Homeಮುಖಪುಟಹಿಬಾಬ್‌ಗೆ ನಿರಾಕರಣೆ: ಕಾಲೇಜು ಮಂಡಳಿಯ ಕಿರುಕುಳಕ್ಕೆ ಬೇಸತ್ತು ಪ್ರಾಂಶುಪಾಲೆ ರಾಜೀನಾಮೆ

ಹಿಬಾಬ್‌ಗೆ ನಿರಾಕರಣೆ: ಕಾಲೇಜು ಮಂಡಳಿಯ ಕಿರುಕುಳಕ್ಕೆ ಬೇಸತ್ತು ಪ್ರಾಂಶುಪಾಲೆ ರಾಜೀನಾಮೆ

- Advertisement -
- Advertisement -

ಹಿಜಾಬ್‌ ಪ್ರಕರಣ ಕಾಡ್ಗಿಚ್ಚಿನಂತೆ ಅಸಹನೆಯನ್ನು ಸೃಷ್ಟಿಸುತ್ತಿದ್ದು, ಶಿಕ್ಷಕಿಯರನ್ನು ಕಾಡುತ್ತಿರುವ ಬೆಳವಣಿಗೆಗಳಾಗುತ್ತಿವೆ. ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದ ಮುಸ್ಲಿಂ ಪ್ರಾಂಶುಪಾಲೆಯೊಬ್ಬರು ಕಿರುಕುಳ ತಾಳಲಾರದೆ ಮನನೊಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆ ನಡೆದಿದೆ.

ಕಿರುಕುಳ ಧರಿಸಿದ್ದಕ್ಕಾಗಿ ಕಾಲೇಜು ಆಡಳಿತ ಮಂಡಳಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ಕಾನೂನು ಕಾಲೇಜಿನ ಪ್ರಾಂಶುಪಾಲೆ ಬತ್ತುಲ್‌ ಹಮ್ಮಿದ್‌ ರಾಜೀನಾಮೆ ಸಲ್ಲಿಸಿದ್ದಾರೆ. ಹಿಜಾಬ್‌ ಧರಿಸುವ ಉಂಟಾಗಿರುವ ಉಸಿರುಗಟ್ಟಿಸುವ ಭಾವನೆಯಿಂದಾಗಿ ಹುದ್ದೆಯನ್ನು ತೊರೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ.

2019ರ ಜುಲೈನಲ್ಲಿ ವಿರಾರ್​​ನಲ್ಲಿರುವ ವಿವಾ ಕಾನೂನು ಕಾಲೇಜ್​ ಪ್ರಾಂಶುಪಾಲೆಯಾಗಿ ಬತ್ತುಲ್ ಹಮೀದ್​ ನೇಮಕವಾಗಿದ್ದರು.

ತಮ್ಮ ರಾಜೀನಾಮೆ ಪತ್ರದಲ್ಲಿ ಬತ್ತುಲ್‌ ಹಮ್ಮಿದ್‌, “ಹಿಜಾಬ್‌ ಧರಿಸುವುದು ಹಿಂದೆ ಯಾವತ್ತೂ ಸಮಸ್ಯೆಯಾಗಿರಲಿಲ್ಲ. ಆದರೆ ಕರ್ನಾಟಕದಲ್ಲಿ ವಿವಾದದ ಬಳಿಕ ಇದೀಗ ದೊಡ್ಡದಾಗಿ ಪರಿಣಾಮ ಬೀರುತ್ತಿವೆ. ತನ್ನೊಂದಿಗೆ ಸಹಕರಿಸದಂತೆ ಇತರ ಸಿಬ್ಬಂದಿಗೆ ಕಾಲೇಜು ಆಡಳಿತ ಮಂಡಳಿ ಸೂಚನೆ ನೀಡಿದ್ದು, ನಮ್ಮ ಆಪ್ತ ಸಹಾಯಕರು ಕೂಡ ದಿನನಿತ್ಯದ ಕೆಲಸದಲ್ಲಿ ಸಹಾಯ ಮಾಡುತ್ತಿಲ್ಲ” ಆರೋಪಿಸಿದ್ದಾರೆ.

ಆದರೆ ಕಾಲೇಜು ಆಡಳಿತ ಮಂಡಳಿ ಆರೋಪಗಳನ್ನು ತಳ್ಳಿಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಥಾಣೆ ಜಿಲ್ಲೆಯ ಭಿವಂಡಿಯ ಶಾಲೆಯೊಂದರ ಇಬ್ಬರು ಶಿಕ್ಷಕಿಯರನ್ನು ಹಿಜಾಬ್‌ ಧರಿಸಿ ಕೆಲಸಕ್ಕೆ ಬಾರದಂತೆ ತಡೆದಿದ್ದ ಘಟನೆ ಈ ಹಿಂದೆ ವರದಿಯಾಗಿತ್ತು. ಸ್ಥಳೀಯ ಮುಖಂಡರು ಹಾಗೂ ಚುನಾಯಿತ ಪ್ರತಿನಿಧಿಗಳು ಮಧ್ಯಪ್ರವೇಶಿಸಿ ಸರ್ಕಾರದೊಂದಿಗೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿದ್ದರು.

ಇದನ್ನೂ ಓದಿರಿ: ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!

ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅನುಮತಿ ನಿರಾಕರಣೆ ಕುರಿತು ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಿಜಾಬ್ ಧರಿಸಿದರೆ ಎಸ್ಸೆಸೆಲ್ಸಿ ಪರೀಕ್ಷೆಗೆ ಅವಕಾಶವಿಲ್ಲ ಎಂದಿರುವ ಕರ್ನಾಟಕ ರಾಜ್ಯ ಸರಕಾರದ ಆದೇಶದ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ತಂದೆ-ತಾಯಿ ಇರಬಹುದು, ಸರಕಾರ ಇರಬಹುದು ಮಕ್ಕಳ ಶಿಕ್ಷಣದ ಬಗ್ಗೆ ಗಮನಹರಿಸಬೇಕು ಎಂದಿದ್ದಾರೆ.

ಮಕ್ಕಳು ತಪ್ಪು ಮಾಡಬಹುದು, ಅವರಿಗೆ ಹಠ ಇರಬಹುದು. ಹಾಗಂತ ಅವರ ಭವಿಷ್ಯ ಹಾಳಾಗಲು ಉತ್ತೇಜನ ಕೊಡಬಾರದು. ಕೂತುಕೊಂಡು ಅವರತ್ರ ಮಾತಾಡಿ ಮನವೊಲಿಸಬೇಕು. ಧರ್ಮಗುರುಗಳು, ತಂದೆ-ತಾಯಂದಿರು, ಶಿಕ್ಷಕರನ್ನು ಬಳಸಿ, ಅವರಿಗೂ ಮನದಟ್ಟು ಮಾಡಿಕೊಟ್ಟು, ಮಕ್ಕಳಿಗೆ ತಿಳಿ ಹೇಳಿಸಬೇಕು. ಏಕೆಂದರೆ ಮಕ್ಕಳು ಶಿಕ್ಷಕರ ಮಾತನ್ನು ಗೌರವ ಕೊಟ್ಟು ಕೇಳುತ್ತಾರೆ. ತಾಯಿ ಮೊದಲ ಗುರು. ಶಿಕ್ಷಕರು ಎರಡನೇ ಗುರು. ಯಾರ್ಯಾರು ಯಾವ್ಯಾವ ಸಂದರ್ಭದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡಬೇಕು ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ದುಪ್ಪಟ್ಟ ಹಾಕಿಕೊಳ್ಳಲು ಅವಕಾಶ ಕೊಡಿ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರಲ್ಲ ಎಂಬ ಬಗ್ಗೆ ಮಾತನಾಡಿದ ಅವರು, ಸಂವಿಧಾನ ಏನೆಲ್ಲಾ ಹೇಳುತ್ತಾದೋ, ಅಧಿಕಾರ, ಅವಕಾಶ ನೀಡಿದೆಯೋ ಅದರ ಪರವಾಗಿ ಕಾಂಗ್ರೆಸ್ ಇರುತ್ತದೆ. ನಮಗೆ ಅದೇ ಬೈಬಲ್, ಅದೇ ಖುರಾನ್, ಅದೇ ಭಗವದ್ಗೀತೆ. ಇದಕ್ಕಿಂತ ಹೆಚ್ಚಿಗೆ ನಾನೇನೂ ಹೇಳಲಾರೆ ಎಂದು ತಿಳಿಸಿದ್ದಾರೆ.

ಈಗ ಕೋರ್ಟ್ ತೀರ್ಪು ಕೊಟ್ಟಿದೆ. ಕೆಲವರು ಅದನ್ನು ಒಪ್ಪುತ್ತಾರೆ. ಕೆಲವರು ಅದನ್ನು ಒಪ್ಪುವುದಿಲ್ಲ. ಸುಪ್ರೀಂ ಕೋರ್ಟಗೂ ಹೋಗಬಹುದು. ಇವತ್ತಲ್ಲ ನಾಳೆ ಜಡ್ಜ್ಮೆಂಟ್ ಬಂದು ಎಲ್ಲ ಸರಿಯಾಗುತ್ತದೆ. ನ್ಯಾಯಾಲಯದ ತೀರ್ಪು ಸರಿ ಇಲ್ಲ ಅಂತ ನಾನು ಹೇಳೋಕೆ ರೆಡಿ ಇಲ್ಲ. ತೀರ್ಪು ತೀರ್ಪೆ. ಯಾರು ಬೇಕಾದರೂ ಹೋಗಿ ಅವರ ವಿಚಾರವನ್ನು ಮಂಡನೆ ಮಾಡಬಹುದು ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜೀವನ ಪರ್ಯಂತ ಹೀಗೇ ಇದ್ದು ಬಿಡಿ ತಾಯಿ ,ಮತ್ತೇ ಕಾಲೇಜಿಗೆ ಹೋಗಬೇಡಿ ತಾಯಿ ,ಉಡುಪಿ ಹಿಜಾಬ್ ವಿದ್ಯಾರ್ಥಿಗಳಿಗೂ ಹೀಗೇ ಮಾಡಲೂ ಹೇಳಿ ,ನಗರ ನಕ್ಸಲರೇ

  2. Bihind Hijab issue is …there is RSS which well plans Bjp election religious issues , Next year Karnataka elections are there , So from Now only devide Hindu and Muslims . So Muslims please over look any of such issues , take Intelligent decision … Always keep in mind Majahub Nahi sikatha Aapas me bair rakhana..

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...