Homeಮುಖಪುಟನಾಳೆಯಿಂದ ಎರಡು ದಿನ ದೇಶಾದ್ಯಂತ ಕಾರ್ಮಿಕರ ಮುಷ್ಕರ

ನಾಳೆಯಿಂದ ಎರಡು ದಿನ ದೇಶಾದ್ಯಂತ ಕಾರ್ಮಿಕರ ಮುಷ್ಕರ

- Advertisement -
- Advertisement -

ಸಂವಿಧಾನದ ಪ್ರಜಾಪ್ರಭುತ್ವೀಯ ಮೌಲ್ಯಗಳ ಉಳಿವಿಗಾಗಿ ಜನತೆಯ ಹಕ್ಕುಗಳ ಸಂರಕ್ಷಣೆಗಾಗಿ, ರೈತ ವಿರೋಧಿ ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿಗಾಗಿ, ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಅಂಸಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗಾಗಿ ಮಾರ್ಚ್ 28 ಹಾಗೂ 29ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ. ಸಿಐಟಿಯು (ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌) ಮುಷ್ಕರಕ್ಕೆ ಕರೆ ನೀಡಿದೆ.

ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ತಡೆಗಾಗಿ ಆಗ್ರಹಿಸಲಾಗಿದ್ದು, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರೀಯ ಅಬಕಾರಿ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಬೇಡಿಕೆಗಳು

  • ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ ರೂ. 7500 ನೇರ ನಗದು ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಆಹಾರ ಧಾನ್ಯಗಳನ್ನು ನೀಡಬೇಕು.
  • ಕಾರ್ಪೋರೇಟ್‌ ಬಂಡವಾಳ ಪರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕು.
  • ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜೊತೆಗೆ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ವಾಪಸ್ ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆ ರೂಪಿಸಬೇಕು. ರಾಜ್ಯ ಸರ್ಕಾರ ಸಹ ರೈತ ವಿರೋಧಿ, ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು.
  • ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆ ಒದಗಿಸಬೇಕು. ಕೋವಿಡ್‌ ಲಾಕ್‌ಡೌನ್‌ ಸಂಕಷ್ಟಕ್ಕೆ ಒಳಗಾದ ಅಸಂಘಟಿತರಿಗೆ ಪರಿಹಾರ ಒದಗಿಸಬೇಕು.
  • ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು. ಕೆಲಸದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ಹೆಚ್ಚಿನ ಅನುದಾನ ಬಜೆಟ್‌ನಲ್ಲಿ ನೀಡಬೇಕು.
  • ಕೋವಿಡ್‌ ಎದುರಿಸಲು ಕೆಲಸ ಮಾಡುತ್ತಿರುವ ಮಂಚೂಣಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ  ಮತ್ತು ವಿಮಾ ಸೌಲಭ್ಯ ಒದಗಿಸಬೇಕು.
  • ಅಂಗನವಾಡಿ, ಆಶಾ, ಬಿಸಿಯೂಟ ಮತ್ತು ಇತರೆ ಸ್ಕೀಂ ನೌಕರರಿಗೆ ಶಾಸನಬದ್ಧ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆ ಜಾರಿ ಮಾಡಬೇಕು.
  • ರಾಷ್ಟ್ರೀಯ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಶ್ರೀಮಂತರಿಗೆ ಆಸ್ತಿ ತೆರಿಗೆ ಇತ್ಯಾದಿಗಳನ್ನು ವಿಧಿಸುವ ಮೂಲಕ ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಇತರೆ ನಿರ್ಣಾಯಕ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಬೇಕು.
  • ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಪುನರ್‌ ಸ್ಥಾಪಿಸಬೇಕು.
  • ರೂ. 26 ಸಾವಿರ ಸಮಾನ ಕನಿಷ್ಠ ವೇತನಕ್ಕಾಗಿ, ಸಂಘ ಮಾನ್ಯತೆ, ಗುತ್ತಿಗೆ ಮುಂತಾದ ಖಾಯಂಯೇತರರ ಖಾಯಂಗೆ, ಅಸಂಘಟಿತರಿಗೆ ಭವಿಷ್ಯನಿಧಿಗೆ ಶಾಸನ ರೂಪಿಸಬೇಕು.

ಇದನ್ನೂ ಓದಿರಿ: ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...