Homeಕರ್ನಾಟಕಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ಪರಿಶಿಷ್ಟರ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಶಿಕ್ಷೆ ಏನು?

ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ.

- Advertisement -
- Advertisement -

ಮಾಜಿ ಸಚಿವ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್‌.ಚೇತನ ಅವರು ಬೇಡ ಜಂಗಮ ಹೆಸರಿನಲ್ಲಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.

ಎಂ.ಪಿ.ರೇಣುಕಾಚಾರ್ಯ ಲಿಂಗಾಯತರು. ದಾವಣಗೆರೆ ಜಿಲ್ಲೆ ಹೊನ್ನಾಳಿಯ ಕುಂದೂರು ಶಾಲೆಯಲ್ಲಿ ಅವರು ಓದುತ್ತಿದ್ದಾಗ ಪಡೆದಿರುವ ಶಾಲಾ ದಾಖಲೆಗಳಲ್ಲೂ ಜಾತಿ ಕಲಂನಲ್ಲಿ ‘ಲಿಂಗಾಯತ’ ಎಂದು ಸ್ಪಷ್ಟವಾಗಿ ಉಲ್ಲೇಖವಾಗಿದೆ. ಆದರೆ ಅವರ ಪುತ್ರಿ ಎಂ.ಆರ್‌.ಚೇತನ ಬೇಡ ಜಂಗಮ ಜಾತಿ ಎಂದು ಪರಿಶಿಷ್ಟ ಜಾತಿಯ ಪ್ರಮಾಣಪತ್ರವನ್ನು 2012ರ ನ.17ರಂದು ಬೆಂಗಳೂರಿನ ಉತ್ತರ ತಾಲ್ಲೂಕು ತಹಸೀಲ್ದಾರ್‌ ಅವರಿಂದ ಪಡೆದಿದ್ದಾರೆ. ಅದನ್ನು ಜಿಲ್ಲಾ ಅಧಿಕಾರಿಗಳು ಸರಿ ಇದೆಯೇ ಎಂದು ಪರಿಶೀಲನೆಯನ್ನೂ ನಡೆಸಿಲ್ಲ ಎಂದು ‘ವಿಜಯ ಕರ್ನಾಟಕ’ ವರದಿ ಮಾಡಿದೆ.

ದಲಿತರ ಹೆಸರಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸವರ್ಣಿಯರು ಪಡೆದು ಶೋಷಿತ ಸಮುದಾಯವನ್ನು ಅವಕಾಶಗಳಿಂದ ವಂಚಿಸುವುದು ಹೊಸ ಚರ್ಚೆಯೇನಲ್ಲ. ಆದರೆ ಜನಪ್ರತಿನಿಧಿಗಳಾದವರ ಹೆಸರುಗಳೇ ಇಂತಹ ಪ್ರಕರಣಗಳಲ್ಲಿ ಮತ್ತೆ ಮತ್ತೆ ಕೇಳಿಬರುತ್ತಿರುವುದು ಆಘಾತಕಾರಿ ಬೆಳವಣಿಗೆ.

ಪರಿಶಿಷ್ಟ ಕೋಟಾದಲ್ಲಿ ಇರಬಾರದ ಅವಕಾಶಗಳೇನೋ ಇವೆ ಎಂದು ಜನ ಭಾವಿಸುವುದು ಒಂದು ಕಡೆಯಾದರೆ, ದಿನದಿಂದ ದಿನಕ್ಕೆ ದಲಿತರ ಬಗೆಗಿನ ಕಾಳಜಿಯಿಂದ ಸರ್ಕಾರ ದೂರ ಸರಿಯುತ್ತಿರುವುದು ಮತ್ತೊಂದು ವಾಸ್ತವ. ಪರಿಸ್ಥಿತಿ ಹೀಗಿರುವ ದಲಿತರಿಗೆ ಇರುವ ಚಿಕ್ಕಪುಟ್ಟ ಅವಕಾಶಗಳನ್ನೂ ಕಿತ್ತುಕೊಂಡರೆ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿ ಏನಾಗಬಹುದು? ಇಂತಹ ಪ್ರಕರಗಳಿಗೆ ಶಿಕ್ಷೆಯೇ ಇಲ್ಲವೇ? ಖಂಡಿತ ಇದೆ. ಆದರೆ ಕಾನೂನು ಜಾರಿಯಾಗಬೇಕಷ್ಟೇ.

ರಾಜ್ಯ ವಿಧಾನಸಭೆಗೆ 2013ರಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿರುವ ಕೋಲಾರ ಜಿಲ್ಲೆ ಮುಳಬಾಗಿಲು ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್‌ ಮೇಲೆ ಇಂಥದ್ದೇ ಆರೋಪ ಕೇಳಿಬಂದಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಎನ್‌.ಮುನಿಅಂಜಿನಪ್ಪ ಕೋರ್ಟ್ ಮೆಟ್ಟಿಲೇರಿದ್ದರು.

ಬುಡಗ ಜಂಗಮ ಜಾತಿಗೆ ಸೇರಿದವರೆಂದು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಆಯ್ಕೆಯಾಗಿರುವುದು ಹೈಕೋರ್ಟ್‌ನಲ್ಲಿ ಸಾಬೀತಾಗಿತ್ತು. ಮಂಜುನಾಥ್‌ ಹಿಂದುಳಿದ ವರ್ಗ-1ಕ್ಕೆ ಸೇರುವ ‘ಭೈರಾಗಿ’ ಸಮುದಾಯದವರಾಗಿದ್ದರು. ಸುಳ್ಳು ಜಾತಿಪ್ರಮಾಣ ಪತ್ರ ಸಲ್ಲಿಸಿದ್ದಕ್ಕೆ  ಪ್ರಜಾಪ್ರತಿನಿಧಿ ಕಾಯದೆ ನಿಯಮ 125-ಎ ಅನ್ವಯ ಮಂಜುನಾಥ್‌ಗೆ 25 ಸಾವಿರ ದಂಡ ವಿಧಿಸಲಾಗಿತ್ತು. ಜೊತೆಗೆ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಲಾಗಿತ್ತು.

ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನ ಬ್ರಾಹ್ಮಣೇತರ ಅರ್ಚಕರ ನೋವಿನ ಕಥನ (ಭಾಗ 2)

ಈಗಿನ ರಾಜ್ಯ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರ ಮೇಲೂ ನಕಲಿ ಜಾತಿ ಪ್ರಮಾಣ ಪತ್ರದ ಆರೋಪವಿದೆ. ಚೌವ್ಹಾಣ್‌ ಲಂಬಾಣಿಯವರಾಗಿದ್ದರೂ ಅವರು ಕರ್ನಾಟಕದ ಲಂಬಾಣಿ ಜಾತಿಯವರಲ್ಲ. ಅವರು ಮಹಾರಾಷ್ಟ್ರದ ಲಂಬಾಣಿ ಜಾತಿಗೆ ಸೇರಿದ್ದಾರೆ. ಮಹಾರಾಷ್ಟ್ರದಲ್ಲಿ ಲಂಬಾಣಿ ಜಾತಿಯು ಹಿಂದುಳಿದ ವರ್ಗಕ್ಕೆ ಸೇರಿದ್ದರೆ, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಸೇರಿದೆ.

ಕಾನೂನು ತಜ್ಞರು ಏನು ಹೇಳುತ್ತಾರೆ?

ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವವರ ಕುರಿತು ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರ್ಯಾಯ ಕಾನೂನು ವೇದಿಕೆಯ ಸಲಹೆಗಾರರಾದ ಶಿವಮಣಿ, “ನಕಲಿ ಜಾತಿ ಪ್ರಮಾಣ ಪತ್ರ ಪಡೆದರೆ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬಹುದು. ನಕಲಿ ಪ್ರಮಾಣ ಪತ್ರ ಬರೆದು ಮೀಸಲಾಯಿಯನ್ನು ಪಡೆದರೆ ನಿಜವಾದ ಫಲಾನುಭವಿಗೆ ತೊಂದರೆ ನೀಡಿದಂತಾಗುತ್ತದೆ. ಮೀಸಲಾತಿಯ ಅವಕಾಶ ಪಡೆದು ಸರ್ಕಾರಿ ಸೇವೆಯಲ್ಲಿದ್ದರೆ ಕೆಲಸದಿಂದ ವಜಾಗೊಳಿಸಬಹುದು. ಜನಪ್ರತಿನಿಧಿಯಾಗಿದ್ದರೆ ಸ್ಥಾನವನ್ನು ಅಸಿಂಧುಗೊಳಿಸಬಹುದು” ಎಂದರು.

ಪ್ರಭು ಚೌವ್ಹಾಣ್‌ ಪ್ರಕರಣದ ಕುರಿತು ಮಾತನಾಡಿದ ಅವರು, “ಚೌವ್ಹಾಣ್‌ ಅವರು ಎಸ್‌ಸಿ ಪ್ರಮಾಣಪತ್ರ ಬರೆದು ಎರಡು ಸಲ ಗೆದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ನಡೆಯುತ್ತಿದೆ. ಅಂತಾರಾಜ್ಯ ಜಾತಿ ಪ್ರಮಾಣ ಪತ್ರ ಪಡೆದಿರುವುದು ಶಿಕ್ಷಾರ್ಹ ಅಪರಾಧ” ಎಂದು ತಿಳಿಸಿದರು.

“ಕರ್ನಾಟಕದಲ್ಲಿ ಸಿವಿಲ್ ರೈಟ್ಸ್‌ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ ಎಂದಿದೆ. ಯಾರ್‍ಯಾರು ಸರ್ಕಾರಿ ಅಧಿಕಾರಿಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸುವುದೇ ಅದರ ಕೆಲಸ. ಪ್ರಭು ಚೌವ್ಹಾಣ್ ನಕಲಿ ಪ್ರಮಾಣ ಪತ್ರ ಪಡೆದಿದ್ದಾರೆಂದು ಸದರಿ ಸಂಸ್ಥೆ ಹೇಳಿದೆ. ಆದರೆ ಜಿ‌ಲ್ಲಾಧಿಕಾರಿಯವರು ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿಲ್ಲ. ಚೌವ್ಹಾಣ್ ಸಚಿವರಾಗಿ ಮುಂದುವರಿಯುತ್ತಲೇ ಇದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚಿನ ದಿನಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ ಗಂಭೀರವಾಗಿ ತನಿಖೆಗಳೂ ನಡೆಯಬೇಕಿದೆ. ಬೆಂಗಳೂರಿನ ಡಿಆರ್‌ಡಿಒನಲ್ಲಿ ಏಳುನೂರು ಜನರು ನಕಲಿ ಜಾತಿ ಪ್ರಮಾಣಪತ್ರ ಬರೆದಿದ್ದಾರೆಂಬ ವರದಿಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.

ವಲಸಮ್ಮ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣವನ್ನು ಉಲ್ಲೇಖಿಸಿದ ಅವರು, “ಗಂಡ ಪರಿಶಿಷ್ಟ ಜಾತಿಯಾಗಿದ್ದಾರೆಂದು ಹೆಂಡತಿ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ಪಡೆದು ಕೆಲಸ ಪಡೆದಿರುತ್ತಾರೆ. ಆದರೆ ಹೆಂಡತಿ ಸವರ್ಣೀಯ ಜಾತಿಗೆ ಸೇರಿರುತ್ತಾರೆ. ಸುಪ್ರೀಂ ಈ ಕುರಿತು ವಿಚಾರಣೆ ನಡೆಸಿ, ಜಾತಿ ಎಂಬುದು ಹುಟ್ಟಿನಿಂದ ಬರುತ್ತದೆ. ಮದುವೆಯಾಗುವುದರಿಂದ ಬದಲಾಗುವುದಿಲ್ಲ ಎಂದಿದೆ” ಎಂದು ವಿವರಿಸಿದರು.


ಇದನ್ನೂ ಓದಿರಿ: ದಲಿತ್‌ ಫೈಲ್ಸ್‌: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....