Homeಕರ್ನಾಟಕ10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

10 ನಿಮಿಷಗಳಲ್ಲಿ ಆಹಾರ ವಿತರಣೆ ನಿಯಮ ಘೊಷಿಸಿದ ‘ಜೊಮೆಟೊ’; ತೀವ್ರ ವಿರೋಧ

- Advertisement -
- Advertisement -

ಆನ್‌ಲೈನ್‌‌ ಆಹಾರ ವಿತರಣಾ ಕಂಪೆನಿ ಜೊಮೊಟೊ ಸಿಇಒ ದೀಪಿಂದರ್‌ ಗೋಯಲ್‌ ಅವರು ಮಾರ್ಚ್ 21ರ ಸೋಮವಾದಂದು, ತಮ್ಮ ಕಂಪನಿಯು ಶೀಘ್ರದಲ್ಲೇ ಹತ್ತು ನಿಮಿಷಗಳಲ್ಲಿ ಆಹಾರ ವಿತರಣೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣದ ಬಳಕೆದಾರರು ಮತ್ತು ಆಹಾರವನ್ನು ವಿತರಣೆ ಮಾಡುವ ಕಾರ್ಮಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹಲವಾರು ಜನರು ಹತ್ತು ನಿಮಿಷಗಳಲ್ಲಿ ಆಹಾರವನ್ನು ವಿತರಣೆ ಮಾಡಲು ಹೇಗೆ ಸಾಧ್ಯ ಎಂದ ಪ್ರಶ್ನಿಸಿದ್ದಾರೆ. ಕಂಪೆನಿಯ ಈ ನೀತಿಯಿಂದಾಗಿ ವಿತರಣೆ ಮಾಡುವ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

10 ನಿಮಿಷದ ವಿತರಣೆಯ ಕಲ್ಪನೆಯನ್ನು ಜೊಮಾಟೊಗೆ ಬಂಡವಾಳ ಹೂಡಿಕೆ ಮಾಡಿದ ಕಂಪನಿಯಾದ ಬ್ಲಿಂಕಿಟ್‌‌ ಮೊದಲು ಮುಂದಿಟ್ಟಿತ್ತು. ಹತ್ತು ನಿಮಿಷದಲ್ಲಿ ವಿತರಣೆ ಮಾಡುವ ವ್ಯಾಪಾರಿ ಮಾದರಿಯು ದಿನಸಿ ವಸ್ತುಗಳನ್ನು ವಿತರಣೆ ಮಾಡುವ ಕಂಪೆನಿಗಳಲ್ಲಿ ಸಾಮಾನ್ಯವಾಗಿದೆ.

ಇದನ್ನೂ ಓದಿ: ಜೊಮೊಟೊ ಏಜೆಂಟ್‌ ಹಿಂದಿ ಪ್ರೀತಿ: ತೀವ್ರ ಆಕ್ಷೇಪದ ಬಳಿಕ ಕಂಪನಿ ಕ್ಷಮೆಯಾಚನೆ

ಕಂಪೆನಿಯ ನಿರ್ಧಾರಗಳನ್ನು ಮುಂದಿಡುತ್ತಾ ಮಾತನಾಡಿದ ದೀಪಿಂದರ್ ಗೋಯಲ್, “ಜೊಮಾಟೊ ವಿತರಣಾ ಕಾರ್ಮಿಕರ ಮೇಲೆ ವೇಗವಾಗಿ ತಲುಪಿಸಲು ಯಾವುದೇ ಒತ್ತಡವನ್ನು ಹೇರುವುದಿಲ್ಲ. ವಿತರಣೆಗೆ ಮಾಡಲಾದ ಭರವಸೆಯ ಸಮಯದ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ. ಸಮಯ ನಿರ್ವಹಣೆಯನ್ನು ರಸ್ತೆಯಲ್ಲಿ ಮಾಡಲಾಗುವುದಿಲ್ಲ ಮತ್ತು ಇದರಿಂದಾಗಿ ಯಾವುದೆ ಜೀವಕ್ಕೆ ಅಪಾಯವಿಲ್ಲ” ಎಂದು ಹೇಳಿದ್ದಾರೆ.

ಗ್ರಾಹಕರು ತಮ್ಮ ಅಗತ್ಯಗಳಿಗೆ ಅನುಸಾರವಾಗಿ ತ್ವರಿತ ಸೇವೆಯನ್ನು ಬಯಸುತ್ತಿದ್ದಾರೆ ಎಂದು ಗೋಯಲ್ ಹೇಳಿದ್ದು, ಪ್ರಸ್ತುತ ಜೊಮೊಟೊದಲ್ಲಿ ಇರುವ 30 ನಿಮಿಷಗಳ ಸರಾಸರಿ ವಿತರಣಾ ಸಮಯವು ತುಂಬಾ ನಿಧಾನವಾಗಿದ್ದು, ಅದು ತುಂಬಾ ಹಳೆಯ ಮಾದರಿಯಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನಲ್ಲಿ ಜೊಮೆಟೊ ಕಂಪೆನಿಯಲ್ಲಿ ಆಹಾರ ವಿತರಣೆ ಮಾಡುತ್ತಿರುವ ಮಂಡ್ಯದ ದಲೀಪ್‌, “ಈ ಬಗ್ಗೆ ನಮಗೆ ಇನ್ನೂ ಯಾವುದೆ ನೋಟಿಫಿಕೇಷನ್ ಬಂದಿಲ್ಲ. ಆದರೆ ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಮಾಡಲು ಸಾಧ್ಯವೆ ಇಲ್ಲ. ಗ್ರಾಹಕರು ಆರ್ಡರ್‌ ಮಾಡಿದ ಆಹಾರ ಹೊಟೆಲ್‌ನಲ್ಲಿ ತಯಾರಾಗಿ ಪ್ಯಾಕ್ ಆಗುವಾಗಲೆ ಹತ್ತು ನಿಮಿಷ ಆಗಿರುತ್ತದೆ. ಉಳಿದಂತೆ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಗ್ರಾಹಕರನ್ನು ತಲುಪಲು ತುಂಬಾ ಸಮಯ ಹಿಡಿಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಯ್ಕಾಟ್ ಚೀನಾ: ಟೀಶರ್ಟ್‌ ಸುಟ್ಟು ಪ್ರತಿಭಟಿಸಿದ ಜೊಮಾಟೊ ಉದ್ಯೋಗಿಗಳು!

ಮಂಗಳೂರಿನಲ್ಲಿ ಜೊಮೆಟೊ ವಿತರಣೆ ಮಾಡುವ ಅನೀಶ್ ಮಾತನಾಡಿ, “ಇದು ಅಪಾಯವನ್ನೂ ತಂದೊಡ್ಡಬಹುದು. ಕಂಪೆನಿಯ ದಂಡಕ್ಕೆ ಹೆದರಿ ವೇಗವಾಗಿ ಅಹಾರ ವಿತರಣೆ ಮಾಡಲು ಹೊರಟರೆ ಅಪಘಾತ ಆಗುವ ಸಾಧ್ಯತೆ ಕೂಡಾ ಇರುತ್ತದೆ. ಈಗಾಗಲೆ ನೀಡಿರುವ 30 ನಿಮಿಷಗಳ ಸಮಯವೇ ಸಾಕಾಗುವುದಿಲ್ಲ. ಅದರಲ್ಲೂ ಹೊಸದಾಗಿ ಜೊಮೊಟೊಗೆ ಕೆಲಸಕ್ಕೆ ಸೇರಿದ ಕಾರ್ಮಿಕರಿಗೆ ಗೂಗಲ್‌ ಲೊಕೇಷನ್ ನೋಡಿಕೊಂಡು ಹೋದರೆ ಈಗ ಇರುವ ಸಮಯವೇ ಸಾಕಾಗುವುದಿಲ್ಲ. ಪ್ರತಿ ವಿತರಣೆಗೆ ದಂಡ ಕಟ್ಟುತ್ತಿದ್ದಾರೆ. ಇನ್ನು ಹತ್ತು ನಿಮಿಷಗಳ ನಿಯಮ ಬಂದರೆ ಅಷ್ಟೆ ಕತೆ” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಸ್ವಾತಿ ಅವರು, “ಬಂಡವಾಳಶಾಹಿ ಕಂಪೆನಿಗಳು ಯಾವ ಮಟ್ಟಿಗೆ ತನ್ನ ಕಾರ್ಮಿಕರನ್ನು ಹಿಂಡಿ ಹಿಪ್ಪೆ ಮಾಡಲು ತಯಾರಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಈಗಾಗಲೆ ಈ ಕಂಪೆನಿಗಳು ತಮ್ಮ ಕಾರ್ಮಿಕರನ್ನು ‘ಪಾಲುದಾರ’ ಎಂದು ಹೇಳುತ್ತಾ ಅವರು ಕಾರ್ಮಿಕರ ಹಕ್ಕುಗಳನ್ನು ನೀಡದೆ ವಂಚಿಸುತ್ತಿದೆ. ಹತ್ತು ನಿಮಿಷದಲ್ಲಿ ಆಹಾರ ವಿತರಣೆ ಎಂಬುವುದು ಅಮಾವನೀಯ ನಡೆಯಾಗಿದೆ. ಸರ್ಕಾರ ಈ ಕಂಪೆನಿಗಳನ್ನು ಹದ್ದುಬಸ್ತಿನಲ್ಲಿ ಇಡಲು ನಿಯಮಗಳನ್ನು ರೂಪಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊಮೊಟೊ ನಿರ್ಧಾರವನ್ನು ಕಾಂಗ್ರೆಸ್ ನಾಯಕ, ಸಂಸದ ಕಾರ್ತಿ ಚಿದಂಬರಂ ಅವರು ವಿರೋಧಿಸಿದ್ದು, ಅವಾಸ್ತವಿಕ ನಿರ್ಧಾರಗಳಿಂದ ವಿತರಣೆ ಮಾಡುವ ಕಾರ್ಮಿಕರನ್ನು ರಕ್ಷಿಸಲು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿಗಳನ್ನು ನಿರೂಪಿಸಲು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿತರಣಾ ಕಂಪನಿಗಳಾದ ಸ್ವಿಗ್ಗಿ ಮತ್ತು ಜೊಮಾಟೊವನ್ನು ನಿಯಂತ್ರಿಸುವಂತೆ ಸರ್ಕಾರಕ್ಕೆ ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾರದೊಳಗೆ ಎಲ್ಲಾ ಕೆಎಫ್‌ಸಿ ಮಳಿಗೆಗಳಲ್ಲಿ ಕನ್ನಡವಿರಲಿ: ಕರವೇ ತಾಕೀತು

“ಭಾರತದಲ್ಲಿ ಆನ್‌ಲೈನ್‌‌ ವಿತರಣೆ ಮಾಡುವ ಮಾರುಕಟ್ಟೆ(‘ಗಿಗ್ ಆರ್ಥಿಕತೆ)ಯಲ್ಲಿ 1.5 ಕೋಟಿ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ. ಇದು 2.5 ಕೋಟಿಯಿಂದ ಮತ್ತು ದೀರ್ಘಾವಧಿಯಲ್ಲಿ 10 ಕೋಟಿಯವರೆಗೆ ಬೆಳೆಯಲಿದೆ” ಎಂದು ಕಾರ್ತಿ ಚಿದಂಬರಂ ಹೇಳಿದ್ದಾರೆ.

“ಕಾರ್ಮಿಕರು ದ್ವಿಚಕ್ರ ವಾಹನವನ್ನು ಓಡಿಸುತ್ತಾರೆ. ಅದು ಅವರ ವೈಯಕ್ತಿಕ ವಾಹನವಾಗಿದ್ದಾಗಿಯೂ, ವಾಣಿಜ್ಯ ವಿತರಣೆಯನ್ನು ಮಾಡುತ್ತಿದ್ದಾರೆ. ಹಿಂಬದಿಯ ಸೀಟ್‌ನಲ್ಲಿ ಅಥವಾ ಕ್ಯಾರಿಯರ್‌ನಲ್ಲಿ ಭಾರಿ ತೂಕವನ್ನು ಸಾಗಿಸುತ್ತಾರೆ. ಈ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲ. ಈ ವಾಹನಗಳನ್ನು ವಾಣಿಜ್ಯ ವಿತರಣೆಗೆ ಎಂದು ಯಾವುದೇ ವರ್ಗೀಕರಣವಾಗಿಲ್ಲ. ಅಪಘಾತ ಸಂಭವಿಸಿದರೆ ಪರಿಹಾರ ನೀಡಲು ವಿಮಾ ಕಂಪನಿಗಳು ನಿರಾಕರಿಸುತ್ತವೆ. ಆದ್ದರಿಂದ ಈ ವಿತರಣಾ ಕಂಪನಿಗಳನ್ನು ನಿಯಂತ್ರಿಸಬೇಕು’’ ಎಂದು ಹೇಳಿದ್ದಾರೆ.

ಚಿದಂಬರಂ ಅವರು ಈ ‘ಅವಾಸ್ತವಿಕ ಮತ್ತು ಅವಿವೇಕದ’ ವಿತರಣಾ ಸಮಯವನ್ನು ಹೊಂದಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದು ಈ ಕಾರ್ಮಿಕರ ಜೀವನವನ್ನು ದೊಡ್ಡ ಗಂಡಾಂತರಕ್ಕೆ ತಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಗೋಯಲ್‌, “10 ನಿಮಿಷದ ವಿತರಣೆಯು, ಈ ಹಿಂದಿನ 30 ನಿಮಿಷದ ವಿತರಣೆಯಂತೆ ಸುರಕ್ಷಿತವಾಗಿರುತ್ತದೆ. ಇದು ನಿರ್ದಿಷ್ಟ ಹತ್ತಿರದ ಸ್ಥಳಗಳಿಗೆ ಮತ್ತು ಜನಪ್ರಿಯ ಪ್ರಮಾಣಿತ ಮೆನುವನ್ನು ಮಾತ್ರ ಹೊಂದಿದೆ” ಎಂದು ಸ್ಪಷ್ಟೀಕರಣ ನೀಡಿದ್ದಾರೆ. ತಡವಾಗಿ ಅಥವಾ ಸಮಯಕ್ಕೆ ಸರಿಯಾಗಿ ವಿತರಿಸಲು ಆಗದ ಕಾರ್ಮಿಕರಿಗೆ ಯಾವುದೇ ದಂಡ ಇರುವುದಿಲ್ಲ ಮತ್ತು ಸಮಯದ ಮಿತಿಯ ಬಗ್ಗೆ ಅವರಿಗೆ ತಿಳಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 10. ನಿಮಿಷದಲ್ಲಿ ಡೆಲಿವರಿ ಮಾಡೋಕೆ ಹೋದ್ರೆ 108 ನಲ್ಲಿ ವಾಪಾಸ್ ಬರ್ಬೇಕಾಗುತ್ತೆ , ಸದ್ಯ ಇಲ್ಲಾ ಎಲ್ಲ ಜೊಮಾಟೋ ಡೆಲಿವರಿ ಬಾಯ್ಸ್ ಇದನ್ನೂ ತಿರಸ್ಕಾರ ಮಾಡಿ ಇದಾರ ವಿರುದ್ಧ ಹೋರಾಟ ಮಾಡ್ಬೇಕು ,

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...