Homeಕರ್ನಾಟಕಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ.

- Advertisement -
- Advertisement -

ಮಾಜಿ ಸಚಿವ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌.ಚೇತನ ಅವರು ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.

ಎಂ.ಪಿ.ರೇಣುಕಾಚಾರ್ಯ ಲಿಂಗಾಯತರು. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಕುಂದೂರು ಶಾಲೆಯಲ್ಲಿ ಅವರು ಓದುತ್ತಿದ್ದಾಗ ಪಡೆದಿರುವ ಶಾಲಾ ದಾಖಲೆಗಳಲ್ಲೂ ಜಾತಿ ಕಲಂನಲ್ಲಿ ‘ಲಿಂಗಾಯತ’ ಎಂದು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಆದರೆ ಅವರ ಪುತ್ರಿ ಎಂ.ಆರ್‌.ಚೇತನ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲ್ಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದಾರೆ. ಅದನ್ನು ಜಿಲ್ಲಾ ಅಧಿಕಾರಿಗಳು ಸರಿ ಇದೆಯೇ ಎಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ‘ವಿಜಯ ಕರ್ನಾಟಕ’ ವರದಿ ಮಾಡಿದೆ.

ದಲಿತರ ಹೆಸರಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸವರ್ಣಿಯರು ಪಡೆದು ಶೋಷಿತ ಸಮುದಾಯವನ್ನು ಅವಕಾಶಗಳಿಂದ ವಂಚಿಸುವುದು ಹೊಸ ಚರ್ಚೆಯೇನಲ್ಲ. ಆದರೆ ಜನಪ್ರತಿನಿಧಿಗಳಾದವರ ಹೆಸರುಗಳೇ ಇಂತಹ ಪ್ರಕರಣಗಳಲ್ಲಿ ಮತ್ತೆ ಮತ್ತೆ ಕೇಳಿಬರುತ್ತಿರುವುದು ಆಘಾತಕಾರಿ ಬೆಳವಣಿಗೆ.

ಪರಿಶಿಷ್ಟ ಕೋಟಾದಲ್ಲಿ ಇರಬಾರದ ಅವಕಾಶಗಳೇನೋ ಇವೆ ಎಂದು ಜನ ಭಾವಿಸುವುದು ಒಂದು ಕಡೆಯಾದರೆ, ದಿನದಿಂದ ದಿನಕ್ಕೆ ದಲಿತರ ಬಗೆಗಿನ ಕಾಳಜಿಯಿಂದ ಸರ್ಕಾರ ದೂರ ಸರಿಯುತ್ತಿರುವುದು ಮತ್ತೊಂದು ವಾಸ್ತವ. ಪರಿಸ್ಥಿತಿ ಹೀಗಿರುವ ದಲಿತರಿಗೆ ಇರುವ ಚಿಕ್ಕಪುಟ್ಟ ಅವಕಾಶಗಳನ್ನೂ ಕಿತ್ತುಕೊಂಡರೆ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಏನಾಗಬಹುದು? ಇಂತಹ ಪ್ರಕರಗಳಿಗೆ ಶಿಕ್ಷೆಯೇ ಇಲ್ಲವೇ? ಖಂಡಿತ ಇದೆ. ಆದರೆ ಕಾನೂನು ಜಾರಿಯಾಗಬೇಕಷ್ಟೇ.

ರಾಜ್ಯ ವಿಧಾನಸಭೆಗೆ 2013ರಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರುವ ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್‌ ಮೇಲೆ ಇಂಥದ್ದೇ ಆರೋಪ ಕೇಳಿಬಂದಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಎನ್‌.ಮುನಿಅಂಜಿನಪ್ಪ ಕೋರ್ಟ್ ಮೆಟ್ಟಿಲೇರಿದ್ದರು.

ಬುಡಗ ಜಂಗಮ ಜಾತಿಗೆ ಸೇರಿದವರೆಂದು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿರುವುದು ಹೈಕೋರ್ಟ್‌ನಲ್ಲಿ ಸಾಬೀತಾಗಿತ್ತು. ಮಂಜುನಾಥ್‌ ಹಿಂದುಳಿದ ವರ್ಗ-1ಕ್ಕೆ ಸೇರುವ ‘ಭೈರಾಗಿ’ ಸಮುದಾಯದವರಾಗಿದ್ದರು. ಸುಳ್ಳು ಜಾತಿಪ್ರಮಾಣ ಪತ್ರ ಸಲ್ಲಿಸಿದ್ದಕ್ಕೆ  ಪ್ರಜಾಪ್ರತಿನಿಧಿ ಕಾಯದೆ ನಿಯಮ 125-ಎ ಅನ್ವಯ ಮಂಜುನಾಥ್‌ಗೆ 25 ಸಾವಿರ ದಂಡ ವಿಧಿಸಲಾಗಿತ್ತು. ಜೊತೆಗೆ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಲಾಗಿತ್ತು.

ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನ ಬ್ರಾಹ್ಮಣೇತರ ಅರ್ಚಕರ ನೋವಿನ ಕಥನ (ಭಾಗ 2)

ಈಗಿನ ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ. ಚೌವ್ಹಾಣ್‌ ಲಂಬಾಣಿಯವರಾಗಿದ್ದರೂ ಅವರು ಕರ್ನಾಟಕದ ಲಂಬಾಣಿ ಜಾತಿಯವರಲ್ಲ. ಅವರು ಮಹಾರಾಷ್ಟ್ರದ ಲಂಬಾಣಿ ಜಾತಿಗೆ ಸೇರಿದ್ದಾರೆ. ಮಹಾರಾಷ್ಟ್ರದಲ್ಲಿ ಲಂಬಾಣಿ ಜಾತಿಯು ಹಿಂದುಳಿದ ವರ್ಗಕ್ಕೆ ಸೇರಿದ್ದರೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಸೇರಿದೆ.

ಕಾನೂನು ತಜ್ಞರು ಏನು ಹೇಳುತ್ತಾರೆ?

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರ್ಯಾಯ ಕಾನೂನು ವೇದಿಕೆಯ ಸಲಹೆಗಾರರಾದ ಶಿವಮಣಿ, “ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬಹುದು. ನಕಲಿ ಪ್ರಮಾಣ ಪತ್ರ ಬರೆದು ಮೀಸಲಾಯಿಯನ್ನು ಪಡೆದರೆ ನಿಜವಾದ ಫಲಾನುಭವಿಗೆ ತೊಂದರೆ ನೀಡಿದಂತಾಗುತ್ತದೆ. ಮೀಸಲಾತಿಯ ಅವಕಾಶ ಪಡೆದು ಸರ್ಕಾರಿ ಸೇವೆಯಲ್ಲಿದ್ದರೆ ಕೆಲಸದಿಂದ ವಜಾಗೊಳಿಸಬಹುದು. ಜನಪ್ರತಿನಿಧಿಯಾಗಿದ್ದರೆ ಸ್ಥಾನವನ್ನು ಅಸಿಂಧುಗೊಳಿಸಬಹುದು” ಎಂದರು.

ಪ್ರಭು ಚೌವ್ಹಾಣ್‌ ಪ್ರಕರಣದ ಕುರಿತು ಮಾತನಾಡಿದ ಅವರು, “ಚೌವ್ಹಾಣ್‌ ಅವರು ಎಸ್‌ಸಿ ಪ್ರಮಾಣಪತ್ರ ಬರೆದು ಎರಡು ಸಲ ಗೆದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ನಡೆಯುತ್ತಿದೆ. ಅಂತಾರಾಜ್ಯ ಜಾತಿ ಪ್ರಮಾಣ ಪತ್ರ ಪಡೆದಿರುವುದು ಶಿಕ್ಷಾರ್ಹ ಅಪರಾಧ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಸಿವಿಲ್ ರೈಟ್ಸ್‌ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ ಎಂದಿದೆ. ಯಾರ್‍ಯಾರು ಸರ್ಕಾರಿ ಅಧಿಕಾರಿಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸುವುದೇ ಅದರ ಕೆಲಸ. ಪ್ರಭು ಚೌವ್ಹಾಣ್ ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆಂದು ಸದರಿ ಸಂಸ್ಥೆ ಹೇಳಿದೆ. ಆದರೆ ಜಿ‌ಲ್ಲಾಧಿಕಾರಿಯವರು ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿಲ್ಲ. ಚೌವ್ಹಾಣ್ ಸಚಿವರಾಗಿ ಮುಂದುವರಿಯುತ್ತಲೇ ಇದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚಿನ ದಿನಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ ಗಂಭೀರವಾಗಿ ತನಿಖೆಗಳೂ ನಡೆಯಬೇಕಿದೆ. ಬೆಂಗಳೂರಿನ ಡಿಆರ್‌ಡಿಒನಲ್ಲಿ ಏಳುನೂರು ಜನರು ನಕಲಿ ಜಾತಿ ಪ್ರಮಾಣಪತ್ರ ಬರೆದಿದ್ದಾರೆಂಬ ವರದಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ವಲಸಮ್ಮ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣವನ್ನು ಉಲ್ಲೇಖಿಸಿದ ಅವರು, “ಗಂಡ ಪರಿಶಿಷ್ಟ ಜಾತಿಯಾಗಿದ್ದಾರೆಂದು ಹೆಂಡತಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಕೆಲಸ ಪಡೆದಿರುತ್ತಾರೆ. ಆದರೆ ಹೆಂಡತಿ ಸವರ್ಣೀಯ ಜಾತಿಗೆ ಸೇರಿರುತ್ತಾರೆ. ಸುಪ್ರೀಂ ಈ ಕುರಿತು ವಿಚಾರಣೆ ನಡೆಸಿ, ಜಾತಿ ಎಂಬುದು ಹುಟ್ಟಿನಿಂದ ಬರುತ್ತದೆ. ಮದುವೆಯಾಗುವುದರಿಂದ ಬದಲಾಗುವುದಿಲ್ಲ ಎಂದಿದೆ” ಎಂದು ವಿವರಿಸಿದರು.


ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...