Homeಕರ್ನಾಟಕಕರ್ನಾಟಕ ಸಿಎಂ ಟ್ವಿಟರ್‌ ಖಾತೆ ಹ್ಯಾಕ್‌; ನೂರಕ್ಕೂ ಅಧಿಕ ಟ್ವೀಟ್‌!

ಕರ್ನಾಟಕ ಸಿಎಂ ಟ್ವಿಟರ್‌ ಖಾತೆ ಹ್ಯಾಕ್‌; ನೂರಕ್ಕೂ ಅಧಿಕ ಟ್ವೀಟ್‌!

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿಯವರ ಅಧಿಕೃತ ಟ್ವಿಟರ್ ಖಾತೆಯಾದ @CMofKarnataka ಕೆಲವು ನಿಮಿಷಗಳ ಕಾಲ ಹ್ಯಾಕ್‌ ಆಗಿರುವ ಅನುಮಾನ ವ್ಯಕ್ತವಾಗಿದೆ. ಕೆಲವೇ ನಿಮಿಷಗಳಲ್ಲಿ ನೂರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.

ಶನಿವಾರ ಬೆಳಿಗ್ಗೆ 6 ಗಂಟೆಯಿಂದ 18 ನಿಮಿಷಗಳ ಕಾಲ ಟ್ವಿಟರ್‌ ಹ್ಯಾಕ್‌ ಆಗಿತ್ತು ಎನ್ನಲಾಗಿದೆ. ಯಾವುದೇ ನಿರ್ದಿಷ್ಟ ವಿಷಯವನ್ನು ಟ್ವೀಟ್ ಮಾಡದಿದ್ದರೂ ಇತ್ತೀಚೆಗೆ ಖಾತೆ ತೆರೆದವರ ಫ್ರೊಪೈಲ್ ಸೇರಿದಂತೆ ಹಲವರನ್ನು ಟ್ಯಾಗ್ ಮಾಡಲಾಗಿತ್ತು.

ಸಿಎಂ ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಸಂಬಂಧ ಟ್ವಿಟರ್ ಬಳಕೆದಾರರು ಅನುಮಾನ ವ್ಯಕ್ತಪಡಿಸಿ, ಟ್ವೀಟ್ ಕೂಡ ಮಾಡಿದ್ದಾರೆ. ಟ್ವೀಟ್ ಹ್ಯಾಕ್‌ ಆಗಿರುವುದು ಅಧಿಕಾರಿಗಳ ಗಮನಕ್ಕೆ ಬಂದ ತಕ್ಷಣ ಕೇವಲ ಮೂರೇ ನಿಮಿಷಗಳಲ್ಲಿ ಎಲ್ಲ ಟ್ವೀಟ್‌ಗಳನ್ನು ಅಳಿಸಿಹಾಕಲಾಗಿದೆ.

 

2021ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆಯನ್ನೂ ಹ್ಯಾಕ್ ಮಾಡಲಾಗಿತ್ತು. ಬಿಟ್ಕಾಯಿನ್ ಸಂಬಂಧಪಟ್ಟ ವಿಷಯಗಳನ್ನು ಟ್ವೀಟ್ ಮಾಡಿದ್ದ ಹ್ಯಾಕರ್ಸ್, ಸರ್ಕಾರವೇ ಅಧಿಕೃತವಾಗಿ ಬಿಟ್ಕಾಯಿನ್‌ಗಳನ್ನು ಖರೀದಿ ಮಾಡಿದೆ ಎಂದು ಟ್ವೀಟ್ ಮಾಡಿದ್ದರು.

ಪ್ರಧಾನಿ ಟ್ವಿಟರ್ ಖಾತೆಯನ್ನು ಮರಳಿ ಪಡೆದ ಬಳಿಕ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದ ಪ್ರಧಾನಮಂತ್ರಿ ಕಾರ್ಯಾಲಯ, ನರೇಂದ್ರ ಮೋದಿಯವರ ವೈಯಕ್ತಿಕ ಟ್ವಿಟರ್ ಖಾತೆ ಕೆಲಕಾಲ ಹ್ಯಾಕ್ ಆಗಿತ್ತು ಎಂದು ತಿಳಿಸಿತ್ತು.

“ಭಾರತವು ಅಧಿಕೃತವಾಗಿ ಬಿಟ್‌ಕಾಯಿನ್ ಅನ್ನು ಕಾನೂನುಬದ್ಧ ಟೆಂಡರ್ ಎಂದು ಸ್ವೀಕರಿಸಿದೆ. ಸರ್ಕಾರವು ಅಧಿಕೃತವಾಗಿ 500 BTC ಅನ್ನು ಖರೀದಿಸಿದೆ ಮತ್ತು ಅವುಗಳನ್ನು ದೇಶದ ಎಲ್ಲಾ ನಿವಾಸಿಗಳಿಗೆ ವಿತರಿಸುತ್ತಿದೆ” ಎಂದು ಹ್ಯಾಕ್‌ ಮಾಡಲಾದಾಗ ಟ್ವೀಟ್ ಮಾಡಲಾಗಿತ್ತು. ಜೊತೆಗೆ, ಸಂಭವನೀಯ ಹಗರಣದ ಲಿಂಕ್ ಅನ್ನು ಸಹ ಲಗತ್ತಿಸಲಾಗಿತ್ತು.

ಟ್ವೀಟ್ ಅನ್ನು ಶೀಘ್ರದಲ್ಲೇ ಅಳಿಸಲಾಗಿದ್ದರೂ #Hacked ಹ್ಯಾಷ್‌ಟ್ಯಾಗ್‌ ತಕ್ಷಣವೇ ಟ್ರೆಂಡ್ ಆಗಿತ್ತು. ಬಳಕೆದಾರರು ಈಗ ಅಳಿಸಲಾದ ಟ್ವೀಟ್‌ನ ಸ್ಕ್ರೀನ್‌ಶಾಟ್‌ನೊಂದಿಗೆ ಟ್ವೀಟ್ ಮಾಡಿದ್ದರು. “ಗುಡ್ ಮಾರ್ನಿಂಗ್ ಮೋದಿ ಜಿ, ಸಬ್ ಚಂಗಾ ಸಿ?” ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಟ್ವೀಟ್ ಮಾಡಿದ್ದರು.


ಇದನ್ನೂ ಓದಿರಿ: ಪ್ರಜಾಪ್ರಭುತ್ವ ದಮನಕ್ಕೆ ಫೇಸ್‌ಬುಕ್‌, ಟ್ವಿಟರ್‌ ಸಾಥ್‌: ಕ್ರಮಕ್ಕೆ ಸೋನಿಯಾ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...