Homeಕರ್ನಾಟಕಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ.

- Advertisement -
- Advertisement -

ಮಾಜಿ ಸಚಿವ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌.ಚೇತನ ಅವರು ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.

ಎಂ.ಪಿ.ರೇಣುಕಾಚಾರ್ಯ ಲಿಂಗಾಯತರು. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಕುಂದೂರು ಶಾಲೆಯಲ್ಲಿ ಅವರು ಓದುತ್ತಿದ್ದಾಗ ಪಡೆದಿರುವ ಶಾಲಾ ದಾಖಲೆಗಳಲ್ಲೂ ಜಾತಿ ಕಲಂನಲ್ಲಿ ‘ಲಿಂಗಾಯತ’ ಎಂದು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಆದರೆ ಅವರ ಪುತ್ರಿ ಎಂ.ಆರ್‌.ಚೇತನ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲ್ಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದಾರೆ. ಅದನ್ನು ಜಿಲ್ಲಾ ಅಧಿಕಾರಿಗಳು ಸರಿ ಇದೆಯೇ ಎಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ‘ವಿಜಯ ಕರ್ನಾಟಕ’ ವರದಿ ಮಾಡಿದೆ.

ದಲಿತರ ಹೆಸರಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸವರ್ಣಿಯರು ಪಡೆದು ಶೋಷಿತ ಸಮುದಾಯವನ್ನು ಅವಕಾಶಗಳಿಂದ ವಂಚಿಸುವುದು ಹೊಸ ಚರ್ಚೆಯೇನಲ್ಲ. ಆದರೆ ಜನಪ್ರತಿನಿಧಿಗಳಾದವರ ಹೆಸರುಗಳೇ ಇಂತಹ ಪ್ರಕರಣಗಳಲ್ಲಿ ಮತ್ತೆ ಮತ್ತೆ ಕೇಳಿಬರುತ್ತಿರುವುದು ಆಘಾತಕಾರಿ ಬೆಳವಣಿಗೆ.

ಪರಿಶಿಷ್ಟ ಕೋಟಾದಲ್ಲಿ ಇರಬಾರದ ಅವಕಾಶಗಳೇನೋ ಇವೆ ಎಂದು ಜನ ಭಾವಿಸುವುದು ಒಂದು ಕಡೆಯಾದರೆ, ದಿನದಿಂದ ದಿನಕ್ಕೆ ದಲಿತರ ಬಗೆಗಿನ ಕಾಳಜಿಯಿಂದ ಸರ್ಕಾರ ದೂರ ಸರಿಯುತ್ತಿರುವುದು ಮತ್ತೊಂದು ವಾಸ್ತವ. ಪರಿಸ್ಥಿತಿ ಹೀಗಿರುವ ದಲಿತರಿಗೆ ಇರುವ ಚಿಕ್ಕಪುಟ್ಟ ಅವಕಾಶಗಳನ್ನೂ ಕಿತ್ತುಕೊಂಡರೆ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಏನಾಗಬಹುದು? ಇಂತಹ ಪ್ರಕರಗಳಿಗೆ ಶಿಕ್ಷೆಯೇ ಇಲ್ಲವೇ? ಖಂಡಿತ ಇದೆ. ಆದರೆ ಕಾನೂನು ಜಾರಿಯಾಗಬೇಕಷ್ಟೇ.

ರಾಜ್ಯ ವಿಧಾನಸಭೆಗೆ 2013ರಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರುವ ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್‌ ಮೇಲೆ ಇಂಥದ್ದೇ ಆರೋಪ ಕೇಳಿಬಂದಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಎನ್‌.ಮುನಿಅಂಜಿನಪ್ಪ ಕೋರ್ಟ್ ಮೆಟ್ಟಿಲೇರಿದ್ದರು.

ಬುಡಗ ಜಂಗಮ ಜಾತಿಗೆ ಸೇರಿದವರೆಂದು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿರುವುದು ಹೈಕೋರ್ಟ್‌ನಲ್ಲಿ ಸಾಬೀತಾಗಿತ್ತು. ಮಂಜುನಾಥ್‌ ಹಿಂದುಳಿದ ವರ್ಗ-1ಕ್ಕೆ ಸೇರುವ ‘ಭೈರಾಗಿ’ ಸಮುದಾಯದವರಾಗಿದ್ದರು. ಸುಳ್ಳು ಜಾತಿಪ್ರಮಾಣ ಪತ್ರ ಸಲ್ಲಿಸಿದ್ದಕ್ಕೆ  ಪ್ರಜಾಪ್ರತಿನಿಧಿ ಕಾಯದೆ ನಿಯಮ 125-ಎ ಅನ್ವಯ ಮಂಜುನಾಥ್‌ಗೆ 25 ಸಾವಿರ ದಂಡ ವಿಧಿಸಲಾಗಿತ್ತು. ಜೊತೆಗೆ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಲಾಗಿತ್ತು.

ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನ ಬ್ರಾಹ್ಮಣೇತರ ಅರ್ಚಕರ ನೋವಿನ ಕಥನ (ಭಾಗ 2)

ಈಗಿನ ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ. ಚೌವ್ಹಾಣ್‌ ಲಂಬಾಣಿಯವರಾಗಿದ್ದರೂ ಅವರು ಕರ್ನಾಟಕದ ಲಂಬಾಣಿ ಜಾತಿಯವರಲ್ಲ. ಅವರು ಮಹಾರಾಷ್ಟ್ರದ ಲಂಬಾಣಿ ಜಾತಿಗೆ ಸೇರಿದ್ದಾರೆ. ಮಹಾರಾಷ್ಟ್ರದಲ್ಲಿ ಲಂಬಾಣಿ ಜಾತಿಯು ಹಿಂದುಳಿದ ವರ್ಗಕ್ಕೆ ಸೇರಿದ್ದರೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಸೇರಿದೆ.

ಕಾನೂನು ತಜ್ಞರು ಏನು ಹೇಳುತ್ತಾರೆ?

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರ್ಯಾಯ ಕಾನೂನು ವೇದಿಕೆಯ ಸಲಹೆಗಾರರಾದ ಶಿವಮಣಿ, “ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬಹುದು. ನಕಲಿ ಪ್ರಮಾಣ ಪತ್ರ ಬರೆದು ಮೀಸಲಾಯಿಯನ್ನು ಪಡೆದರೆ ನಿಜವಾದ ಫಲಾನುಭವಿಗೆ ತೊಂದರೆ ನೀಡಿದಂತಾಗುತ್ತದೆ. ಮೀಸಲಾತಿಯ ಅವಕಾಶ ಪಡೆದು ಸರ್ಕಾರಿ ಸೇವೆಯಲ್ಲಿದ್ದರೆ ಕೆಲಸದಿಂದ ವಜಾಗೊಳಿಸಬಹುದು. ಜನಪ್ರತಿನಿಧಿಯಾಗಿದ್ದರೆ ಸ್ಥಾನವನ್ನು ಅಸಿಂಧುಗೊಳಿಸಬಹುದು” ಎಂದರು.

ಪ್ರಭು ಚೌವ್ಹಾಣ್‌ ಪ್ರಕರಣದ ಕುರಿತು ಮಾತನಾಡಿದ ಅವರು, “ಚೌವ್ಹಾಣ್‌ ಅವರು ಎಸ್‌ಸಿ ಪ್ರಮಾಣಪತ್ರ ಬರೆದು ಎರಡು ಸಲ ಗೆದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ನಡೆಯುತ್ತಿದೆ. ಅಂತಾರಾಜ್ಯ ಜಾತಿ ಪ್ರಮಾಣ ಪತ್ರ ಪಡೆದಿರುವುದು ಶಿಕ್ಷಾರ್ಹ ಅಪರಾಧ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಸಿವಿಲ್ ರೈಟ್ಸ್‌ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ ಎಂದಿದೆ. ಯಾರ್‍ಯಾರು ಸರ್ಕಾರಿ ಅಧಿಕಾರಿಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸುವುದೇ ಅದರ ಕೆಲಸ. ಪ್ರಭು ಚೌವ್ಹಾಣ್ ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆಂದು ಸದರಿ ಸಂಸ್ಥೆ ಹೇಳಿದೆ. ಆದರೆ ಜಿ‌ಲ್ಲಾಧಿಕಾರಿಯವರು ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿಲ್ಲ. ಚೌವ್ಹಾಣ್ ಸಚಿವರಾಗಿ ಮುಂದುವರಿಯುತ್ತಲೇ ಇದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚಿನ ದಿನಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ ಗಂಭೀರವಾಗಿ ತನಿಖೆಗಳೂ ನಡೆಯಬೇಕಿದೆ. ಬೆಂಗಳೂರಿನ ಡಿಆರ್‌ಡಿಒನಲ್ಲಿ ಏಳುನೂರು ಜನರು ನಕಲಿ ಜಾತಿ ಪ್ರಮಾಣಪತ್ರ ಬರೆದಿದ್ದಾರೆಂಬ ವರದಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ವಲಸಮ್ಮ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣವನ್ನು ಉಲ್ಲೇಖಿಸಿದ ಅವರು, “ಗಂಡ ಪರಿಶಿಷ್ಟ ಜಾತಿಯಾಗಿದ್ದಾರೆಂದು ಹೆಂಡತಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಕೆಲಸ ಪಡೆದಿರುತ್ತಾರೆ. ಆದರೆ ಹೆಂಡತಿ ಸವರ್ಣೀಯ ಜಾತಿಗೆ ಸೇರಿರುತ್ತಾರೆ. ಸುಪ್ರೀಂ ಈ ಕುರಿತು ವಿಚಾರಣೆ ನಡೆಸಿ, ಜಾತಿ ಎಂಬುದು ಹುಟ್ಟಿನಿಂದ ಬರುತ್ತದೆ. ಮದುವೆಯಾಗುವುದರಿಂದ ಬದಲಾಗುವುದಿಲ್ಲ ಎಂದಿದೆ” ಎಂದು ವಿವರಿಸಿದರು.


ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...