Homeಕರ್ನಾಟಕಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ.

- Advertisement -
- Advertisement -

ಮಾಜಿ ಸಚಿವ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌.ಚೇತನ ಅವರು ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.

ಎಂ.ಪಿ.ರೇಣುಕಾಚಾರ್ಯ ಲಿಂಗಾಯತರು. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಕುಂದೂರು ಶಾಲೆಯಲ್ಲಿ ಅವರು ಓದುತ್ತಿದ್ದಾಗ ಪಡೆದಿರುವ ಶಾಲಾ ದಾಖಲೆಗಳಲ್ಲೂ ಜಾತಿ ಕಲಂನಲ್ಲಿ ‘ಲಿಂಗಾಯತ’ ಎಂದು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಆದರೆ ಅವರ ಪುತ್ರಿ ಎಂ.ಆರ್‌.ಚೇತನ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲ್ಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದಾರೆ. ಅದನ್ನು ಜಿಲ್ಲಾ ಅಧಿಕಾರಿಗಳು ಸರಿ ಇದೆಯೇ ಎಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ‘ವಿಜಯ ಕರ್ನಾಟಕ’ ವರದಿ ಮಾಡಿದೆ.

ದಲಿತರ ಹೆಸರಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸವರ್ಣಿಯರು ಪಡೆದು ಶೋಷಿತ ಸಮುದಾಯವನ್ನು ಅವಕಾಶಗಳಿಂದ ವಂಚಿಸುವುದು ಹೊಸ ಚರ್ಚೆಯೇನಲ್ಲ. ಆದರೆ ಜನಪ್ರತಿನಿಧಿಗಳಾದವರ ಹೆಸರುಗಳೇ ಇಂತಹ ಪ್ರಕರಣಗಳಲ್ಲಿ ಮತ್ತೆ ಮತ್ತೆ ಕೇಳಿಬರುತ್ತಿರುವುದು ಆಘಾತಕಾರಿ ಬೆಳವಣಿಗೆ.

ಪರಿಶಿಷ್ಟ ಕೋಟಾದಲ್ಲಿ ಇರಬಾರದ ಅವಕಾಶಗಳೇನೋ ಇವೆ ಎಂದು ಜನ ಭಾವಿಸುವುದು ಒಂದು ಕಡೆಯಾದರೆ, ದಿನದಿಂದ ದಿನಕ್ಕೆ ದಲಿತರ ಬಗೆಗಿನ ಕಾಳಜಿಯಿಂದ ಸರ್ಕಾರ ದೂರ ಸರಿಯುತ್ತಿರುವುದು ಮತ್ತೊಂದು ವಾಸ್ತವ. ಪರಿಸ್ಥಿತಿ ಹೀಗಿರುವ ದಲಿತರಿಗೆ ಇರುವ ಚಿಕ್ಕಪುಟ್ಟ ಅವಕಾಶಗಳನ್ನೂ ಕಿತ್ತುಕೊಂಡರೆ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಏನಾಗಬಹುದು? ಇಂತಹ ಪ್ರಕರಗಳಿಗೆ ಶಿಕ್ಷೆಯೇ ಇಲ್ಲವೇ? ಖಂಡಿತ ಇದೆ. ಆದರೆ ಕಾನೂನು ಜಾರಿಯಾಗಬೇಕಷ್ಟೇ.

ರಾಜ್ಯ ವಿಧಾನಸಭೆಗೆ 2013ರಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರುವ ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್‌ ಮೇಲೆ ಇಂಥದ್ದೇ ಆರೋಪ ಕೇಳಿಬಂದಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಎನ್‌.ಮುನಿಅಂಜಿನಪ್ಪ ಕೋರ್ಟ್ ಮೆಟ್ಟಿಲೇರಿದ್ದರು.

ಬುಡಗ ಜಂಗಮ ಜಾತಿಗೆ ಸೇರಿದವರೆಂದು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿರುವುದು ಹೈಕೋರ್ಟ್‌ನಲ್ಲಿ ಸಾಬೀತಾಗಿತ್ತು. ಮಂಜುನಾಥ್‌ ಹಿಂದುಳಿದ ವರ್ಗ-1ಕ್ಕೆ ಸೇರುವ ‘ಭೈರಾಗಿ’ ಸಮುದಾಯದವರಾಗಿದ್ದರು. ಸುಳ್ಳು ಜಾತಿಪ್ರಮಾಣ ಪತ್ರ ಸಲ್ಲಿಸಿದ್ದಕ್ಕೆ  ಪ್ರಜಾಪ್ರತಿನಿಧಿ ಕಾಯದೆ ನಿಯಮ 125-ಎ ಅನ್ವಯ ಮಂಜುನಾಥ್‌ಗೆ 25 ಸಾವಿರ ದಂಡ ವಿಧಿಸಲಾಗಿತ್ತು. ಜೊತೆಗೆ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಲಾಗಿತ್ತು.

ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನ ಬ್ರಾಹ್ಮಣೇತರ ಅರ್ಚಕರ ನೋವಿನ ಕಥನ (ಭಾಗ 2)

ಈಗಿನ ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ. ಚೌವ್ಹಾಣ್‌ ಲಂಬಾಣಿಯವರಾಗಿದ್ದರೂ ಅವರು ಕರ್ನಾಟಕದ ಲಂಬಾಣಿ ಜಾತಿಯವರಲ್ಲ. ಅವರು ಮಹಾರಾಷ್ಟ್ರದ ಲಂಬಾಣಿ ಜಾತಿಗೆ ಸೇರಿದ್ದಾರೆ. ಮಹಾರಾಷ್ಟ್ರದಲ್ಲಿ ಲಂಬಾಣಿ ಜಾತಿಯು ಹಿಂದುಳಿದ ವರ್ಗಕ್ಕೆ ಸೇರಿದ್ದರೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಸೇರಿದೆ.

ಕಾನೂನು ತಜ್ಞರು ಏನು ಹೇಳುತ್ತಾರೆ?

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರ್ಯಾಯ ಕಾನೂನು ವೇದಿಕೆಯ ಸಲಹೆಗಾರರಾದ ಶಿವಮಣಿ, “ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬಹುದು. ನಕಲಿ ಪ್ರಮಾಣ ಪತ್ರ ಬರೆದು ಮೀಸಲಾಯಿಯನ್ನು ಪಡೆದರೆ ನಿಜವಾದ ಫಲಾನುಭವಿಗೆ ತೊಂದರೆ ನೀಡಿದಂತಾಗುತ್ತದೆ. ಮೀಸಲಾತಿಯ ಅವಕಾಶ ಪಡೆದು ಸರ್ಕಾರಿ ಸೇವೆಯಲ್ಲಿದ್ದರೆ ಕೆಲಸದಿಂದ ವಜಾಗೊಳಿಸಬಹುದು. ಜನಪ್ರತಿನಿಧಿಯಾಗಿದ್ದರೆ ಸ್ಥಾನವನ್ನು ಅಸಿಂಧುಗೊಳಿಸಬಹುದು” ಎಂದರು.

ಪ್ರಭು ಚೌವ್ಹಾಣ್‌ ಪ್ರಕರಣದ ಕುರಿತು ಮಾತನಾಡಿದ ಅವರು, “ಚೌವ್ಹಾಣ್‌ ಅವರು ಎಸ್‌ಸಿ ಪ್ರಮಾಣಪತ್ರ ಬರೆದು ಎರಡು ಸಲ ಗೆದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ನಡೆಯುತ್ತಿದೆ. ಅಂತಾರಾಜ್ಯ ಜಾತಿ ಪ್ರಮಾಣ ಪತ್ರ ಪಡೆದಿರುವುದು ಶಿಕ್ಷಾರ್ಹ ಅಪರಾಧ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಸಿವಿಲ್ ರೈಟ್ಸ್‌ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ ಎಂದಿದೆ. ಯಾರ್‍ಯಾರು ಸರ್ಕಾರಿ ಅಧಿಕಾರಿಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸುವುದೇ ಅದರ ಕೆಲಸ. ಪ್ರಭು ಚೌವ್ಹಾಣ್ ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆಂದು ಸದರಿ ಸಂಸ್ಥೆ ಹೇಳಿದೆ. ಆದರೆ ಜಿ‌ಲ್ಲಾಧಿಕಾರಿಯವರು ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿಲ್ಲ. ಚೌವ್ಹಾಣ್ ಸಚಿವರಾಗಿ ಮುಂದುವರಿಯುತ್ತಲೇ ಇದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚಿನ ದಿನಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ ಗಂಭೀರವಾಗಿ ತನಿಖೆಗಳೂ ನಡೆಯಬೇಕಿದೆ. ಬೆಂಗಳೂರಿನ ಡಿಆರ್‌ಡಿಒನಲ್ಲಿ ಏಳುನೂರು ಜನರು ನಕಲಿ ಜಾತಿ ಪ್ರಮಾಣಪತ್ರ ಬರೆದಿದ್ದಾರೆಂಬ ವರದಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ವಲಸಮ್ಮ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣವನ್ನು ಉಲ್ಲೇಖಿಸಿದ ಅವರು, “ಗಂಡ ಪರಿಶಿಷ್ಟ ಜಾತಿಯಾಗಿದ್ದಾರೆಂದು ಹೆಂಡತಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಕೆಲಸ ಪಡೆದಿರುತ್ತಾರೆ. ಆದರೆ ಹೆಂಡತಿ ಸವರ್ಣೀಯ ಜಾತಿಗೆ ಸೇರಿರುತ್ತಾರೆ. ಸುಪ್ರೀಂ ಈ ಕುರಿತು ವಿಚಾರಣೆ ನಡೆಸಿ, ಜಾತಿ ಎಂಬುದು ಹುಟ್ಟಿನಿಂದ ಬರುತ್ತದೆ. ಮದುವೆಯಾಗುವುದರಿಂದ ಬದಲಾಗುವುದಿಲ್ಲ ಎಂದಿದೆ” ಎಂದು ವಿವರಿಸಿದರು.


ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...