Homeಕರ್ನಾಟಕಕಮಿಷನ್ ಸರ್ವೇ ಸಾಮಾನ್ಯ ವಿಚಾರ; ಇದಕ್ಕೆ ದೊಡ್ಡ ಚರ್ಚೆ ಯಾಕೆ: ಹೆಚ್‌.ಡಿ. ಕುಮಾರಸ್ವಾಮಿ

ಕಮಿಷನ್ ಸರ್ವೇ ಸಾಮಾನ್ಯ ವಿಚಾರ; ಇದಕ್ಕೆ ದೊಡ್ಡ ಚರ್ಚೆ ಯಾಕೆ: ಹೆಚ್‌.ಡಿ. ಕುಮಾರಸ್ವಾಮಿ

- Advertisement -
- Advertisement -

ಕಮಿಷನ್ ವಿಚಾರ ಎನ್ನುವುದು ಸರ್ವೇ ಸಾಮಾನ್ಯವಾಗಿದ್ದು, ಇದಕ್ಕೆ ದೊಡ್ಡ ಚರ್ಚೆ ಯಾಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದು, ನಮ್ಮ ಜನರು ಕೂಡ ಈ ಬಗ್ಗೆ ತಲೆ ಕೆಡಿಸಿಕೊಲ್ಲುವುದಿಲ್ಲ. ಜನರಿಗೆಲ್ಲ ಇದು ಗೊತ್ತಿರುವ ವಿಚಾರವೇ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಲಂಚ ಬೇಡಿಕೆ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಅವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

“ರಾಜ್ಯ ಸರ್ಕಾರದಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರಕ್ಕೆ ಬಂದಿರುವುದೇ ಕಮಿಷನ್ ವಿಚಾರ. ಈಗ ಹೊರಗೆ ಬರುತ್ತಿರುವ ವಿಷಯಗಳ ಬಗ್ಗೆ ಅಚ್ಚರಿ ಏನೂ ಇಲ್ಲ. ಇದು ಒಂದು ರೀತಿಯ ದಿನನಿತ್ಯದ ಕೆಲಸ ಆಗಿಹೋಗಿದೆ” ಎಂದು ಅವರು ಹೇಳೀದ್ದಾರೆ.

“ಹಿಂದೆ ಸಣ್ಣಪುಟ್ಟ ಮಟ್ಟದಲ್ಲಿ ಇಂಥದ್ದೆಲ್ಲ ನಡೆದುಕೊಂಡು ಹೋಗುತ್ತಿತ್ತು. ಈಗ ಸ್ವಲ್ಪ ದೊಡ್ಡ ಪ್ರಮಾಣಕ್ಕೆ ಏರಿಕೆ ಆಗಿದೆ. ಏಕೆಂದರೆ, ಬಜೆಟ್ ಗಾತ್ರ ಹೆಚ್ಚಾದಂತೆ ಕಮಿಷನ್ ಗಾತ್ರ ಕೂಡ ಹೆಚ್ಚಾಗುತ್ತಿದೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

“ಗುತ್ತಿಗೆ ಕೆಲಸ ಮಾಡುವವರು ಇಂಥ ಕೆಲಸಗಳಿಗೆ ಪ್ರೋತ್ಸಾಹ ಕೊಡದನ್ನು ನಿಲ್ಲಸಬೇಕು. ಹಣ, ಕಮಿಷನ್ ಕೊಡುವುದಿಲ್ಲ ಎಂದು ಕಠಿಣ ನಿರ್ಧಾರ ಮಾಡಬೇಕು. ಗುತ್ತಿಗೆದಾರರು ಮೊದಲು ಬಿಗಿಯಾಗಿ ಇದ್ದರೆ ಈ ಸಮಸ್ಯೆಗಳು ಏಕೆ ಬರುತ್ತವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಗುಜರಾತ್: ವಿಧಾನಸಭೆ ಗೇಟ್‌ನಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರಿಗೆ ಕಿರುಕುಳ; ಸ್ಪೀಕರ್‌ಗೆ ದೂರು

“ನಾಳೆಯಿಂದ ಸದನದಲ್ಲಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಎರಡು ದಿನ ಏನು ಚರ್ಚೆ ಮಾಡುತ್ತಾರೋ ನೋಡೋಣ. ಚುನಾವಣೆಯಲ್ಲಿ ಬದಲಾವಣೆ ತರುವ ಬಗ್ಗೆ ಏನು ಚರ್ಚೆ ಮಾಡುತ್ತಾರೆ. ಕಮಿಷನ್ ವಿಚಾರ ಎನ್ನುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ದೊಡ್ಡ ಚರ್ಚೆ ಏಕೆ? ನಮ್ಮ ಜನರು ಕೂಡ ಈ ಬಗ್ಗೆ ತಲೆ ಕೆಡಿಸಿಕೊಲ್ಲುವುದಿಲ್ಲ. ಜನರಿಗೆಲ್ಲ ಇದು ಗೊತ್ತಿರುವ ವಿಚಾರವೇ” ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

“ಈ ಬಗ್ಗೆ ಚರ್ಚೆ ಮಾಡಲು ನನಗೆ ಆಸಕ್ತಿ ಇಲ್ಲ. ಜನರು ಈ ಬಗ್ಗೆ ಮೊದಲ ತಿಳಿದುಕೊಳ್ಳಬೇಕು. ಈಗಲಾದರೂ ಗುತ್ತಿಗೆದಾರರು ಎಲ್ಲರೂ ಸೇರಿ ಕಮಿಷನ್ ಕೊಡಬಾರದು ಎನ್ನುವ ನಿರ್ಧಾರ ಮಾಡಿ. ಲಂಚ ಕೇಳಿದರೆ ಕೆಲಸವನ್ನೆ ಮಾಡಬೇಡಿ, ನಿಲ್ಲಸಿ. ಅದರಿಂದ ಏನೂ ಆಗಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಯಾರು ಇದ್ದೀರಿ, ಅವರು ಈ ಕೆಲಸ ಮಾಡಬೇಕು” ಎಂದು ಅವರು ಕಿವಿಮಾತು ಹೇಳಿದ್ದಾರೆ.

“40% ಪರ್ಸಂಟೇಜ್ ಅಂತ ಎಲ್ಲರೂ ಹೇಳುತ್ತಾರೆ. ಆದರೆ, ನೀವು ಮೊದಲು ನಾವು ಯಾವುದೇ ಕೆಲಸ ಮಾಡಲ್ಲ, ಕಮಿಷನ್ ಕೊಡಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಡಿ. ಆಗ ಎಲ್ಲವೂ ಸರಿ ಹೋಗುತ್ತದೆ. ನೀವೇ ಪ್ರೋತ್ಸಾಹ ನೀಡಿದರೆ ಇದು ಹೀಗೆ ಇರುತ್ತದೆ. ಅದು ಬಿಟ್ಟು ಬರೀ ಚರ್ಚೆ ಮಾಡಿದರೆ ಪ್ರಯೋಜನ ಇಲ್ಲ” ಎಂದು ಅವರು ಗುತ್ತಿಗೆದಾರರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...