Homeಮುಖಪುಟಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ಡ್ಯೂ ತನಿಖೆಗೆ ಆದೇಶಿಸಿದ್ದಾರೆ

- Advertisement -
- Advertisement -

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ತನ್ನ 7 ವರ್ಷದ ಮಗಳ ಮೃತದೇಹವನ್ನು ವ್ಯಕ್ತಿಯೊಬ್ಬ 10 ಕಿ.ಮೀ ನಷ್ಟು ಹೊತ್ತೊಯ್ದ ಅಮಾನವೀಯ ಘಟನೆ ಛತ್ತೀಸ್‌ಘಡದಲ್ಲಿ ಜರುಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ಡ್ಯೂ ತನಿಖೆಗೆ ಆದೇಶಿಸಿದ್ದಾರೆ ಎನ್‌ಡಿಟಿವಿ ವರದಿ ಮಾಡಿದೆ

ಛತ್ತೀಸ್‌ಘಡದ ಸುರ್ಗಜ ಜಿಲ್ಲೆಯ ಅಮದಳ ಗ್ರಾಮದ ಈಶ್ವರ್ ದಾಸ್ ಎಂಬುವವರು ಅನಾರೋಗ್ಯಕ್ಕೀಡಾಗಿದ್ದ ತನ್ನ ಮಗಳು ಸುರೇಖಾಳನ್ನು ಲಖನಪುರ್‌ನಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಚಿಕಿತ್ಸೆ ನೀಡಿದರೂ ಸಹ ಬದುಕುಳಿಯಲಿಲ್ಲ. ಆ ನಂತರ ಶವ ಸಾಗಿಸಲು ಆಂಬುಲೆನ್ಸ್ ಸಮಯಕ್ಕೆ ಸರಿಯಾಗಿ ಬಾರದ ಕಾರಣ ತನ್ನ ಮಗಳ ಮೃತದೇಹವನ್ನು ಹೆಗಲು ಮೇಲೆ ಹೊತ್ತುಕೊಂಡೇ ತಮ್ಮ ಸ್ವಗ್ರಾಮ ತಲುಪಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಬೆಳಿಗ್ಗೆ ಬಾಲಕಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವಿನ ಆಕ್ಸಿಜನ್ ಮಟ್ಟ 60ಕ್ಕೆ ಕುಸಿದಿತ್ತು. ಅಗತ್ಯ ಚಿಕಿತ್ಸೆ ನೀಡಲು ಆರಂಭಿಸಿತ್ತಾದರೂ ಆರೋಗ್ಯ ಸ್ಥಿತಿ ಬಿಗಡಾಯಿಸಿ ಮಗು ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ಕೊನೆಯುಸಿರೆಳೆಯಿತು ಎಂದು ಗ್ರಾಮೀಣ ಆರೋಗ್ಯ ಸಹಾಯಕ ಅಧಿಕಾರಿ ಡಾ ವಿನೋದ್ ಭಾರ್ಗವ್ ಹೇಳಿದ್ದಾರೆ.

ಮಗುವಿನ ಕುಟುಂಬಕ್ಕೆ ಸ್ವಲ್ಪ ಸಮಯದಲ್ಲಿ ಶವ ಸಾಗಿಸುವ ವಾಹನ ಬರುತ್ತದೆ ಕಾಯಿರಿ ಎಂದು ಹೇಳಿದೆವು. 9.20ರ ಸಮಯಕ್ಕೆ ವಾಹನ ಬಂತು. ಆದರೆ ಅಷ್ಟರಲ್ಲಿ ಅವರು ಮೃತದೇಹ ತೆಗೆದುಕೊಂಡು ಹೊರಟು ಹೋಗಿದ್ದರು ಎಂದು ಅವರು ಹೇಳಿದ್ದಾರೆ.

ತಂದೆ ತನ್ನ ಮಗಳ ಮೃತದೇಹವನ್ನು ಹೆಗಲ ಮೆಲೆ ಹೊತ್ತುಕೊಂಡು ಹೋಗುವ ವಿಡಿಯೋ ಹರಿದಾಡಿದ ನಂತರ ಹಲವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಗ್ಯ ವ್ಯವಸ್ಥೆ ಇಷ್ಟು ಹದಗೆಟ್ಟಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಂತರ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ಡ್ಯೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

“ನಾನು ಆ ವಿಡಿಯೋ ನೋಡಿದೆ, ಬಹಳ ನೋವಾಯಿತು. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಮತ್ತು ಸೂಕ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಆ ಸಮಯದಲ್ಲಿ ಕರ್ತವ್ಯದಲ್ಲಿ ಇದ್ದವರು ಆದಷ್ಟು ಬೇಗ ಶವ ಸಾಗಿಸುವ ವಾಹನದ ವ್ಯವಸ್ಥೆ ಮಾಡಬೇಕಿತ್ತು. ಆದರೆ ಮಾಡದಿರುವುದು ದುರಾದೃಷ್ಟ. ಕರ್ತವ್ಯ ಲೋಪ ಎಸಗಿದವರನ್ನು ವಜಾಗೊಳಿಸಲಾಗುವುದು” ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದು ಮೊದಲ ಘಟನೆಯಲ್ಲ. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.


ಇದನ್ನೂ ಓದಿ: ಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...