Homeಕರ್ನಾಟಕಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

ಬೀದಿ ನಾಟಕದ ಕಲಾವಿದರನ್ನು ಅಕ್ಷರಶಃ ಬೀದಿಗೆ ತಳ್ಳಿದ ಸರ್ಕಾರ: ನಾಟಕದ ಮೂಲಕ ಪ್ರತಿಭಟನೆ

- Advertisement -
- Advertisement -

ಸರ್ಕಾರದ ನೂರಾರು ಯೋಜನೆಗಳನ್ನು ಬೀದಿ ನಾಟಕಗಳ ಮೂಲಕ ಜನರಿಗೆ ತಲುಪಿಸುತ್ತಿದ್ದ ಕಲಾವಿದರು ಇಂದು ಬೀದಿ ನಾಟಕ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ. ಬೀದಿ ನಾಟಕಗಳನ್ನು ರಾಜ್ಯ ಸರ್ಕಾರ ಹೊರ ರಾಜ್ಯಗಳ ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದು, ಇದರಿಂದ ತಮ್ಮ ಬದುಕು ಅತಂತ್ರಗೊಂಡಿದೆ ಎಂದು ಆರೋಪಿಸಿ ರಾಜ್ಯ ಬೀದಿ ನಾಟಕ ಕಲಾತಂಡಗಳ ಒಕ್ಕೂಟ ಇಂದು ಫ್ರೀಡಂ ಪಾರ್ಕ್‌‌ನಲ್ಲಿ ಪ್ರತಿಭಟನೆ ನಡೆಸಿದೆ.

ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರು ತಮ್ಮ ಸಂಕಷ್ಟಗಳನ್ನು ಬೀದಿ ನಾಟಕಗಳ ಮೂಲಕ ಪ್ರಸ್ತುತಪಡಿಸಿ, ಹೋರಾಟದ ಹಾಡುಗಳನ್ನು ಹಾಡುವ ಮೂಲಕವೇ ಪ್ರತಿಭಟನೆ ನಡೆಸಿದ್ದು ವಿಶೇಷವಾಗಿತ್ತು.

ಬೀದಿ ನಾಟಕ ತಂಡಗಳ ರಾಜ್ಯಾಧ್ಯಕ್ಷ ಗ್ಯಾರಂಟಿ ರಾಮಣ್ಣ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, “ಬೀದಿ ನಾಟಕಕಾರರ ಸಂತತಿ ಬಸವಣ್ಣನ ಕಾಲದಿಂದ ಜಾನಪದ ಸಂಸ್ಕೃತಿಯಂತೆ ತಲೆತಲಾಂತರಗಳನ್ನು ದಾಟಿ ಬಂದಿದೆ. ಕಳೆದ 40 ವರ್ಷಗಳಿಂದ ಸರ್ಕಾರದ ಸಾಕಷ್ಟು ಕಾರ್ಯಕ್ರಮಗಳನ್ನು ಬೀದಿ ನಾಟಕಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದೇವೆ. ಆದರೆ ಸರ್ಕಾರ ಇನ್ನು ಮುಂದೆ ಎಲ್‌ಇಡಿ ಪರದೆಗಳ ಮೂಲಕ ಜಾಗೃತಿ ಮೂಡಿಸುತ್ತೇವೆ ಎನ್ನುವ ಮೂಲಕ ನಮ್ಮನ್ನು ಬೀದಿಗೆ ತಳ್ಳಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಪೋಲಿಯೋ ಲಸಿಕೆ, ಮಕ್ಕಳ ಮಹಿಳೆಯರ ಅಪೌಷ್ಠಿಕತೆ, ಬಾಲ್ಯ ವಿವಾಹ-ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಕಲಿ-ನಲಿ ಅಕ್ಷರ ದಾಸೋಹಾ, ಸಮಾಜ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳಿಂದ ಹಿಡಿದು ಪೊಲೀಸ್‌ ಇಲಾಖೆಯ ಸುರಕ್ಷತಾ ಸಪ್ತಾಹದ ವರೆಗೆ ಸರ್ಕಾರದ ಹತ್ತಾರು ಕಾರ್ಯಕ್ರಮಳನ್ನು ನಾವು ಬೀದಿ ನಾಟಕದ ಮೂಲಕ ಜನರಿಗೆ ತಲುಪಿಸಿದ್ದೇವೆ. ಹಾಡು ಕಟ್ಟಿ ಅಭಿನಯದ ಮೂಲಕ ಜನರನ್ನು ನಗಿಸುವ-ಅಳಿಸುವ ಕಲೆಯ ಜೊತೆಗೆ ಚಿಂತನೆಯ ಓರೆಗೆ ಹಚ್ಚುವ ಕೆಲಸವನ್ನೂ ನಾವು ಮಾಡಿದ್ದೇವೆ. ಈ ವೃತ್ತಿಯಲ್ಲಿರುವವರಿಗೆ ಬೇರೆ ಯಾವುದೇ ಉಪ ಕಸುಬುಗಳಿಲ್ಲ. ಇಲ್ಲಿ ಬರುವ ಆದಾಯವೇ ಬದುಕಿಗೆ ಮೂಲ. ಈಗ ಏಕಾಏಕಿ ನಮ್ಮನ್ನು ಕೈಬಿಟ್ಟರೆ ನಾವೇನು ಮಾಡಬೇಕು” ಎಂದು ಪ್ರಶ್ನಿಸಿದರು.

“ಪ್ರತಿ ಜಿಲ್ಲೆಯಲ್ಲಿ 150-200 ಜನರಂತೆ ಸುಮಾರು 5-6 ಸಾವಿರ ಬೀದಿ ನಾಟಕ ಕಲಾವಿದರಿದ್ದೇವೆ. ಕೊರೊನಾ ಸಂದರ್ಭದಲ್ಲಿ ಸತತ ಒಂದೂವರೆ ವರ್ಷಗಳ ಕಾಲ ಬೀದಿ ನಾಟಕ ಮತ್ತು ಬೇರೆ ಕೆಲಸ ಯಾವುದೂ ಇಲ್ಲದೆ ನಾವು ಸಂಕಷ್ಟಕ್ಕೆ ಒಳಗಾಗಿದ್ದೆವು. ಆಗಲೂ ಸರ್ಕಾರ ಸಹಾಯಹಸ್ತ ಚಾಚಲಿಲ್ಲ. ನಾವು ಐಷರಾಮಿ ಜೀವನ ಕೇಳುತ್ತಿಲ್ಲ. ಸಾಮಾನ್ಯ ಜೀವನ ನಡೆಸಲು ಬೀದಿ ನಾಟಕ ಮಾಡಲು ಅವಕಾಶ ಕೊಡಿ ಎಂದಷ್ಟೆ ಕೇಳುತ್ತಿದ್ದೇವೆ. ಆದರೆ ಈಗ ಏಕಾಏಕಿ ಖಾಸಗಿಯವರಿಗೆ ಟೆಂಡರ್ ಕೊಡುವ ಮೂಲಕ ನಮ್ಮ ಆದಾಯ-ಬದುಕನ್ನೇ ಕಸಿದುಕೊಂಡಿರುವುದು ಅನ್ಯಾಯ” ಎಂದು ರಾಮಣ್ಣ ಕಿಡಿಕಾರಿದರು.

ಸಂಘದ ಗೌರವಾಧ್ಯಕ್ಷ ಪುರುಷೋತ್ತಮಗೌಡ ಮಾತನಾಡಿ, “ಖಾಸಗಿ ಕಂಪೆನಿಗಳು ಎಲ್‌ಇಡಿ ಟಿವಿ ಪರದೆಯಲ್ಲಿ ತೋರಿಸುವ ನಾಟಕಗಳು ಜನರಿಗೆ ಅರ್ಥವೂ ಆಗದು. ಕೇವಲ ಕಮಿಷನ್ ಆಸೆಗಾಗಿ ಇದನ್ನು ಹೊರಗುತ್ತಿಗೆ ನೀಡಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ವಾರ್ತಾ ಮತ್ತು ಸಂಪರ್ಕ ಇಲಾಕೆ ಖಾಸಗಿ ಕಂಪೆನಿಗೆ ನೀಡಿರುವ ಗುತ್ತಿಗೆಯನ್ನು ಹಿಂಪಡೆದು ಬೀದಿ ನಾಟಕಕಾರರಿಗೆ ಬದುಕು ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಾವಣೆಗೆರೆಯ ಹೇಮಂತ್, ತುಮಕೂರಿನ ಮಂಜುನಾಥ್, ಮೈಸೂರಿನ ಸಲ್ಮಾ ಮತ್ತು ಮಂಡ್ಯದ ವೈರಮುಡಿ ಎಚ್.ಪಿ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೋಮು ಗಲಭೆಗಳಿಂದ ಭಾರತದಲ್ಲಿ ಸ್ಥಳಾಂತರಗೊಂಡವರ ಕೆಲವು ಫೈಲ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...