Homeಮುಖಪುಟದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

- Advertisement -
- Advertisement -

ಕೆ.ಎಂ.ಕಮಲ್ ನಿರ್ದೇಶಿಸಿದ ಮಲಯಾಳಂ ಚಿತ್ರ ‘ಪಡ’  ನೈಜ ಘಟನೆಗಳನ್ನು ಆಧರಿಸಿದ ಮೂಡಿ ಮಂದಿದೆ. ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡ ಕಥಾ ಹಂದರವನ್ನು ಈ ಸಿನಿಮಾ ಹೊಂದಿದೆ.

“ತಮಿಳು ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ದಮನಿತರ ಭೂಮಿ ಹಕ್ಕು ಕಥನ, ಈಗ ಮಲಯಾಳಂಗೂ ಕಾಲಿಟ್ಟಿದೆ” ಎಂದು ಸಿನಿಮಾ ನಿರ್ದೇಶಕ ಕಮಲ್ ಹೇಳಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರವು ಅಂಗೀಕರಿಸಿದ ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ ನಡೆದಿತ್ತು. ಅನೇಕ ಬುಡಕಟ್ಟು ಜನರು ತಿದ್ದುಪಡಿಯನ್ನು ವಿರೋಧಿಸಿದರು. ಎರಡು ಗಂಟೆಗಳ ಪಡ ಸಿನಿಮಾ ಈ ಕಥಾ ಹಂದರವನ್ನು ಹೊಂದಿದೆ.

ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಮುಖ್ಯಭೂಮಿಯಲ್ಲಿ ನಟಿಸಿರುವ ಈ ಸಿನಿಮಾಕ್ಕೆ ವಿಮರ್ಶಕರಿಂದ ಭಾರೀ ಮೆಚ್ಚುಗೆ ಸಿಕ್ಕಿದೆ. ತುಳಿತಕ್ಕೊಳಗಾದವರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡುವ ಕೆಲವು ಮಲಯಾಳಂ ಚಲನಚಿತ್ರಗಳಲ್ಲಿ ಇದೂ ಒಂದಾಗಿದೆ ಎಂದು ಬಣ್ಣಿಸಲಾಗಿದೆ.

2016ರಲ್ಲಿ ತೆರೆಕಂಡ, ರಾಜೀವ್ ರವಿ ನಿರ್ದೇಶನದ ‘ಕಮ್ಮಟ್ಟಿ ಪಾಡಂ’ ಸಿನಿಮಾ ಕೊಚ್ಚಿಯ ಕೊಳೆಗೇರಿ ಪ್ರದೇಶದಲ್ಲಿ ದಲಿತರು ತಮ್ಮ ಭೂಮಿಯನ್ನು ಕಳೆದುಕೊಂಡಿದ್ದನ್ನು ಹೇಳುತ್ತದೆ. ರಿಯಲ್ ಎಸ್ಟೇಟ್ ಮಾಫಿಯಾಗಳಿಂದಾಗಿ ದಮನಿತರು ಭೂಮಿ ವಂಚಿತರಾಗುವುದನ್ನು ಕಮ್ಮಟ್ಟಿಪಾಡಂ ಚಿತ್ರಿಸಿತ್ತು. ಮಲೆಯಾಳಂ ಚಿತ್ರರಂಗದಲ್ಲಿ ಭೂಮಿ ಹಕ್ಕನ್ನು ಪ್ರತಿಪಾದಿಸುವ ಮತ್ತೊಂದು ಸಿನಿಮಾವಾಗಿ ‘ಪಡ’ ಹೊರಹೊಮ್ಮಿದೆ.

ನೆರೆಯ ತಮಿಳು ಚಿತ್ರರಂಗ ದಮನಿತ ಸಮುದಾಯದ ಪ್ರತಿರೋಧವನ್ನು ದೊಡ್ಡ ಮಟ್ಟದಲ್ಲಿ ತೋರಿಸುತ್ತಿದೆ. ಮಲಯಾಳಂ ಚಿತ್ರರಂಗವು ಈ ವಿಷಯದಲ್ಲಿ ಅಷ್ಟಾಗಿ ಗಮನ ಸೆಳೆದಿಲ್ಲ. ಆದರೆ ತಮಿಳುನಾಡಿನಲ್ಲಿ ದಮನಿತರ ಕಥೆಗಳು ಯಶಸ್ವಿಯಾಗಿವೆ. ರಾಜಕೀಯ ವಿದ್ಯಮಾನವಾಗಿ ಹೊಮ್ಮಿವೆ. ಉದಾಹರಣೆಗೆ ನಿರ್ದೇಶಕ ಪಾ.ರಂಜಿತ್ ಅವರು ಕಾಲಾ (2018) ಚಿತ್ರದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮೂಲಕ ದಲಿತರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ನಟ ಧನುಷ್ ಅಭಿನಯದ ವೆಟ್ರಿಮಾರನ್ ನಿರ್ದೇಶನದ ಅಸುರನ್‌, ಮಾರಿ ಸೆಲ್ವರಾಜ್ ನಿರ್ದೇಶನದ ಕರ್ಣನ್ (2021) ಪ್ರತಿರೋಧದ ಕಥನಗಳನ್ನು ಹೊಂದಿವೆ. ಟಿ.ಜಿ.ಜ್ಞಾನವೇಲ್ ಅವರ ‘ಜೈ ಭೀಮ್’ (2021) ಇರುಳ ಬುಡಕಟ್ಟಿನ ಮಹಿಳೆಯ ಪರವಾಗಿ ನ್ಯಾಯಕ್ಕಾಗಿ ಹೋರಾಡುವ ವಕೀಲರ ಕುರಿತ್ತಾದ್ದಾಗಿದೆ.

‘ದಿ ನ್ಯೂಸ್‌ ಮಿನಿಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಪಡ ನಿರ್ದೇಶಕ ಕಮಲ್, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು. ಆದರೆ ಜಾತಿ ಸಮಸ್ಯೆಯನ್ನು ಸಕ್ರಿಯವಾಗಿ ಒಡೆದುಹಾಕುವಲ್ಲಿ ತಮಿಳು ಚಿತ್ರರಂಗ ಮಾತ್ರ ಯಶಸ್ವಿಯಾಗಿದೆ” ಎಂದಿದ್ದಾರೆ.

ಐತಿಹಾಸಿಕವಾಗಿ, ಆದಿವಾಸಿ ಜನರು ಹಿಂದೂ ಎಂದು ಗುರುತಿಸಿಕೊಳ್ಳಲಿಲ್ಲ. ಆದ್ದರಿಂದ ಹಿಂದೂ ಸಮಾಜದ ಜಾತಿ ರಚನೆಗಳಿಂದ ಹೊರಗಿದ್ದರು. ಆದರೆ ಅವರ ಸಂಸ್ಕೃತಿಯ ಅಳಿವಿನಿಂದಾಗಿ ಅವರು ಜಾತಿ ಪದ್ಧತಿ ಮತ್ತು ಬಹಿಷ್ಕಾರಕ್ಕೆ ಒಳಗಾಗುತ್ತಾರೆ. ಪಡ ಸಿನಿಮಾದ ಒಂದು ಒಂದು ಪಾತ್ರವು ಆದಿವಾಸಿ ಜನರ ಹಕ್ಕುಗಳನ್ನು ನಿರ್ಲಕ್ಷಿಸುವ ‘ಸವರ್ಣ ರಾಜ್ಯ’ವನ್ನು ಪ್ರಶ್ನಿಸುತ್ತದೆ. ಮುಖ್ಯವಾಹಿನಿಯ ಮಲಯಾಳಂ ಚಲನಚಿತ್ರದಲ್ಲಿ ಸರ್ಕಾರವನ್ನು ಹೀಗೆ ವಿವರಿಸಿರುವುದು ಬಹುಶಃ ಇದೇ ಮೊದಲು ಎಂದು ನ್ಯೂಸ್‌ ಮಿನಿಟ್‌ ವರದಿ ಹೇಳುತ್ತದೆ.

ಈ ಘಟನೆ ನಡೆದಾಗ ಪತ್ರಿಕೋದ್ಯಮದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದೆ ಎನ್ನುವ ಕಮಲ್ ಘಟನೆಯನ್ನು ನೆನೆದಿದ್ದಾರೆ. “ಆ ಸಮಯದಲ್ಲಿ, ಕೇರಳದಲ್ಲಿ ಮಿಲಿಟೆಂಟ್ ಕ್ರಮಗಳು ವಿರಳವಾಗಿತ್ತು. ಈ ಘಟನೆಯು ತೀವ್ರತೆಯನ್ನು ಪಡೆದುಕೊಂಡಿತು. ಹಲವಾರು ಗಂಟೆಗಳ ಕಾಲ ಒತ್ತೆ ಇಟ್ಟುಕೊಳ್ಳಲಾಗಿತ್ತು. ನನಗೆ ನೆನಪಿರುವಂತೆ, ರಾಜಕೀಯ ವರ್ಗವು ಈ ವಿಷಯದಲ್ಲಿ ಮೌನವಾಗಿದೆ. ರಾಜಕೀಯ ವರ್ಗ ಈ ಪ್ರಕರಣವನ್ನು ಆಗಿನ ಮುಖ್ಯ ಕಾರ್ಯದರ್ಶಿ ಒಳಗೊಂಡ ಬಿಕ್ಕಟ್ಟು ನಿರ್ವಹಣಾ ತಂಡಕ್ಕೆ ಬಿಟ್ಟು ಜಾರಿಕೊಂಡಿತು. ನಂತರ, ಘಟನೆಯ ಬಗ್ಗೆ ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಮಾಧ್ಯಮಗಳಲ್ಲಿ ಚರ್ಚೆಗಳು ಪ್ರಧಾನವಾಗಿ ನಡೆದಿದ್ದರಿಂದ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲಾ ರಾಜಕೀಯ ನಾಯಕರು ಪ್ರತಿಕ್ರಿಯಿಸಲು ಪ್ರಾರಂಭಿಸಿದರು. ಆದರೆ ಆರೋಪ ಪ್ರತ್ಯಾರೋಪಗಳು ನಡೆದವು. ಅವರು ಕಾನೂನಿನ ಕುರಿತಾಗಲಿ, ಆದಿವಾಸಿಗಳು ಎತ್ತಿರುವ ಪ್ರಶ್ನೆಗಳ ಕುರಿತಾಗಲೀ ಆಸಕ್ತಿ ಹೊಂದಿರಲಿಲ್ಲ” ಎಂದು ನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...