Homeಮುಖಪುಟತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ದುಡ್ಡು ಮಾಡುತ್ತಿರುವಾಗ ನೀವು ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದೀರಿ.. - ಬಿಜೆಪಿ ಶಾಸಕರಿಗೆ ಕೇಜ್ರಿವಾಲ್ ಕಿವಿಮಾತು

- Advertisement -
- Advertisement -

ದೆಹಲಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಬಿಜೆಪಿ ಮುಖಂಡರ ಬೇಡಿಕೆಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ನಿಮಗೆ ನಿಜಕ್ಕೂ ಇಡೀ ದೇಶದ ಜನ ಈ ಸಿನಿಮಾ ನೋಡಬೇಕೆಂದಿದ್ದರೆ ತೆರಿಗೆ ವಿನಾಯಿತಿ ಕೇಳುವುದರ ಬದಲು, ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ” ಎಂದು ಸವಾಲು ಹಾಕಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು, ಶಾಸಕರು ಮತ್ತು ಸಂಸದರು ದೇಶದ ಗಲ್ಲಿ ಗಲ್ಲಿಗಳಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದಾರೆ. ಜನ ನಿಮ್ಮನ್ನು ಆಯ್ಕೆ ಮಾಡಿರುವುದು ಪೋಸ್ಟರ್ ಅಂಟಿಸುವುದಕ್ಕಾಗಿಯೇ? ಇದೇನಾ ನಿಮ್ಮ ರಾಜಕೀಯ? ನೀವು ಮನೆಗೆ ಹೋದಾಗ ನಿಮ್ಮ ಮಕ್ಕಳು ಏನು ಕೆಲಸ ಮಾಡುತ್ತಿದ್ದೀರಿ ಎಂದು ಕೇಳಿದರೆ ಪೋಸ್ಟರ್ ಅಂಟಿಸುತ್ತೇವೆ ಎಂದು ಉತ್ತರಿಸುತ್ತೀರಾ” ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ.

“ಕಾಶ್ಮೀರ್ ಫೈಲ್ಸ್‌ ಗೆ ತೆರಿಗೆ ವಿನಾಯಿತಿ ಕೇಳುತ್ತೀರಿ? ಜನ ಅದನ್ನು ನೋಡಬೇಕು ಅಂತ ನಿಮಗೆ ಇದ್ದರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಹೇಳಿ ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿಸಿ. ಆಗ ಅದು ಪೂರ್ತಿ ಉಚಿತವಾಗಿ ಒಂದೇ ದಿನದಲ್ಲಿ ಇಡೀ ದೇಶದ ಜನ ನೋಡಬಹುದಲ್ಲವೇ, ಆಗ ತೆರಿಗೆ ವಿನಾಯಿತಿಯ ಪ್ರಶ್ನೆಗೆ ಉದ್ಭವಿಸುವುದಿಲ್ಲವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಹರಿಯಾಣದ ಬಿಜೆಪಿ ಶಾಸಕ ಪಾರ್ಕ್ ಒಂದರಲ್ಲಿ ಉಚಿತವಾಗಿ ಕಾಶ್ಮೀರಿ ಫೈಲ್ಸ್ ಸ್ಕ್ರೀನಿಂಗ್ ಆಯೋಜಿಸಿದ್ದರು. ಅದನ್ನು ಖಂಡಿಸಿ ಹರಿಯಾಣದ ಮುಖ್ಯಮಂತ್ರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ವಿವೇಕ್ ಅಗ್ನಿಹೋತ್ರಿ, ಟಿಕೆಟ್ ಪಡೆದು ಸಿನಿಮಾ ನೋಡಲು ಹೇಳಿ, ಉಚಿತವಾಗಿ ಬೇಡ ಎಂದು ಒತ್ತಾಯಿಸಿದ್ದಾರೆ. ಸಹೋದರರೆ ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ಹಣ ಮಾಡುತ್ತಿದ್ದಾರೆ. ಆದರೆ ನಿಮಗೆ ಅದರ ಪೋಸ್ಟರ್ ಹಚ್ಚುವ ಕೆಲಸ ನೀಡುತ್ತಿದ್ದಾರೆ” ಎಂದು ಬಿಜೆಪಿ ಶಾಸಕರನ್ನು ಉದ್ದೇಶಿಸಿ ಕೇಜ್ರಿವಾಲ್ ಮಾತನಾಡಿದ್ದಾರೆ.

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಅವರು ಕೋಟಿ ಕೋಟಿ ದುಡ್ಡು ಮಾಡುತ್ತಿದ್ದಾಗ ನೀವು ಪೋಸ್ಟರ್ ಅಂಟಿಸುತ್ತಿದ್ದೀರಿ. ದಯವಿಟ್ಟು ಕಣ್ಣು ತೆರೆದು ನೋಡಿ ಅರ್ಥಮಾಡಿಕೊಳ್ಳಿ ಎಂದು ಬಿಜೆಪಿ ಶಾಸಕರಲ್ಲಿ ಮನವಿ ಮಾಡಿದ್ದಾರೆ.

8 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ನಂತರವೂ ಮಾನ್ಯ ನರೇಂದ್ರ ಮೋದಿಯವರು ಕಾಶ್ಮೀರಿ ಪಂಡಿತರಿಗಾಗಿ ಏನಾದರೂ ಮಾಡಿ ಎಂದು ವಿವೇಕ್ ಅಗ್ನಿಹೋತ್ರಿ ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಾರೆ ಎಂದರೆ ಅವರು 8 ವರ್ಷ ಏನೂ ಕೆಲಸ ಮಾಡಿಲ್ಲವೆಂಬುದು ಸ್ಪಷ್ಟವಾಗಿದೆ. ಹಾಗಾಗಿ ತಮ್ಮನ್ನು ಉಳಿಸಿ ಎಂದು ಅಗ್ನಿಹೋತ್ರಿ ಕಾಲಿಗೆ ಬೀಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಕೇಜ್ರಿವಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಎರಡು ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಶ್ಮೀರಿ ಪಂಡಿತರಿಗಾಗಿ ಏನನ್ನು ಮಾಡದ ಕೇಂದ್ರ ಸರ್ಕಾರ ಈ ಸಿನಿಮಾದ ಬೆನ್ನಿಗೆ ನಿಂತಿದೆ ಎಂದು ಟೀಕಿಸಿದ್ದಾರೆ. ಅಲ್ಲದೇ ಈ ಸಿನಿಮಾದ ಉದ್ದೇಶ ಕಾಶ್ಮೀರಿ ಪಂಡಿತರಿಗೆ ಸಹಾಯ ಮಾಡುವುದಲ್ಲ ಬದಲಿಗೆ ಅವರ ಹೆಸರಿನಲ್ಲಿ ದುಡ್ಡು ಮಾಡುವುದಾಗಿ ಎಂಬ ಟೀಕೆಗಳು ಕೇಳಿಬಂದಿವೆ.

ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, “ಈ ಹಿಂದೆ ಅರವಿಂದ್ ಕೇಜ್ರಿವಾಲ್ ನಿಲ್ ಬಟ್ಟೆ ಸನ್ನತಾ ಮತ್ತು ಸಾಂಡ್ ಕಿ ಆಂಖ್ ಎಂಬ ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದರು. ಈಗ ಕಾಶ್ಮೀರಿ ಫೈಲ್ಸ್ ಗೆ ತೆರಿಗೆ ವಿನಾಯಿತಿ ನೀಡುವುದಿಲ್ಲ, ಯೂಟ್ಯೂಬ್‌ಗೆ ಹಾಕಿ ಅನ್ನುತ್ತಿದ್ದಾರೆ. ನಾಚಿಕೆಯಾಗಬೇಕು ನಿಮಗೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...