Homeಕರ್ನಾಟಕ6 ದಿನಗಳಲ್ಲಿ 5ನೇ ಬಾರಿಗೆ ಪೆಟ್ರೋಲ್‌ ಬೆಲೆ ಏರಿಕೆ; ಶಿವಮೊಗ್ಗದಲ್ಲಿ ರಾಜ್ಯದಲ್ಲೇ ಹೆಚ್ಚಿನ ದರ!

6 ದಿನಗಳಲ್ಲಿ 5ನೇ ಬಾರಿಗೆ ಪೆಟ್ರೋಲ್‌ ಬೆಲೆ ಏರಿಕೆ; ಶಿವಮೊಗ್ಗದಲ್ಲಿ ರಾಜ್ಯದಲ್ಲೇ ಹೆಚ್ಚಿನ ದರ!

- Advertisement -
- Advertisement -

ಭಾನುವಾರದಂದು ಪೆಟ್ರೋಲ್ ದರವು ಲೀಟರ್‌ಗೆ 50 ಪೈಸೆ ಮತ್ತು ಡೀಸೆಲ್‌ಗೆ 55 ಪೈಸೆಗಳಷ್ಟು ಏರಿಕೆಯಾಗಿದೆ. ದೈನಂದಿನ ದರ ಪರಿಷ್ಕರಣೆ ಮತ್ತೆ ಪ್ರಾರಂಭಗೊಂಡ ನಂತರ ಪ್ರೆಟ್ರೋಲ್‌‌ ಬೆಲೆ ಪ್ರತಿ ಲೀಟರ್‌ಗೆ 3.70 ರೂ. ನಿಂದ 3.75 ರೂ.ವರೆಗೆ ಏರಿಕೆಯಾಗಿದೆ. ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ದರವು 98.61 ರೂ. ನಿಂದ 99.11 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರಗಳು ಲೀಟರ್‌ಗೆ 89.87 ರೂ. ನಿಂದ 90.42 ರೂ.ಗೆ ಏರಿಕೆಯಾಗಿದೆ.

ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದ್ದು, ಸ್ಥಳೀಯ ತೆರಿಗೆಯನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ದರಗಳು ಬದಲಾಗುತ್ತವೆ.

ದೇಶದಾದ್ಯಂತ ಬೆಲೆಗಳು ಹೆಚ್ಚಾಗುತ್ತಿದ್ದಂತೆ ರಾಜ್ಯದಲ್ಲೂ ಬೆಲೆಗಳು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್‌ ಬೆಲೆ ತಲಾ 53 ಪೈಸೆ ಹೆಚ್ಚಳವಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 104.46 ರೂ ಆಗಿದ್ದು, ಡೀಸೆಲ್ ಬೆಲೆ 88.67 ರೂ.ಗೆ ತಲುಪಿದೆ.

ಇದನ್ನೂ ಓದಿ:  ನಾಲ್ಕು ತಿಂಗಳ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ; ಗುಲ್ಬರ್ಗಾದಲ್ಲಿ 1.45, ಮೈಸೂರಿನಲ್ಲಿ 1 ರೂ. ಏರಿಕೆ!

ಈ ಬಾರಿಯ ಏರಿಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 1.66 ರೂ. ಹೆಚ್ಚಳವಾಗಿದೆ. ಇಲ್ಲಿ ಪೆಟ್ರೋಲ್ ಬೆಲೆ 106.13 ರೂ.ಗೆ ತಲುಪಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.  ಡೀಸೆಲ್ ಬೆಲೆ ಕೂಡಾ 1.57 ರೂ. ಹೆಚ್ಚಳವಾಗಿದ್ದು, ಲೀಟರ್‌ ಡೀಸೆಲ್ ಬೆಲೆ 90.09 ರೂ. ಗೆ ತಲುಪಿದೆ.

ರಾಜ್ಯದಲ್ಲೇ ಪೆಟ್ರೋಲ್‌ ಮತ್ತು ಡೀಸೆಲ್‌‌ ಬೆಲೆಯ ಹಚ್ಚಿರುವ ಜಿಲ್ಲೆಯಾಗಿ ಶಿವಮೊಗ್ಗ ಹೊರಹೊಮ್ಮಿದೆ. ಅಲ್ಲಿ ಪೆಟ್ರೋಲ್‌ ದರ 106.27 ರೂ.ಗೆ ತಲುಪಿದ್ದು, ಡೀಸೆಲ್ ದರ 90.22 ರೂ. ಗೆ ತಲುಪಿದೆ.

ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದ ಹಿನ್ನಲೆಯಲ್ಲಿ ಸುಮಾರು ನಾಲ್ಕುವರೆ ತಿಂಗಳು ಯಾವುದೆ ದರವನ್ನು ಹೆಚ್ಚಳ ಮಾಡಿರಲಿಲ್ಲ. ನಾಲ್ಕುವರೆ ತಿಂಗಳ ನಂತರ ಮಾರ್ಚ್‌ 22 ರಂದು ಮತ್ತೆ ದರ ಹೆಚ್ಚಳ ಪ್ರಾರಂಭವಾಗಿತ್ತು. ಇದು ಇದರ ನಂತರ ಮಾಡಲಾದ ಐದನೇ ದರ ಹೆಚ್ಚಳವಾಗಿದೆ. ಹಿಂದಿನ ಎಲ್ಲಾ ನಾಲ್ಕು ಸಂದರ್ಭಗಳಲ್ಲಿ, ಬೆಲೆಗಳನ್ನು ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿತ್ತು.

ಒಟ್ಟಾರೆಯಾಗಿ ಕಳೆದ ಆರು ದಿನಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 3.70 ರೂ. ಹಾಗೂ ಡೀಸೆಲ್‌‌ಗೆ 3.75 ರೂ. ನಷ್ಟು ಏರಿಕೆಯಾಗಿದೆ.

ಇದನ್ನೂ ಓದಿ: ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...