Homeಕರ್ನಾಟಕ6 ದಿನಗಳಲ್ಲಿ 5ನೇ ಬಾರಿಗೆ ಪೆಟ್ರೋಲ್‌ ಬೆಲೆ ಏರಿಕೆ; ಶಿವಮೊಗ್ಗದಲ್ಲಿ ರಾಜ್ಯದಲ್ಲೇ ಹೆಚ್ಚಿನ ದರ!

6 ದಿನಗಳಲ್ಲಿ 5ನೇ ಬಾರಿಗೆ ಪೆಟ್ರೋಲ್‌ ಬೆಲೆ ಏರಿಕೆ; ಶಿವಮೊಗ್ಗದಲ್ಲಿ ರಾಜ್ಯದಲ್ಲೇ ಹೆಚ್ಚಿನ ದರ!

- Advertisement -
- Advertisement -

ಭಾನುವಾರದಂದು ಪೆಟ್ರೋಲ್ ದರವು ಲೀಟರ್‌ಗೆ 50 ಪೈಸೆ ಮತ್ತು ಡೀಸೆಲ್‌ಗೆ 55 ಪೈಸೆಗಳಷ್ಟು ಏರಿಕೆಯಾಗಿದೆ. ದೈನಂದಿನ ದರ ಪರಿಷ್ಕರಣೆ ಮತ್ತೆ ಪ್ರಾರಂಭಗೊಂಡ ನಂತರ ಪ್ರೆಟ್ರೋಲ್‌‌ ಬೆಲೆ ಪ್ರತಿ ಲೀಟರ್‌ಗೆ 3.70 ರೂ. ನಿಂದ 3.75 ರೂ.ವರೆಗೆ ಏರಿಕೆಯಾಗಿದೆ. ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ದರವು 98.61 ರೂ. ನಿಂದ 99.11 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರಗಳು ಲೀಟರ್‌ಗೆ 89.87 ರೂ. ನಿಂದ 90.42 ರೂ.ಗೆ ಏರಿಕೆಯಾಗಿದೆ.

ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದ್ದು, ಸ್ಥಳೀಯ ತೆರಿಗೆಯನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ದರಗಳು ಬದಲಾಗುತ್ತವೆ.

ದೇಶದಾದ್ಯಂತ ಬೆಲೆಗಳು ಹೆಚ್ಚಾಗುತ್ತಿದ್ದಂತೆ ರಾಜ್ಯದಲ್ಲೂ ಬೆಲೆಗಳು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್‌ ಬೆಲೆ ತಲಾ 53 ಪೈಸೆ ಹೆಚ್ಚಳವಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 104.46 ರೂ ಆಗಿದ್ದು, ಡೀಸೆಲ್ ಬೆಲೆ 88.67 ರೂ.ಗೆ ತಲುಪಿದೆ.

ಇದನ್ನೂ ಓದಿ:  ನಾಲ್ಕು ತಿಂಗಳ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ; ಗುಲ್ಬರ್ಗಾದಲ್ಲಿ 1.45, ಮೈಸೂರಿನಲ್ಲಿ 1 ರೂ. ಏರಿಕೆ!

ಈ ಬಾರಿಯ ಏರಿಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 1.66 ರೂ. ಹೆಚ್ಚಳವಾಗಿದೆ. ಇಲ್ಲಿ ಪೆಟ್ರೋಲ್ ಬೆಲೆ 106.13 ರೂ.ಗೆ ತಲುಪಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.  ಡೀಸೆಲ್ ಬೆಲೆ ಕೂಡಾ 1.57 ರೂ. ಹೆಚ್ಚಳವಾಗಿದ್ದು, ಲೀಟರ್‌ ಡೀಸೆಲ್ ಬೆಲೆ 90.09 ರೂ. ಗೆ ತಲುಪಿದೆ.

ರಾಜ್ಯದಲ್ಲೇ ಪೆಟ್ರೋಲ್‌ ಮತ್ತು ಡೀಸೆಲ್‌‌ ಬೆಲೆಯ ಹಚ್ಚಿರುವ ಜಿಲ್ಲೆಯಾಗಿ ಶಿವಮೊಗ್ಗ ಹೊರಹೊಮ್ಮಿದೆ. ಅಲ್ಲಿ ಪೆಟ್ರೋಲ್‌ ದರ 106.27 ರೂ.ಗೆ ತಲುಪಿದ್ದು, ಡೀಸೆಲ್ ದರ 90.22 ರೂ. ಗೆ ತಲುಪಿದೆ.

ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದ ಹಿನ್ನಲೆಯಲ್ಲಿ ಸುಮಾರು ನಾಲ್ಕುವರೆ ತಿಂಗಳು ಯಾವುದೆ ದರವನ್ನು ಹೆಚ್ಚಳ ಮಾಡಿರಲಿಲ್ಲ. ನಾಲ್ಕುವರೆ ತಿಂಗಳ ನಂತರ ಮಾರ್ಚ್‌ 22 ರಂದು ಮತ್ತೆ ದರ ಹೆಚ್ಚಳ ಪ್ರಾರಂಭವಾಗಿತ್ತು. ಇದು ಇದರ ನಂತರ ಮಾಡಲಾದ ಐದನೇ ದರ ಹೆಚ್ಚಳವಾಗಿದೆ. ಹಿಂದಿನ ಎಲ್ಲಾ ನಾಲ್ಕು ಸಂದರ್ಭಗಳಲ್ಲಿ, ಬೆಲೆಗಳನ್ನು ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿತ್ತು.

ಒಟ್ಟಾರೆಯಾಗಿ ಕಳೆದ ಆರು ದಿನಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 3.70 ರೂ. ಹಾಗೂ ಡೀಸೆಲ್‌‌ಗೆ 3.75 ರೂ. ನಷ್ಟು ಏರಿಕೆಯಾಗಿದೆ.

ಇದನ್ನೂ ಓದಿ: ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...