Homeಮುಖಪುಟತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ತೆರಿಗೆ ವಿನಾಯಿತಿ ನೀಡುವುದರ ಬದಲು ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ: ಕಾಶ್ಮೀರ್ ಫೈಲ್ಸ್ ನಿರ್ದೇಶಕನಿಗೆ ಕೇಜ್ರಿವಾಲ್ ಸವಾಲು

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ದುಡ್ಡು ಮಾಡುತ್ತಿರುವಾಗ ನೀವು ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದೀರಿ.. - ಬಿಜೆಪಿ ಶಾಸಕರಿಗೆ ಕೇಜ್ರಿವಾಲ್ ಕಿವಿಮಾತು

- Advertisement -
- Advertisement -

ದೆಹಲಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂಬ ಬಿಜೆಪಿ ಮುಖಂಡರ ಬೇಡಿಕೆಗೆ ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ನಿಮಗೆ ನಿಜಕ್ಕೂ ಇಡೀ ದೇಶದ ಜನ ಈ ಸಿನಿಮಾ ನೋಡಬೇಕೆಂದಿದ್ದರೆ ತೆರಿಗೆ ವಿನಾಯಿತಿ ಕೇಳುವುದರ ಬದಲು, ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿ” ಎಂದು ಸವಾಲು ಹಾಕಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು, ಶಾಸಕರು ಮತ್ತು ಸಂಸದರು ದೇಶದ ಗಲ್ಲಿ ಗಲ್ಲಿಗಳಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪೋಸ್ಟರ್ ಅಂಟಿಸುತ್ತಿದ್ದಾರೆ. ಜನ ನಿಮ್ಮನ್ನು ಆಯ್ಕೆ ಮಾಡಿರುವುದು ಪೋಸ್ಟರ್ ಅಂಟಿಸುವುದಕ್ಕಾಗಿಯೇ? ಇದೇನಾ ನಿಮ್ಮ ರಾಜಕೀಯ? ನೀವು ಮನೆಗೆ ಹೋದಾಗ ನಿಮ್ಮ ಮಕ್ಕಳು ಏನು ಕೆಲಸ ಮಾಡುತ್ತಿದ್ದೀರಿ ಎಂದು ಕೇಳಿದರೆ ಪೋಸ್ಟರ್ ಅಂಟಿಸುತ್ತೇವೆ ಎಂದು ಉತ್ತರಿಸುತ್ತೀರಾ” ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ.

“ಕಾಶ್ಮೀರ್ ಫೈಲ್ಸ್‌ ಗೆ ತೆರಿಗೆ ವಿನಾಯಿತಿ ಕೇಳುತ್ತೀರಿ? ಜನ ಅದನ್ನು ನೋಡಬೇಕು ಅಂತ ನಿಮಗೆ ಇದ್ದರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಹೇಳಿ ಯೂಟ್ಯೂಬ್‌ಗೆ ಅಪ್ಲೋಡ್ ಮಾಡಿಸಿ. ಆಗ ಅದು ಪೂರ್ತಿ ಉಚಿತವಾಗಿ ಒಂದೇ ದಿನದಲ್ಲಿ ಇಡೀ ದೇಶದ ಜನ ನೋಡಬಹುದಲ್ಲವೇ, ಆಗ ತೆರಿಗೆ ವಿನಾಯಿತಿಯ ಪ್ರಶ್ನೆಗೆ ಉದ್ಭವಿಸುವುದಿಲ್ಲವಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಹರಿಯಾಣದ ಬಿಜೆಪಿ ಶಾಸಕ ಪಾರ್ಕ್ ಒಂದರಲ್ಲಿ ಉಚಿತವಾಗಿ ಕಾಶ್ಮೀರಿ ಫೈಲ್ಸ್ ಸ್ಕ್ರೀನಿಂಗ್ ಆಯೋಜಿಸಿದ್ದರು. ಅದನ್ನು ಖಂಡಿಸಿ ಹರಿಯಾಣದ ಮುಖ್ಯಮಂತ್ರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ವಿವೇಕ್ ಅಗ್ನಿಹೋತ್ರಿ, ಟಿಕೆಟ್ ಪಡೆದು ಸಿನಿಮಾ ನೋಡಲು ಹೇಳಿ, ಉಚಿತವಾಗಿ ಬೇಡ ಎಂದು ಒತ್ತಾಯಿಸಿದ್ದಾರೆ. ಸಹೋದರರೆ ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಕೆಲವರು ಕೋಟಿ ಕೋಟಿ ಹಣ ಮಾಡುತ್ತಿದ್ದಾರೆ. ಆದರೆ ನಿಮಗೆ ಅದರ ಪೋಸ್ಟರ್ ಹಚ್ಚುವ ಕೆಲಸ ನೀಡುತ್ತಿದ್ದಾರೆ” ಎಂದು ಬಿಜೆಪಿ ಶಾಸಕರನ್ನು ಉದ್ದೇಶಿಸಿ ಕೇಜ್ರಿವಾಲ್ ಮಾತನಾಡಿದ್ದಾರೆ.

ಕಾಶ್ಮೀರಿ ಪಂಡಿತರ ಹೆಸರಿನಲ್ಲಿ ಅವರು ಕೋಟಿ ಕೋಟಿ ದುಡ್ಡು ಮಾಡುತ್ತಿದ್ದಾಗ ನೀವು ಪೋಸ್ಟರ್ ಅಂಟಿಸುತ್ತಿದ್ದೀರಿ. ದಯವಿಟ್ಟು ಕಣ್ಣು ತೆರೆದು ನೋಡಿ ಅರ್ಥಮಾಡಿಕೊಳ್ಳಿ ಎಂದು ಬಿಜೆಪಿ ಶಾಸಕರಲ್ಲಿ ಮನವಿ ಮಾಡಿದ್ದಾರೆ.

8 ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ನಂತರವೂ ಮಾನ್ಯ ನರೇಂದ್ರ ಮೋದಿಯವರು ಕಾಶ್ಮೀರಿ ಪಂಡಿತರಿಗಾಗಿ ಏನಾದರೂ ಮಾಡಿ ಎಂದು ವಿವೇಕ್ ಅಗ್ನಿಹೋತ್ರಿ ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಾರೆ ಎಂದರೆ ಅವರು 8 ವರ್ಷ ಏನೂ ಕೆಲಸ ಮಾಡಿಲ್ಲವೆಂಬುದು ಸ್ಪಷ್ಟವಾಗಿದೆ. ಹಾಗಾಗಿ ತಮ್ಮನ್ನು ಉಳಿಸಿ ಎಂದು ಅಗ್ನಿಹೋತ್ರಿ ಕಾಲಿಗೆ ಬೀಳಬೇಕಾದ ಪರಿಸ್ಥಿತಿ ಬಂದಿದೆ ಎಂದು ಕೇಜ್ರಿವಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಎರಡು ನಿಮಿಷದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಶ್ಮೀರಿ ಪಂಡಿತರಿಗಾಗಿ ಏನನ್ನು ಮಾಡದ ಕೇಂದ್ರ ಸರ್ಕಾರ ಈ ಸಿನಿಮಾದ ಬೆನ್ನಿಗೆ ನಿಂತಿದೆ ಎಂದು ಟೀಕಿಸಿದ್ದಾರೆ. ಅಲ್ಲದೇ ಈ ಸಿನಿಮಾದ ಉದ್ದೇಶ ಕಾಶ್ಮೀರಿ ಪಂಡಿತರಿಗೆ ಸಹಾಯ ಮಾಡುವುದಲ್ಲ ಬದಲಿಗೆ ಅವರ ಹೆಸರಿನಲ್ಲಿ ದುಡ್ಡು ಮಾಡುವುದಾಗಿ ಎಂಬ ಟೀಕೆಗಳು ಕೇಳಿಬಂದಿವೆ.

ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಬಿ.ಎಲ್ ಸಂತೋಷ್, “ಈ ಹಿಂದೆ ಅರವಿಂದ್ ಕೇಜ್ರಿವಾಲ್ ನಿಲ್ ಬಟ್ಟೆ ಸನ್ನತಾ ಮತ್ತು ಸಾಂಡ್ ಕಿ ಆಂಖ್ ಎಂಬ ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದರು. ಈಗ ಕಾಶ್ಮೀರಿ ಫೈಲ್ಸ್ ಗೆ ತೆರಿಗೆ ವಿನಾಯಿತಿ ನೀಡುವುದಿಲ್ಲ, ಯೂಟ್ಯೂಬ್‌ಗೆ ಹಾಕಿ ಅನ್ನುತ್ತಿದ್ದಾರೆ. ನಾಚಿಕೆಯಾಗಬೇಕು ನಿಮಗೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...