Homeಕರ್ನಾಟಕ10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

- Advertisement -
- Advertisement -

ಆನ್‌ಲೈನ್‌‌ ಆಹಾರ ವಿತರಣಾ ಕಂಪೆನಿ ಜೊಮೊಟೊ ಸಿಇಒ ದೀಪಿಂದರ್‌ ಗೋಯಲ್‌ ಅವರು ಮಾರ್ಚ್ 21ರ ಸೋಮವಾದಂದು, ತಮ್ಮ ಕಂಪನಿಯು ಶೀಘ್ರದಲ್ಲೇ ಹತ್ತು ನಿಮಿಷಗಳಲ್ಲಿ ಆಹಾರ ವಿತರಣೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದ ಬಳಕೆದಾರರು ಮತ್ತು ಆಹಾರವನ್ನು ವಿತರಣೆ ಮಾಡುವ ಕಾರ್ಮಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಲವಾರು ಜನರು ಹತ್ತು ನಿಮಿಷಗಳಲ್ಲಿ ಆಹಾರವನ್ನು ವಿತರಣೆ ಮಾಡಲು ಹೇಗೆ ಸಾಧ್ಯ ಎಂದ ಪ್ರಶ್ನಿಸಿದ್ದಾರೆ. ಕಂಪೆನಿಯ ಈ ನೀತಿಯಿಂದಾಗಿ ವಿತರಣೆ ಮಾಡುವ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

10 ನಿಮಿಷದ ವಿತರಣೆಯ ಕಲ್ಪನೆಯನ್ನು ಜೊಮಾಟೊಗೆ ಬಂಡವಾಳ ಹೂಡಿಕೆ ಮಾಡಿದ ಕಂಪನಿಯಾದ ಬ್ಲಿಂಕಿಟ್‌‌ ಮೊದಲು ಮುಂದಿಟ್ಟಿತ್ತು. ಹತ್ತು ನಿಮಿಷದಲ್ಲಿ ವಿತರಣೆ ಮಾಡುವ ವ್ಯಾಪಾರಿ ಮಾದರಿಯು ದಿನಸಿ ವಸ್ತುಗಳನ್ನು ವಿತರಣೆ ಮಾಡುವ ಕಂಪೆನಿಗಳಲ್ಲಿ ಸಾಮಾನ್ಯವಾಗಿದೆ.

ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಕಂಪೆನಿಯ ನಿರ್ಧಾರಗಳನ್ನು ಮುಂದಿಡುತ್ತಾ ಮಾತನಾಡಿದ ದೀಪಿಂದರ್ ಗೋಯಲ್, “ಜೊಮಾಟೊ ವಿತರಣಾ ಕಾರ್ಮಿಕರ ಮೇಲೆ ವೇಗವಾಗಿ ತಲುಪಿಸಲು ಯಾವುದೇ ಒತ್ತಡವನ್ನು ಹೇರುವುದಿಲ್ಲ. ವಿತರಣೆಗೆ ಮಾಡಲಾದ ಭರವಸೆಯ ಸಮಯದ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ. ಸಮಯ ನಿರ್ವಹಣೆಯನ್ನು ರಸ್ತೆಯಲ್ಲಿ ಮಾಡಲಾಗುವುದಿಲ್ಲ ಮತ್ತು ಇದರಿಂದಾಗಿ ಯಾವುದೆ ಜೀವಕ್ಕೆ ಅಪಾಯವಿಲ್ಲ” ಎಂದು ಹೇಳಿದ್ದಾರೆ.

ಗ್ರಾಹಕರು ತಮ್ಮ ಅಗತ್ಯಗಳಿಗೆ ಅನುಸಾರವಾಗಿ ತ್ವರಿತ ಸೇವೆಯನ್ನು ಬಯಸುತ್ತಿದ್ದಾರೆ ಎಂದು ಗೋಯಲ್ ಹೇಳಿದ್ದು, ಪ್ರಸ್ತುತ ಜೊಮೊಟೊದಲ್ಲಿ ಇರುವ 30 ನಿಮಿಷಗಳ ಸರಾಸರಿ ವಿತರಣಾ ಸಮಯವು ತುಂಬಾ ನಿಧಾನವಾಗಿದ್ದು, ಅದು ತುಂಬಾ ಹಳೆಯ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನಲ್ಲಿ ಜೊಮೆಟೊ ಕಂಪೆನಿಯಲ್ಲಿ ಆಹಾರ ವಿತರಣೆ ಮಾಡುತ್ತಿರುವ ಮಂಡ್ಯದ ದಲೀಪ್‌, “ಈ ಬಗ್ಗೆ ನಮಗೆ ಇನ್ನೂ ಯಾವುದೆ ನೋಟಿಫಿಕೇಷನ್ ಬಂದಿಲ್ಲ. ಆದರೆ ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಮಾಡಲು ಸಾಧ್ಯವೆ ಇಲ್ಲ. ಗ್ರಾಹಕರು ಆರ್ಡರ್‌ ಮಾಡಿದ ಆಹಾರ ಹೊಟೆಲ್‌ನಲ್ಲಿ ತಯಾರಾಗಿ ಪ್ಯಾಕ್ ಆಗುವಾಗಲೆ ಹತ್ತು ನಿಮಿಷ ಆಗಿರುತ್ತದೆ. ಉಳಿದಂತೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಗ್ರಾಹಕರನ್ನು ತಲುಪಲು ತುಂಬಾ ಸಮಯ ಹಿಡಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಮಂಗಳೂರಿನಲ್ಲಿ ಜೊಮೆಟೊ ವಿತರಣೆ ಮಾಡುವ ಅನೀಶ್ ಮಾತನಾಡಿ, “ಇದು ಅಪಾಯವನ್ನೂ ತಂದೊಡ್ಡಬಹುದು. ಕಂಪೆನಿಯ ದಂಡಕ್ಕೆ ಹೆದರಿ ವೇಗವಾಗಿ ಅಹಾರ ವಿತರಣೆ ಮಾಡಲು ಹೊರಟರೆ ಅಪಘಾತ ಆಗುವ ಸಾಧ್ಯತೆ ಕೂಡಾ ಇರುತ್ತದೆ. ಈಗಾಗಲೆ ನೀಡಿರುವ 30 ನಿಮಿಷಗಳ ಸಮಯವೇ ಸಾಕಾಗುವುದಿಲ್ಲ. ಅದರಲ್ಲೂ ಹೊಸದಾಗಿ ಜೊಮೊಟೊಗೆ ಕೆಲಸಕ್ಕೆ ಸೇರಿದ ಕಾರ್ಮಿಕರಿಗೆ ಗೂಗಲ್‌ ಲೊಕೇಷನ್ ನೋಡಿಕೊಂಡು ಹೋದರೆ ಈಗ ಇರುವ ಸಮಯವೇ ಸಾಕಾಗುವುದಿಲ್ಲ. ಪ್ರತಿ ವಿತರಣೆಗೆ ದಂಡ ಕಟ್ಟುತ್ತಿದ್ದಾರೆ. ಇನ್ನು ಹತ್ತು ನಿಮಿಷಗಳ ನಿಯಮ ಬಂದರೆ ಅಷ್ಟೆ ಕತೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಸ್ವಾತಿ ಅವರು, “ಬಂಡವಾಳಶಾಹಿ ಕಂಪೆನಿಗಳು ಯಾವ ಮಟ್ಟಿಗೆ ತನ್ನ ಕಾರ್ಮಿಕರನ್ನು ಹಿಂಡಿ ಹಿಪ್ಪೆ ಮಾಡಲು ತಯಾರಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಈಗಾಗಲೆ ಈ ಕಂಪೆನಿಗಳು ತಮ್ಮ ಕಾರ್ಮಿಕರನ್ನು ‘ಪಾಲುದಾರ’ ಎಂದು ಹೇಳುತ್ತಾ ಅವರು ಕಾರ್ಮಿಕರ ಹಕ್ಕುಗಳನ್ನು ನೀಡದೆ ವಂಚಿಸುತ್ತಿದೆ. ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಎಂಬುವುದು ಅಮಾವನೀಯ ನಡೆಯಾಗಿದೆ. ಸರ್ಕಾರ ಈ ಕಂಪೆನಿಗಳನ್ನು ಹದ್ದುಬಸ್ತಿನಲ್ಲಿ ಇಡಲು ನಿಯಮಗಳನ್ನು ರೂಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊಮೊಟೊ ನಿರ್ಧಾರವನ್ನು ಕಾಂಗ್ರೆಸ್ ನಾಯಕ, ಸಂಸದ ಕಾರ್ತಿ ಚಿದಂಬರಂ ಅವರು ವಿರೋಧಿಸಿದ್ದು, ಅವಾಸ್ತವಿಕ ನಿರ್ಧಾರಗಳಿಂದ ವಿತರಣೆ ಮಾಡುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ನಿರೂಪಿಸಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿತರಣಾ ಕಂಪನಿಗಳಾದ ಸ್ವಿಗ್ಗಿ ಮತ್ತು ಜೊಮಾಟೊವನ್ನು ನಿಯಂತ್ರಿಸುವಂತೆ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

“ಭಾರತದಲ್ಲಿ ಆನ್‌ಲೈನ್‌‌ ವಿತರಣೆ ಮಾಡುವ ಮಾರುಕಟ್ಟೆ(‘ಗಿಗ್ ಆರ್ಥಿಕತೆ)ಯಲ್ಲಿ 1.5 ಕೋಟಿ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ. ಇದು 2.5 ಕೋಟಿಯಿಂದ ಮತ್ತು ದೀರ್ಘಾವಧಿಯಲ್ಲಿ 10 ಕೋಟಿಯವರೆಗೆ ಬೆಳೆಯಲಿದೆ” ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

“ಕಾರ್ಮಿಕರು ದ್ವಿಚಕ್ರ ವಾಹನವನ್ನು ಓಡಿಸುತ್ತಾರೆ. ಅದು ಅವರ ವೈಯಕ್ತಿಕ ವಾಹನವಾಗಿದ್ದಾಗಿಯೂ, ವಾಣಿಜ್ಯ ವಿತರಣೆಯನ್ನು ಮಾಡುತ್ತಿದ್ದಾರೆ. ಹಿಂಬದಿಯ ಸೀಟ್‌ನಲ್ಲಿ ಅಥವಾ ಕ್ಯಾರಿಯರ್‌ನಲ್ಲಿ ಭಾರಿ ತೂಕವನ್ನು ಸಾಗಿಸುತ್ತಾರೆ. ಈ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲ. ಈ ವಾಹನಗಳನ್ನು ವಾಣಿಜ್ಯ ವಿತರಣೆಗೆ ಎಂದು ಯಾವುದೇ ವರ್ಗೀಕರಣವಾಗಿಲ್ಲ. ಅಪಘಾತ ಸಂಭವಿಸಿದರೆ ಪರಿಹಾರ ನೀಡಲು ವಿಮಾ ಕಂಪನಿಗಳು ನಿರಾಕರಿಸುತ್ತವೆ. ಆದ್ದರಿಂದ ಈ ವಿತರಣಾ ಕಂಪನಿಗಳನ್ನು ನಿಯಂತ್ರಿಸಬೇಕು’’ ಎಂದು ಹೇಳಿದ್ದಾರೆ.

ಚಿದಂಬರಂ ಅವರು ಈ ‘ಅವಾಸ್ತವಿಕ ಮತ್ತು ಅವಿವೇಕದ’ ವಿತರಣಾ ಸಮಯವನ್ನು ಹೊಂದಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದು ಈ ಕಾರ್ಮಿಕರ ಜೀವನವನ್ನು ದೊಡ್ಡ ಗಂಡಾಂತರಕ್ಕೆ ತಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗೋಯಲ್‌, “10 ನಿಮಿಷದ ವಿತರಣೆಯು, ಈ ಹಿಂದಿನ 30 ನಿಮಿಷದ ವಿತರಣೆಯಂತೆ ಸುರಕ್ಷಿತವಾಗಿರುತ್ತದೆ. ಇದು ನಿರ್ದಿಷ್ಟ ಹತ್ತಿರದ ಸ್ಥಳಗಳಿಗೆ ಮತ್ತು ಜನಪ್ರಿಯ ಪ್ರಮಾಣಿತ ಮೆನುವನ್ನು ಮಾತ್ರ ಹೊಂದಿದೆ” ಎಂದು ಸ್ಪಷ್ಟೀಕರಣ ನೀಡಿದ್ದಾರೆ. ತಡವಾಗಿ ಅಥವಾ ಸಮಯಕ್ಕೆ ಸರಿಯಾಗಿ ವಿತರಿಸಲು ಆಗದ ಕಾರ್ಮಿಕರಿಗೆ ಯಾವುದೇ ದಂಡ ಇರುವುದಿಲ್ಲ ಮತ್ತು ಸಮಯದ ಮಿತಿಯ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 10. ನಿಮಿಷದಲ್ಲಿ ಡೆಲಿವರಿ ಮಾಡೋಕೆ ಹೋದ್ರೆ 108 ನಲ್ಲಿ ವಾಪಾಸ್ ಬರ್ಬೇಕಾಗುತ್ತೆ , ಸದ್ಯ ಇಲ್ಲಾ ಎಲ್ಲ ಜೊಮಾಟೋ ಡೆಲಿವರಿ ಬಾಯ್ಸ್ ಇದನ್ನೂ ತಿರಸ್ಕಾರ ಮಾಡಿ ಇದಾರ ವಿರುದ್ಧ ಹೋರಾಟ ಮಾಡ್ಬೇಕು ,

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...