Homeಕರ್ನಾಟಕಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

ಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

- Advertisement -
- Advertisement -

ಸರ್ಕಾರದ ನೂರಾರು ಯೋಜನೆಗಳನ್ನು ಬೀದಿ ನಾಟಕಗಳ ಮೂಲಕ ಜನರಿಗೆ ತಲುಪಿಸುತ್ತಿದ್ದ ಕಲಾವಿದರು ಇಂದು ಬೀದಿ ನಾಟಕ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ. ಬೀದಿ ನಾಟಕಗಳನ್ನು ರಾಜ್ಯ ಸರ್ಕಾರ ಹೊರ ರಾಜ್ಯಗಳ ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದು, ಇದರಿಂದ ತಮ್ಮ ಬದುಕು ಅತಂತ್ರಗೊಂಡಿದೆ ಎಂದು ಆರೋಪಿಸಿ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟ ಇಂದು ಫ್ರೀಡಂ ಪಾರ್ಕ್‌‌ನಲ್ಲಿ ಪ್ರತಿಭಟನೆ ನಡೆಸಿದೆ.

ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರು ತಮ್ಮ ಸಂಕಷ್ಟಗಳನ್ನು ಬೀದಿ ನಾಟಕಗಳ ಮೂಲಕ ಪ್ರಸ್ತುತಪಡಿಸಿ, ಹೋರಾಟದ ಹಾಡುಗಳನ್ನು ಹಾಡುವ ಮೂಲಕವೇ ಪ್ರತಿಭಟನೆ ನಡೆಸಿದ್ದು ವಿಶೇಷವಾಗಿತ್ತು.

ಬೀದಿ ನಾಟಕ ತಂಡಗಳ ರಾಜ್ಯಾಧ್ಯಕ್ಷ ಗ್ಯಾರಂಟಿ ರಾಮಣ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, “ಬೀದಿ ನಾಟಕಕಾರರ ಸಂತತಿ ಬಸವಣ್ಣನ ಕಾಲದಿಂದ ಜಾನಪದ ಸಂಸ್ಕೃತಿಯಂತೆ ತಲೆತಲಾಂತರಗಳನ್ನು ದಾಟಿ ಬಂದಿದೆ. ಕಳೆದ 40 ವರ್ಷಗಳಿಂದ ಸರ್ಕಾರದ ಸಾಕಷ್ಟು ಕಾರ್ಯಕ್ರಮಗಳನ್ನು ಬೀದಿ ನಾಟಕಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದೇವೆ. ಆದರೆ ಸರ್ಕಾರ ಇನ್ನು ಮುಂದೆ ಎಲ್‌ಇಡಿ ಪರದೆಗಳ ಮೂಲಕ ಜಾಗೃತಿ ಮೂಡಿಸುತ್ತೇವೆ ಎನ್ನುವ ಮೂಲಕ ನಮ್ಮನ್ನು ಬೀದಿಗೆ ತಳ್ಳಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಪೋಲಿಯೋ ಲಸಿಕೆ, ಮಕ್ಕಳ ಮಹಿಳೆಯರ ಅಪೌಷ್ಠಿಕತೆ, ಬಾಲ್ಯ ವಿವಾಹ-ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಕಲಿ-ನಲಿ ಅಕ್ಷರ ದಾಸೋಹಾ, ಸಮಾಜ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳಿಂದ ಹಿಡಿದು ಪೊಲೀಸ್‌ ಇಲಾಖೆಯ ಸುರಕ್ಷತಾ ಸಪ್ತಾಹದ ವರೆಗೆ ಸರ್ಕಾರದ ಹತ್ತಾರು ಕಾರ್ಯಕ್ರಮಳನ್ನು ನಾವು ಬೀದಿ ನಾಟಕದ ಮೂಲಕ ಜನರಿಗೆ ತಲುಪಿಸಿದ್ದೇವೆ. ಹಾಡು ಕಟ್ಟಿ ಅಭಿನಯದ ಮೂಲಕ ಜನರನ್ನು ನಗಿಸುವ-ಅಳಿಸುವ ಕಲೆಯ ಜೊತೆಗೆ ಚಿಂತನೆಯ ಓರೆಗೆ ಹಚ್ಚುವ ಕೆಲಸವನ್ನೂ ನಾವು ಮಾಡಿದ್ದೇವೆ. ಈ ವೃತ್ತಿಯಲ್ಲಿರುವವರಿಗೆ ಬೇರೆ ಯಾವುದೇ ಉಪ ಕಸುಬುಗಳಿಲ್ಲ. ಇಲ್ಲಿ ಬರುವ ಆದಾಯವೇ ಬದುಕಿಗೆ ಮೂಲ. ಈಗ ಏಕಾಏಕಿ ನಮ್ಮನ್ನು ಕೈಬಿಟ್ಟರೆ ನಾವೇನು ಮಾಡಬೇಕು” ಎಂದು ಪ್ರಶ್ನಿಸಿದರು.

“ಪ್ರತಿ ಜಿಲ್ಲೆಯಲ್ಲಿ 150-200 ಜನರಂತೆ ಸುಮಾರು 5-6 ಸಾವಿರ ಬೀದಿ ನಾಟಕ ಕಲಾವಿದರಿದ್ದೇವೆ. ಕೊರೊನಾ ಸಂದರ್ಭದಲ್ಲಿ ಸತತ ಒಂದೂವರೆ ವರ್ಷಗಳ ಕಾಲ ಬೀದಿ ನಾಟಕ ಮತ್ತು ಬೇರೆ ಕೆಲಸ ಯಾವುದೂ ಇಲ್ಲದೆ ನಾವು ಸಂಕಷ್ಟಕ್ಕೆ ಒಳಗಾಗಿದ್ದೆವು. ಆಗಲೂ ಸರ್ಕಾರ ಸಹಾಯಹಸ್ತ ಚಾಚಲಿಲ್ಲ. ನಾವು ಐಷರಾಮಿ ಜೀವನ ಕೇಳುತ್ತಿಲ್ಲ. ಸಾಮಾನ್ಯ ಜೀವನ ನಡೆಸಲು ಬೀದಿ ನಾಟಕ ಮಾಡಲು ಅವಕಾಶ ಕೊಡಿ ಎಂದಷ್ಟೆ ಕೇಳುತ್ತಿದ್ದೇವೆ. ಆದರೆ ಈಗ ಏಕಾಏಕಿ ಖಾಸಗಿಯವರಿಗೆ ಟೆಂಡರ್ ಕೊಡುವ ಮೂಲಕ ನಮ್ಮ ಆದಾಯ-ಬದುಕನ್ನೇ ಕಸಿದುಕೊಂಡಿರುವುದು ಅನ್ಯಾಯ” ಎಂದು ರಾಮಣ್ಣ ಕಿಡಿಕಾರಿದರು.

ಸಂಘದ ಗೌರವಾಧ್ಯಕ್ಷ ಪುರುಷೋತ್ತಮಗೌಡ ಮಾತನಾಡಿ, “ಖಾಸಗಿ ಕಂಪೆನಿಗಳು ಎಲ್‌ಇಡಿ ಟಿವಿ ಪರದೆಯಲ್ಲಿ ತೋರಿಸುವ ನಾಟಕಗಳು ಜನರಿಗೆ ಅರ್ಥವೂ ಆಗದು. ಕೇವಲ ಕಮಿಷನ್ ಆಸೆಗಾಗಿ ಇದನ್ನು ಹೊರಗುತ್ತಿಗೆ ನೀಡಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ವಾರ್ತಾ ಮತ್ತು ಸಂಪರ್ಕ ಇಲಾಕೆ ಖಾಸಗಿ ಕಂಪೆನಿಗೆ ನೀಡಿರುವ ಗುತ್ತಿಗೆಯನ್ನು ಹಿಂಪಡೆದು ಬೀದಿ ನಾಟಕಕಾರರಿಗೆ ಬದುಕು ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಾವಣೆಗೆರೆಯ ಹೇಮಂತ್, ತುಮಕೂರಿನ ಮಂಜುನಾಥ್, ಮೈಸೂರಿನ ಸಲ್ಮಾ ಮತ್ತು ಮಂಡ್ಯದ ವೈರಮುಡಿ ಎಚ್.ಪಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...