Homeಕರ್ನಾಟಕಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆದು, ಬಿ.ಕೆ ಹರಿಪ್ರಸಾದ್, ಪ್ರಕಾಶ್ ರಾಥೋಡ್, ತೇಜಸ್ವಿನಿ ಗೌಡ ಮುಂತಾದವರು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಕ್ಷುಲ್ಲಕ ವಿಷಯಕ್ಕೆ ಬಾಲಕನನ್ನು ಬೆತ್ತಲುಗೊಳಿಸಿ ಬಣ್ಣ ಸುರಿದು ಚಿತ್ರಹಿಂಸೆ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಾಲಕನ ಮೇಲೆ ದೌರ್ಜನ್ಯವೆಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಕೂಡಲೇ ಜಿಲ್ಲಾ ಪೋಲಿಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬಾಲಕನನ್ನು ಅಮಾನವೀಯವಾಗಿ ನಡೆಸಿಕೊಂಡ ವಿಷಯ ಇಂದು ವಿಧಾನ ಪರಿಷತ್‌ನಲ್ಲಿ ಬಹಳ ಹೊತ್ತು ಚರ್ಚೆಯಾಯಿತು. ಸದನದ ಶೂನ್ಯವೇಳೆಯಲ್ಲಿ ಪ್ರಕಾಶ್ ರಾಥೋಡ್ ಪ್ರಶ್ನೆ ಎತ್ತಿದ್ದರೆ, ಅದಕ್ಕೆ ದನಿಗೂಡಿಸಿದ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್, “ಸಮರ್ಪಕ ತನಿಖೆ ನಡೆದು ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು. ಆ ಮೂಲಕ ಇಂತಹ ಅಮಾನುಷ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು” ಎಂದರು.

ಸಭಾಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡರವರು ಪ್ರತಿಕ್ರಿಯಿಸಿ, ಇಂತಹ ಅಮಾನವೀಯ ಪ್ರಕರಣಗಳು ನಡೆಯಬಾರದು ಎಂದರು. ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಈ ಘಟನೆಯ ಬಗ್ಗೆ ತೀವ್ರ ನೋವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಪ್ರಕರಣದ ವಿವರ 

ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಸಮೀಪದ ವಡ್ಡೋಡಗಿ ಗ್ರಾಮದಲ್ಲಿ ಜರುಗಿತ್ತು.

ಘಟನೆಯು ಹೋಳಿ ಹಬ್ಬದ ಮರುದಿನ ಮಾರ್ಚ್‌ 18 ರಂದು ನಡೆದಿತ್ತು. ಆದರೆ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಇದರ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಈ ದೂರನ್ನು ಆಧರಿಸಿ ಆರೋಪಿ ಹಣಮಂತರಾಯನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಹೋಳಿಯ ದಿನದಂದು ಕುರುಬ ಸಮುದಾಯದ ಬಾಲಕನು, ರೆಡ್ಡಿ ಸಮುದಾಯಕ್ಕೆ ಸೇರಿದ್ದ ಹಣಮಂತರಾಯನನ್ನು ಬೈದಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಹಣಮಂತರಾಯ ಬಾಲಕನನ್ನು ಹೋಳಿಯ ಮರುದಿನ ತನ್ನ ಅಂಗಡಿಯ ಮುಂದಿನ ವಿದ್ಯುತ್‌ ಕಂಬಕ್ಕೆ ಕಟ್ಟಿ ಬೆತ್ತಲೆಯಾಗಿಸಿ, ಮೈಗೆ ಮತ್ತು ಗುಪ್ತಾಂಗಕ್ಕೆ ಬಣ್ಣ ಮತ್ತು ಸುಟ್ಟ ಆಯಿಲ್‌ ಅನ್ನು ಎರಚಿ ವಿಕೃತಿ ಮೆರೆದಿದ್ದಲ್ಲದೆ, ಹಲ್ಲೆ ಕೂಡಾ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಹಿಂದ ರೈತ ಸಂಘದ ರಾಜ್ಯಾಧ್ಯಕ್ಷ ಮಲ್ಲಪ್ಪ ಎಸ್‌. ಬಿದರಿ, “ಬಾಲಕನ್ನು ಬಸವನ ಬಾಗೇವಾಡಿ ಸರಕಾರಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತೆಗೆ ದಾಖಲಿಸಲಾಗಿದೆ. ಜಿಲ್ಲಾಡಳಿತವೆ ಹೆಚ್ಚಿನ ಚಿಕಿತ್ಸೆಯ ಎಲ್ಲಾ ವೆಚ್ಚವನ್ನು ಭರಿಸಬೇಕು. ಘಟನೆಯ ಅಘಾತದಿಂದ ಸಂತ್ರಸ್ತ ಬಾಲಕ ಮಾನಸಿಕ ಸ್ಥಿಮಿತ ಕಳೆದುಕೊಂಡು ದುಃಖದಲ್ಲಿದ್ದಾರೆ. ಬಾಲಕನ ತಂದೆ-ತಾಯಿಗೆ ಬೆದರಿಕೆಯು ಬಂದಿದೆ ಎಂದು ತಿಳಿದು ಬಂದಿದ್ದು, ಅವರ ರಕ್ಷಣೆಯನ್ನೂ ಕೂಡಾ ಜಿಲ್ಲಾಡಳಿತ ಮಾಡಬೇಕು. ಅದಕ್ಕಾಗಿ ಸೂಕ್ತ ಕ್ರಮವನ್ನು ಜರುಗಿಸಬೇಕು” ಎಂದು ಹೇಳಿದ್ದಾರೆ.

“ಘಟನೆಯಲ್ಲಿ ಸ್ವತಃ ಪೊಲೀಸರೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು. ಸಂತ್ರಸ್ತ ಬಾಲಕನ ಪೋಷಕರು ಬಡವರಾಗಿದ್ದು, ಬಲಿಷ್ಠ ಸಮುದಾಯದ ವಿರುದ್ದ ಧ್ವನಿ ಎತ್ತಲು ಹೆದರುತ್ತಾರೆ. ಆದರೆ ನಾವು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಂತರ ಪ್ರಕರಣ ದಾಖಲಾಗಿ ಬಂಧನ ಆಗಿದೆ. ಅಲ್ಲಿಯವರೆಗೂ ಯಾರೂ ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಮಲ್ಲಪ್ಪ ಎಸ್‌. ಬಿದರಿ ಹೇಳಿದ್ದಾರೆ.

ಆರೋಪಿಯ ವಿರುದ್ಧ ಇದುವರೆಗೂ ‘ಪೋಕ್ಸೋ’ ದಾಖಲಿಸದ ಪೊಲೀಸರು

ಆರೋಪಿ ಹಣಮಂತರಾಯನ ವಿರುದ್ಧ ಐಪಿಸಿ ಸೆಕ್ಷನ್‌‌ 323, 342, 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಒಬ್ಬ ಆರೋಪಿಯನ್ನು ಬಂದಿಸಿದ್ದೇವೆ ಎಂದು ಬಸವನ ಬಾಗೇವಾಡಿ ಪೊಲೀಸ್ ಸಿಬ್ಬಂದಿಯೊಬ್ಬರು ನಾನುಗೌರಿ.ಕಾಂಗೆ ಹೇಳಿದ್ದಾರೆ. ಆದರೆ ಬಾಲಕನನ್ನು ಬೆತ್ತಲೆ ಮಾಡಿ ವಿಕೃತವಾಗಿ ಹಿಂಸೆ ನೀಡಿರುವುದರ ವಿರುದ್ದ ಪೊಲೀಸರು ‘ಪೋಕ್ಸೋ’ ಅಡಿಯಲ್ಲಿ ಪ್ರಕರಣದ ದಾಖಲಿಸಿಲ್ಲ ಎಂಬುವುದು ಗಮನಾರ್ಹವಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬಸವನ ಬಾಗೆವಾಡಿ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಪಾಟೀಲ್, “ಘಟನೆಯ ಸಂಬಂಧ ಈಗಾಗಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಅಡಿಯಲ್ಲಿ ದಾಖಲಿಸುವ ಬಗ್ಗೆ ನಾವು ಮೇಲಾಧಿಕಾರಿಯ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ. ಲೈಂಗಿಕ ಉದ್ದೇಶ ಇದ್ದರೆ ಮಾತ್ರ ಅದನ್ನು ದಾಖಲಿಸಹುದು ಎಂದು ಹೇಳಲಾಗುತ್ತಿದೆ, ಅದರ ಬಗ್ಗೆ ಗಮನಿಸುತ್ತಿದ್ದೇವೆ. ಒಂದು ವೇಳೆ ಈ ಪ್ರಕರಣದಲ್ಲಿ ಅದು ಒಳಪಟ್ಟಿದ್ದರೆ ಅದನ್ನು ಸೇರಿಸುತ್ತೇವೆ” ಎಂದು ಹೇಳಿದ್ದಾರೆ.

ಪೋಕ್ಸೋ ಕಾಯ್ದೆ-2012ಯು ಲೈಂಗಿಕ ಹಲ್ಲೆ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವರ್ತನೆಗಳಂತಹ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವುದಕ್ಕಾಗಿ, ಮಕ್ಕಳ ಹಿತಾಸಕ್ತಿ ಮತ್ತು ಒಳಿತಿನ ರಕ್ಷಣೆಗಾಗಿ ಜಾರಿಗೆ ತರಲಾಗಿತ್ತು. ಈ ಕಾಯ್ದೆಯು 18 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಯಾವುದೇ ವ್ಯಕ್ತಿಯನ್ನು ಮಗು ಎಂದು ವ್ಯಾಖ್ಯಾನಿಸುತ್ತದೆ. ಮತ್ತು ಆ ಮಗುವಿನ ದೈಹಿಕ ಆರೋಗ್ಯ, ಭಾವನಾತ್ಮಕ, ಭೌದ್ಧಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಪ್ರತೀ ಹಂತದಲ್ಲಿಯೂ ಆದ್ಯತೆ ನೀಡಿ ಖಾತ್ರಿಪಡಿಸುತ್ತದೆ. ಈ ಕಾಯ್ದೆ ಲಿಂಗ ತಟಸ್ತವಾಗಿದೆ. (ಕಾಯ್ದೆಯ ಬಗ್ಗೆ ಪೂರ್ತಿ ಓದಲು ಇಲ್ಲಿ ಕ್ಲಿಕ್ ಮಾಡಿ)

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿಯ ಪ್ರಧಾನ ಕಾರ್ಯದರ್ಶಿ ಮಲ್ಲಿಗೆ ಸಿರಿಮನೆ ಅವರು, “ಪೋಕ್ಸೋ ಕಾಯ್ದೆಯ ಉದ್ದೇಶ ಮಕ್ಕಳ ರಕ್ಷಣೆಯಾಗಿದೆ. ಲೈಂಗಿಕ ಉದ್ದೇಶವೆ ಇರಬೇಕು ಎಂದು ನಿಯಮ ಏನೂ ಇಲ್ಲ. ಲೈಂಗಿಕ ದೌರ್ಜನ್ಯದಿಂದ ರಕ್ಷಣೆ ಎಂಬುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆಯಾದರೂ, ಮಕ್ಕಳ ಸುರಕ್ಷತೆಗೆ ದಕ್ಕೆ ಬಂದರೆ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವಕನ ಹಣೆ ಮೇಲೆ ಆ್ಯಸಿಡ್‌‌ನಿಂದ ‘ತ್ರಿಶೂಲ’, ‘ಓಂ’ ಚಿತ್ರ ಬರೆದು ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...