Homeಮುಖಪುಟಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ

ಬಂಗಾಳದ ಗ್ರಾಮವೊಂದರಲ್ಲಿ ಒಂದೇ ಕುಟುಂಬದ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಮನೆಯೊಳಕ್ಕೆ ಕೂಡಿಹಾಕಿ ಜೀವಂತವಾಗಿ ಸುಟ್ಟು ಹಾಕಲಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳದ ಬಿರ್ಭೂಮ್‌ ಗ್ರಾಮದಲ್ಲಿ 8 ಜನರನ್ನು ಸಜೀವವಾಗಿ ಸುಟ್ಟು ಕೊಂದ ಭೀಭತ್ಸ ಘಟನೆ ನಂತರ ಗ್ರಾಮಕ್ಕೆ ಭೇಟಿ ನೀಡಿರುವ ಸಿಎಂ ಮಮತಾ ಬ್ಯಾನರ್ಜಿ “ಈ ಹತ್ಯಾಕಾಂಡ ಹಿಂದೆ ಬೃಹತ್ ಷಡ್ಯಂತ್ರ ನಡೆದಿದೆ” ಎಂದು ಆರೋಪಿಸಿದ್ದಾರೆ.

ಸಂತ್ರಸ್ತ ಕುಟುಂಬದ ಸಂಬಂಧಿಕರನ್ನು ಭೇಟಿಯಾಗಿ ಐದು ಲಕ್ಷ ರೂ ಪರಿಹಾರ ಚೆಕ್ ವಿತರಿಸಿದ ಅವರು, “ಆಧುನಿಕ ಬಂಗಾಳದಲ್ಲಿ ಇಂತಹ ಬರ್ಭರ ಕೃತ್ಯ ನಡೆಯುತ್ತದೆ ಎಂದು ನಾನು ಊಹಿಸಿರಲಿಲ್ಲ. ತಾಯಂದಿರು ಮತ್ತು ಮಕ್ಕಳು ಕೊಲ್ಲಲ್ಪಟ್ಟಿದ್ದಾರೆ. ನಿಮ್ಮ ಕುಟುಂಬ ಸದಸ್ಯರು ಸುಟ್ಟು ಹೋಗಿದ್ದಾರೆ. ನನ್ನ ಹೃದಯ ಹೊಡೆದುಹೋಗಿದೆ” ಎಂದು ತಿಳಿಸಿದ್ದಾರೆ.

ಪೊಲೀಸರು ಆರೋಪಿಗಳ ವಿರುದ್ಧ ನೇರ ಕ್ರಮ ಕೈಗೊಳ್ಳಬೇಕು. ಅವರು ಶರಣಾಗದಿದ್ದರೆ ಹುಡುಕಿ ಬಂಧಿಸಬೇಕು. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಬೇಕು. ಆರೋಪಿಗಳು ಓಡಿ ಹೋಗಿದ್ದಾರೆ ಎಂದು ಹೇಳಿ ಪ್ರಯೋಜನವಿಲ್ಲ. ಅವರನ್ನು ಹುಡುಕಿ ಶಿಕ್ಷಸಬೇಕು ಮತ್ತು ಘಟನೆಗೆ ಸಂಬಂಧಿಸಿದ ದೂರುಗಳಿಗೆ ಪ್ರತಿಕ್ರಿಯಿಸುವಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸರನ್ನು ಸಹ ಶಿಕ್ಷಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹತ್ಯೆಗೆ ಸಂಬಂಧಿಸಿದಂತೆ ಸ್ಥಳೀಯ ತೃಣಮೂಲ ನಾಯಕ ಅನಾರುಲ್ ಶೇಖ್ ಅವರನ್ನು ಸಹ ಬಂಧಿಸುವಂತೆ ಮಮತಾ ಬ್ಯಾನರ್ಜಿ ಪೊಲೀಸರಿಗೆ ಸೂಚಿಸಿದ್ದಾರೆ. ಅಲ್ಲದೆ ಸಾಕ್ಷಿಗಳಗೆ ಭದ್ರತೆ ಒದಗಿಸುವಂತೆ ಆದೇಶಿಸಿದ್ದಾರೆ.

ಕಚ್ಚಾ ಬಾಂಬ್ ದಾಳಿಯಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಭಾದು ಶೇಖ್ ಹತ್ಯೆಯಾದ ನಂತರ ಪ್ರತೀಕಾರವಾಗಿ ರಾಮ್‌ಪುರಹತ್ ಸಮೀಪದ ಬೊಗ್ಟುಯಿ ಗ್ರಾಮದಲ್ಲಿ ಮಂಗಳವಾರ ಜನಸಮೂಹವೊಂದು ಒಂದೇ ಕುಟುಂಬದ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಮನೆಯೊಳಕ್ಕೆ ಕೂಡಿಹಾಕಿ ಜೀವಂತವಾಗಿ ಸುಟ್ಟು ಹಾಕಲಾಗಿದೆ. ಒಂದು ದಿನದ ನಂತರ ಸುಟ್ಟ ಮೃತದೇಹಗಳು ಪತ್ತೆಯಾಗಿದ್ದು, ಭಾರೀ ಕೋಲಾಹಲಕ್ಕೆ ಕಾರಣವಾಗಿದೆ.

ಘಟನೆಯ ನಂತರ ಅನೇಕ ಗ್ರಾಮಸ್ಥರು ಪ್ರತೀಕಾರ ಅಥವಾ ಬಂಧನಕ್ಕೆ ಹೆದರಿ ಗ್ರಾಮದಿಂದ ಓಡಿಹೋಗಿದ್ದಾರೆ. ಈ ಸಂಬಂಧ ಎರಡು ಎಫ್‌ಐಆರ್ ದಾಖಲಾಗಿದೆ ಎನ್ನಲಾಗಿದೆ.

ಸಂತ್ರಸ್ತ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿರುವ ಅವರು, ಮನೆ ನಿರ್ಮಾಣಕ್ಕೆ 2 ಲಕ್ಷ ಮತ್ತು ಮನೆ ದುರಸ್ಥಿಗೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಬಂಗಾಳ ಪ್ರತಿಪಕ್ಷ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಿದೆ.


ಇದನ್ನೂ ಓದಿ: ಮತೀಯ ಗೂಂಡಾಗಿರಿಯಿಂದ ಮುಸ್ಲಿಮರ ವ್ಯಾಪಾರ ನಿಷೇಧದವರೆಗೆ: ಬೊಮ್ಮಾಯಿ ಸರ್ಕಾರದ ಮತಾಂಧತೆಯ ಹೆಜ್ಜೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...