Homeಮುಖಪುಟದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

ದಮನಿತರ ಭೂಮಿ ಹಕ್ಕಿನ ಕಥೆ ‘ಪಡ’: ತಮಿಳು ಚಿತ್ರರಂಗದ ಹಾದಿಯಲ್ಲಿ ‘ಮಲಯಾಳಂ’ ಸಿನಿಮಾ

- Advertisement -
- Advertisement -

ಕೆ.ಎಂ.ಕಮಲ್ ನಿರ್ದೇಶಿಸಿದ ಮಲಯಾಳಂ ಚಿತ್ರ ‘ಪಡ’  ನೈಜ ಘಟನೆಗಳನ್ನು ಆಧರಿಸಿದ ಮೂಡಿ ಮಂದಿದೆ. ಅಕ್ಟೋಬರ್ 4, 1996ರಂದು, ಆಗಿನ ಪಾಲಕ್ಕಾಡ್ ಜಿಲ್ಲಾಧಿಕಾರಿಯಾಗಿದ್ದ ಡಬ್ಲ್ಯುಆರ್ ರೆಡ್ಡಿ ಅವರನ್ನು ನಾಲ್ವರು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಒತ್ತೆಯಾಳಾಗಿ ಇರಿಸಿಕೊಂಡ ಕಥಾ ಹಂದರವನ್ನು ಈ ಸಿನಿಮಾ ಹೊಂದಿದೆ.

“ತಮಿಳು ಚಿತ್ರರಂಗದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ದಮನಿತರ ಭೂಮಿ ಹಕ್ಕು ಕಥನ, ಈಗ ಮಲಯಾಳಂಗೂ ಕಾಲಿಟ್ಟಿದೆ” ಎಂದು ಸಿನಿಮಾ ನಿರ್ದೇಶಕ ಕಮಲ್ ಹೇಳಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’ ಜಾಲತಾಣ ವರದಿ ಮಾಡಿದೆ.

1996ರಲ್ಲಿ ಇ.ಕೆ.ನಾಯನಾರ್ ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್‌ ಫ್ರಂಟ್‌‌ (ಎಲ್‌ಡಿಎಫ್‌) ಸರ್ಕಾರವು ಅಂಗೀಕರಿಸಿದ ಆದಿವಾಸಿ ಭೂ ಕಾಯಿದೆ 1975ರ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂಬ ಹೋರಾಟ ನಡೆದಿತ್ತು. ಅನೇಕ ಬುಡಕಟ್ಟು ಜನರು ತಿದ್ದುಪಡಿಯನ್ನು ವಿರೋಧಿಸಿದರು. ಎರಡು ಗಂಟೆಗಳ ಪಡ ಸಿನಿಮಾ ಈ ಕಥಾ ಹಂದರವನ್ನು ಹೊಂದಿದೆ.

ಕುಂಚಾಕೊ ಬೋಬನ್, ವಿನಾಯಕನ್, ದಿಲೀಶ್ ಪೋತನ್ ಮತ್ತು ಜೋಜು ಜಾರ್ಜ್ ಮುಖ್ಯಭೂಮಿಯಲ್ಲಿ ನಟಿಸಿರುವ ಈ ಸಿನಿಮಾಕ್ಕೆ ವಿಮರ್ಶಕರಿಂದ ಭಾರೀ ಮೆಚ್ಚುಗೆ ಸಿಕ್ಕಿದೆ. ತುಳಿತಕ್ಕೊಳಗಾದವರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡುವ ಕೆಲವು ಮಲಯಾಳಂ ಚಲನಚಿತ್ರಗಳಲ್ಲಿ ಇದೂ ಒಂದಾಗಿದೆ ಎಂದು ಬಣ್ಣಿಸಲಾಗಿದೆ.

2016ರಲ್ಲಿ ತೆರೆಕಂಡ, ರಾಜೀವ್ ರವಿ ನಿರ್ದೇಶನದ ‘ಕಮ್ಮಟ್ಟಿ ಪಾಡಂ’ ಸಿನಿಮಾ ಕೊಚ್ಚಿಯ ಕೊಳೆಗೇರಿ ಪ್ರದೇಶದಲ್ಲಿ ದಲಿತರು ತಮ್ಮ ಭೂಮಿಯನ್ನು ಕಳೆದುಕೊಂಡಿದ್ದನ್ನು ಹೇಳುತ್ತದೆ. ರಿಯಲ್ ಎಸ್ಟೇಟ್ ಮಾಫಿಯಾಗಳಿಂದಾಗಿ ದಮನಿತರು ಭೂಮಿ ವಂಚಿತರಾಗುವುದನ್ನು ಕಮ್ಮಟ್ಟಿಪಾಡಂ ಚಿತ್ರಿಸಿತ್ತು. ಮಲೆಯಾಳಂ ಚಿತ್ರರಂಗದಲ್ಲಿ ಭೂಮಿ ಹಕ್ಕನ್ನು ಪ್ರತಿಪಾದಿಸುವ ಮತ್ತೊಂದು ಸಿನಿಮಾವಾಗಿ ‘ಪಡ’ ಹೊರಹೊಮ್ಮಿದೆ.

ನೆರೆಯ ತಮಿಳು ಚಿತ್ರರಂಗ ದಮನಿತ ಸಮುದಾಯದ ಪ್ರತಿರೋಧವನ್ನು ದೊಡ್ಡ ಮಟ್ಟದಲ್ಲಿ ತೋರಿಸುತ್ತಿದೆ. ಮಲಯಾಳಂ ಚಿತ್ರರಂಗವು ಈ ವಿಷಯದಲ್ಲಿ ಅಷ್ಟಾಗಿ ಗಮನ ಸೆಳೆದಿಲ್ಲ. ಆದರೆ ತಮಿಳುನಾಡಿನಲ್ಲಿ ದಮನಿತರ ಕಥೆಗಳು ಯಶಸ್ವಿಯಾಗಿವೆ. ರಾಜಕೀಯ ವಿದ್ಯಮಾನವಾಗಿ ಹೊಮ್ಮಿವೆ. ಉದಾಹರಣೆಗೆ ನಿರ್ದೇಶಕ ಪಾ.ರಂಜಿತ್ ಅವರು ಕಾಲಾ (2018) ಚಿತ್ರದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರ ಮೂಲಕ ದಲಿತರ ಭೂಮಿಯ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ನಟ ಧನುಷ್ ಅಭಿನಯದ ವೆಟ್ರಿಮಾರನ್ ನಿರ್ದೇಶನದ ಅಸುರನ್‌, ಮಾರಿ ಸೆಲ್ವರಾಜ್ ನಿರ್ದೇಶನದ ಕರ್ಣನ್ (2021) ಪ್ರತಿರೋಧದ ಕಥನಗಳನ್ನು ಹೊಂದಿವೆ. ಟಿ.ಜಿ.ಜ್ಞಾನವೇಲ್ ಅವರ ‘ಜೈ ಭೀಮ್’ (2021) ಇರುಳ ಬುಡಕಟ್ಟಿನ ಮಹಿಳೆಯ ಪರವಾಗಿ ನ್ಯಾಯಕ್ಕಾಗಿ ಹೋರಾಡುವ ವಕೀಲರ ಕುರಿತ್ತಾದ್ದಾಗಿದೆ.

‘ದಿ ನ್ಯೂಸ್‌ ಮಿನಿಟ್‌’ ಜಾಲತಾಣದೊಂದಿಗೆ ಮಾತನಾಡಿರುವ ಪಡ ನಿರ್ದೇಶಕ ಕಮಲ್, “ಮಲಯಾಳಂ ಚಿತ್ರರಂಗವು ಯಾವಾಗಲೂ ಜಾತಿಯ ಬಗ್ಗೆ ಮಾತನಾಡುವುದರಿಂದ ದೂರವಿರುತ್ತದೆ. ವರ್ಗ ವ್ಯತ್ಯಾಸಗಳು ಸಾಮಾನ್ಯವಾಗಿ ಸಿನಿಮಾ, ರಂಗಭೂಮಿ ಮತ್ತು ಸಂಗೀತದಲ್ಲಿ ಪ್ರತಿಫಲಿಸುತ್ತದೆ. ಆದರೆ ಸಮಾಜದಲ್ಲಿನ ಅಧಿಕಾರ ರಚನೆಗಳನ್ನು ವ್ಯಾಖ್ಯಾನಿಸುವ ಜಾತಿಯ ವಿಷಯಕ್ಕೆ ಬಂದರೆ, ಮಲಯಾಳಂ ಚಿತ್ರರಂಗ ಈ ವಿಷಯದಿಂದ ವಿಮುಖವಾಗಿತ್ತು. ಆದರೆ ಜಾತಿ ಸಮಸ್ಯೆಯನ್ನು ಸಕ್ರಿಯವಾಗಿ ಒಡೆದುಹಾಕುವಲ್ಲಿ ತಮಿಳು ಚಿತ್ರರಂಗ ಮಾತ್ರ ಯಶಸ್ವಿಯಾಗಿದೆ” ಎಂದಿದ್ದಾರೆ.

ಐತಿಹಾಸಿಕವಾಗಿ, ಆದಿವಾಸಿ ಜನರು ಹಿಂದೂ ಎಂದು ಗುರುತಿಸಿಕೊಳ್ಳಲಿಲ್ಲ. ಆದ್ದರಿಂದ ಹಿಂದೂ ಸಮಾಜದ ಜಾತಿ ರಚನೆಗಳಿಂದ ಹೊರಗಿದ್ದರು. ಆದರೆ ಅವರ ಸಂಸ್ಕೃತಿಯ ಅಳಿವಿನಿಂದಾಗಿ ಅವರು ಜಾತಿ ಪದ್ಧತಿ ಮತ್ತು ಬಹಿಷ್ಕಾರಕ್ಕೆ ಒಳಗಾಗುತ್ತಾರೆ. ಪಡ ಸಿನಿಮಾದ ಒಂದು ಒಂದು ಪಾತ್ರವು ಆದಿವಾಸಿ ಜನರ ಹಕ್ಕುಗಳನ್ನು ನಿರ್ಲಕ್ಷಿಸುವ ‘ಸವರ್ಣ ರಾಜ್ಯ’ವನ್ನು ಪ್ರಶ್ನಿಸುತ್ತದೆ. ಮುಖ್ಯವಾಹಿನಿಯ ಮಲಯಾಳಂ ಚಲನಚಿತ್ರದಲ್ಲಿ ಸರ್ಕಾರವನ್ನು ಹೀಗೆ ವಿವರಿಸಿರುವುದು ಬಹುಶಃ ಇದೇ ಮೊದಲು ಎಂದು ನ್ಯೂಸ್‌ ಮಿನಿಟ್‌ ವರದಿ ಹೇಳುತ್ತದೆ.

ಈ ಘಟನೆ ನಡೆದಾಗ ಪತ್ರಿಕೋದ್ಯಮದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದೆ ಎನ್ನುವ ಕಮಲ್ ಘಟನೆಯನ್ನು ನೆನೆದಿದ್ದಾರೆ. “ಆ ಸಮಯದಲ್ಲಿ, ಕೇರಳದಲ್ಲಿ ಮಿಲಿಟೆಂಟ್ ಕ್ರಮಗಳು ವಿರಳವಾಗಿತ್ತು. ಈ ಘಟನೆಯು ತೀವ್ರತೆಯನ್ನು ಪಡೆದುಕೊಂಡಿತು. ಹಲವಾರು ಗಂಟೆಗಳ ಕಾಲ ಒತ್ತೆ ಇಟ್ಟುಕೊಳ್ಳಲಾಗಿತ್ತು. ನನಗೆ ನೆನಪಿರುವಂತೆ, ರಾಜಕೀಯ ವರ್ಗವು ಈ ವಿಷಯದಲ್ಲಿ ಮೌನವಾಗಿದೆ. ರಾಜಕೀಯ ವರ್ಗ ಈ ಪ್ರಕರಣವನ್ನು ಆಗಿನ ಮುಖ್ಯ ಕಾರ್ಯದರ್ಶಿ ಒಳಗೊಂಡ ಬಿಕ್ಕಟ್ಟು ನಿರ್ವಹಣಾ ತಂಡಕ್ಕೆ ಬಿಟ್ಟು ಜಾರಿಕೊಂಡಿತು. ನಂತರ, ಘಟನೆಯ ಬಗ್ಗೆ ಒಂದು ವಾರ ಅಥವಾ ಅದಕ್ಕಿಂತ ಹೆಚ್ಚು ಕಾಲ ಮಾಧ್ಯಮಗಳಲ್ಲಿ ಚರ್ಚೆಗಳು ಪ್ರಧಾನವಾಗಿ ನಡೆದಿದ್ದರಿಂದ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲಾ ರಾಜಕೀಯ ನಾಯಕರು ಪ್ರತಿಕ್ರಿಯಿಸಲು ಪ್ರಾರಂಭಿಸಿದರು. ಆದರೆ ಆರೋಪ ಪ್ರತ್ಯಾರೋಪಗಳು ನಡೆದವು. ಅವರು ಕಾನೂನಿನ ಕುರಿತಾಗಲಿ, ಆದಿವಾಸಿಗಳು ಎತ್ತಿರುವ ಪ್ರಶ್ನೆಗಳ ಕುರಿತಾಗಲೀ ಆಸಕ್ತಿ ಹೊಂದಿರಲಿಲ್ಲ” ಎಂದು ನಿರ್ದೇಶಕರು ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿದ್ದರಾಮಯ್ಯ ವಿರುದ್ಧ ದ್ವೇಷ ಹರಡುತ್ತಿರುವ ಕನ್ನಡ ಮಾಧ್ಯಮಗಳು: ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...