Homeಕರ್ನಾಟಕದೇವಾಲಯದ ಆವರಣ ಮತ್ತು ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರ

ದೇವಾಲಯದ ಆವರಣ ಮತ್ತು ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರ

- Advertisement -
- Advertisement -

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಕಾಯಿದೆ 2002 ರ ಪ್ರಕಾರ ಹಿಂದೂಯೇತರರು ಹಿಂದೂ ಧಾರ್ಮಿಕ ಸಂಸ್ಥೆಗಳ ಆವರಣದಲ್ಲಿ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಗೆ ತಿಳಿಸಿದೆ.

ವಿಧಾನಸಭೆಯಲ್ಲಿ, ಹಿಂದೂಯೇತರರ ಅಂಗಡಿಗಳನ್ನು ಖಾಲಿ ಮಾಡುವಂತೆ ಮತ್ತು ದೇವಾಲಯದ ಹೊರಗೆ ವ್ಯಾಪಾರ ಮಾಡದಂತೆ ಧಾರ್ಮಿಕ ಸ್ಥಳಗಳಲ್ಲಿ ಬ್ಯಾನರ್‌ ಮತ್ತು ಪೋಸ್ಟರ್‌ ಇರುವುದರ ಕುರಿತು ಕಾಂಗ್ರೆಸ್ ಶಾಸಕರಾದ ಯು.ಟಿ.ಖಾದರ್ ಮತ್ತು ರಿಜ್ವಾನ್ ಅರ್ಷದ್ ಅವರು ಶೂನ್ಯವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, “ಹಾಗೆ ಮಾಡದಂತೆ ಕಾನೂನು ಇದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

“ಅಧಿನಿಯಮದ ಅಡಿಯಲ್ಲಿ ನಿಯಮ ಸಂಖ್ಯೆ 12 ರ ಪ್ರಕಾರ, ಹಿಂದೂಯೇತರರು ಆವರಣದಲ್ಲಿ ಮತ್ತು ಸುತ್ತಮುತ್ತ ವ್ಯಾಪಾರ ಮಾಡಲು ಆವರಣದಿಂದ ನಿರ್ಬಂಧಿಸಲಾಗಿದೆ. ಆದರೆ, ಹಿಂದೂ ಧಾರ್ಮಿಕ ಕ್ಷೇತ್ರವನ್ನು ಮೀರಿ ಈ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹಾಕುವವರ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಮಾಧುಸ್ವಾಮಿ ಹೇಳಿದ್ದಾರೆ.

ಆದರೆ, ಪ್ರಾಮಾಣಿಕವಾಗಿ ಜೀವನ ನಡೆಸುತ್ತಿರುವ ರಸ್ತೆ ಬದಿ ವ್ಯಾಪಾರಿಗಳನ್ನೂ ಗುರಿಯಾಗಿಸಿಕೊಂಡು ಬ್ಯಾನರ್, ಭಿತ್ತಿಪತ್ರಗಳು ರಾರಾಜಿಸುತ್ತಿವೆ ಎಂದು ಖಾದರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ಇಂತಹ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ನಮ್ಮ ಸಮಾಜದಲ್ಲಿ ವೈಷಮ್ಯವನ್ನು ಸೃಷ್ಟಿಸುತ್ತಿದ್ದು, ಕೋಮು ಸೌಹಾರ್ದವನ್ನು ಹಾಳು ಮಾಡುತ್ತಿವೆ. ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಖಾದರ್ ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

ಇದಕ್ಕೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಈಗಾಗಲೇ ಕಾನೂನು ಜಾರಿಯಲ್ಲಿದ್ದು, ಈ ಬಗ್ಗೆ ಸರಕಾರ ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ.

“ಜಾತ್ರೆ (ದೇವಾಲಯದ ಉತ್ಸವ) ಸಮಯದಲ್ಲಿ, ಬಹಳಷ್ಟು ಅಂಗಡಿಗಳನ್ನು ಹಿಂದೂಯೇತರರಿಗೆ ವ್ಯಾಪಾರಕ್ಕಾಗಿ ಉಪ-ಗುತ್ತಿಗೆಗೆ ನೀಡಲಾಗುತ್ತದೆ. ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳ ಆಡಳಿತ ಮಂಡಳಿಯಿಂದ ಗುತ್ತಿಗೆ ತೆಗೆದುಕೊಳ್ಳುತ್ತಿದ್ದ ಗುತ್ತಿಗೆದಾರರು ತುಸು ಹೆಚ್ಚು ಹಣವನ್ನು ಗಳಿಸಲು ಹೀಗೆ ಮಾಡುತ್ತಿದ್ದರು. ಇವು ವ್ಯಾಪಾರ ವಹಿವಾಟಾಗಿದ್ದು ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಅಂತಹ ಪ್ರಕರಣಗಳಲ್ಲಿ ನಾವು ಕಾನೂನನ್ನು ಪರಿಶೀಲಿಸುತ್ತೇವೆ. ಪ್ರಕರಣಗಳ ಸತ್ಯಾಸತ್ಯತೆಗಳನ್ನು ಪರಿಶೀಲಿಸುತ್ತೇವೆ” ಎಂದು ಬೊಮ್ಮಾಯಿ ಹೇಳಿದ್ದಾರೆ.

ಕರಾವಳಿ ಮತ್ತು ಮಲೆನಾಡಿನಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಹಿಂದೂಯೇತರರು, ಮುಖ್ಯವಾಗಿ ಮುಸ್ಲಿಂ ಸಮುದಾಯದ ವ್ಯಾಪಾರಿಗಳು ದೇವಸ್ಥಾನದ ಆವರಣ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ ಎಂದು ಬಿಜೆಪಿ ಬೆಂಬಲಿತ ಸಂಘಟನೆಗಳು ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಿದ್ದು ಇತ್ತೀಚೆಗೆ ವರದಿಯಾಗಿತ್ತು. ಇದು ರಾಜ್ಯದಲ್ಲಿ ಕೋಮು ದ್ವೇಷವನ್ನು ಉತ್ತೇಜಿಸುವ ಮೂಲಕ ಮತ ದ್ರುವೀಕರಣಕ್ಕೆ ಬಿಜೆಪಿಯೆ ಮಾಡುತ್ತಿರುವ ಕೃತ್ಯ ಎಂದು ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದ ಆದಿವಾಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಒಟ್ಟು 15 ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...