Homeಕರ್ನಾಟಕಸಾಂವಿಧಾನಿಕ ಜವಾಬ್ದಾರಿ ಮರೆತ ಮಾಧ್ಯಮಗಳು: ಎಚ್‌.ಸಿ.ಮಹದೇವಪ್ಪ ಛಡಿಯೇಟು

ಸಾಂವಿಧಾನಿಕ ಜವಾಬ್ದಾರಿ ಮರೆತ ಮಾಧ್ಯಮಗಳು: ಎಚ್‌.ಸಿ.ಮಹದೇವಪ್ಪ ಛಡಿಯೇಟು

- Advertisement -
- Advertisement -

ತೈಲ ಬೆಲೆ ಏರಿಕೆ ಆದಾಗ ಜನರಿಗೆ ತೊಂದರೆ ಆಗುತ್ತಿದೆ, ಅದರ ಬಗ್ಗೆ ಗಮನ ಹರಿಸಿ ಅದನ್ನು ಬಿಟ್ಟು ಕಾಶ್ಮೀರ ಫೈಲ್ಸು, ಆ ಫೈಲ್ಸು ಈ ಫೈಲ್ಸು ಅಂತೀರಲ್ಲ ಅಂತ ಒಂದು ಗಟ್ಟಿಯಾದ ನಿಲುವು ತೆಗೆದುಕೊಳ್ಳೊವುದಿರಲಿ, ಕನಿಷ್ಠ ಪಕ್ಷ ಆ ಬಗ್ಗೆ ಒಂದು ಪ್ರಶ್ನೆಯನ್ನೂ ಕೇಳದ ಸ್ಥಿತಿಗೆ ಕೆಲವು ಮಾಧ್ಯಮಗಳು ಬಂದು ಬಿಟ್ಟಿವೆ ಎಂದು ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ವಿಷಾದಿಸಿದ್ದಾರೆ.

ಮಾಧ್ಯಮಗಳ ವರ್ತನೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಕಟುವಾಗಿ ಬರೆದಿರುವ ಅವರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಮಾಧ್ಯಮಗಳು ಅನುಸರಿಸಬೇಕಾದ ಸಾಂವಿಧಾನಿಕ ಮೌಲ್ಯಗಳನ್ನು ನೆನಪಿಸಿದ್ದಾರೆ.

“ಇಷ್ಟು ವರ್ಷ ಇಲ್ಲದ ಹಿಜಾಬ್ ಸಮಸ್ಯೆಯನ್ನು ಈಗೇಕೆ ಉಲ್ಬಣಗೊಳಿಸುತ್ತಿದ್ದೀರಿ, ಇದರಿಂದ ಮಕ್ಕಳ ಶಿಕ್ಷಣ ಹಾಳಾಗುತ್ತದೆ, ಶಿಕ್ಷಣ ಪಡೆಯುವ ಸ್ಥಳದ ವಾತಾವರಣ ಕೆಡುತ್ತದೆ ಎಂಬ ತಿಳುವಳಿಕೆಯ ಪರ ಒಬ್ಬರಾದರೂ ನಿಂತರೇ?” ಎಂದು ಪ್ರಶ್ನಿಸಿದ್ದಾರೆ.

ದಿನಕ್ಕಿಷ್ಟು ಎಂಬಂತೆ ದಲಿತರ ಮೇಲೆ ಹಲ್ಲೆ, ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ದಲಿತರ ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು, ಗೊತ್ತಾದ ಪ್ರಕರಣಗಳಲ್ಲಿಯೂ ಅವರಿಗೆ ನ್ಯಾಯ ಸಿಗುವ ಸಾಧ್ಯತೆ ಕಡಿಮೆ ಆಗಿದೆ ಎಂದು ಎನ್‌ಸಿಆರ್‌ಬಿ (ರಾಷ್ಟ್ರೀಯ ಅಪರಾಧ ವರದಿ ಸಂಸ್ಥೆ) ವರದಿ ಹೇಳುತ್ತಿದೆ. ಈ ಬಗ್ಗೆ ಒಬ್ಬರಾದರೂ ಆ ಸತ್ತವರಿಗೆ ಇಲ್ಲವೇ ಹಲ್ಲೆಗೆ ಒಳಗಾದ ದಲಿತರಿಗೆ ನ್ಯಾಯ ಸಿಗುವ ತನಕ ತಮ್ಮ ವೇದಿಕೆಯನ್ನು ಬಳಸಿಕೊಂಡು ಹೋರಾಟ ನಡೆಸಿದ ಉದಾಹರಣೆ ಇದೆಯೇ? ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ಇನ್ನು ಹೊನ್ನಾಳಿಯ ಶಾಸಕ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರವನ್ನೇ ಪಡೆದರೂ ಅದು ಅಸಂವಿಧಾನಿಕ ಎಂದು ಗಟ್ಟಿಯಾಗಿ ಹೇಳುವ ಧೈರ್ಯವನ್ನು ತೋರಲಿಲ್ಲ. ಮೊನ್ನೆ ವಿಧಾನ ಸಭಾ ಸ್ಪೀಕರ್ ಅದ ಕಾಗೇರಿ ಅವರು ತಾವು ಎಂತಹ ಸ್ಥಾನದಲ್ಲಿ ಕೂತಿದ್ದೇವೆ ಎಂಬುದನ್ನು ಮರೆತು ಸದನದ ಸದಸ್ಯರನ್ನು ಎಚ್ಚರಿಸಬೇಕಾದ ಜವಾಬ್ದಾರಿತನ್ನೇ ಮರೆತು “ನಾವು ಆರ್‌ಎಸ್‌ಎಸ್‌ನವರು” ಎಂದು ಬಾಲಿಶವಾಗಿ ಮಾತನಾಡುತ್ತಿದ್ದಾಗ ಅದು ಅಸಂವಿಧಾನಿಕ ನಡೆ, ಓರ್ವ ಸ್ಪೀಕರ್ ಹಾಗೆ ವರ್ತಿಸಬಾರದು ಎಂದು ಒಬ್ಬರಾದರೂ ತಮ್ಮ ಪ್ರತಿರೋಧವು ರಿಜಿಸ್ಟರ್ ಆಗುವಂತೆ ಹೇಳಿದರೇ? ಎಂದು ಪ್ರಶ್ನಿಸಿದ್ದಾರೆ.

ಪುಲ್ವಾಮ ಘಟನೆ ನಡೆದು ಎಷ್ಟು ದಿನವಾಯಿತು? ಮಡಿದ ಸೈನಿಕರ ಸಾವಿಗೆ ಕಾರಣ ಹುಡುಕಿ ಎಂದು ಒಬ್ಬರಾದರೂ ಪಟ್ಟು ಹಿಡಿಯುವ ಧೈರ್ಯ ತೋರಿದರೇ? ಇನ್ನು ಸಮಾಜವಾದಿ ನಾಡಿನ ಸಮಾಜ ವ್ಯಾಧಿ ಎನ್ನಬಹುದಾದ ಶಾಸನಬದ್ಧ ಜನ ಪ್ರತಿನಿಧಿ ಈಶ್ವರಪ್ಪ ಎಂಬಾತ ರಾಷ್ಟ್ರಧ್ವಜದ ಬಗ್ಗೆ ಅಗೌರವ ತೋರಿದಾಗ, ಅದು ಅಸಂವಿಧಾನಿಕ ನಡೆ ಎಂದು ತಾವೇ ಒಂದು ಹೆಜ್ಜೆ ಮುಂದೆ ಹೋಗಿ ಆತನಿಗೆ ತಿಳಿ ಹೇಳಬೇಕಿದ್ದ ಮಾಧ್ಯಮಗಳು “ಸದನದಲ್ಲಿ ರಾಷ್ಟ್ರಧ್ವಜ ಗದ್ದಲ, ಕಾಂಗ್ರೆಸ್ ನಿಂದ ಈಶ್ವರಪ್ಪ ರಾಜೀನಾಮೆಗೆ ಆಗ್ರಹ” ಎಂಬ ಮಾಹಿತಿಯನ್ನಷ್ಟೇ ಪ್ರಸಾರ ಮಾಡುತ್ತಿರುವಾಗ ಇವರಿಗೆ ಸಂವಿಧಾನದ ಕುರಿತು ತಿಳಿವಳಿಕೆ ಮತ್ತು ಗೌರವ ಇಲ್ಲ ಎಂದುಕೊಳ್ಳಬೇಕೋ ಅಥವಾ ಇದೆ ಎಂದುಕೊಳ್ಳಬೇಕೋ? ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೆಲವೊಂದು ಧಾರ್ಮಿಕ ಸಂಘಟನೆಗಳ ವಿಷ ಜಂತುಗಳು ಬೀದಿಯಲ್ಲಿ ನಿಂತು ಬೇರೆ ಧರ್ಮದವರ ಅಂಗಡಿಗಳನ್ನು ತೆರವುಗೊಳಿಸುತ್ತೇವೆ, ಶಸ್ತ್ರ ಹಿಡಿಯಬೇಕು ಎಂದೆಲ್ಲಾ ಮಾತನಾಡುವಾಗ ಅವರು

“ಅನೈತಿಕ ಪೊಲೀಸ್ ಗಿರಿ ಮಾಡುತ್ತಿದ್ದು, ಸಮಾಜದ ಸಾಮರಸ್ಯ ಕೆಡಿಸುತ್ತಿದ್ದಾರೆ, ಸರ್ಕಾರ ಕೂಡಲೇ ಅಂಥವರನ್ನ ಬಂಧಿಸಬೇಕು” ಎಂಬ ಅರಿವನ್ನು ಮೂಡಿಸಲು ಇವರಿಗೆ ಆಗದೇ ಇದ್ದ ಮೇಲೆ ಸಮಾಜಕ್ಕೆ ಇವರ ಅವಶ್ಯಕತೆ ಏನು? ಎಂದು ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ಧರ್ಮ ಯಾವುದು, ಬದುಕಿನ ಕ್ರಮ ಯಾವುದು, ಸಂವಿಧಾನ ಏನು ಹೇಳುತ್ತದೆ? ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವುದಕ್ಕೆ ಪೂರಕವಾಗಿ ನಾವೇನು ಮಾಡಬೇಕು ಎಂದು ತಿಳಿಸಬೇಕಾದ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ಮರೆತು ಇನ್ಯಾವುದೋ ಸಂಗತಿಯಲ್ಲಿ ಮುಳುಗಿರುವುದು ಕಡು ಬೇಸರದ ಸಂಗತಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಎಸ್‌.ಎಲ್‌.ಭೈರಪ್ಪ ಯಾವುದೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರಬಹುದು: ಎಚ್.ಸಿ.ಮಹದೇವಪ್ಪ

ಸರ್ಕಾರವು 40% ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಸ್ವತಃ ಗುತ್ತಿಗೆದಾರರೇ ಹೇಳುತ್ತಿದ್ದರೂ ಆ ಬಗ್ಗೆ ಸೊಲ್ಲೆತ್ತದ ಇವರು ಮುಖ್ಯಮಂತ್ರಿಗಳನ್ನು ಕೇಳಬೇಕಾದ ಬಹಳಷ್ಟು ಪ್ರಶ್ನೆಗಳನ್ನು ವಿಪಕ್ಷೀಯ ನಾಯಕರಿಗೆ ಕೇಳುತ್ತಿದ್ದರೆ ಇವರಿಗೆ ಏನು ಹೇಳೋಣ? ಎಂದು ವ್ಯಂಗ್ಯವಾಡಿದ್ದಾರೆ.

ಸಾಲದು ಎಂಬಂತೆ ಹರ್ಷ ಎಂಬಂತಹ ನಿರುದ್ಯೋಗಿ ಹುಡುಗರ ತಲೆ ಕೆಡಿಸಿ ಅವನನ್ನು ರೌಡಿ ಶೀಟರ್ ಆಗಿಸಿ ಕೊನೆಗೆ ಹಿಂಸಾ ಮಾರ್ಗದಲ್ಲೇ ಬಲಿಯಾಗುವಂತೆ ಮಾಡಿದ ಮಾರ್ಗವು ತಪ್ಪು, ಅದು ಧರ್ಮವಲ್ಲ ಮೂರ್ಖತನ ಎಂದು ಹೇಳಿದ ಒಂದೇ ಒಂದು ಮುಖ್ಯ ವಾಹಿನಿಯ ಮಾಧ್ಯಮಗಳನ್ನು ನಾನು ಕಾಣಲಿಲ್ಲ ಎಂಬುದು ಸತ್ಯ ಎಂದು ತಿಳಿಸಿದ್ದಾರೆ.

ನಾನು ಗಮನಿಸಿದಂತೆ ಮಾಧ್ಯಮ ವಲಯದಲ್ಲಿ ಸಂವಿಧಾನದ ಕುರಿತ ತಿಳಿವಳಿಕೆ ತೀರಾ ಕಡಿಮೆ ಮಟ್ಟದಲ್ಲಿ ಇದೆ. ಹೀಗಾಗಿಯೇ ಅವರಿಗೆ ಸಮಾಜ, ಸರ್ಕಾರ ಮತ್ತು ರಾಜಕೀಯದಲ್ಲಿ ಯಾವುದು ಸಂವಿಧಾನ ಬಾಹಿರ ನಡೆ ಎಂದು ಗುರುತಿಸಲು ಮತ್ತು ಆ ಬಗ್ಗೆ ಧೈರ್ಯದಿಂದ ದನಿ ಎತ್ತಲು ವಿಶ್ವಾಸವು ಸಾಲುತ್ತಿಲ್ಲ ಎಂದು ಅನಿಸುತ್ತಿದೆ ಎಂದು ಹೇಳಿದ್ದಾರೆ.

ಹೀಗಾಗಿ ಇನ್ನು ಮುಂದೆ ನಾವೆಲ್ಲರೂ ಪ್ರಜಾಪ್ರಭುತ್ವದ ಕಾವಲುಗಾರಿಕೆ ಮಾಡುತ್ತಾರೆ ಎಂದು ನಂಬಿರುವ ಮಾಧ್ಯಮಗಳು ತಮ್ಮ ಕಚೇರಿಯಲ್ಲಿ ತಮ್ಮ ಸಿಬ್ಬಂದಿಗಳಿಗೆ ಸಂವಿಧಾನವನ್ನು ತಪ್ಪದೇ ಬೋಧಿಸಲಿ ಎಂದು ವಿನಂತಿಸಿಕೊಳ್ಳುತ್ತೇನೆ. ಸಂವಿಧಾನದ ತಿಳಿವಳಿಕೆ ಇಲ್ಲದೇ, ಪ್ರಜಾಪ್ರಭುತ್ವದಲ್ಲಿ ಅನಾರೋಗ್ಯ ಹೆಚ್ಚಾಗುತ್ತಿದ್ದರೂ ಆ ಕುರಿತು ದನಿ ಮಾಡದ, ಸಂವಿಧಾನಾತ್ಮಕವಾದ ವಾತಾವರಣವನ್ನು ಕಾಪಾಡದ ಮಾಧ್ಯಮಗಳು ಇದ್ದರೆಷ್ಟು ಹೋದರೆಷ್ಟು ಎಂದು ಕಟುವಾಗಿ ಟೀಕಿಸಿದ್ದಾರೆ.

ಇನ್ನು ಕೇವಲ ಮಾಧ್ಯಮ ಅಷ್ಟೇ ಅಲ್ಲದೇ, ಶಾಲೆ ಕಾಲೇಜು, ಧಾರ್ಮಿಕ ಸಂಘಟನೆಗಳು, ಸೇವಾ ಸಂಸ್ಥೆಗಳು, ಕಲಾವಿದರ ಸಂಸ್ಥೆಗಳು, ಉದ್ಯಮಿಗಳು ಮತ್ತು ವ್ಯಾಪಾರಸ್ಥರ ಆದಿಯಾಗಿ ಎಲ್ಲರೂ ಕೂಡಾ ಸಂವಿಧಾನದ ಕುರಿತು ಸಮರ್ಪಕವಾದ ತಿಳಿವಳಿಯನ್ನು ಹೊಂದಬೇಕು, ಆಗಷ್ಟೇ ತಪ್ಪು ಮಾಹಿತಿಯನ್ನು ಹರಡುತ್ತಾ ಸಮಾಜದ ಹಿತ ಕೆಡಿಸುತ್ತಿರುವ ಸಂಗತಿಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ಎಂಬುದು ನನ್ನ ಬಲವಾದ ನಂಬಿಕೆ ಎಂದಿದ್ದಾರೆ.


ಇದನ್ನೂ ಓದಿರಿ: ಕೊರಗರದ್ದು ಇನ್ನೊಂದು ‘ಜೈ ಭೀಮ್‌’ ಕಥೆ ಆಗದಿರಲಿ: ಎಚ್‌.ಸಿ.ಮಹದೇವಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...