Homeಕರ್ನಾಟಕಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆದು, ಬಿ.ಕೆ ಹರಿಪ್ರಸಾದ್, ಪ್ರಕಾಶ್ ರಾಥೋಡ್, ತೇಜಸ್ವಿನಿ ಗೌಡ ಮುಂತಾದವರು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಲಕನನ್ನು ಬೆತ್ತಲುಗೊಳಿಸಿ ಬಣ್ಣ ಸುರಿದು ಚಿತ್ರಹಿಂಸೆ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಾಲಕನ ಮೇಲೆ ದೌರ್ಜನ್ಯವೆಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಕೂಡಲೇ ಜಿಲ್ಲಾ ಪೋಲಿಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಬಹಳ ಹೊತ್ತು ಚರ್ಚೆಯಾಯಿತು. ಸದನದ ಶೂನ್ಯವೇಳೆಯಲ್ಲಿ ಪ್ರಕಾಶ್ ರಾಥೋಡ್ ಪ್ರಶ್ನೆ ಎತ್ತಿದ್ದರೆ, ಅದಕ್ಕೆ ದನಿಗೂಡಿಸಿದ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, “ಸಮರ್ಪಕ ತನಿಖೆ ನಡೆದು ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು. ಆ ಮೂಲಕ ಇಂತಹ ಅಮಾನುಷ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು” ಎಂದರು.

ಸಭಾಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡರವರು ಪ್ರತಿಕ್ರಿಯಿಸಿ, ಇಂತಹ ಅಮಾನವೀಯ ಪ್ರಕರಣಗಳು ನಡೆಯಬಾರದು ಎಂದರು. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಈ ಘಟನೆಯ ಬಗ್ಗೆ ತೀವ್ರ ನೋವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಪ್ರಕರಣದ ವಿವರ 

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಜರುಗಿತ್ತು.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...