Homeಮುಖಪುಟಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ಡ್ಯೂ ತನಿಖೆಗೆ ಆದೇಶಿಸಿದ್ದಾರೆ

- Advertisement -
- Advertisement -

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ತನ್ನ 7 ವರ್ಷದ ಮಗಳ ಮೃತದೇಹವನ್ನು ವ್ಯಕ್ತಿಯೊಬ್ಬ 10 ಕಿ.ಮೀ ನಷ್ಟು ಹೊತ್ತೊಯ್ದ ಅಮಾನವೀಯ ಘಟನೆ ಛತ್ತೀಸ್‌ಘಡದಲ್ಲಿ ಜರುಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ಡ್ಯೂ ತನಿಖೆಗೆ ಆದೇಶಿಸಿದ್ದಾರೆ ಎನ್‌ಡಿಟಿವಿ ವರದಿ ಮಾಡಿದೆ

ಛತ್ತೀಸ್‌ಘಡದ ಸುರ್ಗಜ ಜಿಲ್ಲೆಯ ಅಮದಳ ಗ್ರಾಮದ ಈಶ್ವರ್ ದಾಸ್ ಎಂಬುವವರು ಅನಾರೋಗ್ಯಕ್ಕೀಡಾಗಿದ್ದ ತನ್ನ ಮಗಳು ಸುರೇಖಾಳನ್ನು ಲಖನಪುರ್‌ನಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಚಿಕಿತ್ಸೆ ನೀಡಿದರೂ ಸಹ ಬದುಕುಳಿಯಲಿಲ್ಲ. ಆ ನಂತರ ಶವ ಸಾಗಿಸಲು ಆಂಬುಲೆನ್ಸ್ ಸಮಯಕ್ಕೆ ಸರಿಯಾಗಿ ಬಾರದ ಕಾರಣ ತನ್ನ ಮಗಳ ಮೃತದೇಹವನ್ನು ಹೆಗಲು ಮೇಲೆ ಹೊತ್ತುಕೊಂಡೇ ತಮ್ಮ ಸ್ವಗ್ರಾಮ ತಲುಪಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಬೆಳಿಗ್ಗೆ ಬಾಲಕಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವಿನ ಆಕ್ಸಿಜನ್ ಮಟ್ಟ 60ಕ್ಕೆ ಕುಸಿದಿತ್ತು. ಅಗತ್ಯ ಚಿಕಿತ್ಸೆ ನೀಡಲು ಆರಂಭಿಸಿತ್ತಾದರೂ ಆರೋಗ್ಯ ಸ್ಥಿತಿ ಬಿಗಡಾಯಿಸಿ ಮಗು ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ಕೊನೆಯುಸಿರೆಳೆಯಿತು ಎಂದು ಗ್ರಾಮೀಣ ಆರೋಗ್ಯ ಸಹಾಯಕ ಅಧಿಕಾರಿ ಡಾ ವಿನೋದ್ ಭಾರ್ಗವ್ ಹೇಳಿದ್ದಾರೆ.

ಮಗುವಿನ ಕುಟುಂಬಕ್ಕೆ ಸ್ವಲ್ಪ ಸಮಯದಲ್ಲಿ ಶವ ಸಾಗಿಸುವ ವಾಹನ ಬರುತ್ತದೆ ಕಾಯಿರಿ ಎಂದು ಹೇಳಿದೆವು. 9.20ರ ಸಮಯಕ್ಕೆ ವಾಹನ ಬಂತು. ಆದರೆ ಅಷ್ಟರಲ್ಲಿ ಅವರು ಮೃತದೇಹ ತೆಗೆದುಕೊಂಡು ಹೊರಟು ಹೋಗಿದ್ದರು ಎಂದು ಅವರು ಹೇಳಿದ್ದಾರೆ.

ತಂದೆ ತನ್ನ ಮಗಳ ಮೃತದೇಹವನ್ನು ಹೆಗಲ ಮೆಲೆ ಹೊತ್ತುಕೊಂಡು ಹೋಗುವ ವಿಡಿಯೋ ಹರಿದಾಡಿದ ನಂತರ ಹಲವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಗ್ಯ ವ್ಯವಸ್ಥೆ ಇಷ್ಟು ಹದಗೆಟ್ಟಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಂತರ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ಡ್ಯೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

“ನಾನು ಆ ವಿಡಿಯೋ ನೋಡಿದೆ, ಬಹಳ ನೋವಾಯಿತು. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಮತ್ತು ಸೂಕ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಆ ಸಮಯದಲ್ಲಿ ಕರ್ತವ್ಯದಲ್ಲಿ ಇದ್ದವರು ಆದಷ್ಟು ಬೇಗ ಶವ ಸಾಗಿಸುವ ವಾಹನದ ವ್ಯವಸ್ಥೆ ಮಾಡಬೇಕಿತ್ತು. ಆದರೆ ಮಾಡದಿರುವುದು ದುರಾದೃಷ್ಟ. ಕರ್ತವ್ಯ ಲೋಪ ಎಸಗಿದವರನ್ನು ವಜಾಗೊಳಿಸಲಾಗುವುದು” ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದು ಮೊದಲ ಘಟನೆಯಲ್ಲ. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.


ಇದನ್ನೂ ಓದಿ: ಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...