೆನ್ಸೋಡೈನ್ ಅನ್ನು ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’, ‘ವಿಶ್ವದ ನಂ. 1 ಸೂಕ್ಷ್ಮತೆಯ ಟೂತ್‌ಪೇಸ್ಟ್’ ಮತ್ತು ‘60 ಸೆಕೆಂಡುಗಳಲ್ಲಿ ಟೂತ್‌ಪೇಸ್ಟ್‌ ಕಾರ್ಯನಿರ್ವಹಿಸುತ್ತದೆ ಎಂದು ವೈದ್ಯಕೀಯವಾಗಿ ಸಾಬೀತಾಗಿದೆ’ ಎಂದು ತೋರಿಸುತ್ತದೆ.

ಇದನ್ನೂ ಓದಿ: ‘ಸುಪ್ರೀಂಕೋರ್ಟ್‌ ಇ-ಮೇಲ್‌‌ನಲ್ಲೂ ಮೋದಿ ಜಾಹಿರಾತು!’ – ತೆಗೆದುಹಾಕಿ ಎಂದ ಸುಪ್ರೀಂ

ಕಂಪನಿಯು ಸಲ್ಲಿಸಿದ ಪ್ರತಿಕ್ರಿಯೆಯನ್ನು ಪರಿಶೀಲಿಸಿದ ನಂತರ, ‘ವಿಶ್ವದಾದ್ಯಂತ ದಂತವೈದ್ಯರು ಶಿಫಾರಸು ಮಾಡಿದ್ದಾರೆ’ ಮತ್ತು ‘ವಿಶ್ವದ ನಂ.1 ಸಂವೇದನಾಶೀಲತೆಯ ಟೂತ್‌ಪೇಸ್ಟ್’ ಎಂಬ ತನ್ನ ಪ್ರತಿಪಾದನೆಯನ್ನು ಸಾಬೀತುಪಡಿಸಲು ಕಂಪೆನಿ ಸಲ್ಲಿಸಿದ ಎರಡು ಮಾರುಕಟ್ಟೆ ಸಮೀಕ್ಷೆಗಳನ್ನು CCPA ನೋಡಿದೆ. ಆದರೆ ಜಾಹಿರಾತನ್ನು ಭಾರತದ ದಂತ ವೈದ್ಯರೊಂದಿಗೆ ಮಾತ್ರ ನಡೆಸಲಾಗಿದೆ ಎಂದು CCPA ಹೇಳಿದೆ.

“ಜಾಹೀರಾತುಗಳಲ್ಲಿ ಮಾಡಲಾದ ಪ್ರತಿಪಾದನೆಗಳನ್ನು ದೃಢೀಕರಿಸಲು ಅಥವಾ ಸೆನ್ಸೋಡೈನ್ ಉತ್ಪನ್ನಗಳನ್ನು ವಿಶ್ವದಾದ್ಯಂತ ಪ್ರಾಮುಖ್ಯತೆ ಇದೆ ಎಂದು ಸೂಚಿಸುವ ಯಾವುದೆ ಆಧಾರಗಳನ್ನು ಕಂಪೆನಿಯು ನೀಡಿಲ್ಲ. ಹೀಗಾಗಿ, ಯಾವುದೇ ಅದರ ಪ್ರತಿಪಾದನೆಯು ಸರಿಯಿಲ್ಲ” ಎಂದು ಸಚಿವಾಲಯ ಹೇಳಿದೆ.

ಟೂತ್‌ಪೇಸ್ಟ್‌ನ ಬ್ರ್ಯಾಂಡಿಂಗ್‌ನಲ್ಲಿನ ಮತ್ತೊಂದು ಪ್ರತಿಪಾದನೆ, ‘60 ಸೆಕೆಂಡುಗಳಲ್ಲಿ ಕಾರ್ಯನಿರ್ವಹಿಸುತ್ತದೆ’ ಎಂಬುವುದು. ಇದನ್ನು ಸಹಾಯಕ ಔಷಧ ನಿಯಂತ್ರಕರು, ರಾಜ್ಯ ಪರವಾನಗಿ ಪ್ರಾಧಿಕಾರ, ದಾದ್ರಾ ಮತ್ತು ನಗರ ಹವೇಲಿಯ ಸಿಲ್ವಾಸ್ಸಾದಿಂದ ತನಿಖೆ ನಡೆಸಲಾಗುತ್ತಿದೆ. ಇವುಗಳು ಕಂಪೆನಿಯ ಪ್ರತಿಪಾದನೆಯನ್ನು ಮೌಲ್ಯಮಾಪನ ಮಾಡುವ ವೈಜ್ಞಾನಿಕ ಸಂಸ್ಥೆಯಾಗಿದೆ ಎಂದು CCPA ಆದೇಶವನ್ನು ಉಲ್ಲೇಖಿಸಿ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಸಹಾಯಕ ಔಷಧ ನಿಯಂತ್ರಕರು ಸಿಸಿಪಿಎಗೆ ಪತ್ರ ಬರೆದಿದ್ದು, ಕಂಪನಿಯು ಮಾಡಿರುವ ಪ್ರತಿಪಾದನೆಗಳು ತನಿಖೆಯಲ್ಲಿವೆ ಮತ್ತು ವಿಚಾರಣೆಯ ಪ್ರಕ್ರಿಯೆಯ ನಂತರ ಮುಂದಿನ ಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...