Homeಕರ್ನಾಟಕಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

ಹಾಸ್ಯಪ್ರಜ್ಞೆಯಿಂದ ಆಡಿದ ಮಾತು; ಅನ್ಯಥಾ ಭಾವಿಸಬೇಡಿ: ಕಣ್ಣನ್ ಸ್ಪಷ್ಟನೆ

‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ’ ಎಂದು ಹಿರೇಮಗಳೂರು ಕಣ್ಣನ್ ಹೇಳಿದ್ದಾರೆ.

- Advertisement -
- Advertisement -

“ಹಾಸ್ಯಪ್ರಜ್ಞೆಯಿಂದ ಆಡಿದ ಮಾತು. ಯಾರೂ ಅನ್ಯಥಾ ಭಾವಿಸಬೇಡಿ” ಎಂದು ಹರಟೆ ಖ್ಯಾತಿಯ ಹಿರೇಮಗಳೂರು ಕಣ್ಣನ್‌ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನ ರಂಗಾಯಣದದ ಬಹುರೂಪಿ ನಾಟಕೋತ್ಸವದಲ್ಲಿ ಹಿಜಾಬ್‌ ಕುರಿತು ಕಣ್ಣನ್‌ ಅವರು ನೀಡಿರುವ ಹೇಳಿಕೆ ವಿವಾದ ಸೃಷ್ಟಿಯಾದ ಬೆನ್ನಲ್ಲೇ ಅವರೀಗ ಸ್ಪಷ್ಟನೆ ನೀಡಿದ್ದಾರೆ.

‘ಮೈಸೂರು ರಂಗಾಯಣದಲ್ಲಿ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮದಲ್ಲಿ ನಾನು ಆಡಿರುವ ಮಾತುಗಳ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ಅವು ಹಾಸ್ಯಪ್ರಜ್ಞೆಯಿಂದ ಹೇಳಿದ ಮಾತುಗಳಷ್ಟೇ ಆಗಿದ್ದು, ಹಾಸ್ಯದ ಗೆರೆ ಮೀರಿದ್ದೇನೆ ಎಂದು ಯಾರಿಗಾದರೂ ಅನ್ನಿಸಿದ್ದಲ್ಲಿ, ಅನ್ಯಥಾ ಭಾವಿಸದಿರಲು ಕೋರುತ್ತೇನೆ’ ಎಂದು ಹಿರೇಮಗಳೂರು ಕಣ್ಣನ್‌ ಹೇಳಿದ್ದಾರೆ.

ಕಣ್ಣನ್‌ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಳಿಕ ಪತ್ರಿಕಾ ಹೇಳಿಕೆ ನೀಡಿದ್ದು, ‘ನಾನು ಪ್ರಾರಂಭದಿಂದಲೂ ಜಾತ್ಯತೀತ ನಿಲುವನ್ನು ಪ್ರತಿಪಾದಿಸಿಕೊಂಡು, ಅನುಸರಿಸಿಕೊಂಡು ಬಂದಿರುವಾತ. ನಿತ್ಯ ಜೀವನದಲ್ಲಿ ಹಾಸ್ಯಪ್ರಜ್ಞೆಯೊಂದಿಗೆ ವಿಚಾರಗಳನ್ನು ಹಂಚಿಕೊಳ್ಳುವ ಪ್ರವೃತ್ತಿಯುಳ್ಳವನು ಎಂಬುದನ್ನು ನನ್ನನ್ನು ಹತ್ತಿರದಿಂದ ಕಂಡವರಿಗೆ ಗೊತ್ತಿರುವ ವಿಚಾರ. ನಾನು ಯಾವಾಗಲೂ ಜಾತಿ, ಧರ್ಮ, ಮತ, ಪಂಥಗಳ ಆಚೆಗೆ ಆಲೋಚಿಸಿ ಬದುಕುತ್ತಿರುವವನು. ಹಾಸ್ಯದ ಧಾಟಿಯಲ್ಲಿ ನಾನಾಡುವ ಮಾತುಗಳಲ್ಲಿ ಯಾವುದೇ ದುರುದ್ದೇಶವಿರುವುದಿಲ್ಲ, ಅದಕ್ಕೆ ನನ್ನ ಬದುಕೇ ಉತ್ತರವಾಗಿದೆ” ಎಂದು ತಿಳಿಸಿದ್ದಾರೆ.

‘ಕನ್ನಡ ಕಾವ್ಯಗಳಲ್ಲಿ ತಾಯಿ’ ವಿಷಯವನ್ನು ಕುರಿತ ನನ್ನ ಭಾಷಣದಲ್ಲಿನ ಅಂಶಗಳನ್ನು ಗಮನಿಸದೇ, ಕೊನೆಯಲ್ಲಿ ಹಾಸ್ಯದ ದೃಷ್ಟಿಯಿಂದ ಗ್ರಾಮ್ಯ ಭಾಷೆಯಲ್ಲಿ ಹೇಳಿದ ಮಾತುಗಳ ಆಧಾರದಲ್ಲಿ ನನ್ನ ವ್ಯಕ್ತಿತ್ವವನ್ನು ನಿರ್ಣಯಿಸಿ, ತಪ್ಪಾಗಿ ಬಿಂಬಿಸುತ್ತಿರುವುದು ಬೇಸರ ತಂದಿದೆ. ಈ ಪದ ಬಳಕೆಯ ಹಿಂದೆ ದುರುದ್ದೇಶವಾಗಲೀ ಬೇರೆಯವರ ಮನಸ್ಸನ್ನೂ ನೋಯಿಸುವ ಇಂಗಿತವಾಗಲೀ ಇರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಏನಿದು ವಿವಾದ?

ಹಿರೇಮಗಳೂರು ಕಣ್ಣನ್ ಅವರು ಬಹುರೂಪಿ ನಾಟಕೋತ್ಸವದಲ್ಲಿ ಮಾತನಾಡುತ್ತಾ ಹಿಜಾಬ್‌ ನಿಷೇಧದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

“ಹಿಜಾಬ್‌ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೀಗಾಗಿ ಶಾಲಾ, ಕಾಲೇಜುಗಳಿಂದ ಹಿಜಾಬ್ ಹೊರಟು ಹೋಗಿದೆ. ವಿದ್ಯಾರ್ಥಿಗಳು ಇನ್ನು ಮುಂದೆ ಶಾಲೆಗೆ ಬರುವಾಗ ‘ಮುಖ’ ಮುಚ್ಕೊಂಡು ಬಾರದೆ ……… ಮುಚ್ಕೊಂಡು ಬರಲಿ. ಮೈಸೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಇಂದು ಮಳೆಯ ಸುಳಿವು ಇಲ್ಲ. ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಬಂದಿದ್ದಾನೆ ಅಂತ ಮಳೆಗೂ ಭಯ. ರಾಜ್ಯದಲ್ಲಿ ಹಿಜಾಬೇ ಹೊರಟು ಹೋಗಿದೆ, ಇನ್ನು ಮಳೆ ಯಾವ ಲೆಕ್ಕ. ಹೀಗಾಗಿ ಇನ್ನು ಮುಂದೆ ಶಾಲೆಗೆ ‘……’ ಮುಚ್ಕೊಂಡು ಬರಬೇಕು. ನನಗೆ ಈ ಮಾತು ಹೇಳಲು ಯಾವುದೇ ಭಯವಿಲ್ಲ. ವೈದ್ಯರ ಬಳಿ ಹೋದಾಗ ಎಲ್ಲ ಬಿಚ್ಚಿ ತೋರಿಸುತ್ತೇವೆ. ಹಾಗಿರುವಾಗ ಈ ವಿಚಾರ ಮಾತನಾಡಲು ಏತಕ್ಕೆ ಭಯ?” ಎಂದು ಕೇಳಿದ್ದರು.


ಇದನ್ನೂ ಓದಿರಿ: ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಿಮ್ಮ ಈ ಒಂದು ನಡೆಯಿಂದಾಗಿ ನಿಮ್ಮ ಙ್ಞಾನದ ಮೇಲಿದ್ದ ಗೌರವ ಸಂಪೂರ್ಣ ನಾಶವಾಗಿಹೋಯಿತು,ನಿಮ್ಮ ನಿಜ ಸ್ವರೂಪ ಬೆತ್ತಲಾಯಿತು,ತಿಪ್ಪೆಸಾರಿಸಿದರು ನಾತ ಕಡಿಮೆಯಾಗದು

  2. ಸಂಬಂಧವಿಲ್ಲದ ತುಚ್ಛ ಪದಗಳನ್ನ ಉಚ್ಚರಿಸಿ , ಹಿಜಾಬ್ ಮಹಿಳೆ ಯರಿಗೆ ಅಪಮಾನ ಮಾಡಿ,
    ನೂವು ಮಾಡಿ …
    ಈಗ ಸಮರ್ಥನೆ ಮಾಡಿಕೊಳ್ಳೂದು ಅಸಭ್ಯ,
    ತಪ್ಪು,..
    ನೃತಿಕವಾಗಿ ಕ್ಷಮೆಯಾಚಿಸ ಬೇಕು.

  3. ಕ್ಷಮೆ ಯಾಚಿಸುವಾಗಲೂ ನಾನು ಹೇಳಿದ್ದು ತಪ್ಪು ಎಂದಿಲ್ಲ. ತಮ್ಮ ಮಾತುಗಳನ್ನು ಕಣ್ಣನ್ ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ವಿಷಯವನ್ನು ಅನಗತ್ಯವಾಗಿ ಎಳೆದು ತಂದಿದ್ದಾರೆ. ವೈದ್ಯರ ಹತ್ತಿರ ಬಿಚ್ಚುತ್ತೇವೆ ಎಂದರೆ ಸಾರ್ವಜನಿಕವಾಗಿ ಬಿಚ್ಚಲು ಸಾಧ್ಯವೇ? ಇದೊಂದು ಉಡಾಫೆಯ ನಡೆ ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಓಲೈಕೆಯಾಗಿದೆ. ತಿದ್ದಿಕೊಳ್ಳಲು ಮುಂದಾಗದೇ ನಾನು ಹೇಳಿದ್ದು ಹಾಗಲ್ಲ ಹೀಗೆ ಎನ್ನುವವನು ನಿಜ ಮನುಷ್ಯನಾಗಲು ಸಾಧ್ಯವಿಲ್ಲ.
    ಈ. ಬಸವರಾಜು

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...