Homeಕರ್ನಾಟಕಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ಪ್ರತಿ ಭಾರತೀಯನೂ ನೋಡಬೇಕಾದ ಸಿನಿಮಾವಿದು: ನಟ ಕಿರಣ್‌ ವಿಡಿಯೊಕ್ಕೆ ಜನರು ಫಿದಾ

ವಿಶೇಷ ಸೂಚನೆ: ಈ ವರದಿಯನ್ನು ಪೂರ್ಣ ಓದದೆ ಕಿರಣ್ ಅವರ ಮಾತಿನ ಆಶಯಗಳು ಅರ್ಥವಾಗುವುದಿಲ್ಲ.

- Advertisement -
- Advertisement -

“ಇತ್ತೀಚೆಗೆ ಒಂದು ಸಿನಿಮಾ ಬಹಳ ಚರ್ಚೆಯಲ್ಲಿದೆ. ಆ ಸಿನಿಮಾವನ್ನು ನಾನು ನೋಡಿದೆ. ನನಗೆ ಆ ಸಿನಿಮಾ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಭಾರತೀಯನೂ ನೋಡಬೇಕಾದ ಸಿನಿಮಾವಿದು” ಎಂದು ನಟ, ಕ್ರಿಕೆಟ್‌ ವೀಕ್ಷಕ ವಿವರಣೆಗಾರ ಕಿರಣ್ ಶ್ರೀನಿವಾಸ್‌ ಆಡಿರುವ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ.

ಇತ್ತೀಚಿನ ವಿದ್ಯಮಾನಗಳಿಗೆ ವಿಭಿನ್ನವಾಗಿ ಪ್ರತಿಕ್ರಿಯಿಸಿರುವ ಕಿರಣ್ ಅವರು, ವಿಡಿಯೊ ಮೂಲಕ ಹಲವು ವಿಚಾರಗಳನ್ನು ಹಂಚಿಕೊಂಡು, ಕಡೆಯಲ್ಲೊಂದು ಟ್ವಿಸ್ಟ್‌ ನೀಡಿ ಸಮಾನತೆಯ ಹಕ್ಕನ್ನು ಪ್ರತಿಪಾದಿಸಿದ್ದಾರೆ.

“ಕೆಲವರು ಈ ಸಿನಿಮಾವನ್ನು ಪ್ರೊಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ರಾಜಕೀಯ ಒಳಸಂಚಿನಲ್ಲಿ ಮಾಡಿರುವಂತಹ  ಸಿನಿಮಾ ಎನ್ನುತ್ತಿದ್ದಾರೆ. ಆದರೆ ಆ ಸಿನಿಮಾವನ್ನು ನೋಡಿರುವ ಹಲವಾರು ಜನರು ಇದನ್ನು ಇಷ್ಟಪಟ್ಟಿದ್ದಾರೆ. ಆ ಸಿನಿಮಾದಲ್ಲಿ ಘಟನೆಯನ್ನು ತೋರಿಸಿರುವ ರೀತಿ ಜನರ ಮನಸ್ಸನ್ನು ಮುಟ್ಟಿದೆ. ಹೀಗಾಗಿ ಈ ಸಿನಿಮಾ ಕುರಿತು ಅಷ್ಟೊಂದು ಚರ್ಚಿಸುತ್ತಾ ಇದ್ದಾರೆ, ಮಾತನಾಡುತ್ತಾ ಇದ್ದಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದ್ದಾರೆ.

“ಒಂದು ಸಮುದಾಯ, ಒಂದು ವರ್ಗದ ಜನರ ಜೊತೆ ಯಾವ ರೀತಿ ನಾವು ನಮ್ಮ ಸ್ವಾತಂತ್ರ್ಯ ಭಾರತದಲ್ಲಿ ವರ್ತನೆ ಮಾಡಿದ್ದೇವೆ, ಮಾಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ಮೂಲಕ ಅರ್ಥಮಾಡಿಸಲಾಗಿದೆ. ನಮ್ಮ ಕಣ್ಣ ಮುಂದೆ ಇಡಲಾಗಿದೆ. ಯಾವುದೇ ಒಬ್ಬ ಭಾರತೀಯನಲ್ಲಾದರೂ ಪ್ರಶ್ನೆ ಉಂಟು ಮಾಡುವ ವಿಷಯವಿದು” ಎಂದಿದ್ದಾರೆ.

ಇದನ್ನೂ ಓದಿರಿ: ಹುಸಿ ಕಾಳಜಿಯ, ಪಕ್ಷಪಾತ ಧೋರಣೆಯ, ದ್ವೇಷದ ಅಜೆಂಡಾವುಳ್ಳ ’ದ ಕಾಶ್ಮೀರ್ ಫೈಲ್ಸ್’

“ಬೇರೆ ವರ್ಗದ ಜನರಾಗಬಹುದು, ಬೇರೆ ಸಮುದಾಯದ ಜನರಾಗಿರಬಹುದು ಈ ರೀತಿಯ ಶೋಷಣೆ ಆಗಲಿಕ್ಕೆ ನಾವು ಹೇಗೆ ಬಿಟ್ಟೆವು? ಶೋಷಣೆ ಆಗುತ್ತಿದ್ದರೂ ಇದರ ಬಗ್ಗೆ ಅರಿವು ನಮಗೆ ಹೇಗೆ ಬರಲಿಲ್ಲ? ಆದರೆ ನಂತರವಾದರೂ ಕೂಡ ಇದರ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಲೀ, ತೊಂದರೆ ಅನುಭವಿಸಿದ ಜನರಿಗೆ ನ್ಯಾಯ ಒದಗಿಸಲಿಕ್ಕಾಗಲೀ ಯಾಕೆ ನಾವು ಮುಂದೆ ಬಂದಿಲ್ಲ ಎಂಬ ಪ್ರಶ್ನೆಗಳನ್ನು ಈ ಸಿನಿಮಾ ಹುಟ್ಟುಹಾಕುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನಾನು ಹೇಳೋದಿಷ್ಟೇ. ರಾಜಕೀಯ ಏನೇ ಇರಲೀ, ನಿಮ್ಮ ಪಕ್ಷ ಯಾವುದೇ ಇರಲಿ, ಅದನ್ನೆಲ್ಲ ಬದಿಗಿಟ್ಟು ಈ ಸಿನಿಮಾವನ್ನು ನೋಡಿ. ಈ ಸಿನಿಮಾದಲ್ಲಿ ತೋರಿಸಿರುವ ಜನರ ಕಷ್ಟವನ್ನು ನಾವು ಕೇಳಲೇಬೇಕು. ಕಣ್ಣು ಮುಚ್ಚಿಕೊಂಡು ನಮಗೆ ಗೊತ್ತಿಲ್ಲ ಅನ್ನೋಕೆ, ಕಿವಿಯನ್ನು ಮುಚ್ಚಿಕೊಂಡು ಕೇಳಿಲ್ಲ ಅನ್ನೋಕೆ ಆಗುವುದಿಲ್ಲ. ಸಮಯ ಬಂದಿದೆ. ನಾವೆಲ್ಲರೂ ಭಾರತೀಯರು. ಈ ಸಿನಿಮಾವನ್ನು ಒಂದು ಪಾಯಿಂಟ್‌ ಆಫ್ ವೀವ್‌ ರೀತಿ ನೋಡಬೇಕು. ಈ ರೀತಿಯ ಶೋಷಣೆ ಆಗುವುದಕ್ಕೆ ಆಸ್ಪದ ನೀಡಕೂಡದು” ಎಂದು ಆಗ್ರಹಿಸಿದ್ದಾರೆ.

ಯಾರ್‍ಯಾರಿಗೆ ಶೋಷಣೆ, ಅನ್ಯಾಯವಾಗಿದೆ ಅವರಿಗೆ ನ್ಯಾಯ ದೊರಕಿಸಲೇಬೇಕು ಅನ್ನೋದನ್ನು ನಾವೆಲ್ಲರೂ ಒಪ್ಪಿಕೊಂಡು ಮುಂದೆ ಹೋಗೋಣ ಎಂದಿದ್ದಾರೆ.

“ನಾನು ಯಾವ ಸಿನಿಮಾದ ಬಗ್ಗೆ ಮಾತನಾಡುತ್ತಿರುವುದು ಎಂದು ನಿಮಗೆ ಈಗಾಗಲೇ ಗೊತ್ತಾಗಿರಬಹುದು. ಕನ್‌ಫ್ಯೂಷನ್‌ ಇರದೇ ಇರಲಿ ಅಂತ ಮತ್ತೊಂದು ಆ ಸಿನಿಮಾದ ಹೆಸರನ್ನು ಹೇಳುತ್ತಿದ್ದೇನೆ. ನಾನು ಮಾತನಾಡುತ್ತಿವುದು- ‘ಜೈ ಭೀಮ್’ ಬಗ್ಗೆ. ಅಮೆಜಾನ್ ಫ್ರೈಮ್‌ನಲ್ಲಿದೆ. ಕನ್ನಡ, ತಮಿಳು, ಹಿಂದಿ ಸೇರಿದಂತೆ ಹಲವಾರು ಭಾಷೆಯಲ್ಲಿದೆ. ಪ್ರತಿಯೊಬ್ಬ ಭಾರತೀಯರು ಇದನ್ನು ನೋಡಲೇಬೇಕು” ಎಂದು ಕಿರಣ್ ಒತ್ತಾಯಿಸಿದ್ದಾರೆ.

ನಾವು ಭಾರತೀಯರಾಗಿ ಹೇಗೆ ನಮ್ಮ ದೇಶದವರಿಗೆ ದೌರ್ಜನ್ಯವನ್ನು ಮಾಡಿಕೊಂಡು ಬಂದಿದ್ದೇವೆ, ಮಾಡ್ತಾ ಇದ್ದೀವಿ, ಮುಂದೆ ನಡೆಯುವುದಕ್ಕೆ ಆಸ್ಪದ ನೀಡುತ್ತಿದ್ದೇವೆ ಅನ್ನೋದನ್ನು ಈ ಸಿನಿಮಾ ತಿಳಿಸುತ್ತದೆ. ಪ್ರತಿಯೊಬ್ಬ ಭಾರತೀಯನೂ ಸಮಾಜದಲ್ಲಿ ಸಮಾನತೆಯಿಂದ ಇರುವ ಕನಸನ್ನು ನೆರವೇರಿಸಲಿಕ್ಕೆ ಮುಂದಾಗಬೇಕು. ಈ ವಿಡಿಯೊ ನೋಡಿದಕ್ಕೆ ಧನ್ಯವಾದ- ಜೈ ಕರ್ನಾಟಕ, ಜೈ ಭೀಮ್‌ ಎಂದು ಘೋಷಣೆ ಕೂಗಿ ಮಾತು ಮುಗಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಈ ವಿಡಿಯೊವನ್ನು ಪೂರ್ಣ ವೀಕ್ಷಿಸಿರುವ ಅನೇಕರು ಕಿರಣ್‌ ಶ್ರೀನಿವಾಸ್ ಅವರಿಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ವಾಸ್ತವ ವಿಚಾರಗಳ ಕುರಿತು ಮಾತನಾಡಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ವೆಂಕಟೇಶ್ ಕೆ.ವಿ. ಎಂಬವರು ಕಮೆಂಟ್ ಮಾಡಿದ್ದು, “ಕಾಶ್ಮೀರಿ ಫೈಲ್‌ ಅಂದ್ಕೊಂಡು ನನ್ನೊಳಗಿನ ಭಕ್ತ ಖುಷಿಯಾದ. ಆದರೆ ಪ್ರತಿಯೊಬ್ಬ ಭಾರತೀಯ ನೋಡಲೇಬೇಕಾದ ಚಿತ್ರ ಜೈಭೀಮ್ ಅಂದಮೇಲೆ, ನನ್ನೊಳಗಿನ ಭಾರತೀಯ ಜಾಗೃತನಾದ, ಪ್ರಬುದ್ಧನಾದ” ಎಂದಿದ್ದಾರೆ.

“ನಿಮ್ಮ ಮಾತು ಅಂದರೆ ಅದಕ್ಕೆ ಒಂದು ಘನತೆ, ಗೌರವ ಇದೆ. ಹಾಗಾಗಿ ಪೂರ್ತಿ ಕೇಳಿಯೇ ಬಿಡೋಣ ಅನ್ಕೋಂಡೆ! ಕೇಳಿ ನಿಮ್ಮ ಬಗ್ಗೆ ಗೌರವ ಮತ್ತಷ್ಟು ಹೆಚ್ಚಾಯಿತು” ಎಂದು ಹನೀಫ್‌‌ ಇರ್‍ದೆ ಅಭಿಪ್ರಾಯಪಟ್ಟಿದ್ದಾರೆ.

ಕಮೆಂಟ್ ಮಾಡಿರುವ ಹತ್ತಾರು ಜನರು ಕಿರಣ್ ಅವರಿಗೆ ಜನ್ಮದಿನದ ಶುಭ ಕೋರುವ ಜೊತೆಗೆ ‘ಜೈ ಭೀಮ್‌’ ಹೇಳಿದ್ದಾರೆ. (ಕಿರಣ್‌ ಶ್ರೀನಿವಾಸ್‌ ಅವರ ಫೋಸ್ಟ್‌ ಇಲ್ಲಿ ನೋಡಬಹುದು.)


ಇದನ್ನೂ ಓದಿರಿ: ಸಿನಿಮಾ ವಿಮರ್ಶೆ: ಅತಿ ಭಾವುಕತೆ ಮತ್ತು ಲಾಜಿಕ್ ಕೊರತೆಯ ಅದ್ದೂರಿತನದಲ್ಲಿ ‘RRR…’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...