Homeಕರ್ನಾಟಕಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ದೇವಸ್ಥಾನದ ಬಳಿ ಅಂಗಡಿಯಿಟ್ಟಿದ್ದ ಸಂಘಪರಿವಾರದ ಕಾರ್ಯಕತರಿಂದ ದುಪ್ಪಟ್ಟು ಬೆಲೆಗೆ ಕೋಳಿ & ಮಲ್ಲಿಗೆ ಮಾರಾಟ ಮಾಡಿ ಹಿಂದೂ ಭಕ್ತಾದಿಗಳಿಗೆ ವಂಚನೆ

- Advertisement -
- Advertisement -

➤ ಪರಂಪರೆಯಂತೆ ಮುಸ್ಲಿಂ ಸಮುದಾಯದ ವ್ಯಕ್ತಿಯಿಂದಲೇ ದೇವಿಯ ‘ವಾಲಗ ಚಾಕರಿ’
➤ ಪರಿಸ್ಥಿತಿಯ ಲಾಭ ಪಡೆದು ಕೆಜಿ.ಗೆ 250 ರೂ. ಇದ್ದ ನಾಟಿ ಕೋಳಿಯನ್ನು ಕೆಜಿ.ಗೆ 400 ರೂ.ಗೆ ಮಾರಾಟ ಮಾಡಿ ಭಕ್ತರನ್ನು ವಂಚಿಸಿದ ಸಂಘಪರಿವಾರದ ಕಾರ್ಯಕರ್ತರು: ಆರೋಪ

ಉಡುಪಿ ಜಿಲ್ಲೆಯ ಕಾಪು ಬಳಿಯ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ, ‘ಸುಗ್ಗಿ ಮಾರಿ ಪೂಜೆ’ ಜಾತ್ರೆಯು ಬಿಜೆಪಿ ಬೆಂಬಲಿತ ಸಂಘಪರಿವಾರದ ಸಂಘಟನೆಗಳ ಬೆದರಿಕೆಯ ನಡುವೆಯು ಸಾಂಗಾವಾಗಿ ನಡೆದು ಸಂಪನ್ನಗೊಂಡಿದೆ. ಈ ನಡುವೆ ದೇವಸ್ಥಾನದ ವಠಾರದಲ್ಲಿ ಅಂಗಡಿಯನ್ನು ಇಟ್ಟಿದ್ದ ಸಂಘಪರಿವಾದ ಕಾರ್ಯಕರ್ತರು ಮಾರುಕಟ್ಟೆ ಬೆಲೆಗಿಂತಲೂ ದುಪ್ಪಟ್ಟು ಬೆಲೆಗೆ ಕೋಳಿ ಮತ್ತು ಮಲ್ಲಿಗೆ ಹೂವುಗಳನ್ನು ಮಾರಿದ್ದು, ಭಕ್ತಾದಿಗಳನ್ನು ವಂಚಿಸಿದ್ದಾರೆ ಎಂದು ವರದಿಯಾಗಿದೆ.

ಜಾತ್ರೆಯಲ್ಲಿ ಮುಸ್ಲಿಮರು ವ್ಯಾಪಾರ ಮಾಡಬಾರದು ಎಂದು ಸಂಘಪರಿವಾರ ಮುಸ್ಲಿಮರ ವಿರುದ್ಧ ದ್ವೇಷ ಹರಡಿ, ಕೋಮು ಸೌಹಾರ್ದವನ್ನು ಹಾಳುಗೆಡವಿತ್ತು. ಆದರೆ ಜಾತ್ರೆಗೆ ಬಂದಿದ್ದ ಭಕ್ತಾದಿಗಳು ಸಂಘಪರಿವಾದ ಬೆದರಿಕೆಗಳಿಗೆ ಸೊಪ್ಪು ಹಾಕದೆ ಮುಸ್ಲಿಂ ವ್ಯಾಪಾರಿಗಳೊಂದಿಗೆ ವ್ಯಾಪಾರ ಮಾಡಿದ್ದು, ಜಾತ್ರೆಯ ‘ವಾಲಗ ಚಾಕರಿ’ಯನ್ನು ಸಂಪ್ರದಾಯದಂತೆ ಮುಸ್ಲಿಂ ಸಮುದಾಯದ ವ್ಯಕ್ತಿಗಳೆ ಎರಡು ದಿನದ ವಾಲಗ ಊದಿ ‘ತುಳುನಾಡಿನ ಪರಂಪರೆ’ಯನ್ನು ಎತ್ತಿಹಿಡಿದಿದ್ದಾರೆ.

ಇದನ್ನೂ ಓದಿ: ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧ

ಮಾರಿಗುಡಿ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರವು ದೇವಸ್ಥಾನದ ಆಡಳಿತ ಮಂಡಳಿ ಮತ್ತು ಪುರಸಭೆಗೆ ಒತ್ತಡ ಹೇರಿತ್ತು. ದೇವಸ್ಥಾನದ ಆಡಳಿತ ಮಂಡಳಿ ಸಂಘಪರಿವಾರದ ಬೆದರಿಕೆಗಳಿಗೆ ಜಗ್ಗಿ ದೇವಸ್ಥಾನದ ವಠಾರದಲ್ಲಿ ಮುಸ್ಲಿಮರಿಗೆ ಯಾವುದೆ ಅಂಗಡಿ ಮುಂಗ್ಗಟ್ಟುಗಳನ್ನು ನೀಡಿರಲಿಲ್ಲ. ಆದರೆ ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಅವರು, “ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲ ಸಮುದಾಯದ ವರ್ತಕರು ಅಂಗಡಿಗಳನ್ನು ತೆರೆಯಬಹುದಾಗಿದೆ” ಎಂದು ಹೇಳಿದ್ದರು.

ಅದರಂತೆ ದೇವಸ್ಥಾನದ ವಠಾರದಲ್ಲಿ ಅವಕಾಶ ನೀಡದ್ದರಿಂದ ಅಲ್ಲಿ ಯಾವುದೆ ಮುಸ್ಲಿಮರ ಅಂಗಡಿಗಳು ಇರಲಿಲ್ಲ. ಆದರೆ ಹೊರಗಡೆಯ ಸಾವರ್ಜನಿಕ ಸ್ಥಳಗಳಲ್ಲಿ ಮುಸ್ಲಿಮರು ತಮ್ಮ ಅಂಗಡಿಗಳಲ್ಲಿ ಕೋಳಿ ಮತ್ತು ಇತರ ವಸ್ತುಗಳನ್ನು ಇಟ್ಟು ಮಾರಾಟ ಮಾಡಿದ್ದರು. ಅವರೊಂದಿಗೆ ಜಾತ್ರೆಗೆ ಆಗಮಿಸಿದ್ದ ಭಕ್ತರು ವ್ಯಾಪಾರವನ್ನೂ ಮಾಡಿದ್ದರು.

ಆದರೆ, ದೇವಸ್ಥಾನದ ಬಳಿಯಲ್ಲಿ ಕೋಳಿ ಮತ್ತು ಮಲ್ಲಿಗೆ ಅಂಗಡಿಗಳನ್ನು ಇಟ್ಟಿದ್ದ ಸಂಘಪರಿವಾರದ ಕಾರ್ಯಕರ್ತರು ಪರಿಸ್ಥಿತಿಯ ಲಾಭವನ್ನು ಪಡೆದು ಭಕ್ತಾದಿಗಳನ್ನು ವಂಚಿಸಿದ್ದಾರೆ ಎಂದು ಆರೋಪಗಳು ಎದ್ದಿದೆ.

ಇದನ್ನೂ ಓದಿ:RSS ಹೊರತುಪಡಿಸಿ ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತ, ಜೈನ, ಬೌದ್ಧ ಎಲ್ಲರೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ: ತೇಜಸ್ವಿ ಯಾದವ್ 

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸ್ಥಳೀಯ ಪತ್ರಕರ್ತರೊಬ್ಬರು, “ಮಾರಿ ಪೂಜೆಗೆ ಕೋಳಿ ಮತ್ತು ಮಲ್ಲಿಗೆ ಬಹಳ ಮುಖ್ಯವಾಗಿ ಬೇಕಾದ ವಸ್ತುಗಳಾಗಿವೆ. ಸಂಘಪರಿವಾರವು ಪರಿಸ್ಥಿಯನ್ನು ಬಿಗಡಾಯಿಸುವಂತೆ ಮಾಡಿ ಅದನ್ನು ಲಾಭ ಮಾಡಿಕೊಂಡು ಭಕ್ತಾದಿಗಳನ್ನು ವಂಚಿಸಿದೆ. ಈ ವಂಚನೆಯ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ ದೂರು ನೀಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ನಾನು ಪೂಜೆಗೆ ಹೋದಾಗ ದೇವಸ್ಥಾನದ ಬಳಿಯ ಸಂಘಪರಿವಾರದ ಕಾರ್ಯಕರ್ತರ ಅಂಗಡಿಗಳಲ್ಲಿ ನಾಟಿ ಕೋಳಿಗೆ ಒಂದು ಕೆ.ಜಿ.ಗೆ 400 ರೂ.ಗಳಿಗೆ ಮಾರುತ್ತಿದ್ದರು. ಆದರೆ ಮುಸ್ಲಿಮರ ಅಂಗಡಿಗಳಲ್ಲಿ 1 ಕೆ.ಜಿ. ನಾಟಿ ಕೋಳಿಗೆ 250 ರೂ.ಗಳು ಇತ್ತು. ಅಲ್ಲದೆ ಅದನ್ನು ಕೊಯ್ದು ಕೊಡಲು ಸಂಘಪರಿವಾದ ಅಂಗಡಿಗಳಲ್ಲಿ ಹೆಚ್ಚುವರಿಯಾಗಿ 50 ರಿಂದ 75 ರೂ.ಗಳ ವರೆಗೆ ಪಾವತಿಸಬೇಕಾಗಿತ್ತು. ಆದರೆ ಮುಸ್ಲಿಮರ ಅಂಗಡಿಗಳಲ್ಲಿ ಇದಕ್ಕೆ ಯಾವುದೆ ಹೆಚ್ಚುವರಿ ಹಣವನ್ನು ಪಡೆದುಕೊಳ್ಳುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಮಲ್ಲಿಗೆ ವ್ಯಾಪಾರದ ವಿಚಾರದಲ್ಲೂ ಸಂಘಪರಿವಾರದ ಕಾರ್ಯಕರ್ತರು ಹೀಗೆ ನಡೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಸ್ಲಿಮರ ಜೊತೆಗೆ ವ್ಯಾಪಾರ ಮಾಡಬಾರದು ಎಂದು ಭಕ್ತಾದಿಗಳನ್ನು ಉದ್ರಿಕ್ತಗೊಳಿಸಲು ಸಂಘಪರಿವಾರವು ಪ್ರಯತ್ನಿಸಿದರೂ, ಭಕ್ತಾದಿಗಳು ಅದಕ್ಕೆ ಯಾವುದೆ ಸೊಪ್ಪು ಹಾಕಿಲ್ಲ. ದೇವಸ್ಥಾನದ ಹೊರಗಡೆ ಇದರ ಯಾವುದೆ ಪರಿವೆ ಇಲ್ಲದೆ ಭಕ್ತಾದಿಗಳು ಎಲ್ಲರೊಂದಿಗೂ ವ್ಯಾಪಾರದಲ್ಲಿ ತೊಡಗಿದ್ದರು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

ಈ ಮಧ್ಯೆ ಸಾವಿರಾರು ವರ್ಷಗಳ ಸಂಪ್ರದಾಯದಂತೆ ಮಾರಿ ಗುಡಿಯ ಜಾತ್ರೆಯ ಎರಡು ದಿನಗಳಲ್ಲೂ ವಾಲಗವನ್ನು ಮುಸ್ಲಿಂ ಸಮುದಾಯದ ವ್ಯಕ್ತಿಗಳೇ ಊದಿದ್ದಾರೆ ಎಂದು ವರದಿಯಾಗಿದೆ. ಕಾಪು ಹೊಸ ಮಾರಿಗುಡಿ, ಮೂರನೇ ಮಾರಿಗುಡಿ ಮತ್ತು ಜನಾರ್ಧನ ದೇವಸ್ಥಾನದಲ್ಲಿ ತಲತಲಾಂತರದಿಂದ ವಾಲಗ ಊದುವ ‘ಚಾಕರಿ’ ಮಾಡಿಕೊಂಡು ಬರುತ್ತಿರುವ ಮುಸ್ಲಿಂ ಕುಟುಂಬದ ಜಲೀಲ್ ಸಾಹೇಬ್ ಅವರು ಮಾರಿಗುಡಿಯ ಈ ಬಾರಿಯ ಜಾತ್ರೆಯಲ್ಲಿ ವಾಲಗ ಊದಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಜಲೀಲ್ ಸಾಹೇಬ್‌, “ನಾವು ‘ಜನಾರ್ದನ ದೇವಸ್ಥಾನ’, ‘ಮೂರನೇ ಮಾರಿಗುಡಿ’ ಮತ್ತು ‘ಹೊಸ ಮಾರಿಗುಡಿ’ ದೇವಸ್ಥಾನಗಳಿಗೂ ತಲತಲಾಂತರದಿಂದಲೂ ವಾಲಗ ಚಾಕರಿ ಮಾಡಿಕೊಂಡು ಬರುತ್ತಿದ್ದೇವೆ. ನಮ್ಮದು ಸಾವಿರಾರು ವರ್ಷಗಳ ಪರಂಪರೆ, ನನ್ನ ತಂದೆ, ಅಜ್ಜ, ಅವರ ಅಜ್ಜ ಹೀಗೆ…ವಾಲಗ ಚಾಕರಿ ಮಾಡುತ್ತಲೆ ಬರುತ್ತಿದ್ದೇವೆ. ಈ ವರ್ಷ ಕೂಡಾ ವಾಲಗ ಊದಿ ಚಾಕರಿ ಮಾಡಿದ್ದೇವೆ. ನಮ್ಮನ್ನು ಯಾರೂ ಬರಬೇಡಿ ಎಂದು ಹೇಳಿಲ್ಲ” ಎಂದು ಹೇಳಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಕಳೆದ ಎರಡು ವರ್ಷಗಳಿಂದ ಮೂರು ದೇವಸ್ಥಾನಗಳಲ್ಲಿ ವಾರ್ಷಿಕ ಜಾತ್ರೆ ನಡೆದಿರಲಿಲ್ಲ ಮತ್ತು ಹರಾಜು ಕೂಡ ನಡೆದಿರಲಿಲ್ಲ. ಈ ಹಿಂದೆ ದೇವಸ್ಥಾನದ ವಠಾರದಲ್ಲಿ ಜಾತ್ರೆಯ ಸಂತೆ ಇಡಲು ಸ್ಥಳಗಳನ್ನು ಮುಸ್ಲಿಮರು ಕೂಡಾ ಪಡೆಯುತ್ತಿದ್ದರು.

ಇದನ್ನೂ ಓದಿ: ಮೈಸೂರು: ಸರ್ಕಾರಿ ಶಾಲೆಯ ಅಭಿವೃದ್ಧಿಗೆ 2.5 ಎಕರೆ ಜಮೀನು ದಾನ ಮಾಡಿದ ಮುಸ್ಲಿಂ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Very good. Very appreciated the act of all beloved Hindus for uplifting the value of Democracy and secularism. Fundamentalist may try to destroy harmony and peace in the name of religion but common people irrespective of any religion don’t care about them. Thanks to Nanu Gauri. Com for revealing the truth in midst of untruth and fantasy of other media

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...