Homeಕರ್ನಾಟಕಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

ಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

- Advertisement -
- Advertisement -

ಸರ್ಕಾರದ ನೂರಾರು ಯೋಜನೆಗಳನ್ನು ಬೀದಿ ನಾಟಕಗಳ ಮೂಲಕ ಜನರಿಗೆ ತಲುಪಿಸುತ್ತಿದ್ದ ಕಲಾವಿದರು ಇಂದು ಬೀದಿ ನಾಟಕ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ. ಬೀದಿ ನಾಟಕಗಳನ್ನು ರಾಜ್ಯ ಸರ್ಕಾರ ಹೊರ ರಾಜ್ಯಗಳ ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದು, ಇದರಿಂದ ತಮ್ಮ ಬದುಕು ಅತಂತ್ರಗೊಂಡಿದೆ ಎಂದು ಆರೋಪಿಸಿ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟ ಇಂದು ಫ್ರೀಡಂ ಪಾರ್ಕ್‌‌ನಲ್ಲಿ ಪ್ರತಿಭಟನೆ ನಡೆಸಿದೆ.

ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರು ತಮ್ಮ ಸಂಕಷ್ಟಗಳನ್ನು ಬೀದಿ ನಾಟಕಗಳ ಮೂಲಕ ಪ್ರಸ್ತುತಪಡಿಸಿ, ಹೋರಾಟದ ಹಾಡುಗಳನ್ನು ಹಾಡುವ ಮೂಲಕವೇ ಪ್ರತಿಭಟನೆ ನಡೆಸಿದ್ದು ವಿಶೇಷವಾಗಿತ್ತು.

ಬೀದಿ ನಾಟಕ ತಂಡಗಳ ರಾಜ್ಯಾಧ್ಯಕ್ಷ ಗ್ಯಾರಂಟಿ ರಾಮಣ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, “ಬೀದಿ ನಾಟಕಕಾರರ ಸಂತತಿ ಬಸವಣ್ಣನ ಕಾಲದಿಂದ ಜಾನಪದ ಸಂಸ್ಕೃತಿಯಂತೆ ತಲೆತಲಾಂತರಗಳನ್ನು ದಾಟಿ ಬಂದಿದೆ. ಕಳೆದ 40 ವರ್ಷಗಳಿಂದ ಸರ್ಕಾರದ ಸಾಕಷ್ಟು ಕಾರ್ಯಕ್ರಮಗಳನ್ನು ಬೀದಿ ನಾಟಕಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದೇವೆ. ಆದರೆ ಸರ್ಕಾರ ಇನ್ನು ಮುಂದೆ ಎಲ್‌ಇಡಿ ಪರದೆಗಳ ಮೂಲಕ ಜಾಗೃತಿ ಮೂಡಿಸುತ್ತೇವೆ ಎನ್ನುವ ಮೂಲಕ ನಮ್ಮನ್ನು ಬೀದಿಗೆ ತಳ್ಳಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಪೋಲಿಯೋ ಲಸಿಕೆ, ಮಕ್ಕಳ ಮಹಿಳೆಯರ ಅಪೌಷ್ಠಿಕತೆ, ಬಾಲ್ಯ ವಿವಾಹ-ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಕಲಿ-ನಲಿ ಅಕ್ಷರ ದಾಸೋಹಾ, ಸಮಾಜ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳಿಂದ ಹಿಡಿದು ಪೊಲೀಸ್‌ ಇಲಾಖೆಯ ಸುರಕ್ಷತಾ ಸಪ್ತಾಹದ ವರೆಗೆ ಸರ್ಕಾರದ ಹತ್ತಾರು ಕಾರ್ಯಕ್ರಮಳನ್ನು ನಾವು ಬೀದಿ ನಾಟಕದ ಮೂಲಕ ಜನರಿಗೆ ತಲುಪಿಸಿದ್ದೇವೆ. ಹಾಡು ಕಟ್ಟಿ ಅಭಿನಯದ ಮೂಲಕ ಜನರನ್ನು ನಗಿಸುವ-ಅಳಿಸುವ ಕಲೆಯ ಜೊತೆಗೆ ಚಿಂತನೆಯ ಓರೆಗೆ ಹಚ್ಚುವ ಕೆಲಸವನ್ನೂ ನಾವು ಮಾಡಿದ್ದೇವೆ. ಈ ವೃತ್ತಿಯಲ್ಲಿರುವವರಿಗೆ ಬೇರೆ ಯಾವುದೇ ಉಪ ಕಸುಬುಗಳಿಲ್ಲ. ಇಲ್ಲಿ ಬರುವ ಆದಾಯವೇ ಬದುಕಿಗೆ ಮೂಲ. ಈಗ ಏಕಾಏಕಿ ನಮ್ಮನ್ನು ಕೈಬಿಟ್ಟರೆ ನಾವೇನು ಮಾಡಬೇಕು” ಎಂದು ಪ್ರಶ್ನಿಸಿದರು.

“ಪ್ರತಿ ಜಿಲ್ಲೆಯಲ್ಲಿ 150-200 ಜನರಂತೆ ಸುಮಾರು 5-6 ಸಾವಿರ ಬೀದಿ ನಾಟಕ ಕಲಾವಿದರಿದ್ದೇವೆ. ಕೊರೊನಾ ಸಂದರ್ಭದಲ್ಲಿ ಸತತ ಒಂದೂವರೆ ವರ್ಷಗಳ ಕಾಲ ಬೀದಿ ನಾಟಕ ಮತ್ತು ಬೇರೆ ಕೆಲಸ ಯಾವುದೂ ಇಲ್ಲದೆ ನಾವು ಸಂಕಷ್ಟಕ್ಕೆ ಒಳಗಾಗಿದ್ದೆವು. ಆಗಲೂ ಸರ್ಕಾರ ಸಹಾಯಹಸ್ತ ಚಾಚಲಿಲ್ಲ. ನಾವು ಐಷರಾಮಿ ಜೀವನ ಕೇಳುತ್ತಿಲ್ಲ. ಸಾಮಾನ್ಯ ಜೀವನ ನಡೆಸಲು ಬೀದಿ ನಾಟಕ ಮಾಡಲು ಅವಕಾಶ ಕೊಡಿ ಎಂದಷ್ಟೆ ಕೇಳುತ್ತಿದ್ದೇವೆ. ಆದರೆ ಈಗ ಏಕಾಏಕಿ ಖಾಸಗಿಯವರಿಗೆ ಟೆಂಡರ್ ಕೊಡುವ ಮೂಲಕ ನಮ್ಮ ಆದಾಯ-ಬದುಕನ್ನೇ ಕಸಿದುಕೊಂಡಿರುವುದು ಅನ್ಯಾಯ” ಎಂದು ರಾಮಣ್ಣ ಕಿಡಿಕಾರಿದರು.

ಸಂಘದ ಗೌರವಾಧ್ಯಕ್ಷ ಪುರುಷೋತ್ತಮಗೌಡ ಮಾತನಾಡಿ, “ಖಾಸಗಿ ಕಂಪೆನಿಗಳು ಎಲ್‌ಇಡಿ ಟಿವಿ ಪರದೆಯಲ್ಲಿ ತೋರಿಸುವ ನಾಟಕಗಳು ಜನರಿಗೆ ಅರ್ಥವೂ ಆಗದು. ಕೇವಲ ಕಮಿಷನ್ ಆಸೆಗಾಗಿ ಇದನ್ನು ಹೊರಗುತ್ತಿಗೆ ನೀಡಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ವಾರ್ತಾ ಮತ್ತು ಸಂಪರ್ಕ ಇಲಾಕೆ ಖಾಸಗಿ ಕಂಪೆನಿಗೆ ನೀಡಿರುವ ಗುತ್ತಿಗೆಯನ್ನು ಹಿಂಪಡೆದು ಬೀದಿ ನಾಟಕಕಾರರಿಗೆ ಬದುಕು ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಾವಣೆಗೆರೆಯ ಹೇಮಂತ್, ತುಮಕೂರಿನ ಮಂಜುನಾಥ್, ಮೈಸೂರಿನ ಸಲ್ಮಾ ಮತ್ತು ಮಂಡ್ಯದ ವೈರಮುಡಿ ಎಚ್.ಪಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...